Advertisement
ಸುದ್ದಿಗಳು

ಅಡಿಕೆ ಪರ್ಯಾಯ ಬಳಕೆ | ಸಿದ್ಧವಾಗಿದೆ ಅಡಿಕೆ ಚೊಗರಿನ ಪಂಚೆ-ಶಾಲು |

Share

ಅಡಿಕೆ ಚೊಗರಿನ ಸೀರೆ ಈಗಾಗಲೇ ಸದ್ದು ಮಾಡಿದೆ. ಕೈಮಗ್ಗ ಬಟ್ಟೆಗೆ ಅಡಿಕೆ ಚೊಗರು ಹಾಗೂ ನೈಸರ್ಗಿಕ ಬಣ್ಣದಿಂದ ತಯಾರು ಮಾಡಿರುವ ಸೀರೆ ವಿವಿಧ ಕಡೆ ಗಮನ ಸೆಳೆದಿತ್ತು. ಇದೀಗ ಕೈಮಗ್ಗ ಬಟ್ಟೆಗೆ ಅಡಿಕೆ ಚೊಗರು ಬಳಕೆ ಮಾಡಿ ಪಂಚೆ ಹಾಗೂ ಶಾಲು ಸಿದ್ಧವಾಗಿದೆ.ಕಾರ್ಕಳದ..

Advertisement
Advertisement

ಕಾರ್ಕಳದ ಕದಿಕೆ ಟ್ರಸ್ಟ್ ಮೂಲಕ ನೇಕಾರಿಕೆ ತರಬೇತಿ ಪಡೆಯುತ್ತಿರುವ ತಂಡವು  ಈ ಪಂಚೆ ತಯಾರು ಮಾಡುತ್ತಿದೆ. ಕುಂದಾಪುರದ ಹೊಸೇರಿ ಹಾಡಿಮನೆಯ ಪ್ರದೇಶದಲ್ಲಿ ಈ ತರಬೇತಿ ನಡೆಯುತ್ತಿದೆ. ಇಲ್ಲಿಯ ಉತ್ಪನ್ನಕ್ಕೆ ಬಾಗಳ್‌ ಎಂದು ಹೆಸರಿಸಲಾಗಿದೆ. ಈ ಪ್ರದೇಶದಲ್ಲಿ ಪುರಾತನವಾದ ರೆಂಜೆ/ಬಕುಳ ಮರ ಇದೆ, ಅಲ್ಲೇ ಊರಿನ ದೈವದ ಗುಡಿಯೂ ಇದೆ. ಈ ಎಲ್ಲಾ ಕಾರಣಕ್ಕೆ ಬಾಗಳ್‌ ಎಂದು ಆ ಪುರಾತನ ಮರದ ಹೆಸರನ್ನು ಉಲ್ಲೇಖಿಸಲಾಗಿದೆ. ಕುಂದಗನ್ನಡದಲ್ಲಿ ಈ ಮರವನ್ನು ಬಾಗಳ್‌ ಎನ್ನುತ್ತಾರೆ. ಹೀಗಾಗಿ ಬಾಗಳ್‌ ಎಂದು ಹೆಸರಿಸಲಾಗಿದೆ. ಈ ಬಗ್ಗೆ….

Advertisement

ಅಡಿಕೆ ಚೊಗರಿನ ಪಂಚೆ-ಶಾಲು
ಬಟ್ಟೆ ತಯಾರಿಕೆ

ಅಡಿಕೆಯ ಚೊಗರಿನ ಬಟ್ಟೆ ಉತ್ಪನ್ನಗಳಿಗೆ ಈಗಾಗಲೇ ಬೇಡಿಕೆ ವ್ಯಕ್ತವಾಗಿದ್ದು, ಈಗ ಅಡಿಕೆ ಚೊಗರಿನ ಪಂಚೆ ಹಾಗೂ ಶಾಲು ಕೂಡಾ ತಯಾರಿಕೆಯಾಗಿದೆ. ಗ್ರಾಮೀಣ ಉತ್ಪನ್ನ ಹಾಗೂ ಅಡಿಕೆಯ ಮೌಲ್ಯವರ್ಧನೆ ಇಲ್ಲಿ ಪ್ರಮುಖವಾಗಿದೆ. ಇದರ ಜೊತೆಗೆ ನೇಕಾರಿಕೆ ಉಳಿಸಲು ಹಲವು ಪ್ರಯತ್ನ ನಡೆಯುತ್ತಿದೆ. ಈ ಕಾರಣದಿಂದ ಬಟ್ಟೆ ಖರೀದಿ ಮಾಡುವ ಮೂಲಕ ದೇಸೀ ಉದ್ಯಮಕ್ಕೆ, ಕೈಮಗ್ಗ, ನೇಕಾರಿಕೆ ಉಳಿಸಲು ಬೆಂಬಲ ವ್ಯಕ್ತಪಡಿಸಬಹುದು. ಅಡಿಕೆ ಚೊಗರು ಅಂಚಿನ ಪಂಚೆ ಶಾಲು ಸೆಟ್ ಕೂಡಾ ಕದಿಕೆ ಟ್ರಸ್ಟ್‌ ಮೂಲಕ ಲಭ್ಯ ಇದೆ. ಪಂಚೆ : 800 ರೂಪಾಯಿ, ಶಾಲು : 600 ರೂಪಾಯಿ, ಎರಡೂ ಜೊತೆ ಗೆ 1400 ರೂಪಾಯಿ ಹಾಗೂ ಕಳುಹಿಸುವ ವೆಚ್ಚ ಪ್ರತ್ಯೇಕ ವಿಧಿಸಲಾಗುತ್ತದೆ. ಈ ಬಗ್ಗೆ ಹೆಚ್ಚಿನ ಮಾಹಿತಿಗೆ 9880835299 ಸಂಪರ್ಕ ಮಾಡಬಹುದು. ಖರೀದಿ ಆಸಕ್ತರು ಕಾಯ್ದಿರಿಸಬೇಕಾಗುತ್ತದೆ. ತಯಾರಾದಂತೆ ಆಸಕ್ತರಿಗೆ ಕಳುಹಿಸಿಕೊಡುತ್ತಾರೆ.(ಅಡಿಕೆ ಚೊಗರಿನ ಪಂಚೆ ಹಾಗೂ ಶಾಲು ಹಾಕಿರುವ ಫೋಟೋ ಕೆಳಗೆ ಇದೆ….)

Advertisement
ಅಡಿಕೆ ಚೊಗರಿನ ಪಂಚೆ-ಶಾಲು

 

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಗ್ರಾಮಗಳಲ್ಲಿ ನೀರಿನ ಹೊಂಡ | ಚಿತ್ರದುರ್ಗ ಜಿಲ್ಲೆಯ 7 ಹಳ್ಳಿಗಳಲ್ಲಿ ವಿಶ್ವಬ್ಯಾಂಕ್ ನೆರವಿನ ಯೋಜನೆ ಅನುಷ್ಟಾನ |

ಚಿತ್ರದುರ್ಗ ಜಿಲ್ಲೆಯ 7 ಹಳ್ಳಿಗಳಲ್ಲಿ 5 ಸಾವಿರದ 171 ಹೆಕ್ಟೇರ್ ಪ್ರದೇಶದಲ್ಲಿ ಯೋಜನೆ…

5 hours ago

ಕಿಸಾನ್‌ ಸಮ್ಮಾನ್‌ ನಿಧಿಯ ಮೂಲಕ ರೈತರಿಗೆ 21,000 ಕೋಟಿ ರೂಪಾಯಿ |

ಕಿಸಾನ್‌ ಸಮ್ಮಾನ್‌ ನಿಧಿಯಿಂದ 9 ಕೋಟಿ 50 ಲಕ್ಷ  ರೈತರಿಗೆ  21 ಸಾವಿರ…

6 hours ago

ತುಮಕೂರು ಜಿಲ್ಲೆಯಲ್ಲಿ ದಾಖಲೆಯ ಹಾಲು ಉತ್ಪಾದನೆ

ತುಮಕೂರು ಜಿಲ್ಲೆಯಲ್ಲಿ 1351 ಹಾಲು ಉತ್ಪಾದಕರ ಸಹಕಾರ ಸಂಘಗಳು ಕಾರ್ಯನಿರ್ವಹಿಸುತ್ತಿದ್ದು, ಪ್ರತಿನಿತ್ಯ 9.40…

7 hours ago

ಕೋಲಾರದಲ್ಲಿ ಸಾವಿರಕ್ಕೂ ಅಧಿಕ ನಕಲಿ ವೈದ್ಯರ ವಿರುದ್ಧ ಪ್ರಕರಣ |

ಖಾಸಗಿ ಮೆಡಿಕಲ್ ಕಾಲೇಜುಗಳಲ್ಲಿನ  ಜೈವಿಕ ತ್ಯಾಜ್ಯಗಳನ್ನು ನಗರಸಭೆ ಕಸ ಹಾಗೂ ಜನನಿಬಿಡ ಪ್ರದೇಶಗಳಲ್ಲಿ…

7 hours ago

ಹೊರನಾಡು ದೇವಾಲಯದಲ್ಲಿ ವಸ್ತ್ರ ಸಂಹಿತೆ ಜಾರಿ

ಚಿಕ್ಕಮಗಳೂರು ಜಿಲ್ಲೆಯ ಹೊರನಾಡಿನ ಪ್ರಸಿದ್ದ ಅನ್ನಪೂರ್ಣೇಶ್ವರಿ ದೇವಾಲಯದಲ್ಲಿ ವಸ್ತ್ರ ಸಂಹಿತೆ ಜಾರಿಗೆ ತರಲಾಗಿದೆ…

7 hours ago