Advertisement
MIRROR FOCUS

ಅಡಿಕೆ ಕಳ್ಳಸಾಗಾಣಿಕೆ ಮತ್ತೆ ತಡೆದ ಗಡಿಭದ್ರತಾ ಪಡೆ | ಅಡಿಕೆ ಮಾರುಕಟ್ಟೆಗೆ ಸಿಗುತ್ತಿದೆ ಭದ್ರತೆ | ಏನಾಗಬಹುದು ಅಡಿಕೆ ಮಾರುಕಟ್ಟೆ ?

Share

ಮಿಜೋರಾಂನ ಚಂಪೈ ಜಿಲ್ಲೆಯಲ್ಲಿ ಅಪಾರ ಪ್ರಮಾಣದಲ್ಲಿ ಅಡಿಕೆ ಕಳ್ಳಸಾಗಣೆ ಮಾಡುತ್ತಿದ್ದ ಪ್ರಕರಣವನ್ನು ಅಸ್ಸಾಂ ಗಡಿ ಭದ್ರತಾ ಪಡೆಯು ಪತ್ತೆ ಮಾಡಿದೆ. 3.8 ಕೋಟಿ ರೂ.ಗಳ ಮೌಲ್ಯದ 2,100 ಚೀಲ ಅಡಿಕೆಯನ್ನು ವಶಕ್ಕೆ ತೆಗೆದುಕೊಂಡು ತನಿಖೆಗೆ ಹಸ್ತಾಂತರಿಸಿದೆ. ಈಗಿನ ಮಾಹಿತಿ ಪ್ರಕಾರ ಮಾನ್ಮಾರ್‌ ನಿಂದ ಅಡಿಕೆಯನ್ನು  ಇಂಡೋ ಮಾನ್ಮಾರ್‌ ಗಡಿ ಮೂಲಕ ಮಿಜೋರಾಂ ದಾರಿಯಲ್ಲಿ ಸಾಗಾಟ ಮಾಡಲಾಗುತ್ತಿತ್ತು.

ಅಡಿಕೆ ಮಾರುಕಟ್ಟೆಗೆ ಮತ್ತೆ ಬಲ ಸಿಗುತ್ತಿದೆ. ಧಾರಣೆ ಸ್ಥಿರತೆ ಹಾಗೂ ಮಾರುಕಟ್ಟೆ ಏರಿಕೆಗೆ ನಿರೀಕ್ಷೆ ಕಂಡುಬಂದಿದೆ. ಲಾಕ್ಡೌನ್‌ ನಂತರ ದೇಶದ ಎಲ್ಲಾ ಗಡಿಭಾಗಗಳಲ್ಲೂ ಭದ್ರತೆಯನ್ನು ಹೆಚ್ಚಿಸಿರಿಸುವಿದರಿಂದ ಅಡಿಕೆ ಕಳ್ಳ ಸಾಗಾಣಿಕೆ ಕಷ್ಟವಾಗುತ್ತಿದೆ. ಅಕ್ರಮ ಹಾದಿಯಲ್ಲಿ ಅಡಿಕೆ ಆಮದು ಸಾಧ್ಯವಾಗುತ್ತಿಲ್ಲ.

ಇದೀಗ ಮತ್ತೆ ಮಾನ್ಮಾರ್‌ ನಿಂದ ಅಡಿಕೆಯನ್ನು ಕಳ್ಳದಾರಿಯ ಮೂಲಕ ದೇಶದೊಳಕ್ಕೆ ಸಾಗಿಸುವಾಗ ಅಸ್ಸಾಂ ಗಡಿಭದ್ರತಾ ಪಡೆಯು ತಡೆದಿದೆ. ಖಚಿತ ಮಾಹಿತಿ ಮೇರೆಗೆ, 23 ಸೆಕ್ಟರ್ ನ ಅಸ್ಸಾಂ ರೈಫಲ್ಸ್ ಮತ್ತು ಕಸ್ಟಮ್ಸ್ ವಿಭಾಗದ 8 ನೇ ಬೆಟಾಲಿಯನ್ ಜಂಟಿ ತಂಡವು ಅಡಿಕೆ ದಾಸ್ತಾನು ಮಾಡಿದ್ದ ಗೋಡೌನ್ ಮೇಲೆ ದಾಳಿ ನಡೆಸಿತು. ಈ ಸಂದರ್ಭ 3.52 ಕೋಟಿ ರೂ.ಗಳ ಮೌಲ್ಯದ 2,100 ಚೀಲ ಅಡಿಕೆಯನ್ನು ವಶಕ್ಕೆ ತೆಗೆದುಕೊಂಡು ತನಿಖೆ ನಡೆಸುತ್ತಿದ್ದಾರೆ.

 

ಇದಾದ ಬೆನ್ನಲ್ಲೆ ಇನ್ನೊಂದು ದಾಸ್ತಾನು ಕೇಂದ್ರಕ್ಕೆ ದಾಳಿ ನಡೆಸಿದ ಅಸ್ಸಾಂ ಗಡಿ ಭದ್ರತಾ ಪಡೆಯು ಮಿಜೋರಾಂನ ಚಂಪೈ ಜಿಲ್ಲೆಯಲ್ಲಿ 21  ಲಕ್ಷ ರೂಪಾಯಿ ಮೌಲ್ಯದ ಅಡಿಕೆಯನ್ನು ಹಾಗೂ ಮಣಿಪುರದ ಚುರಚಾಂದ್‌ ಪುರದಿಂದ 31  ಲಕ್ಷ ರೂಪಾಯಿ ಮೌಲ್ಯದ ಅಡಿಕೆಯನ್ನು ವಶಕ್ಕೆ ತೆಗೆದುಕೊಂಡಿದೆ.

 

ಏನಾಗಬಹುದು ಅಡಿಕೆ ಮಾರುಕಟ್ಟೆ ?
ಅಡಿಕೆ ಅಕ್ರಮ ಸಾಗಾಟಕ್ಕೆ ಈಗ ಬಹುತೇಕ ಬ್ರೇಕ್‌ ಬಿದ್ದಿರುವುದು  ಅಡಿಕೆ ಬೆಳೆಗಾರರಿಗೆ ಪ್ರಯೋಜನಕಾರಿಯಾಗಿದೆ. ಮುಂದೆ ಅಕ್ಟೋಬರ್‌, ನವೆಂಬರ್‌ ವರೆಗೆ ಉತ್ತರ ಭಾರತದ ವಿವಿದೆಡೆ ಚುನಾವಣೆಗಳೂ ಇರುವುದರಿಂದ ಗಡಿಭದ್ರತೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಈ ಕಾರಣದಿಂದ ಅಡಿಕೆ ಮಾರುಕಟ್ಟೆ ತೇಜಿ ಇರಬಹುದು ಎಂಬುದು ಮಾರುಕಟ್ಟೆ ಲೆಕ್ಕಾಚಾರ.

ಇದೇ ವೇಳೆ ಈ ಬಾರಿ ಅಡಿಕೆ ಫಸಲು ತೀರಾ ಕಡಿಮೆ ಇರುವುದರಿಂದ ಹೊಸ ಅಡಿಕೆ ಧಾರಣೆಯೂ ಇಳಿಕೆ ಕಾಣದು ಎಂಬುದು ಮಾರುಕಟ್ಟೆಯಲ್ಲಿನ ಸದ್ಯದ ಲೆಕ್ಕಾಚಾರ.  

ಆದರೆ ಅಡಿಕೆ ಧಾರಣೆ ಏರಿಳಿಕೆಗೆ ವಿವಿಧ ಪ್ರಯತ್ನಗಳು ಆಗಾಗ ನಡೆಯುತ್ತಿರುವುದನ್ನು ಬೆಳೆಗಾರರು ಗಮನಿಸಿದರೆ ಅಡಿಕೆ ಮಾರುಕಟ್ಟೆ ಸ್ಥಿರತೆ ಹಾಗೂ ಧಾರಣೆ ಏರಿಕೆಗೆ ಹೆಚ್ಚು ಅನುಕೂಲವಾಗಲಿದೆ.

 

 

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಹೇಶ್ ಪುಚ್ಚಪ್ಪಾಡಿ

ಕೃಷಿಕ ಹಾಗೂ ಕೃಷಿ ಪತ್ರಕರ್ತ | 2007 ರಿಂದ ವಿವಿಧ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ಮಾಡಿದ್ದಾರೆ. ಉಷಾಕಿರಣ, ಹೊಸದಿಗಂತ, ವಿಜಯವಾಣಿ ಹಾಗೂ ಸುವರ್ಣ ನ್ಯೂಸ್‌ ಚಾನೆಲ್‌ನಲ್ಲಿ ವರದಿಗಾರರಾಗಿ, ವಿಭಾಗ ಮುಖ್ಯಸ್ಥರಾಗಿ ಕೆಲಸ ಮಾಡಿದ್ದಾರೆ. ಗ್ರಾಮೀಣಾಭಿವೃದ್ಧಿ ಹಾಗೂ ಕೃಷಿ ಇವರ ಆಸಕ್ತಿಯ ವಿಷಯವಾಗಿದೆ.  

Published by
ಮಹೇಶ್ ಪುಚ್ಚಪ್ಪಾಡಿ

Recent Posts

25 ಸಾವಿರ ವರ್ಷಗಳ ಹಿಂದೆಯೇ ಅಡಿಕೆ ಬಳಕೆ ? ಪುರಾತನ ಹಲ್ಲುಗಳಲ್ಲಿ ಸಿಕ್ಕಿದ ಸುಳಿವು

ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…

8 hours ago

“ಹನುಮಾನ್ ಅಂಶ್‌” ಬಾಕ್ಸ್ ಆಫೀಸ್ ದಾಖಲೆ – 40ನೇ ದಿನವೂ ₹8.25 ಕೋಟಿ – ಪಠಾಣ್‌, ಛಾವಾ, ಉರಿ ದಾಖಲೆ ಮೀರಿಸಿದ ಸಿನಿಮಾ

‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್‌ನಲ್ಲಿ…

10 hours ago

ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ

ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…

16 hours ago

ಹವಾಮಾನ ವರದಿ | 16-09-2026 | ಕರಾವಳಿಯಲ್ಲಿ ಸೆಖೆ, ಸಂಜೆ ಅಲ್ಲಲ್ಲಿ ಮಳೆ ನಿರೀಕ್ಷೆ

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…

17 hours ago

ಕೋಲಾರ ಸಮೀಪ 10 ಟನ್ ಸಿಂಥೆಟಿಕ್‌ ಅಡಿಕೆ ವಶ…!?

ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್‌ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…

1 day ago

ಮಂಗಳೂರಿನ ಸಚಿವ ಸಂಪುಟ ಸಭೆ | ‘ಅಡಿಕೆ ಜೈವಿಕ ಆರ್ಥಿಕತೆ ಮಿಷನ್’ ಘೋಷಣೆಗೆ ಆಗ್ರಹ

ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…

1 day ago