Advertisement
ಸುದ್ದಿಗಳು

ಅಡಿಕೆ ಪರ್ಯಾಯ ಬಳಕೆ | ಸಿದ್ಧವಾಗಿದೆ ಅಡಿಕೆ ಚೊಗರಿನ ಪಂಚೆ-ಶಾಲು |

Share

ಅಡಿಕೆ ಚೊಗರಿನ ಸೀರೆ ಈಗಾಗಲೇ ಸದ್ದು ಮಾಡಿದೆ. ಕೈಮಗ್ಗ ಬಟ್ಟೆಗೆ ಅಡಿಕೆ ಚೊಗರು ಹಾಗೂ ನೈಸರ್ಗಿಕ ಬಣ್ಣದಿಂದ ತಯಾರು ಮಾಡಿರುವ ಸೀರೆ ವಿವಿಧ ಕಡೆ ಗಮನ ಸೆಳೆದಿತ್ತು. ಇದೀಗ ಕೈಮಗ್ಗ ಬಟ್ಟೆಗೆ ಅಡಿಕೆ ಚೊಗರು ಬಳಕೆ ಮಾಡಿ ಪಂಚೆ ಹಾಗೂ ಶಾಲು ಸಿದ್ಧವಾಗಿದೆ.ಕಾರ್ಕಳದ..

ಕಾರ್ಕಳದ ಕದಿಕೆ ಟ್ರಸ್ಟ್ ಮೂಲಕ ನೇಕಾರಿಕೆ ತರಬೇತಿ ಪಡೆಯುತ್ತಿರುವ ತಂಡವು  ಈ ಪಂಚೆ ತಯಾರು ಮಾಡುತ್ತಿದೆ. ಕುಂದಾಪುರದ ಹೊಸೇರಿ ಹಾಡಿಮನೆಯ ಪ್ರದೇಶದಲ್ಲಿ ಈ ತರಬೇತಿ ನಡೆಯುತ್ತಿದೆ. ಇಲ್ಲಿಯ ಉತ್ಪನ್ನಕ್ಕೆ ಬಾಗಳ್‌ ಎಂದು ಹೆಸರಿಸಲಾಗಿದೆ. ಈ ಪ್ರದೇಶದಲ್ಲಿ ಪುರಾತನವಾದ ರೆಂಜೆ/ಬಕುಳ ಮರ ಇದೆ, ಅಲ್ಲೇ ಊರಿನ ದೈವದ ಗುಡಿಯೂ ಇದೆ. ಈ ಎಲ್ಲಾ ಕಾರಣಕ್ಕೆ ಬಾಗಳ್‌ ಎಂದು ಆ ಪುರಾತನ ಮರದ ಹೆಸರನ್ನು ಉಲ್ಲೇಖಿಸಲಾಗಿದೆ. ಕುಂದಗನ್ನಡದಲ್ಲಿ ಈ ಮರವನ್ನು ಬಾಗಳ್‌ ಎನ್ನುತ್ತಾರೆ. ಹೀಗಾಗಿ ಬಾಗಳ್‌ ಎಂದು ಹೆಸರಿಸಲಾಗಿದೆ. ಈ ಬಗ್ಗೆ….

ಅಡಿಕೆ ಚೊಗರಿನ ಪಂಚೆ-ಶಾಲು
ಬಟ್ಟೆ ತಯಾರಿಕೆ

ಅಡಿಕೆಯ ಚೊಗರಿನ ಬಟ್ಟೆ ಉತ್ಪನ್ನಗಳಿಗೆ ಈಗಾಗಲೇ ಬೇಡಿಕೆ ವ್ಯಕ್ತವಾಗಿದ್ದು, ಈಗ ಅಡಿಕೆ ಚೊಗರಿನ ಪಂಚೆ ಹಾಗೂ ಶಾಲು ಕೂಡಾ ತಯಾರಿಕೆಯಾಗಿದೆ. ಗ್ರಾಮೀಣ ಉತ್ಪನ್ನ ಹಾಗೂ ಅಡಿಕೆಯ ಮೌಲ್ಯವರ್ಧನೆ ಇಲ್ಲಿ ಪ್ರಮುಖವಾಗಿದೆ. ಇದರ ಜೊತೆಗೆ ನೇಕಾರಿಕೆ ಉಳಿಸಲು ಹಲವು ಪ್ರಯತ್ನ ನಡೆಯುತ್ತಿದೆ. ಈ ಕಾರಣದಿಂದ ಬಟ್ಟೆ ಖರೀದಿ ಮಾಡುವ ಮೂಲಕ ದೇಸೀ ಉದ್ಯಮಕ್ಕೆ, ಕೈಮಗ್ಗ, ನೇಕಾರಿಕೆ ಉಳಿಸಲು ಬೆಂಬಲ ವ್ಯಕ್ತಪಡಿಸಬಹುದು. ಅಡಿಕೆ ಚೊಗರು ಅಂಚಿನ ಪಂಚೆ ಶಾಲು ಸೆಟ್ ಕೂಡಾ ಕದಿಕೆ ಟ್ರಸ್ಟ್‌ ಮೂಲಕ ಲಭ್ಯ ಇದೆ. ಪಂಚೆ : 800 ರೂಪಾಯಿ, ಶಾಲು : 600 ರೂಪಾಯಿ, ಎರಡೂ ಜೊತೆ ಗೆ 1400 ರೂಪಾಯಿ ಹಾಗೂ ಕಳುಹಿಸುವ ವೆಚ್ಚ ಪ್ರತ್ಯೇಕ ವಿಧಿಸಲಾಗುತ್ತದೆ. ಈ ಬಗ್ಗೆ ಹೆಚ್ಚಿನ ಮಾಹಿತಿಗೆ 9880835299 ಸಂಪರ್ಕ ಮಾಡಬಹುದು. ಖರೀದಿ ಆಸಕ್ತರು ಕಾಯ್ದಿರಿಸಬೇಕಾಗುತ್ತದೆ. ತಯಾರಾದಂತೆ ಆಸಕ್ತರಿಗೆ ಕಳುಹಿಸಿಕೊಡುತ್ತಾರೆ.(ಅಡಿಕೆ ಚೊಗರಿನ ಪಂಚೆ ಹಾಗೂ ಶಾಲು ಹಾಕಿರುವ ಫೋಟೋ ಕೆಳಗೆ ಇದೆ….)

ಅಡಿಕೆ ಚೊಗರಿನ ಪಂಚೆ-ಶಾಲು

 

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ

ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…

3 hours ago

ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ

ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…

9 hours ago

ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ

ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…

13 hours ago

ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…

21 hours ago

ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ

ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…

21 hours ago

ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ

ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…

23 hours ago