Advertisement
ಸುದ್ದಿಗಳು

ಅಡಿಕೆ ಪರ್ಯಾಯ ಬಳಕೆ | ಸಿದ್ಧವಾಗಿದೆ ಅಡಿಕೆ ಚೊಗರಿನ ಪಂಚೆ-ಶಾಲು |

Share

ಅಡಿಕೆ ಚೊಗರಿನ ಸೀರೆ ಈಗಾಗಲೇ ಸದ್ದು ಮಾಡಿದೆ. ಕೈಮಗ್ಗ ಬಟ್ಟೆಗೆ ಅಡಿಕೆ ಚೊಗರು ಹಾಗೂ ನೈಸರ್ಗಿಕ ಬಣ್ಣದಿಂದ ತಯಾರು ಮಾಡಿರುವ ಸೀರೆ ವಿವಿಧ ಕಡೆ ಗಮನ ಸೆಳೆದಿತ್ತು. ಇದೀಗ ಕೈಮಗ್ಗ ಬಟ್ಟೆಗೆ ಅಡಿಕೆ ಚೊಗರು ಬಳಕೆ ಮಾಡಿ ಪಂಚೆ ಹಾಗೂ ಶಾಲು ಸಿದ್ಧವಾಗಿದೆ.ಕಾರ್ಕಳದ..

ಕಾರ್ಕಳದ ಕದಿಕೆ ಟ್ರಸ್ಟ್ ಮೂಲಕ ನೇಕಾರಿಕೆ ತರಬೇತಿ ಪಡೆಯುತ್ತಿರುವ ತಂಡವು  ಈ ಪಂಚೆ ತಯಾರು ಮಾಡುತ್ತಿದೆ. ಕುಂದಾಪುರದ ಹೊಸೇರಿ ಹಾಡಿಮನೆಯ ಪ್ರದೇಶದಲ್ಲಿ ಈ ತರಬೇತಿ ನಡೆಯುತ್ತಿದೆ. ಇಲ್ಲಿಯ ಉತ್ಪನ್ನಕ್ಕೆ ಬಾಗಳ್‌ ಎಂದು ಹೆಸರಿಸಲಾಗಿದೆ. ಈ ಪ್ರದೇಶದಲ್ಲಿ ಪುರಾತನವಾದ ರೆಂಜೆ/ಬಕುಳ ಮರ ಇದೆ, ಅಲ್ಲೇ ಊರಿನ ದೈವದ ಗುಡಿಯೂ ಇದೆ. ಈ ಎಲ್ಲಾ ಕಾರಣಕ್ಕೆ ಬಾಗಳ್‌ ಎಂದು ಆ ಪುರಾತನ ಮರದ ಹೆಸರನ್ನು ಉಲ್ಲೇಖಿಸಲಾಗಿದೆ. ಕುಂದಗನ್ನಡದಲ್ಲಿ ಈ ಮರವನ್ನು ಬಾಗಳ್‌ ಎನ್ನುತ್ತಾರೆ. ಹೀಗಾಗಿ ಬಾಗಳ್‌ ಎಂದು ಹೆಸರಿಸಲಾಗಿದೆ. ಈ ಬಗ್ಗೆ….

ಅಡಿಕೆ ಚೊಗರಿನ ಪಂಚೆ-ಶಾಲು
ಬಟ್ಟೆ ತಯಾರಿಕೆ

ಅಡಿಕೆಯ ಚೊಗರಿನ ಬಟ್ಟೆ ಉತ್ಪನ್ನಗಳಿಗೆ ಈಗಾಗಲೇ ಬೇಡಿಕೆ ವ್ಯಕ್ತವಾಗಿದ್ದು, ಈಗ ಅಡಿಕೆ ಚೊಗರಿನ ಪಂಚೆ ಹಾಗೂ ಶಾಲು ಕೂಡಾ ತಯಾರಿಕೆಯಾಗಿದೆ. ಗ್ರಾಮೀಣ ಉತ್ಪನ್ನ ಹಾಗೂ ಅಡಿಕೆಯ ಮೌಲ್ಯವರ್ಧನೆ ಇಲ್ಲಿ ಪ್ರಮುಖವಾಗಿದೆ. ಇದರ ಜೊತೆಗೆ ನೇಕಾರಿಕೆ ಉಳಿಸಲು ಹಲವು ಪ್ರಯತ್ನ ನಡೆಯುತ್ತಿದೆ. ಈ ಕಾರಣದಿಂದ ಬಟ್ಟೆ ಖರೀದಿ ಮಾಡುವ ಮೂಲಕ ದೇಸೀ ಉದ್ಯಮಕ್ಕೆ, ಕೈಮಗ್ಗ, ನೇಕಾರಿಕೆ ಉಳಿಸಲು ಬೆಂಬಲ ವ್ಯಕ್ತಪಡಿಸಬಹುದು. ಅಡಿಕೆ ಚೊಗರು ಅಂಚಿನ ಪಂಚೆ ಶಾಲು ಸೆಟ್ ಕೂಡಾ ಕದಿಕೆ ಟ್ರಸ್ಟ್‌ ಮೂಲಕ ಲಭ್ಯ ಇದೆ. ಪಂಚೆ : 800 ರೂಪಾಯಿ, ಶಾಲು : 600 ರೂಪಾಯಿ, ಎರಡೂ ಜೊತೆ ಗೆ 1400 ರೂಪಾಯಿ ಹಾಗೂ ಕಳುಹಿಸುವ ವೆಚ್ಚ ಪ್ರತ್ಯೇಕ ವಿಧಿಸಲಾಗುತ್ತದೆ. ಈ ಬಗ್ಗೆ ಹೆಚ್ಚಿನ ಮಾಹಿತಿಗೆ 9880835299 ಸಂಪರ್ಕ ಮಾಡಬಹುದು. ಖರೀದಿ ಆಸಕ್ತರು ಕಾಯ್ದಿರಿಸಬೇಕಾಗುತ್ತದೆ. ತಯಾರಾದಂತೆ ಆಸಕ್ತರಿಗೆ ಕಳುಹಿಸಿಕೊಡುತ್ತಾರೆ.(ಅಡಿಕೆ ಚೊಗರಿನ ಪಂಚೆ ಹಾಗೂ ಶಾಲು ಹಾಕಿರುವ ಫೋಟೋ ಕೆಳಗೆ ಇದೆ….)

ಅಡಿಕೆ ಚೊಗರಿನ ಪಂಚೆ-ಶಾಲು

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಯುವಕರ ಮೊದಲ ಆದ್ಯತೆ ಏನಿರಬೇಕು? ರಾಜಕೀಯವಲ್ಲ, ಆರ್ಥಿಕ ಸ್ವಾವಲಂಬನೆ!

ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…

1 day ago

ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?

ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…

2 days ago

ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?

ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…

2 days ago

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

3 days ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

3 days ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

3 days ago