ಅಡಿಕೆ ಚೊಗರಿನ ಸೀರೆ ಈಗಾಗಲೇ ಸದ್ದು ಮಾಡಿದೆ. ಕೈಮಗ್ಗ ಬಟ್ಟೆಗೆ ಅಡಿಕೆ ಚೊಗರು ಹಾಗೂ ನೈಸರ್ಗಿಕ ಬಣ್ಣದಿಂದ ತಯಾರು ಮಾಡಿರುವ ಸೀರೆ ವಿವಿಧ ಕಡೆ ಗಮನ ಸೆಳೆದಿತ್ತು. ಇದೀಗ ಕೈಮಗ್ಗ ಬಟ್ಟೆಗೆ ಅಡಿಕೆ ಚೊಗರು ಬಳಕೆ ಮಾಡಿ ಪಂಚೆ ಹಾಗೂ ಶಾಲು ಸಿದ್ಧವಾಗಿದೆ.ಕಾರ್ಕಳದ..
ಕಾರ್ಕಳದ ಕದಿಕೆ ಟ್ರಸ್ಟ್ ಮೂಲಕ ನೇಕಾರಿಕೆ ತರಬೇತಿ ಪಡೆಯುತ್ತಿರುವ ತಂಡವು ಈ ಪಂಚೆ ತಯಾರು ಮಾಡುತ್ತಿದೆ. ಕುಂದಾಪುರದ ಹೊಸೇರಿ ಹಾಡಿಮನೆಯ ಪ್ರದೇಶದಲ್ಲಿ ಈ ತರಬೇತಿ ನಡೆಯುತ್ತಿದೆ. ಇಲ್ಲಿಯ ಉತ್ಪನ್ನಕ್ಕೆ ಬಾಗಳ್ ಎಂದು ಹೆಸರಿಸಲಾಗಿದೆ. ಈ ಪ್ರದೇಶದಲ್ಲಿ ಪುರಾತನವಾದ ರೆಂಜೆ/ಬಕುಳ ಮರ ಇದೆ, ಅಲ್ಲೇ ಊರಿನ ದೈವದ ಗುಡಿಯೂ ಇದೆ. ಈ ಎಲ್ಲಾ ಕಾರಣಕ್ಕೆ ಬಾಗಳ್ ಎಂದು ಆ ಪುರಾತನ ಮರದ ಹೆಸರನ್ನು ಉಲ್ಲೇಖಿಸಲಾಗಿದೆ. ಕುಂದಗನ್ನಡದಲ್ಲಿ ಈ ಮರವನ್ನು ಬಾಗಳ್ ಎನ್ನುತ್ತಾರೆ. ಹೀಗಾಗಿ ಬಾಗಳ್ ಎಂದು ಹೆಸರಿಸಲಾಗಿದೆ. ಈ ಬಗ್ಗೆ….
ಅಡಿಕೆಯ ಚೊಗರಿನ ಬಟ್ಟೆ ಉತ್ಪನ್ನಗಳಿಗೆ ಈಗಾಗಲೇ ಬೇಡಿಕೆ ವ್ಯಕ್ತವಾಗಿದ್ದು, ಈಗ ಅಡಿಕೆ ಚೊಗರಿನ ಪಂಚೆ ಹಾಗೂ ಶಾಲು ಕೂಡಾ ತಯಾರಿಕೆಯಾಗಿದೆ. ಗ್ರಾಮೀಣ ಉತ್ಪನ್ನ ಹಾಗೂ ಅಡಿಕೆಯ ಮೌಲ್ಯವರ್ಧನೆ ಇಲ್ಲಿ ಪ್ರಮುಖವಾಗಿದೆ. ಇದರ ಜೊತೆಗೆ ನೇಕಾರಿಕೆ ಉಳಿಸಲು ಹಲವು ಪ್ರಯತ್ನ ನಡೆಯುತ್ತಿದೆ. ಈ ಕಾರಣದಿಂದ ಬಟ್ಟೆ ಖರೀದಿ ಮಾಡುವ ಮೂಲಕ ದೇಸೀ ಉದ್ಯಮಕ್ಕೆ, ಕೈಮಗ್ಗ, ನೇಕಾರಿಕೆ ಉಳಿಸಲು ಬೆಂಬಲ ವ್ಯಕ್ತಪಡಿಸಬಹುದು. ಅಡಿಕೆ ಚೊಗರು ಅಂಚಿನ ಪಂಚೆ ಶಾಲು ಸೆಟ್ ಕೂಡಾ ಕದಿಕೆ ಟ್ರಸ್ಟ್ ಮೂಲಕ ಲಭ್ಯ ಇದೆ. ಪಂಚೆ : 800 ರೂಪಾಯಿ, ಶಾಲು : 600 ರೂಪಾಯಿ, ಎರಡೂ ಜೊತೆ ಗೆ 1400 ರೂಪಾಯಿ ಹಾಗೂ ಕಳುಹಿಸುವ ವೆಚ್ಚ ಪ್ರತ್ಯೇಕ ವಿಧಿಸಲಾಗುತ್ತದೆ. ಈ ಬಗ್ಗೆ ಹೆಚ್ಚಿನ ಮಾಹಿತಿಗೆ 9880835299 ಸಂಪರ್ಕ ಮಾಡಬಹುದು. ಖರೀದಿ ಆಸಕ್ತರು ಕಾಯ್ದಿರಿಸಬೇಕಾಗುತ್ತದೆ. ತಯಾರಾದಂತೆ ಆಸಕ್ತರಿಗೆ ಕಳುಹಿಸಿಕೊಡುತ್ತಾರೆ.(ಅಡಿಕೆ ಚೊಗರಿನ ಪಂಚೆ ಹಾಗೂ ಶಾಲು ಹಾಕಿರುವ ಫೋಟೋ ಕೆಳಗೆ ಇದೆ….)
ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…
ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…
ಮಲೆನಾಡಿನ ಕೃಷಿ ಸಮಸ್ಯೆಗಳನ್ನು ಪ್ರವಾಸೋದ್ಯಮದ ಅವಕಾಶಗಳಾಗಿ ಪರಿವರ್ತಿಸುವ ಹೊಸ ಪರಿಕಲ್ಪನೆಯನ್ನು ಪ್ರಬಂಧ ಅಂಬುತೀರ್ಥ…
ಮಹಾರಾಷ್ಟ್ರ FDA ದಾಳಿಯಲ್ಲಿ 14 ಮಂದಿ ಬಂಧನವಾಗಿದ್ದು, ₹32 ಲಕ್ಷ ಮೌಲ್ಯದ ನಿಷೇಧಿತ…
ವಿಶ್ವ ಪರಿಸರ ದಿನಾಚರಣೆಯಲ್ಲಿ ಪರಿಸರ ಸಂರಕ್ಷಣೆಯ ಮಹತ್ವವನ್ನು ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಒತ್ತಿ…