ಅಡಿಕೆ ಪರ್ಯಾಯ ಬಳಕೆ | ಸಿದ್ಧವಾಗಿದೆ ಅಡಿಕೆ ಚೊಗರಿನ ಪಂಚೆ-ಶಾಲು |

January 19, 2024
2:05 PM
ಅಡಿಕೆ ಚೊಗರಿನ ಪಂಚೆ ಹಾಗೂ ಶಾಲು ಸಿದ್ಧವಾಗಿದೆ. ಗ್ರಾಮೀಣ ಕಲೆ ಉಳಿಸಲು, ಕೃಷಿ ಮೌಲ್ಯವರ್ಧನೆಗೆ ಸಹಕಾರ, ಬೆಂಬಲ ನೀಡಬಹುದು.

ಅಡಿಕೆ ಚೊಗರಿನ ಸೀರೆ ಈಗಾಗಲೇ ಸದ್ದು ಮಾಡಿದೆ. ಕೈಮಗ್ಗ ಬಟ್ಟೆಗೆ ಅಡಿಕೆ ಚೊಗರು ಹಾಗೂ ನೈಸರ್ಗಿಕ ಬಣ್ಣದಿಂದ ತಯಾರು ಮಾಡಿರುವ ಸೀರೆ ವಿವಿಧ ಕಡೆ ಗಮನ ಸೆಳೆದಿತ್ತು. ಇದೀಗ ಕೈಮಗ್ಗ ಬಟ್ಟೆಗೆ ಅಡಿಕೆ ಚೊಗರು ಬಳಕೆ ಮಾಡಿ ಪಂಚೆ ಹಾಗೂ ಶಾಲು ಸಿದ್ಧವಾಗಿದೆ.ಕಾರ್ಕಳದ..

ಕಾರ್ಕಳದ ಕದಿಕೆ ಟ್ರಸ್ಟ್ ಮೂಲಕ ನೇಕಾರಿಕೆ ತರಬೇತಿ ಪಡೆಯುತ್ತಿರುವ ತಂಡವು  ಈ ಪಂಚೆ ತಯಾರು ಮಾಡುತ್ತಿದೆ. ಕುಂದಾಪುರದ ಹೊಸೇರಿ ಹಾಡಿಮನೆಯ ಪ್ರದೇಶದಲ್ಲಿ ಈ ತರಬೇತಿ ನಡೆಯುತ್ತಿದೆ. ಇಲ್ಲಿಯ ಉತ್ಪನ್ನಕ್ಕೆ ಬಾಗಳ್‌ ಎಂದು ಹೆಸರಿಸಲಾಗಿದೆ. ಈ ಪ್ರದೇಶದಲ್ಲಿ ಪುರಾತನವಾದ ರೆಂಜೆ/ಬಕುಳ ಮರ ಇದೆ, ಅಲ್ಲೇ ಊರಿನ ದೈವದ ಗುಡಿಯೂ ಇದೆ. ಈ ಎಲ್ಲಾ ಕಾರಣಕ್ಕೆ ಬಾಗಳ್‌ ಎಂದು ಆ ಪುರಾತನ ಮರದ ಹೆಸರನ್ನು ಉಲ್ಲೇಖಿಸಲಾಗಿದೆ. ಕುಂದಗನ್ನಡದಲ್ಲಿ ಈ ಮರವನ್ನು ಬಾಗಳ್‌ ಎನ್ನುತ್ತಾರೆ. ಹೀಗಾಗಿ ಬಾಗಳ್‌ ಎಂದು ಹೆಸರಿಸಲಾಗಿದೆ. ಈ ಬಗ್ಗೆ….

ಅಡಿಕೆ ಚೊಗರಿನ ಪಂಚೆ-ಶಾಲು
ಬಟ್ಟೆ ತಯಾರಿಕೆ

ಅಡಿಕೆಯ ಚೊಗರಿನ ಬಟ್ಟೆ ಉತ್ಪನ್ನಗಳಿಗೆ ಈಗಾಗಲೇ ಬೇಡಿಕೆ ವ್ಯಕ್ತವಾಗಿದ್ದು, ಈಗ ಅಡಿಕೆ ಚೊಗರಿನ ಪಂಚೆ ಹಾಗೂ ಶಾಲು ಕೂಡಾ ತಯಾರಿಕೆಯಾಗಿದೆ. ಗ್ರಾಮೀಣ ಉತ್ಪನ್ನ ಹಾಗೂ ಅಡಿಕೆಯ ಮೌಲ್ಯವರ್ಧನೆ ಇಲ್ಲಿ ಪ್ರಮುಖವಾಗಿದೆ. ಇದರ ಜೊತೆಗೆ ನೇಕಾರಿಕೆ ಉಳಿಸಲು ಹಲವು ಪ್ರಯತ್ನ ನಡೆಯುತ್ತಿದೆ. ಈ ಕಾರಣದಿಂದ ಬಟ್ಟೆ ಖರೀದಿ ಮಾಡುವ ಮೂಲಕ ದೇಸೀ ಉದ್ಯಮಕ್ಕೆ, ಕೈಮಗ್ಗ, ನೇಕಾರಿಕೆ ಉಳಿಸಲು ಬೆಂಬಲ ವ್ಯಕ್ತಪಡಿಸಬಹುದು. ಅಡಿಕೆ ಚೊಗರು ಅಂಚಿನ ಪಂಚೆ ಶಾಲು ಸೆಟ್ ಕೂಡಾ ಕದಿಕೆ ಟ್ರಸ್ಟ್‌ ಮೂಲಕ ಲಭ್ಯ ಇದೆ. ಪಂಚೆ : 800 ರೂಪಾಯಿ, ಶಾಲು : 600 ರೂಪಾಯಿ, ಎರಡೂ ಜೊತೆ ಗೆ 1400 ರೂಪಾಯಿ ಹಾಗೂ ಕಳುಹಿಸುವ ವೆಚ್ಚ ಪ್ರತ್ಯೇಕ ವಿಧಿಸಲಾಗುತ್ತದೆ. ಈ ಬಗ್ಗೆ ಹೆಚ್ಚಿನ ಮಾಹಿತಿಗೆ 9880835299 ಸಂಪರ್ಕ ಮಾಡಬಹುದು. ಖರೀದಿ ಆಸಕ್ತರು ಕಾಯ್ದಿರಿಸಬೇಕಾಗುತ್ತದೆ. ತಯಾರಾದಂತೆ ಆಸಕ್ತರಿಗೆ ಕಳುಹಿಸಿಕೊಡುತ್ತಾರೆ.(ಅಡಿಕೆ ಚೊಗರಿನ ಪಂಚೆ ಹಾಗೂ ಶಾಲು ಹಾಕಿರುವ ಫೋಟೋ ಕೆಳಗೆ ಇದೆ….)

ಅಡಿಕೆ ಚೊಗರಿನ ಪಂಚೆ-ಶಾಲು

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಇಳುವರಿ ಕುಸಿತ | ಮಿಶ್ರ ತೋಟಗಳಲ್ಲಿ ಹೆಚ್ಚು ಸಮಸ್ಯೆ…! ಯಾವ ತಳಿ ಆಯ್ಕೆ ಮಾಡಿದ್ದಾರೆ…? | ಅಡಿಕೆ ಇಳುವರಿ ಕುಸಿತದ ವಿಶ್ಲೇಷಣೆ
March 13, 2026
10:48 AM
by: ದ ರೂರಲ್ ಮಿರರ್.ಕಾಂ
ಪಿಎಂ ಕಿಸಾನ್‌ 22ನೇ ಕಂತು ಬಿಡುಗಡೆಗೆ ಸಿದ್ಧತೆ | 9.32 ಕೋಟಿ ರೈತರಿಗೆ ₹18,640 ಕೋಟಿ ನೇರ ನಗದು
March 13, 2026
6:58 AM
by: ಮಿರರ್‌ ಡೆಸ್ಕ್
ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ | ದೆಹಲಿಯಲ್ಲಿ GCWAS-2026 ಆರಂಭ
March 13, 2026
6:48 AM
by: ಮಿರರ್‌ ಡೆಸ್ಕ್
ಗೇರುಹಣ್ಣಿನ ಮೌಲ್ಯವರ್ಧನೆಗೆ ಕೈಗಾರಿಕಾ ಸಂಪರ್ಕ ಸಭೆ : ವ್ಯಾಪಾರೀಕರಣಕ್ಕೆ ಹೊಸ ವೇದಿಕೆ
March 12, 2026
9:26 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror