ದೇಶದ ಅಡಿಕೆ ಬೆಳೆಗಾರರ ಹಿತಾಸಕ್ತಿಯನ್ನು ಕಾಪಾಡಲು ಅಡಿಕೆಯ ಕನಿಷ್ಠ ಆಮದು ಬೆಲೆ (Minimum Import Price – MIP) ಹೆಚ್ಚಳ ಹಾಗೂ ಅಕ್ರಮ ಆಮದು ನಿಯಂತ್ರಣಕ್ಕೆ ಕಠಿಣ ಕ್ರಮ ಕೈಗೊಳ್ಳುವಂತೆ ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಅವರನ್ನು ನವದೆಹಲಿಯಲ್ಲಿ ನಿಯೋಗ ಭೇಟಿ ಮಾಡಿ ಮನವಿ ಸಲ್ಲಿಸಿದೆ.
ನಿಯೋಗದಲ್ಲಿ ಸಂಸದ ಕೋಟ ಶ್ರೀನಿವಾಸ ಪೂಜಾರಿ , ಕ್ಯಾಂಪ್ಕೊ ಅಧ್ಯಕ್ಷ ಎಸ್.ಆರ್. ಸತೀಶ್ಚಂದ್ರ, ವ್ಯವಸ್ಥಾಪಕ ನಿರ್ದೇಶಕ ಡಾ. ಬಿ.ವಿ. ಸತ್ಯನಾರಾಯಣ, ತೀರ್ಥಹಳ್ಳಿ ಶಾಸಕ ಹಾಗೂ ಅಡಿಕೆ ಮಹಾಮಂಡಲದ ಅಧ್ಯಕ್ಷ ಅರಾಗ ಜ್ಞಾನೇಂದ್ರ, ತುಮ್ಕೋಸ್ ಅಧ್ಯಕ್ಷ ಶಿವಕುಮಾರ್, ಕ್ಯಾಂಪ್ಕೋ ದೆಹಲಿ ಶಾಖಾ ವ್ಯವಸ್ಥಾಪಕ ಬಿಪಿನ್, ಕ್ಯಾಂಪ್ಕೋ ದೆಹಲಿ ಅಧಿಕಾರಿ ಕಾವ್ಯಶ್ರೀ ಸೇರಿದಂತೆ ಹಲವು ಪ್ರತಿನಿಧಿಗಳು ಭಾಗವಹಿಸಿದ್ದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ
ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಸಂಕಷ್ಟಗಳ ಕುರಿತು ಸಚಿವರ ಗಮನ ಸೆಳೆದ ನಿಯೋಗ, ಕಡಿಮೆ ಬೆಲೆಯ ಅಕ್ರಮ ಆಮದುಗಳಿಂದ ದೇಶೀಯ ಮಾರುಕಟ್ಟೆ ಮೇಲೆ ಪ್ರತಿಕೂಲ ಪರಿಣಾಮ ಉಂಟಾಗುತ್ತಿದ್ದು, ರೈತರ ಆದಾಯಕ್ಕೂ ಹೊಡೆತ ಬೀಳುತ್ತಿದೆ ಎಂದು ವಿವರಿಸಿತು. ಈ ಹಿನ್ನೆಲೆಯಲ್ಲಿ ಅಡಿಕೆಯ ಕನಿಷ್ಠ ಆಮದು ಬೆಲೆಯನ್ನು ಹೆಚ್ಚಿಸುವುದು ಹಾಗೂ ಅಕ್ರಮ ಆಮದು ತಡೆಗೆ ಕಟ್ಟುನಿಟ್ಟಿನ ಕ್ರಮ ಜಾರಿಗೊಳಿಸುವುದು ಅಗತ್ಯ ಎಂದು ಮನವರಿಕೆ ಮಾಡಲಾಗಿದೆ.
ನಿಯೋಗದ ಮನವಿಯನ್ನು ಆಲಿಸಿದ ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರು ವಿಷಯದ ಗಂಭೀರತೆಯನ್ನು ಮನಗಂಡು ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ ಎಂದು ತಿಳಿದುಬಂದಿದೆ.
A delegation comprising MP Srinivas Poojary, CAMPCO President S.R. Sathishchandra, CAMPCO MD Dr. B.V. Sathyanarayana, MLA Araga Jnanendra and other representatives met Union Commerce and Industry Minister Piyush Goyal in New Delhi. The delegation urged the Centre to enhance the Minimum Import Price (MIP) for arecanut and take strict action against illegal imports to safeguard the interests of domestic arecanut growers. The Minister assured the delegation that the concerns would be examined and appropriate action considered.
ಕಾಪುವಿನ ಶ್ರೀ ನಾರಾಯಣ ಗುರು ಸಭಾಭವನದಲ್ಲಿ ನಡೆದ ಆಹ್ವಾನಿತರ ಮುಕ್ತ ಚೆಸ್ ಸ್ಪರ್ಧೆಯಲ್ಲಿ…
ಯುರೋಪಿಯನ್ ಒಕ್ಕೂಟವು 365 ಭಾರತೀಯ ಆಹಾರ ಮತ್ತು ಕೃಷಿ ಉತ್ಪನ್ನಗಳಲ್ಲಿ ಕೀಟನಾಶಕ ಹಾಗೂ…
ಕೀಟನಾಶಕ ಅಂಶಗಳು ಪತ್ತೆಯಾದ ಹಿನ್ನೆಲೆಯಲ್ಲಿ ನೇಪಾಳ ಸರ್ಕಾರ ಭಾರತೀಯ ಮಾವಿನ ಹಣ್ಣಿನ ಆಮದಿಗೆ…
ಅಡಿಕೆಗೆ ವ್ಯಾಪಕವಾಗಿ ಹರಡಿರುವ ಹಳದಿ ಎಲೆ ಹಾಗೂ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ…
ರಾಜ್ಯದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ…
ಕೃಷಿ ತ್ಯಾಜ್ಯ ಮತ್ತು ನೈಸರ್ಗಿಕ ನಾರುಗಳಿಂದ ತಯಾರಾಗುವ ಬಯೋ-ಕಾಂಪೋಸಿಟ್ ಉತ್ಪನ್ನಗಳು ಮರದ ಪರ್ಯಾಯವಾಗಿ…