ಇತ್ತೀಚಿನ ದಿನಗಳಲ್ಲಿ ನುಸಿ ಬಾಧೆಯೂ ಅಡಿಕೆ ಬೆಳೆಯಲ್ಲಿ ತೀವ್ರವಾಗಿ ಹರಡುತ್ತಿದ್ದು ಅಡಿಕೆ ಕೃಷಿಕರಿಗೆ ತಲೆ ನೋವಾಗಿ ಪರಿಣಮಿಸಿದೆ. ಅಡಿಕೆ ಬೆಳೆಯಲ್ಲಿ ಎರಡು ರೀತಿಯ ನುಸಿ ಕಂಡು ಬರುತ್ತದೆ, ಅದು ಬಿಳಿ ನುಸಿ ಮತ್ತು ಕೆಂಪು ನುಸಿ. ಸಾಮಾನ್ಯವಾಗಿ ಈ ನುಸಿಗಳು ಬೇಸಿಗೆಯಲ್ಲಿ ಹೆಚ್ಚಾಗಿ ಕಂಡುಬರುತ್ತದೆ, ಏಕೆಂದರೆ ಇದರ ಸಂತಾನೋತ್ಪತ್ತಿ ಮತ್ತು ಇನ್ನಿತರ ಚಟುವಿಕೆಗಳಿಗಾಗಿ ಉಷ್ಣತೆ ಅನಿವಾರ್ಯ. ದ್ಯುತಿ ಸಂಶ್ಲೇಷಣೆ ಕ್ರೀಯೆಯಲ್ಲಿ ವ್ಯತ್ಯಾಸಗೊಂಡು ಸಸಿಗಳು ಸಾಯಲೂಬಹುದು
ಈ ನುಸಿಗಳು ಕೇವಲ 15-25 ದಿನಗಳಲ್ಲಿ ತಮ್ಮ ಜೀವನಚಕ್ರವನ್ನು ಪೂರ್ಣಗೊಳಿಸುತ್ತವೆ.
ಈ ನುಸಿಗಳು ಸೂರ್ಯನ ನೇರ ಕಿರಣಗಳನ್ನು ತಪ್ಪಿಸಿಕೊಳ್ಳಲು ಎಲೆಯ ಕೆಳ ಭಾಗದಲ್ಲಿ ಧಾಳಿ ಮಾಡಿ ಎಲೆಯ ಪತ್ರ ಹರಿತ್ತನ್ನು ತಿನ್ನುತ್ತವೆ…. ಕ್ರಮೇಣವಾಗಿ ಎಲೆಗಳು ಹಳದಿ ಬಣ್ಣಕ್ಕೆ ತಿರುಗುತ್ತವೆ, ತೀವ್ರತೆ ಹೆಚ್ಚಾದಂತೆ ಎಲೆಗಳು ಒಣಗಳುತ್ತವೆ. ಇದರ ಪರಿಣಾಮದಿಂದ ದ್ಯುತಿ ಸಂಶ್ಲೇಷಣ ಕ್ರಿಯೆಗೆ ಅಡ್ಡಿಯಾಗಿ ಅಡಿಕೆ ಬೆಳೆಯಲ್ಲಿನ ಇಳುವರಿ ಕುಂಠಿತ ಗೊಳ್ಳುತ್ತದೆ ಮತ್ತು ಸಾಯಲು ಬಹುದು. ಈ ನುಸಿಗಳು ತಮ್ಮ ಜೀವನ ಚಕ್ರವನ್ನು 15 -25 ದಿನಗಳಲ್ಲಿ ಪೂರ್ಣಗೊಳಿಸುತ್ತವೆ. ವಾತಾವರಣ ವೈಪರೀತ್ಯದಿಂದ ಇದರ ಹಾವಳಿ ಹೆಚ್ಚಾಗುತ್ತಿದೆ.
ಗುರುತಿಸುವುದು ಹೇಗೆ: ನುಸಿ ಅಥವಾ ಮೈಟ್ ಅತ್ಯಂತ ಸಣ್ಣ ಗಾತ್ರವನ್ನು ಹೊಂದಿದ್ದು, ಬರಿಗಣ್ಣಿನಲ್ಲಿ ಸುಲಭವಾಗಿ ಗುರುತಿಸುವುದು ಕಷ್ಟ. ಬಿಳಿ ನುಸಿಯು ಬಿಳಿ ಬಣ್ಣದ ಬಲೆಯೊಳಗೆ ಅವಿತುಕೊಂಡು ರಸಹೀರುತ್ತವೆ. ಹಾಗಾಗಿ, ಬೆರಳ ತುದಿಯಿಂದ ಅಡಿಕೆ ಎಲೆಯ ಅಡಿ ಭಾಗವನ್ನು ಉಜ್ಜಿದಾಗ ಬಿಳಿ ಬಣ್ಣದ ಬಲೆ ಅಥವಾ ಕೆಂಪು ಬಣ್ಣ ಬೆರಳ ತುದಿಗೆ ಅಂಟಿಕೊಂಡರೆ ಮೈಟ್ ಕೀಟವೆಂದು ಗುರುತಿಸಬಹುದು.
ನಿರ್ವಹಣೆ ಹೇಗೆ?/ಹತೋಟಿ ಕ್ರಮಗಳು: ಏಪ್ರಿಲ್ – ಮೇ ತಿಂಗಳಲ್ಲಿ ಈ ಕೀಟದ ಬಾಧೆ ಹೆಚ್ಚಿದ್ದು, ಮಳೆಗಾಲದಲ್ಲಿ ಕಡಿಮೆ ಆಗುತ್ತದೆ. ಪೊಟ್ಯಾಸಿಯಂ ಸೇರಿದಂತೆ ಇತರ ಪೋಷಕಾಂಶಗಳ ಸಮತೋಲಿತ ನಿರ್ವಹಣೆ, ನೀರುಣಿಸುವುದು ಹಾಗೂ ಸಸಿಗಳಿಗೆ ನೆರಳು ಒದಗಿಸುವುದು ಮೈಟ್ ಬಾಧೆಯನ್ನು ಕಡಿಮೆ ಮಾಡಲು ಸಹಕಾರಿ.
ಏಪ್ರಿಲ್ – ಮೇ ತಿಂಗಳಲ್ಲಿ ಅಡಿಕೆ ಸಸಿ ಮತ್ತು ಮರಗಳನ್ನು ಸರಿಯಾಗಿ ಗಮನಿಸುತ್ತಿರಬೇಕು. ಪ್ರಾರಂಭಿಕ ಹಂತದಲ್ಲಿಯೇ ಮೈಟ್ / ನುಸಿಯನ್ನು ಗುರುತಿಸಿ, NSKE 10000 ppm (ಬೇವಿನ ಬೀಜದ ಉತ್ಪನ್ನ) ಅನ್ನು ಒಂದು ಲೀಟರ್ ನೀರಿಗೆ 5 ಎಂ.ಎಲ್ ಪ್ರಮಾಣದಲ್ಲಿ ಅಥವಾ ಗಂಧಕದ ಹುಡಿ (Wettable Sulfur) ಅನ್ನು ಪ್ರತೀ ಲೀಟರ್ ನೀರಿಗೆ 2ಗ್ರಾಂ ಪ್ರಮಾಣದಂತೆ ಎಲೆಯ ಕೆಳಭಾಗಕ್ಕೆ ಸಿಂಪಡಿಸಬೇಕು. ಇವೆರಡು ಬಳಕೆಗೆ ಸುರಕ್ಷಿತ.
ಹೆಚ್ಚಿನ ಬಾಧೆಯಿದ್ದರೆ ಅಥವಾ ತೀವ್ರತೆ ಹೆಚ್ಚು ಇರುವ ಪ್ರದೇಶಗಳಲ್ಲಿ 2 ಬಾರಿ (15 ದಿನಗಳ ಅಂತರದಲ್ಲಿ) ಸ್ಪೈರೋಮೆಸಿಫೆನ್ (Spiromesifen) ಅಥವಾ ಪ್ರೋಪರ್ಗೈಟ್ (Propargite) ಅಥವಾ ಫೆನಝಕ್ವಿನ್ (Fenazaquin) ನುಸಿನಾಶಕವನ್ನು ಒಂದು ಲೀಟರ್ ನೀರಿಗೆ ಒಂದು ಎಂ.ಎಲ್ ಪ್ರಮಾಣದಲ್ಲಿ ಎಲೆಯ ಅಡಿಭಾಗಕ್ಕೆ ಸಿಂಪಡಿಸಬಹುದು.
ಕಾಕ್ಸಿನೆಲ್ಲಿಡ್ ದುಂಬಿ (ಗುಲಗಂಜಿ ಕೀಟ),ಅಂಬ್ಲಿಸಿಯಸ್ (ಪರಭಕ್ಷಕ ನುಸಿ), ಪರಭಕ್ಷಕ ತ್ರಿಪ್ಸ್ ಸೇರಿದಂತೆ ಸುಮಾರು ಆರಕ್ಕಿಂತಲೂ ಹೆಚ್ಚು ಪರೋಪಕಾರಿ ಕೀಟಗಳು ನುಸಿಯನ್ನು ನಿಯಂತ್ರಿಸುತ್ತವೆ. ಹಾಗಾಗಿ, ಯಾವುದೇ ಕೀಟನಾಶಕವನ್ನು ಅನಿವಾರ್ಯ ಸಂದರ್ಭದಲ್ಲಿ ಮಾತ್ರ ಅಡಿಕೆ ತೋಟದಲ್ಲಿ ಸಿಂಪಡಿಸಬೇಕು. ಶಿಲಿಂದ್ರನಾಶಕ ಸಿಂಪಡಿಸುತ್ತಿದ್ದರೆ, ಜೊತೆಗೆ ಕೀಟನಾಶಕವೂ ಇರಲಿ ಎನ್ನುವುದು ಬೇಡ.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…