Advertisement
MIRROR FOCUS

ಅಡಿಕೆ ಕಳ್ಳಸಾಗಾಣಿಕೆ ಮತ್ತೆ ತಡೆದ ಗಡಿಭದ್ರತಾ ಪಡೆ | ಅಡಿಕೆ ಮಾರುಕಟ್ಟೆಗೆ ಸಿಗುತ್ತಿದೆ ಭದ್ರತೆ | ಏನಾಗಬಹುದು ಅಡಿಕೆ ಮಾರುಕಟ್ಟೆ ?

Share

ಮಿಜೋರಾಂನ ಚಂಪೈ ಜಿಲ್ಲೆಯಲ್ಲಿ ಅಪಾರ ಪ್ರಮಾಣದಲ್ಲಿ ಅಡಿಕೆ ಕಳ್ಳಸಾಗಣೆ ಮಾಡುತ್ತಿದ್ದ ಪ್ರಕರಣವನ್ನು ಅಸ್ಸಾಂ ಗಡಿ ಭದ್ರತಾ ಪಡೆಯು ಪತ್ತೆ ಮಾಡಿದೆ. 3.8 ಕೋಟಿ ರೂ.ಗಳ ಮೌಲ್ಯದ 2,100 ಚೀಲ ಅಡಿಕೆಯನ್ನು ವಶಕ್ಕೆ ತೆಗೆದುಕೊಂಡು ತನಿಖೆಗೆ ಹಸ್ತಾಂತರಿಸಿದೆ. ಈಗಿನ ಮಾಹಿತಿ ಪ್ರಕಾರ ಮಾನ್ಮಾರ್‌ ನಿಂದ ಅಡಿಕೆಯನ್ನು  ಇಂಡೋ ಮಾನ್ಮಾರ್‌ ಗಡಿ ಮೂಲಕ ಮಿಜೋರಾಂ ದಾರಿಯಲ್ಲಿ ಸಾಗಾಟ ಮಾಡಲಾಗುತ್ತಿತ್ತು.

ಅಡಿಕೆ ಮಾರುಕಟ್ಟೆಗೆ ಮತ್ತೆ ಬಲ ಸಿಗುತ್ತಿದೆ. ಧಾರಣೆ ಸ್ಥಿರತೆ ಹಾಗೂ ಮಾರುಕಟ್ಟೆ ಏರಿಕೆಗೆ ನಿರೀಕ್ಷೆ ಕಂಡುಬಂದಿದೆ. ಲಾಕ್ಡೌನ್‌ ನಂತರ ದೇಶದ ಎಲ್ಲಾ ಗಡಿಭಾಗಗಳಲ್ಲೂ ಭದ್ರತೆಯನ್ನು ಹೆಚ್ಚಿಸಿರಿಸುವಿದರಿಂದ ಅಡಿಕೆ ಕಳ್ಳ ಸಾಗಾಣಿಕೆ ಕಷ್ಟವಾಗುತ್ತಿದೆ. ಅಕ್ರಮ ಹಾದಿಯಲ್ಲಿ ಅಡಿಕೆ ಆಮದು ಸಾಧ್ಯವಾಗುತ್ತಿಲ್ಲ.

ಇದೀಗ ಮತ್ತೆ ಮಾನ್ಮಾರ್‌ ನಿಂದ ಅಡಿಕೆಯನ್ನು ಕಳ್ಳದಾರಿಯ ಮೂಲಕ ದೇಶದೊಳಕ್ಕೆ ಸಾಗಿಸುವಾಗ ಅಸ್ಸಾಂ ಗಡಿಭದ್ರತಾ ಪಡೆಯು ತಡೆದಿದೆ. ಖಚಿತ ಮಾಹಿತಿ ಮೇರೆಗೆ, 23 ಸೆಕ್ಟರ್ ನ ಅಸ್ಸಾಂ ರೈಫಲ್ಸ್ ಮತ್ತು ಕಸ್ಟಮ್ಸ್ ವಿಭಾಗದ 8 ನೇ ಬೆಟಾಲಿಯನ್ ಜಂಟಿ ತಂಡವು ಅಡಿಕೆ ದಾಸ್ತಾನು ಮಾಡಿದ್ದ ಗೋಡೌನ್ ಮೇಲೆ ದಾಳಿ ನಡೆಸಿತು. ಈ ಸಂದರ್ಭ 3.52 ಕೋಟಿ ರೂ.ಗಳ ಮೌಲ್ಯದ 2,100 ಚೀಲ ಅಡಿಕೆಯನ್ನು ವಶಕ್ಕೆ ತೆಗೆದುಕೊಂಡು ತನಿಖೆ ನಡೆಸುತ್ತಿದ್ದಾರೆ.

 

ಇದಾದ ಬೆನ್ನಲ್ಲೆ ಇನ್ನೊಂದು ದಾಸ್ತಾನು ಕೇಂದ್ರಕ್ಕೆ ದಾಳಿ ನಡೆಸಿದ ಅಸ್ಸಾಂ ಗಡಿ ಭದ್ರತಾ ಪಡೆಯು ಮಿಜೋರಾಂನ ಚಂಪೈ ಜಿಲ್ಲೆಯಲ್ಲಿ 21  ಲಕ್ಷ ರೂಪಾಯಿ ಮೌಲ್ಯದ ಅಡಿಕೆಯನ್ನು ಹಾಗೂ ಮಣಿಪುರದ ಚುರಚಾಂದ್‌ ಪುರದಿಂದ 31  ಲಕ್ಷ ರೂಪಾಯಿ ಮೌಲ್ಯದ ಅಡಿಕೆಯನ್ನು ವಶಕ್ಕೆ ತೆಗೆದುಕೊಂಡಿದೆ.

 

ಏನಾಗಬಹುದು ಅಡಿಕೆ ಮಾರುಕಟ್ಟೆ ?
ಅಡಿಕೆ ಅಕ್ರಮ ಸಾಗಾಟಕ್ಕೆ ಈಗ ಬಹುತೇಕ ಬ್ರೇಕ್‌ ಬಿದ್ದಿರುವುದು  ಅಡಿಕೆ ಬೆಳೆಗಾರರಿಗೆ ಪ್ರಯೋಜನಕಾರಿಯಾಗಿದೆ. ಮುಂದೆ ಅಕ್ಟೋಬರ್‌, ನವೆಂಬರ್‌ ವರೆಗೆ ಉತ್ತರ ಭಾರತದ ವಿವಿದೆಡೆ ಚುನಾವಣೆಗಳೂ ಇರುವುದರಿಂದ ಗಡಿಭದ್ರತೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಈ ಕಾರಣದಿಂದ ಅಡಿಕೆ ಮಾರುಕಟ್ಟೆ ತೇಜಿ ಇರಬಹುದು ಎಂಬುದು ಮಾರುಕಟ್ಟೆ ಲೆಕ್ಕಾಚಾರ.

ಇದೇ ವೇಳೆ ಈ ಬಾರಿ ಅಡಿಕೆ ಫಸಲು ತೀರಾ ಕಡಿಮೆ ಇರುವುದರಿಂದ ಹೊಸ ಅಡಿಕೆ ಧಾರಣೆಯೂ ಇಳಿಕೆ ಕಾಣದು ಎಂಬುದು ಮಾರುಕಟ್ಟೆಯಲ್ಲಿನ ಸದ್ಯದ ಲೆಕ್ಕಾಚಾರ.  

ಆದರೆ ಅಡಿಕೆ ಧಾರಣೆ ಏರಿಳಿಕೆಗೆ ವಿವಿಧ ಪ್ರಯತ್ನಗಳು ಆಗಾಗ ನಡೆಯುತ್ತಿರುವುದನ್ನು ಬೆಳೆಗಾರರು ಗಮನಿಸಿದರೆ ಅಡಿಕೆ ಮಾರುಕಟ್ಟೆ ಸ್ಥಿರತೆ ಹಾಗೂ ಧಾರಣೆ ಏರಿಕೆಗೆ ಹೆಚ್ಚು ಅನುಕೂಲವಾಗಲಿದೆ.

 

 

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಹೇಶ್ ಪುಚ್ಚಪ್ಪಾಡಿ

ಕೃಷಿಕ ಹಾಗೂ ಕೃಷಿ ಪತ್ರಕರ್ತ | 2007 ರಿಂದ ವಿವಿಧ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ಮಾಡಿದ್ದಾರೆ. ಉಷಾಕಿರಣ, ಹೊಸದಿಗಂತ, ವಿಜಯವಾಣಿ ಹಾಗೂ ಸುವರ್ಣ ನ್ಯೂಸ್‌ ಚಾನೆಲ್‌ನಲ್ಲಿ ವರದಿಗಾರರಾಗಿ, ವಿಭಾಗ ಮುಖ್ಯಸ್ಥರಾಗಿ ಕೆಲಸ ಮಾಡಿದ್ದಾರೆ. ಗ್ರಾಮೀಣಾಭಿವೃದ್ಧಿ ಹಾಗೂ ಕೃಷಿ ಇವರ ಆಸಕ್ತಿಯ ವಿಷಯವಾಗಿದೆ.  

Published by
ಮಹೇಶ್ ಪುಚ್ಚಪ್ಪಾಡಿ

Recent Posts

2050 ರ ವೇಳೆಗೆ ಭೂಕುಸಿತದ ಅಪಾಯ ಮತ್ತಷ್ಟು ಹೆಚ್ಚಳ : ಮಳೆ ತೀವ್ರತೆ, ನಗರೀಕರಣವೇ ಪ್ರಮುಖ ಕಾರಣ – ಅಧ್ಯಯನ

2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…

6 hours ago

ಅಕಾಲದ ಹಸಿವು, ಅಸಮಯದ ನಿದ್ದೆ ದೇಹದ ಯಂತ್ರ ಕೆಟ್ಟಿರುವ ಸಂಕೇತ : ರಾಘವೇಶ್ವರ ಶ್ರೀ

ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…

7 hours ago

ಮತ್ತೆ ಚುರುಕುಗೊಂಡ ಮಳೆ | ಸುಳ್ಯ ಮಲೆನಾಡು ಭಾಗದಲ್ಲಿ ಬೆಳಗ್ಗಿನಿಂದ ಧಾರಾಕಾರ ಮಳೆ

ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…

7 hours ago

ದೇಶದ ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕದ ಮೊದಲು – 75.47% ಉತ್ಪಾದನೆ, 71.56% ವಿಸ್ತೀರ್ಣದಲ್ಲಿ ಅಡಿಕೆ ಬೆಳೆ

ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…

17 hours ago

ಕಳಪೆ ವಿದೇಶಿ ಅಡಿಕೆ ಆಮದು ನಿಯಂತ್ರಿಸಿ – ಕೋಟ ಶ್ರೀನಿವಾಸ ಪೂಜಾರಿ ಒತ್ತಾಯ

ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…

19 hours ago

ಹವಾಮಾನ ವರದಿ | 04-08-2026 | ರಾಜ್ಯದಲ್ಲಿ ಆಗಸ್ಟ್‌ 12 ರವರೆಗೆ ಮಳೆ ಸಾಧ್ಯತೆ – ಮುಂಗಾರು ದುರ್ಬಲವಾಗುವ ಲಕ್ಷಣ

ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್‌ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…

1 day ago