ಅಡಿಕೆ ಧಾರಣೆ, ಅಡಿಕೆ ಬೆಳೆ ವಿಸ್ತರಣೆಯ ನಡುವೆಯೇ ಅಡಿಕೆ ಬೆಳೆಯ ಬಗ್ಗೆಯೂ ಕಾಳಜಿ ಹೆಚ್ಚುತ್ತಿದೆ. ಇದೀಗ ಅಡಿಕೆಯಲ್ಲಿ ಸಸ್ಯ ಆರೋಗ್ಯ ನಿರ್ವಹಣೆ ಕುರಿತು ಮಾಹಿತಿ ಕಾರ್ಯಾಗಾರ ಹಾಗೂ ಸಂವಾದ ಕಾರ್ಯಕ್ರಮವನ್ನು ಮಾರ್ಚ್ 7 ರಂದು ಪುತ್ತೂರಿನ ಬಲ್ನಾಡಿನಲ್ಲಿ ಆಯೋಜಿಸಲಾಗಿದೆ.
` ಅಡಿಕೆಯ ಕುರಿತು ಸಮಗ್ರ ಮಾಹಿತಿ ‘ ಈ ಕುರಿತು 7ರಂದು ಬೆಳಗ್ಗೆ 10 ಗಂಟೆಗೆ ಪುತ್ತೂರಿನ ಬಲ್ನಾಡು ಪ್ರಗತಿಪರ ಕೃಷಿಕ ಸುರೇಶ್ ಬಲ್ನಾಡು ಅವರ ತೋಟದಲ್ಲಿ ಕಾರ್ಯಕ್ರಮ ಉದ್ಘಾಟನೆಗೊಳ್ಳಲಿದೆ. ಪಿಂಗಾರ ಸಂಸ್ಥೆಯ ಅಧ್ಯಕ್ಷ ರಾಮ್ ಕಿಶೋರ್ ಮಂಚಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಕಾಸರಗೋಡು ಸಿಪಿಸಿಆರ್ಐನ ಬೆಳೆ ಸಂರಕ್ಷಣಾ ವಿಭಾಗದ ಮುಖ್ಯಸ್ಥ ಡಾ.ವಿನಾಯಕ್ ಹೆಗಡೆ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ.
ಕಾರ್ಯಕ್ರಮದ ನಂತರ ಪೋಷಕಾಂಶ ನಿರ್ವಹಣೆ, ಎಲೆ ಚುಕ್ಕೆ ರೋಗ, ಹಿಂಗಾರು ಒಣಗಿಸುವ ರೋಗ ಪತ್ತೆ ಮತ್ತು ನಿರ್ವಹಣೆ, ಕೀಟ ನಿರ್ವಹಣೆ, ರೈತ ಉತ್ಪಾದಕ ಸಂಸ್ಥೆಯ ಸಾಧ್ಯತೆ, ಅಡಿಕೆ ಕೃಷಿಯಲ್ಲಿ ಕೃಷಿ ಅನುಭವ ಸೇರಿದಂತೆ ನಾನಾ ಮಾಹಿತಿ ನೀಡಲಿದ್ದಾರೆ. ನಂತರ ಸಂವಾದ ಕಾರ್ಯಕ್ರಮ ಸಮಯ 2 ರಿಂದ 3.30ರವರೆಗೆ ನಡೆಯಲಿದೆ. ಈ ಕಾರ್ಯಕ್ರಮವು ವಿಟ್ಲ ಸಿಪಿಸಿಆರ್ ಐ ಮತ್ತು ಅಡಿಕೆ ಮತ್ತು ಸಾಂಬಾರ ಬೆಳೆಗಳ ಅಭಿವೃದ್ಧಿ ನಿರ್ದೆಶನಾಲಯದ ಜಂಟಿ ಆಶ್ರಯದಲ್ಲಿ ಜರುಗಲಿದೆ.
ಕಾರ್ಯಕ್ರಮದ ವಿಶೇಷತೆಗಳು: ಆರೋಗ್ಯ ರೋಗ, ಕೀಟ ಮತ್ತು ಪೋಷಕಾಂಶಗಳಿಗೆ ಸಂಬಂಧಿಸಿದ ಲೈವ್ ಮಾದರಿಗಳ ಮಾಹಿತಿ, ವಿವರಣೆ ಮತ್ತು ನಿರ್ವಹಣೆ ಕ್ರಮಗಳು ಪೋಷಕಾಂಶ ನಿರ್ವಹಣೆಯ ಕಸ್ಟಮೈಸ್ ಮಾಡಿದ ಮಾಹಿತಿ, ರಸವಾರಿ/ನೀರಿನಲ್ಲಿ ಕರಗಿದ ರಸಗೊಬ್ಬರದ ಮಾಹಿತಿ ಮಹತ್ವ ಮತ್ತು ಲಘು ಪೋಷಕಾಂಶಗಳ ನಿರ್ವಹಣೆ ಪೋಷಕಾಂಶದ ಸಸ್ಯಗಳ ಮೇಲೆ ಪರಿಣಾಮ ಬೀರುವ ಬೇರು ಕೊಳೆತ ಮತ್ತು ಬೇರು ಕೊಳೆತವನ್ನು ನಿಯಂತ್ರಿಸಿ ಮೊಳಕೆ ಹೆಚ್ಚಾಗುತ್ತದೆ. ಬೆಳವಣಿಗೆ , ಟ್ರೈಕೋಡರ್ಮಾ ಮತ್ತು ಬೇರು ಹುಳು ನಿರ್ವಹಣೆಗೆ ಜಂತುಹುಳುಗಳ ಬಳಕೆಯ ಮಾಹಿತಿ ಮತ್ತು ನಿಮ್ಮ ಪ್ರಶ್ನೆಗಳಿಗೆ ಉತ್ತರಗಳು ಲಭ್ಯವಿರುತ್ತವೆ.
12.01.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಬರ ಪ್ರದೇಶ ಕೃಷಿಗೆ ಹೊಸ ದಾರಿ ತೆರೆದಿರುವ ICAR–ಒಂಟೆ ಸಂಶೋಧನಾ ಕೇಂದ್ರದ ಅಧ್ಯಯನವು,…
ರಾಜಸ್ಥಾನದ ಹನುಮಂಗಢ ಜಿಲ್ಲೆಯಲ್ಲಿ ಇಬ್ಬರು ಗ್ರಾಮೀಣ ಉದ್ಯಮಿಗಳು ಆರಂಭಿಸಿದ ಗ್ರೀನ್ ವಿಷನ್ ವರ್ಮಿಕಾಂಪೋಸ್ಟ್…
ಚೀನಾದ Chinese Academy of Tropical Agricultural Sciences (CATAS) ವಿಜ್ಞಾನಿಗಳು Electron…
ಕೃಷಿ ಭೂಮಿಯ ಲಭ್ಯತೆ ಕಡಿಮೆಯಾಗಿ ಸಂಕಷ್ಟದಲ್ಲಿರುವ ರೈತರಿಗಾಗಿ ಸರ್ಕಾರವು ಅರಣ್ಯ ಭೂಮಿಯನ್ನು ಕೃಷಿ…
ಯಾವುದೇ ಕಾಯಿಲೆಗಳಿಲ್ಲದೆ ಆರೋಗ್ಯವಂತರಾಗಿರಲು ಎಲ್ಲರೂ ಇಷ್ಟಪಡುತ್ತಾರೆ. ಒಂದು ವೇಳೆ ಆರೋಗ್ಯ ಕೆಟ್ಟರೆ ಜೀವನವೇ…