Advertisement
MIRROR FOCUS

ದಕ್ಷಿಣ ಕನ್ನಡ–ಉಡುಪಿ ಭಾಗದಲ್ಲಿ 8–10% ಎಳೆ ಅಡಿಕೆ ಉದುರಿದೆ…!, ರಾಜ್ಯದಲ್ಲಿ ಎಲೆಚುಕ್ಕೆ ರೋಗದಿಂದ 88,559 ಹೆಕ್ಟೇರ್ ಹಾನಿ

Share

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಕೆಲ ಭಾಗಗಳಲ್ಲಿ ಎಳೆ ಅಡಿಕೆ (ನಳ್ಳಿ) ಉದುರುವ ಸಮಸ್ಯೆ ಕಾಣಿಸಿಕೊಂಡಿದ್ದು, ಅಂದಾಜು 8 ರಿಂದ 10 ಶೇಕಡಾ ಮಟ್ಟಿಗೆ ಬೆಳ ನಷ್ಟವಾಗಿದೆ ಎಂದು ತೋಟಗಾರಿಕೆ ಇಲಾಖೆಯ ಅಂದಾಜು ತಿಳಿಸಿದೆ.

ಅಡಿಕೆ ಬೆಳೆಯ ಸಮಸ್ಯೆಯ ಬಗ್ಗೆ ವಿಧಾನಪರಿಷತ್‌ ಸದಸ್ಯ ಮಂಜುನಾಥ ಭಂಡಾರಿ ಅವರು ಸದನದಲ್ಲಿ “ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಕೆಲ ಭಾಗಗಳಲ್ಲಿ ಎಳೆ ಅಡಿಕೆ (ನಳ್ಳಿ) ಉದುರುವ ಸಮಸ್ಯೆ ಉಂಟಾಗಿದ್ದು ಅಂದಾಜು ಎಷ್ಟು ಪ್ರಮಾಣದ ಬೆಳ ನಷ್ಟವಾಗಿದ,; ಎಷ್ಟು ಪ್ರಮಾಣದ ಪರಿಹಾರ ಮೊತ್ತವನ್ನು ವಿತರಿಸಲಾಗಿದೆ” ಎಂದು ಕೇಳಿರುವ ಪ್ರಶ್ನೆಗೆ ಉತ್ತರಿಸಿದ ತೋಟಗಾರಿಕಾ ಸಚಿವರು, ಬೆಳೆ ನಷ್ಟವಾದ ಸಂದರ್ಭಗಳಲ್ಲಿ ತೋಟಗಾರಿಕೆ ಇಲಾಖೆಯಿಂದ ನೇರ ಪರಿಹಾರ ನೀಡುವ ಕಾರ್ಯಕ್ರಮ ಇಲ್ಲದಿದ್ದರೂ, ಮರುವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ ಅಡಿಯಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಸೇರಿದಂತೆ ಅಡಿಕೆ ಬೆಳೆಯನ್ನು ಅಧಿಸೂಚಿತ ಬೆಳೆಗಳ ಪಟ್ಟಿಗೆ ಸೇರಿಸಲಾಗಿದೆ. ಹವಾಮಾನ ವೈಪರೀತ್ಯದಿಂದ ನಷ್ಟ ಉಂಟಾದರೆ ವಿಮಾ ಪರಿಹಾರ ನೀಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದೇ ವೇಳೆ, ರಾಜ್ಯದ ಹಲವು ಜಿಲ್ಲೆಗಳಲ್ಲಿ ತಾಪಮಾನ ಏರಿಕೆ ಹಾಗೂ ಅಕಾಲಿಕ ಮಳೆಯ ಪರಿಣಾಮವಾಗಿ ಹಿಂಗಾರು ಸಾಯುವುದು, ಕರಟುವುದು ಹಾಗೂ ಎಲೆಚುಕ್ಕೆ ರೋಗ ಹೆಚ್ಚುತ್ತಿರುವ ಬಗ್ಗೆ ಸಮೀಕ್ಷೆ ನಡೆಸಲಾಗಿದೆ. ತೋಟಗಾರಿಕೆ ಇಲಾಖೆಯ ಪ್ರಕಾರ, ರಾಜ್ಯದಲ್ಲಿ ಒಟ್ಟು 88,559 ಹೆಕ್ಟೇರ್ ಅಡಿಕೆ ತೋಟಗಳು ಎಲೆಚುಕ್ಕೆ ರೋಗದಿಂದ ಹಾನಿಗೊಳಗಾಗಿವೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಜಿಲ್ಲಾವಾರು ಎಲೆಚುಕ್ಕೆ ರೋಗ ಹಾನಿ (ಹೆಕ್ಟೇರ್)

  • ಚಿಕ್ಕಮಗಳೂರು – 25,210

  • ಶಿವಮೊಗ್ಗ – 32,124

  • ಉತ್ತರ ಕನ್ನಡ – 8,730

  • ಹಾಸನ – 360

  • ದಕ್ಷಿಣ ಕನ್ನಡ – 20,830

  • ಉಡುಪಿ – 455

  • ಕೊಡಗು – 850

ಇನ್ನೊಂದೆಡೆ, ಎಲೆಚುಕ್ಕೆ ನಿಯಂತ್ರಣಕ್ಕಾಗಿ ಶಿಫಾರಸ್ಸಾಗಿರುವ ಪ್ರೋಪಿಕೊನಜೋಲ್ ಸೇರಿದಂತೆ ರಾಸಾಯನಿಕ ಸಿಂಪಡಣೆಗಳು ಜೇನು ಸಾಕಾಣಿಕೆಗೆ ಹಾನಿಕಾರಕವಾಗುವ ಸಾಧ್ಯತೆ ಇದೆ ಎಂಬ ವಿಚಾರ ಸರ್ಕಾರದ ಗಮನಕ್ಕೆ ಬಂದಿದ್ದು, ಈ ಹಿನ್ನೆಲೆಯಲ್ಲಿ, ಜೇನು ಕೃಷಿಗೆ ಹಾನಿಯಾಗದಂತೆ ಜೈವಿಕ ಹಾಗೂ ಜೀವಾಣುನಾಶಕ ಪರ್ಯಾಯ ವಿಧಾನಗಳನ್ನು ಪರಿಗಣಿಸಿ ಶಿಫಾರಸ್ಸು ಮಾಡುವ ಉದ್ದೇಶವಿದೆ ಎಂದು ಸಂಬಂಧಿತ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ಹೀಗಾಗಿ ಸದ್ಯ  ಎಲೆಚುಕ್ಕಿಗೆ ಯಾವುದೇ ಬಯೋ ಅಥವಾ 100% ಗ್ಯಾರಂಟಿ ಔಷಧಿಗಳಿಲ್ಲ, ಈ ಬಗ್ಗೆ ಅಧ್ಯಯನವಾಗಿಲ್ಲ ಎಂದೂ ಪರೋಕ್ಷವಾಗಿ ತಿಳಿಸಿದೆ.

An estimated 8–10% immature arecanut nut drop has been reported in parts of Dakshina Kannada and Udupi districts. Meanwhile, leaf spot disease has affected about 88,559 hectares of arecanut plantations across Karnataka, and the government is considering biological alternatives to chemical fungicides to protect beekeeping.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…

8 hours ago

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ

ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…

14 hours ago

ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?

2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…

22 hours ago

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

1 day ago

ಹವಾಮಾನ ವರದಿ | 02-09-2026 | ಉತ್ತರ ಭಾರತದ ವಾಯುಭಾರ ಕುಸಿತ ದುರ್ಬಲವಾಗುವ ಸಾಧ್ಯತೆ

ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…

1 day ago

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

2 days ago