Advertisement
MIRROR FOCUS

ಅಡಿಕೆ ಕಳ್ಳಸಾಗಾಣಿಕೆ ಮತ್ತೆ ತಡೆದ ಗಡಿಭದ್ರತಾ ಪಡೆ | ಅಡಿಕೆ ಮಾರುಕಟ್ಟೆಗೆ ಸಿಗುತ್ತಿದೆ ಭದ್ರತೆ | ಏನಾಗಬಹುದು ಅಡಿಕೆ ಮಾರುಕಟ್ಟೆ ?

Share

ಮಿಜೋರಾಂನ ಚಂಪೈ ಜಿಲ್ಲೆಯಲ್ಲಿ ಅಪಾರ ಪ್ರಮಾಣದಲ್ಲಿ ಅಡಿಕೆ ಕಳ್ಳಸಾಗಣೆ ಮಾಡುತ್ತಿದ್ದ ಪ್ರಕರಣವನ್ನು ಅಸ್ಸಾಂ ಗಡಿ ಭದ್ರತಾ ಪಡೆಯು ಪತ್ತೆ ಮಾಡಿದೆ. 3.8 ಕೋಟಿ ರೂ.ಗಳ ಮೌಲ್ಯದ 2,100 ಚೀಲ ಅಡಿಕೆಯನ್ನು ವಶಕ್ಕೆ ತೆಗೆದುಕೊಂಡು ತನಿಖೆಗೆ ಹಸ್ತಾಂತರಿಸಿದೆ. ಈಗಿನ ಮಾಹಿತಿ ಪ್ರಕಾರ ಮಾನ್ಮಾರ್‌ ನಿಂದ ಅಡಿಕೆಯನ್ನು  ಇಂಡೋ ಮಾನ್ಮಾರ್‌ ಗಡಿ ಮೂಲಕ ಮಿಜೋರಾಂ ದಾರಿಯಲ್ಲಿ ಸಾಗಾಟ ಮಾಡಲಾಗುತ್ತಿತ್ತು.

Advertisement

ಅಡಿಕೆ ಮಾರುಕಟ್ಟೆಗೆ ಮತ್ತೆ ಬಲ ಸಿಗುತ್ತಿದೆ. ಧಾರಣೆ ಸ್ಥಿರತೆ ಹಾಗೂ ಮಾರುಕಟ್ಟೆ ಏರಿಕೆಗೆ ನಿರೀಕ್ಷೆ ಕಂಡುಬಂದಿದೆ. ಲಾಕ್ಡೌನ್‌ ನಂತರ ದೇಶದ ಎಲ್ಲಾ ಗಡಿಭಾಗಗಳಲ್ಲೂ ಭದ್ರತೆಯನ್ನು ಹೆಚ್ಚಿಸಿರಿಸುವಿದರಿಂದ ಅಡಿಕೆ ಕಳ್ಳ ಸಾಗಾಣಿಕೆ ಕಷ್ಟವಾಗುತ್ತಿದೆ. ಅಕ್ರಮ ಹಾದಿಯಲ್ಲಿ ಅಡಿಕೆ ಆಮದು ಸಾಧ್ಯವಾಗುತ್ತಿಲ್ಲ.

ಇದೀಗ ಮತ್ತೆ ಮಾನ್ಮಾರ್‌ ನಿಂದ ಅಡಿಕೆಯನ್ನು ಕಳ್ಳದಾರಿಯ ಮೂಲಕ ದೇಶದೊಳಕ್ಕೆ ಸಾಗಿಸುವಾಗ ಅಸ್ಸಾಂ ಗಡಿಭದ್ರತಾ ಪಡೆಯು ತಡೆದಿದೆ. ಖಚಿತ ಮಾಹಿತಿ ಮೇರೆಗೆ, 23 ಸೆಕ್ಟರ್ ನ ಅಸ್ಸಾಂ ರೈಫಲ್ಸ್ ಮತ್ತು ಕಸ್ಟಮ್ಸ್ ವಿಭಾಗದ 8 ನೇ ಬೆಟಾಲಿಯನ್ ಜಂಟಿ ತಂಡವು ಅಡಿಕೆ ದಾಸ್ತಾನು ಮಾಡಿದ್ದ ಗೋಡೌನ್ ಮೇಲೆ ದಾಳಿ ನಡೆಸಿತು. ಈ ಸಂದರ್ಭ 3.52 ಕೋಟಿ ರೂ.ಗಳ ಮೌಲ್ಯದ 2,100 ಚೀಲ ಅಡಿಕೆಯನ್ನು ವಶಕ್ಕೆ ತೆಗೆದುಕೊಂಡು ತನಿಖೆ ನಡೆಸುತ್ತಿದ್ದಾರೆ.

 

ಇದಾದ ಬೆನ್ನಲ್ಲೆ ಇನ್ನೊಂದು ದಾಸ್ತಾನು ಕೇಂದ್ರಕ್ಕೆ ದಾಳಿ ನಡೆಸಿದ ಅಸ್ಸಾಂ ಗಡಿ ಭದ್ರತಾ ಪಡೆಯು ಮಿಜೋರಾಂನ ಚಂಪೈ ಜಿಲ್ಲೆಯಲ್ಲಿ 21  ಲಕ್ಷ ರೂಪಾಯಿ ಮೌಲ್ಯದ ಅಡಿಕೆಯನ್ನು ಹಾಗೂ ಮಣಿಪುರದ ಚುರಚಾಂದ್‌ ಪುರದಿಂದ 31  ಲಕ್ಷ ರೂಪಾಯಿ ಮೌಲ್ಯದ ಅಡಿಕೆಯನ್ನು ವಶಕ್ಕೆ ತೆಗೆದುಕೊಂಡಿದೆ.

 

ಏನಾಗಬಹುದು ಅಡಿಕೆ ಮಾರುಕಟ್ಟೆ ?
ಅಡಿಕೆ ಅಕ್ರಮ ಸಾಗಾಟಕ್ಕೆ ಈಗ ಬಹುತೇಕ ಬ್ರೇಕ್‌ ಬಿದ್ದಿರುವುದು  ಅಡಿಕೆ ಬೆಳೆಗಾರರಿಗೆ ಪ್ರಯೋಜನಕಾರಿಯಾಗಿದೆ. ಮುಂದೆ ಅಕ್ಟೋಬರ್‌, ನವೆಂಬರ್‌ ವರೆಗೆ ಉತ್ತರ ಭಾರತದ ವಿವಿದೆಡೆ ಚುನಾವಣೆಗಳೂ ಇರುವುದರಿಂದ ಗಡಿಭದ್ರತೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಈ ಕಾರಣದಿಂದ ಅಡಿಕೆ ಮಾರುಕಟ್ಟೆ ತೇಜಿ ಇರಬಹುದು ಎಂಬುದು ಮಾರುಕಟ್ಟೆ ಲೆಕ್ಕಾಚಾರ.

ಇದೇ ವೇಳೆ ಈ ಬಾರಿ ಅಡಿಕೆ ಫಸಲು ತೀರಾ ಕಡಿಮೆ ಇರುವುದರಿಂದ ಹೊಸ ಅಡಿಕೆ ಧಾರಣೆಯೂ ಇಳಿಕೆ ಕಾಣದು ಎಂಬುದು ಮಾರುಕಟ್ಟೆಯಲ್ಲಿನ ಸದ್ಯದ ಲೆಕ್ಕಾಚಾರ.  

ಆದರೆ ಅಡಿಕೆ ಧಾರಣೆ ಏರಿಳಿಕೆಗೆ ವಿವಿಧ ಪ್ರಯತ್ನಗಳು ಆಗಾಗ ನಡೆಯುತ್ತಿರುವುದನ್ನು ಬೆಳೆಗಾರರು ಗಮನಿಸಿದರೆ ಅಡಿಕೆ ಮಾರುಕಟ್ಟೆ ಸ್ಥಿರತೆ ಹಾಗೂ ಧಾರಣೆ ಏರಿಕೆಗೆ ಹೆಚ್ಚು ಅನುಕೂಲವಾಗಲಿದೆ.

 

 

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಹೇಶ್ ಪುಚ್ಚಪ್ಪಾಡಿ

ಕೃಷಿಕ ಹಾಗೂ ಕೃಷಿ ಪತ್ರಕರ್ತ | 2007 ರಿಂದ ವಿವಿಧ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ಮಾಡಿದ್ದಾರೆ. ಉಷಾಕಿರಣ, ಹೊಸದಿಗಂತ, ವಿಜಯವಾಣಿ ಹಾಗೂ ಸುವರ್ಣ ನ್ಯೂಸ್‌ ಚಾನೆಲ್‌ನಲ್ಲಿ ವರದಿಗಾರರಾಗಿ, ವಿಭಾಗ ಮುಖ್ಯಸ್ಥರಾಗಿ ಕೆಲಸ ಮಾಡಿದ್ದಾರೆ. ಗ್ರಾಮೀಣಾಭಿವೃದ್ಧಿ ಹಾಗೂ ಕೃಷಿ ಇವರ ಆಸಕ್ತಿಯ ವಿಷಯವಾಗಿದೆ.  

Published by
ಮಹೇಶ್ ಪುಚ್ಚಪ್ಪಾಡಿ

Recent Posts

ಹವಾಮಾನ ವರದಿ | 21-02-2026 | ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಲಕ್ಷಣ | ಎಲ್ಲೆಲ್ಲಾ ಮಳೆ ಇದೆ…? ಎಷ್ಟು ದಿನ ಮಳೆ ಸಾಧ್ಯತೆ…?

ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…

3 hours ago

ಮಿಶ್ರ ಕೃಷಿಯತ್ತ ಮಲೆನಾಡಿನ ರೈತನ ಹೆಜ್ಜೆ ಅನಿವಾರ್ಯ

ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…

8 hours ago

ನಂದಿನಿ ಉತ್ಪನ್ನಗಳ ವಿರುದ್ಧದ ವದಂತಿ ನಂಬಬೇಡಿ : ಗ್ರಾಹಕರಿಗೆ ಕೆಎಂಎಫ್ ಮನವಿ

ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…

8 hours ago

ರೈತರಿಗೆ ಗನ್ ಪರವಾನಗಿ : ಶೀಘ್ರದಲ್ಲೇ ಆನ್ಲೈನ್ ವ್ಯವಸ್ಥೆ ಜಾರಿ – ಜಿಲ್ಲಾಧಿಕಾರಿ ದರ್ಶನ್ ಎಚ್.ವಿ

ರೈತರಿಗೆ ಗನ್ ಪರವಾನಗಿ ಹಾಗೂ ನವೀಕರಣ ಪ್ರಕ್ರಿಯೆಯನ್ನು ಸುಲಭಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…

8 hours ago

ಮಂಗಳೂರು ಅಡಿಕೆ ಮಾರುಕಟ್ಟೆ ‘ಸೈಕಲಾಜಿಕಲ್ ಬಫರ್’ ಹಂತಕ್ಕೆ…!

ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…

20 hours ago

ಗೇರು ಹಣ್ಣಿನಿಂದ ಆದಾಯಕ್ಕೆ ಹೊಸ ದಾರಿ | ಮಾ.11 ರಂದು ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಉದ್ಯಮ–ವಿಜ್ಞಾನಿಗಳ ಸಂವಾದ

ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್‌ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…

1 day ago