Advertisement
ಸುದ್ದಿಗಳು

ಅಡಿಕೆ ಬೆಳೆ – ಎಳೆ ಸಸಿಗಳ ಪೋಷಣೆ ಹೇಗೆ..? | ನಾಳೆ ಪುತ್ತೂರಿನಲ್ಲಿದೆ ಮಾಹಿತಿ ಕಾರ್ಯಾಗಾರ |

Share

ಅಡಿಕೆ ಧಾರಣೆ, ಅಡಿಕೆ ಬೆಳೆ ವಿಸ್ತರಣೆಯ ನಡುವೆಯೇ ಅಡಿಕೆ ಬೆಳೆಯ ಬಗ್ಗೆಯೂ ಕಾಳಜಿ ಹೆಚ್ಚುತ್ತಿದೆ. ಇದೀಗ ಅಡಿಕೆಯಲ್ಲಿ ಸಸ್ಯ ಆರೋಗ್ಯ ನಿರ್ವಹಣೆ ಕುರಿತು ಮಾಹಿತಿ ಕಾರ್ಯಾಗಾರ ಹಾಗೂ ಸಂವಾದ ಕಾರ್ಯಕ್ರಮವನ್ನು ಮಾರ್ಚ್ 7 ರಂದು ಪುತ್ತೂರಿನ ಬಲ್ನಾಡಿನಲ್ಲಿ ಆಯೋಜಿಸಲಾಗಿದೆ.

` ಅಡಿಕೆಯ ಕುರಿತು ಸಮಗ್ರ ಮಾಹಿತಿ ‘ ಈ ಕುರಿತು 7ರಂದು ಬೆಳಗ್ಗೆ 10 ಗಂಟೆಗೆ ಪುತ್ತೂರಿನ ಬಲ್ನಾಡು ಪ್ರಗತಿಪರ ಕೃಷಿಕ ಸುರೇಶ್ ಬಲ್ನಾಡು ಅವರ ತೋಟದಲ್ಲಿ ಕಾರ್ಯಕ್ರಮ ಉದ್ಘಾಟನೆಗೊಳ್ಳಲಿದೆ. ಪಿಂಗಾರ ಸಂಸ್ಥೆಯ ಅಧ್ಯಕ್ಷ ರಾಮ್‌ ಕಿಶೋರ್‌ ಮಂಚಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಕಾಸರಗೋಡು ಸಿಪಿಸಿಆರ್‌ಐನ ಬೆಳೆ ಸಂರಕ್ಷಣಾ ವಿಭಾಗದ ಮುಖ್ಯಸ್ಥ ಡಾ.ವಿನಾಯಕ್ ಹೆಗಡೆ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ.

ಕಾರ್ಯಕ್ರಮದ ನಂತರ ಪೋಷಕಾಂಶ ನಿರ್ವಹಣೆ, ಎಲೆ ಚುಕ್ಕೆ ರೋಗ, ಹಿಂಗಾರು ಒಣಗಿಸುವ ರೋಗ ಪತ್ತೆ ಮತ್ತು ನಿರ್ವಹಣೆ, ಕೀಟ ನಿರ್ವಹಣೆ, ರೈತ ಉತ್ಪಾದಕ ಸಂಸ್ಥೆಯ ಸಾಧ್ಯತೆ, ಅಡಿಕೆ ಕೃಷಿಯಲ್ಲಿ ಕೃಷಿ ಅನುಭವ ಸೇರಿದಂತೆ ನಾನಾ ಮಾಹಿತಿ ನೀಡಲಿದ್ದಾರೆ. ನಂತರ ಸಂವಾದ ಕಾರ್ಯಕ್ರಮ ಸಮಯ 2 ರಿಂದ 3.30ರವರೆಗೆ ನಡೆಯಲಿದೆ. ಈ ಕಾರ್ಯಕ್ರಮವು ವಿಟ್ಲ ಸಿಪಿಸಿಆರ್ ಐ ಮತ್ತು ಅಡಿಕೆ ಮತ್ತು ಸಾಂಬಾರ ಬೆಳೆಗಳ ಅಭಿವೃದ್ಧಿ ನಿರ್ದೆಶನಾಲಯದ ಜಂಟಿ ಆಶ್ರಯದಲ್ಲಿ ಜರುಗಲಿದೆ.

  • ಮರದ ಆರೋಗ್ಯ ವರ್ಧನೆಯಲ್ಲಿ ಪೋಷಕಾಂಶ ನಿರ್ವಹಣೆಯ ಪ್ರಾಮಿಖ್ಯತೆ ಮತ್ತು ಅಡಿಕೆ ಗಿಡದ ಸಾಕಷ್ಟು ಪೋಷಕಾಂಶ ನಿರ್ವಹಣೆ – ಡಾ . ರವಿ ಭಟ್
  • ಅಡಿಕೆಯ ಹಿಂಗಾರ ಒಣಗುಚ ರೋಗ, ಎಲೆಚುಕ್ಕೆ, ಬುಡಕೊಳೆ ಮತ್ತಿತರ ಶಿಲೀಂದ್ರ ರೋಗಗಳ ಸಮಗ್ರ ನಿರ್ವಹಣೆ – ಡಾ.ವಿನಾಯಕ ಹೆಗಡೆ
  • ಬೇರುಹುಳ, ಪೆಂಟಿ ಕೀಟ, ಭತ್ತದ ಜೀರುಂಡೆ ಮತ್ತು ಇತರೇ ಕೀಟಗಳ ನಿರ್ವಹಣೆ – ಡಾ ರಾಜ್  ಕುಮಾರ್ ಮತ್ತು ಡಾ. ಮಧು ಟಿ ಎಸ್
  • ರೋಗ ನಿಯಂತ್ರಣಕ್ಕೆ ಚಿಕಿತ್ಸೆ ನೀಡಲು ರಾಮ್ ಕಿಶೋರ್ ಮಂಚಿ ಕೌಶಲ್ಯ ತಂಡ
  • ಅಂತರ ಬೆಳೆಯಾಗಿ ಮೆಣಸು: ಪೋಷಕಾಂಶ ಮತ್ತು ರೋಗ ನಿರ್ವಹಣೆ, ಕೃಷಿ ಅನುಭವ – ಬಿ. ಸುರೇಶ್ ಬಲ್ನಾಡು

ಕಾರ್ಯಕ್ರಮದ ವಿಶೇಷತೆಗಳು: ಆರೋಗ್ಯ ರೋಗ, ಕೀಟ ಮತ್ತು ಪೋಷಕಾಂಶಗಳಿಗೆ ಸಂಬಂಧಿಸಿದ ಲೈವ್ ಮಾದರಿಗಳ ಮಾಹಿತಿ, ವಿವರಣೆ ಮತ್ತು ನಿರ್ವಹಣೆ ಕ್ರಮಗಳು ಪೋಷಕಾಂಶ ನಿರ್ವಹಣೆಯ ಕಸ್ಟಮೈಸ್ ಮಾಡಿದ ಮಾಹಿತಿ,  ರಸವಾರಿ/ನೀರಿನಲ್ಲಿ ಕರಗಿದ ರಸಗೊಬ್ಬರದ ಮಾಹಿತಿ ಮಹತ್ವ ಮತ್ತು ಲಘು ಪೋಷಕಾಂಶಗಳ ನಿರ್ವಹಣೆ ಪೋಷಕಾಂಶದ ಸಸ್ಯಗಳ ಮೇಲೆ ಪರಿಣಾಮ ಬೀರುವ ಬೇರು ಕೊಳೆತ ಮತ್ತು ಬೇರು ಕೊಳೆತವನ್ನು ನಿಯಂತ್ರಿಸಿ ಮೊಳಕೆ ಹೆಚ್ಚಾಗುತ್ತದೆ. ಬೆಳವಣಿಗೆ , ಟ್ರೈಕೋಡರ್ಮಾ ಮತ್ತು ಬೇರು ಹುಳು ನಿರ್ವಹಣೆಗೆ ಜಂತುಹುಳುಗಳ ಬಳಕೆಯ ಮಾಹಿತಿ ಮತ್ತು ನಿಮ್ಮ ಪ್ರಶ್ನೆಗಳಿಗೆ ಉತ್ತರಗಳು ಲಭ್ಯವಿರುತ್ತವೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಂಗಳೂರಿನಲ್ಲಿ ರಾಷ್ಟ್ರೀಯ ಚೆಸ್ ಚಾಂಪಿಯನ್ ಶಿಪ್‌ಗೆ ಚಾಲನೆ – 28 ರಾಜ್ಯ–ಕೇಂದ್ರಾಡಳಿತ ಪ್ರದೇಶಗಳಿಂದ 644 ಬಾಲಕಿ-ಬಾಲಕಿಯರು

ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್‌-11 ಚೆಸ್ ಚಾಂಪಿಯನ್ಶಿಪ್‌ಗೆ ಭವ್ಯ ಚಾಲನೆ ದೊರೆತಿದ್ದು, ದೇಶದ 28…

19 minutes ago

ಹವಾಮಾನ ವರದಿ | 02-08-2026 | ಕರಾವಳಿಯಲ್ಲಿ ಮಳೆ ಇಳಿಮುಖ ..? ರಾಜ್ಯದಲ್ಲಿ ಮುಂಗಾರು ಸ್ಥಿತಿ ಏನು..?

ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆಯ ತೀವ್ರತೆ ಇಳಿಮುಖವಾಗಲಿದ್ದು, ಆಗಸ್ಟ್‌ 3ರಿಂದ ತೋಟದ…

2 hours ago

ಭಾರೀ ಮಳೆಯ ಎಚ್ಚರಿಕೆ : 24 ಗಂಟೆ ಸನ್ನದ್ಧವಾಗಿರಲು ಡಿಸಿ ಸೂಚನೆ, ಭೂಕುಸಿತ ಪ್ರದೇಶಗಳ ಮೇಲೆ ಕಟ್ಟೆಚ್ಚರ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆಗಳನ್ನು 24…

14 hours ago

ಹುಬ್ಬಳ್ಳಿಯಲ್ಲಿ ಹಲಸು ಮೇಳಕ್ಕೆ ಚಾಲನೆ – 50ಕ್ಕೂ ಹೆಚ್ಚು ಮಳಿಗೆಗಳು, ಹಲಸಿನ ಬಿರಿಯಾನಿಯಿಂದ ಕಬಾಬ್‌ವರೆಗೆ ಸವಿಯುವ ಅವಕಾಶ

ಹುಬ್ಬಳ್ಳಿಯಲ್ಲಿ ಆರಂಭವಾದ ಮೂರು ದಿನಗಳ ಹಲಸು ಮೇಳಕ್ಕೆ ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.…

14 hours ago

ರಾಜ್ಯಾದ್ಯಂತ ಆರ್ಭಟಿಸುತ್ತಿರುವ ವರುಣ – ಭದ್ರಾ-ನೇತ್ರಾವತಿ ಅಪಾಯದ ಮಟ್ಟ ಮೀರಿ ಪ್ರವಾಹ

ಕರಾವಳಿ ಹಾಗೂ ಮಲೆನಾಡಿನಲ್ಲಿ ಭಾರಿ ಮಳೆ ಮುಂದುವರಿದಿದ್ದು, ಭದ್ರಾ ಹಾಗೂ ನೇತ್ರಾವತಿ, ಕುಮಾರಧಾರಾ…

14 hours ago

ಶಿರಾಡಿ ಘಾಟ್‌ನಲ್ಲಿ ಭೂಕುಸಿತ – ರೈಲು ಸಂಚಾರಕ್ಕೆ ತಾತ್ಕಾಲಿಕ ಅಡ್ಡಿ

ಶಿರಾಡಿ ಘಾಟ್‌ನ ಎಡಕುಮರಿ–ಶಿರಿಬಾಗಿಲು ನಡುವೆ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಪರಿಹಾರ…

14 hours ago