ಅಡಿಕೆ ಪರ್ಯಾಯ ಬಳಕೆ | ಸಿದ್ಧವಾಗಿದೆ ಅಡಿಕೆ ಚೊಗರಿನ ಪಂಚೆ-ಶಾಲು |

January 19, 2024
2:05 PM
ಅಡಿಕೆ ಚೊಗರಿನ ಪಂಚೆ ಹಾಗೂ ಶಾಲು ಸಿದ್ಧವಾಗಿದೆ. ಗ್ರಾಮೀಣ ಕಲೆ ಉಳಿಸಲು, ಕೃಷಿ ಮೌಲ್ಯವರ್ಧನೆಗೆ ಸಹಕಾರ, ಬೆಂಬಲ ನೀಡಬಹುದು.

ಅಡಿಕೆ ಚೊಗರಿನ ಸೀರೆ ಈಗಾಗಲೇ ಸದ್ದು ಮಾಡಿದೆ. ಕೈಮಗ್ಗ ಬಟ್ಟೆಗೆ ಅಡಿಕೆ ಚೊಗರು ಹಾಗೂ ನೈಸರ್ಗಿಕ ಬಣ್ಣದಿಂದ ತಯಾರು ಮಾಡಿರುವ ಸೀರೆ ವಿವಿಧ ಕಡೆ ಗಮನ ಸೆಳೆದಿತ್ತು. ಇದೀಗ ಕೈಮಗ್ಗ ಬಟ್ಟೆಗೆ ಅಡಿಕೆ ಚೊಗರು ಬಳಕೆ ಮಾಡಿ ಪಂಚೆ ಹಾಗೂ ಶಾಲು ಸಿದ್ಧವಾಗಿದೆ.ಕಾರ್ಕಳದ..

ಕಾರ್ಕಳದ ಕದಿಕೆ ಟ್ರಸ್ಟ್ ಮೂಲಕ ನೇಕಾರಿಕೆ ತರಬೇತಿ ಪಡೆಯುತ್ತಿರುವ ತಂಡವು  ಈ ಪಂಚೆ ತಯಾರು ಮಾಡುತ್ತಿದೆ. ಕುಂದಾಪುರದ ಹೊಸೇರಿ ಹಾಡಿಮನೆಯ ಪ್ರದೇಶದಲ್ಲಿ ಈ ತರಬೇತಿ ನಡೆಯುತ್ತಿದೆ. ಇಲ್ಲಿಯ ಉತ್ಪನ್ನಕ್ಕೆ ಬಾಗಳ್‌ ಎಂದು ಹೆಸರಿಸಲಾಗಿದೆ. ಈ ಪ್ರದೇಶದಲ್ಲಿ ಪುರಾತನವಾದ ರೆಂಜೆ/ಬಕುಳ ಮರ ಇದೆ, ಅಲ್ಲೇ ಊರಿನ ದೈವದ ಗುಡಿಯೂ ಇದೆ. ಈ ಎಲ್ಲಾ ಕಾರಣಕ್ಕೆ ಬಾಗಳ್‌ ಎಂದು ಆ ಪುರಾತನ ಮರದ ಹೆಸರನ್ನು ಉಲ್ಲೇಖಿಸಲಾಗಿದೆ. ಕುಂದಗನ್ನಡದಲ್ಲಿ ಈ ಮರವನ್ನು ಬಾಗಳ್‌ ಎನ್ನುತ್ತಾರೆ. ಹೀಗಾಗಿ ಬಾಗಳ್‌ ಎಂದು ಹೆಸರಿಸಲಾಗಿದೆ. ಈ ಬಗ್ಗೆ….

Advertisement

ಅಡಿಕೆ ಚೊಗರಿನ ಪಂಚೆ-ಶಾಲು
ಬಟ್ಟೆ ತಯಾರಿಕೆ

ಅಡಿಕೆಯ ಚೊಗರಿನ ಬಟ್ಟೆ ಉತ್ಪನ್ನಗಳಿಗೆ ಈಗಾಗಲೇ ಬೇಡಿಕೆ ವ್ಯಕ್ತವಾಗಿದ್ದು, ಈಗ ಅಡಿಕೆ ಚೊಗರಿನ ಪಂಚೆ ಹಾಗೂ ಶಾಲು ಕೂಡಾ ತಯಾರಿಕೆಯಾಗಿದೆ. ಗ್ರಾಮೀಣ ಉತ್ಪನ್ನ ಹಾಗೂ ಅಡಿಕೆಯ ಮೌಲ್ಯವರ್ಧನೆ ಇಲ್ಲಿ ಪ್ರಮುಖವಾಗಿದೆ. ಇದರ ಜೊತೆಗೆ ನೇಕಾರಿಕೆ ಉಳಿಸಲು ಹಲವು ಪ್ರಯತ್ನ ನಡೆಯುತ್ತಿದೆ. ಈ ಕಾರಣದಿಂದ ಬಟ್ಟೆ ಖರೀದಿ ಮಾಡುವ ಮೂಲಕ ದೇಸೀ ಉದ್ಯಮಕ್ಕೆ, ಕೈಮಗ್ಗ, ನೇಕಾರಿಕೆ ಉಳಿಸಲು ಬೆಂಬಲ ವ್ಯಕ್ತಪಡಿಸಬಹುದು. ಅಡಿಕೆ ಚೊಗರು ಅಂಚಿನ ಪಂಚೆ ಶಾಲು ಸೆಟ್ ಕೂಡಾ ಕದಿಕೆ ಟ್ರಸ್ಟ್‌ ಮೂಲಕ ಲಭ್ಯ ಇದೆ. ಪಂಚೆ : 800 ರೂಪಾಯಿ, ಶಾಲು : 600 ರೂಪಾಯಿ, ಎರಡೂ ಜೊತೆ ಗೆ 1400 ರೂಪಾಯಿ ಹಾಗೂ ಕಳುಹಿಸುವ ವೆಚ್ಚ ಪ್ರತ್ಯೇಕ ವಿಧಿಸಲಾಗುತ್ತದೆ. ಈ ಬಗ್ಗೆ ಹೆಚ್ಚಿನ ಮಾಹಿತಿಗೆ 9880835299 ಸಂಪರ್ಕ ಮಾಡಬಹುದು. ಖರೀದಿ ಆಸಕ್ತರು ಕಾಯ್ದಿರಿಸಬೇಕಾಗುತ್ತದೆ. ತಯಾರಾದಂತೆ ಆಸಕ್ತರಿಗೆ ಕಳುಹಿಸಿಕೊಡುತ್ತಾರೆ.(ಅಡಿಕೆ ಚೊಗರಿನ ಪಂಚೆ ಹಾಗೂ ಶಾಲು ಹಾಕಿರುವ ಫೋಟೋ ಕೆಳಗೆ ಇದೆ….)

Advertisement
ಅಡಿಕೆ ಚೊಗರಿನ ಪಂಚೆ-ಶಾಲು

 

Advertisement

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹಲಸು ಈಗ ಕೇವಲ ಹಣ್ಣು ಅಲ್ಲ… ಸೂಪರ್ ಫುಡ್..!‌ ಹಲಸಿನ ಹಣ್ಣಿನ ಔಷಧೀಯ ಗುಣಗಳಿಗೆ ಕೇರಳದಲ್ಲಿ ಪ್ರಚಾರ ಅಭಿಯಾನ
June 26, 2026
1:15 PM
by: ದ ರೂರಲ್ ಮಿರರ್.ಕಾಂ
ಧರ್ಮಸ್ಥಳದಲ್ಲಿ ವಿಜಯೇಂದ್ರ ಪ್ರಾರ್ಥನೆ: “ರೈತರಿಗೆ ಉತ್ತಮ ಬೆಲೆ, ಬಿಜೆಪಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬರಲಿ”
June 26, 2026
12:52 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಕನಿಷ್ಠ ಆಮದು ಬೆಲೆ (MIP) ಪರಿಷ್ಕರಣೆ – ರೈತರ ಹಿತಾಸಕ್ತಿಗೆ ಕೇಂದ್ರ ಸರ್ಕಾರದ ತ್ವರಿತ ನೀತಿ ನಿರ್ಧಾರ ಅನಿವಾರ್ಯ
June 25, 2026
8:41 PM
by: ಅರುಣ್‌ ಕುಮಾರ್ ಕಾಂಚೋಡು
ಮುಂಗಾರು ಬೆಳೆ ವಿಮೆ ನೋಂದಣಿಗೆ ಆಗಸ್ಟ್‌ 14 ಕೊನೆಯ ದಿನ – ಭತ್ತ ಬೆಳೆಗಾರರು ತಪ್ಪದೇ ಹೆಸರು ನೋಂದಾಯಿಸಿ
June 25, 2026
8:17 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror