Advertisement
MIRROR FOCUS

ದಕ್ಷಿಣ ಕನ್ನಡ–ಉಡುಪಿ ಭಾಗದಲ್ಲಿ 8–10% ಎಳೆ ಅಡಿಕೆ ಉದುರಿದೆ…!, ರಾಜ್ಯದಲ್ಲಿ ಎಲೆಚುಕ್ಕೆ ರೋಗದಿಂದ 88,559 ಹೆಕ್ಟೇರ್ ಹಾನಿ

Share

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಕೆಲ ಭಾಗಗಳಲ್ಲಿ ಎಳೆ ಅಡಿಕೆ (ನಳ್ಳಿ) ಉದುರುವ ಸಮಸ್ಯೆ ಕಾಣಿಸಿಕೊಂಡಿದ್ದು, ಅಂದಾಜು 8 ರಿಂದ 10 ಶೇಕಡಾ ಮಟ್ಟಿಗೆ ಬೆಳ ನಷ್ಟವಾಗಿದೆ ಎಂದು ತೋಟಗಾರಿಕೆ ಇಲಾಖೆಯ ಅಂದಾಜು ತಿಳಿಸಿದೆ.

ಅಡಿಕೆ ಬೆಳೆಯ ಸಮಸ್ಯೆಯ ಬಗ್ಗೆ ವಿಧಾನಪರಿಷತ್‌ ಸದಸ್ಯ ಮಂಜುನಾಥ ಭಂಡಾರಿ ಅವರು ಸದನದಲ್ಲಿ “ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಕೆಲ ಭಾಗಗಳಲ್ಲಿ ಎಳೆ ಅಡಿಕೆ (ನಳ್ಳಿ) ಉದುರುವ ಸಮಸ್ಯೆ ಉಂಟಾಗಿದ್ದು ಅಂದಾಜು ಎಷ್ಟು ಪ್ರಮಾಣದ ಬೆಳ ನಷ್ಟವಾಗಿದ,; ಎಷ್ಟು ಪ್ರಮಾಣದ ಪರಿಹಾರ ಮೊತ್ತವನ್ನು ವಿತರಿಸಲಾಗಿದೆ” ಎಂದು ಕೇಳಿರುವ ಪ್ರಶ್ನೆಗೆ ಉತ್ತರಿಸಿದ ತೋಟಗಾರಿಕಾ ಸಚಿವರು, ಬೆಳೆ ನಷ್ಟವಾದ ಸಂದರ್ಭಗಳಲ್ಲಿ ತೋಟಗಾರಿಕೆ ಇಲಾಖೆಯಿಂದ ನೇರ ಪರಿಹಾರ ನೀಡುವ ಕಾರ್ಯಕ್ರಮ ಇಲ್ಲದಿದ್ದರೂ, ಮರುವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ ಅಡಿಯಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಸೇರಿದಂತೆ ಅಡಿಕೆ ಬೆಳೆಯನ್ನು ಅಧಿಸೂಚಿತ ಬೆಳೆಗಳ ಪಟ್ಟಿಗೆ ಸೇರಿಸಲಾಗಿದೆ. ಹವಾಮಾನ ವೈಪರೀತ್ಯದಿಂದ ನಷ್ಟ ಉಂಟಾದರೆ ವಿಮಾ ಪರಿಹಾರ ನೀಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದೇ ವೇಳೆ, ರಾಜ್ಯದ ಹಲವು ಜಿಲ್ಲೆಗಳಲ್ಲಿ ತಾಪಮಾನ ಏರಿಕೆ ಹಾಗೂ ಅಕಾಲಿಕ ಮಳೆಯ ಪರಿಣಾಮವಾಗಿ ಹಿಂಗಾರು ಸಾಯುವುದು, ಕರಟುವುದು ಹಾಗೂ ಎಲೆಚುಕ್ಕೆ ರೋಗ ಹೆಚ್ಚುತ್ತಿರುವ ಬಗ್ಗೆ ಸಮೀಕ್ಷೆ ನಡೆಸಲಾಗಿದೆ. ತೋಟಗಾರಿಕೆ ಇಲಾಖೆಯ ಪ್ರಕಾರ, ರಾಜ್ಯದಲ್ಲಿ ಒಟ್ಟು 88,559 ಹೆಕ್ಟೇರ್ ಅಡಿಕೆ ತೋಟಗಳು ಎಲೆಚುಕ್ಕೆ ರೋಗದಿಂದ ಹಾನಿಗೊಳಗಾಗಿವೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಜಿಲ್ಲಾವಾರು ಎಲೆಚುಕ್ಕೆ ರೋಗ ಹಾನಿ (ಹೆಕ್ಟೇರ್)

  • ಚಿಕ್ಕಮಗಳೂರು – 25,210

  • ಶಿವಮೊಗ್ಗ – 32,124

  • ಉತ್ತರ ಕನ್ನಡ – 8,730

  • ಹಾಸನ – 360

  • ದಕ್ಷಿಣ ಕನ್ನಡ – 20,830

  • ಉಡುಪಿ – 455

  • ಕೊಡಗು – 850

ಇನ್ನೊಂದೆಡೆ, ಎಲೆಚುಕ್ಕೆ ನಿಯಂತ್ರಣಕ್ಕಾಗಿ ಶಿಫಾರಸ್ಸಾಗಿರುವ ಪ್ರೋಪಿಕೊನಜೋಲ್ ಸೇರಿದಂತೆ ರಾಸಾಯನಿಕ ಸಿಂಪಡಣೆಗಳು ಜೇನು ಸಾಕಾಣಿಕೆಗೆ ಹಾನಿಕಾರಕವಾಗುವ ಸಾಧ್ಯತೆ ಇದೆ ಎಂಬ ವಿಚಾರ ಸರ್ಕಾರದ ಗಮನಕ್ಕೆ ಬಂದಿದ್ದು, ಈ ಹಿನ್ನೆಲೆಯಲ್ಲಿ, ಜೇನು ಕೃಷಿಗೆ ಹಾನಿಯಾಗದಂತೆ ಜೈವಿಕ ಹಾಗೂ ಜೀವಾಣುನಾಶಕ ಪರ್ಯಾಯ ವಿಧಾನಗಳನ್ನು ಪರಿಗಣಿಸಿ ಶಿಫಾರಸ್ಸು ಮಾಡುವ ಉದ್ದೇಶವಿದೆ ಎಂದು ಸಂಬಂಧಿತ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ಹೀಗಾಗಿ ಸದ್ಯ  ಎಲೆಚುಕ್ಕಿಗೆ ಯಾವುದೇ ಬಯೋ ಅಥವಾ 100% ಗ್ಯಾರಂಟಿ ಔಷಧಿಗಳಿಲ್ಲ, ಈ ಬಗ್ಗೆ ಅಧ್ಯಯನವಾಗಿಲ್ಲ ಎಂದೂ ಪರೋಕ್ಷವಾಗಿ ತಿಳಿಸಿದೆ.

An estimated 8–10% immature arecanut nut drop has been reported in parts of Dakshina Kannada and Udupi districts. Meanwhile, leaf spot disease has affected about 88,559 hectares of arecanut plantations across Karnataka, and the government is considering biological alternatives to chemical fungicides to protect beekeeping.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಚಾಮರಾಜನಗರ–ಬೆಳಗಾವಿಯಲ್ಲಿ ಭಾರೀ ಆಲಿಕಲ್ಲು ಮಳೆ | ಬಿಸಿಲಿನ ನಡುವೆ ಇಳೆ ತಂಪು, ರೈತರಿಗೆ ಆತಂಕ

ಚಾಮರಾಜನಗರ ಮತ್ತು ಬೆಳಗಾವಿಯಲ್ಲಿ ಭಾರೀ ಆಲಿಕಲ್ಲು ಮಳೆ ಸುರಿದು ರೈತರು ಆತಂಕಗೊಂಡಿದ್ದಾರೆ. ಬೆಂಗಳೂರಿನ…

2 hours ago

ವಿದ್ಯುತ್ ಕೊರತೆಯ ನಿರ್ಣಾಯಕ ಸಮಸ್ಯೆಗೆ ಪರಿಹಾರ : ದೇಶದ ಸ್ಥಾಪಿತ ಸಾಮರ್ಥ್ಯ 520 ಗಿಗಾ ವ್ಯಾಟ್‌ ದಾಟಿತು

ದೇಶದಲ್ಲಿ ವಿದ್ಯುತ್ ಉತ್ಪಾದನಾ ಸಾಮರ್ಥ್ಯವನ್ನು 520 ಗಿಗಾ ವ್ಯಾಟ್‌ಗಿಂತ ಹೆಚ್ಚು ಮಟ್ಟಕ್ಕೆ ಹೆಚ್ಚಿಸಲಾಗಿದೆ…

2 hours ago

ಅಡಿಕೆ ಹಾನಿಕಾರಕವಲ್ಲ – ಅಧ್ಯಯನ ಪ್ರಗತಿಯಲ್ಲಿ | ಹಾಳೆತಟ್ಟೆ ಹಾನಿಕಾರಕವಲ್ಲ

ಅಡಿಕೆಯ ಆರೋಗ್ಯ ಪರಿಣಾಮ ಹಾಗೂ ಸುರಕ್ಷತೆ ಕುರಿತು ರಾಷ್ಟ್ರೀಯ ಮಟ್ಟದ ಸಂಸ್ಥೆಗಳೊಂದಿಗೆ ಸಂಯುಕ್ತ…

10 hours ago

ಗಿರಿಪ್ರದೇಶಗಳಲ್ಲಿ ಸ್ವಚ್ಛತಾ ಅಭಿಯಾನ | ಮುಳ್ಳಯ್ಯನಗಿರಿ–ಸೀತಾಳಯ್ಯಗಿರಿಯಲ್ಲಿ ಜಾಗೃತಿ ಕಾರ್ಯ

ಮುಳ್ಳಯ್ಯನಗಿರಿ ಮತ್ತು ಸೀತಾಳಯ್ಯಗಿರಿ ಪ್ರದೇಶಗಳಲ್ಲಿ ಸ್ವಚ್ಛತಾ ಅಭಿಯಾನ ನಡೆಸಿ ಪ್ರವಾಸಿಗರಿಗೆ ಜಾಗೃತಿ ಮೂಡಿಸಲಾಯಿತು.…

11 hours ago

ಹಾಲು ಉತ್ಪಾದಕರಿಗೆ ಸಿಹಿ ಸುದ್ದಿ | ಲೀಟರ್‌ಗೆ ₹2 ಹೆಚ್ಚಳ ಘೋಷಿಸಿದ ಕೋಮುಲ್

ಯುಗಾದಿ ಹಿನ್ನೆಲೆ ಕೋಲಾರ ಜಿಲ್ಲೆಯಲ್ಲಿ ಹಾಲಿನ ದರ ಲೀಟರ್‌ಗೆ ₹2 ಹೆಚ್ಚಳ ಮಾಡಲಾಗಿದೆ.…

11 hours ago

ಅಡಿಕೆ ರೋಗಕ್ಕೆ “100% ಬಯೋ ಗ್ಯಾರಂಟಿ” ಔಷಧಿ? — ICAR ಸ್ಪಷ್ಟನೆ | ಇನ್ನೂ ಅಧ್ಯಯನವೇ ಆಗಿಲ್ಲ…!

ಅಡಿಕೆ ಎಲೆಚುಕ್ಕಿ ರೋಗಕ್ಕೆ 100% ಪರಿಣಾಮಕಾರಿ ಎಂದು ಹೇಳಲಾಗುತ್ತಿರುವ ಬಯೋ ಔಷಧಿಗಳಿಗೆ ICAR…

12 hours ago