Advertisement
ಸುದ್ದಿಗಳು

ಅಡಿಕೆ ಬೆಳೆ – ಎಳೆ ಸಸಿಗಳ ಪೋಷಣೆ ಹೇಗೆ..? | ನಾಳೆ ಪುತ್ತೂರಿನಲ್ಲಿದೆ ಮಾಹಿತಿ ಕಾರ್ಯಾಗಾರ |

Share

ಅಡಿಕೆ ಧಾರಣೆ, ಅಡಿಕೆ ಬೆಳೆ ವಿಸ್ತರಣೆಯ ನಡುವೆಯೇ ಅಡಿಕೆ ಬೆಳೆಯ ಬಗ್ಗೆಯೂ ಕಾಳಜಿ ಹೆಚ್ಚುತ್ತಿದೆ. ಇದೀಗ ಅಡಿಕೆಯಲ್ಲಿ ಸಸ್ಯ ಆರೋಗ್ಯ ನಿರ್ವಹಣೆ ಕುರಿತು ಮಾಹಿತಿ ಕಾರ್ಯಾಗಾರ ಹಾಗೂ ಸಂವಾದ ಕಾರ್ಯಕ್ರಮವನ್ನು ಮಾರ್ಚ್ 7 ರಂದು ಪುತ್ತೂರಿನ ಬಲ್ನಾಡಿನಲ್ಲಿ ಆಯೋಜಿಸಲಾಗಿದೆ.

` ಅಡಿಕೆಯ ಕುರಿತು ಸಮಗ್ರ ಮಾಹಿತಿ ‘ ಈ ಕುರಿತು 7ರಂದು ಬೆಳಗ್ಗೆ 10 ಗಂಟೆಗೆ ಪುತ್ತೂರಿನ ಬಲ್ನಾಡು ಪ್ರಗತಿಪರ ಕೃಷಿಕ ಸುರೇಶ್ ಬಲ್ನಾಡು ಅವರ ತೋಟದಲ್ಲಿ ಕಾರ್ಯಕ್ರಮ ಉದ್ಘಾಟನೆಗೊಳ್ಳಲಿದೆ. ಪಿಂಗಾರ ಸಂಸ್ಥೆಯ ಅಧ್ಯಕ್ಷ ರಾಮ್‌ ಕಿಶೋರ್‌ ಮಂಚಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಕಾಸರಗೋಡು ಸಿಪಿಸಿಆರ್‌ಐನ ಬೆಳೆ ಸಂರಕ್ಷಣಾ ವಿಭಾಗದ ಮುಖ್ಯಸ್ಥ ಡಾ.ವಿನಾಯಕ್ ಹೆಗಡೆ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ.

ಕಾರ್ಯಕ್ರಮದ ನಂತರ ಪೋಷಕಾಂಶ ನಿರ್ವಹಣೆ, ಎಲೆ ಚುಕ್ಕೆ ರೋಗ, ಹಿಂಗಾರು ಒಣಗಿಸುವ ರೋಗ ಪತ್ತೆ ಮತ್ತು ನಿರ್ವಹಣೆ, ಕೀಟ ನಿರ್ವಹಣೆ, ರೈತ ಉತ್ಪಾದಕ ಸಂಸ್ಥೆಯ ಸಾಧ್ಯತೆ, ಅಡಿಕೆ ಕೃಷಿಯಲ್ಲಿ ಕೃಷಿ ಅನುಭವ ಸೇರಿದಂತೆ ನಾನಾ ಮಾಹಿತಿ ನೀಡಲಿದ್ದಾರೆ. ನಂತರ ಸಂವಾದ ಕಾರ್ಯಕ್ರಮ ಸಮಯ 2 ರಿಂದ 3.30ರವರೆಗೆ ನಡೆಯಲಿದೆ. ಈ ಕಾರ್ಯಕ್ರಮವು ವಿಟ್ಲ ಸಿಪಿಸಿಆರ್ ಐ ಮತ್ತು ಅಡಿಕೆ ಮತ್ತು ಸಾಂಬಾರ ಬೆಳೆಗಳ ಅಭಿವೃದ್ಧಿ ನಿರ್ದೆಶನಾಲಯದ ಜಂಟಿ ಆಶ್ರಯದಲ್ಲಿ ಜರುಗಲಿದೆ.

  • ಮರದ ಆರೋಗ್ಯ ವರ್ಧನೆಯಲ್ಲಿ ಪೋಷಕಾಂಶ ನಿರ್ವಹಣೆಯ ಪ್ರಾಮಿಖ್ಯತೆ ಮತ್ತು ಅಡಿಕೆ ಗಿಡದ ಸಾಕಷ್ಟು ಪೋಷಕಾಂಶ ನಿರ್ವಹಣೆ – ಡಾ . ರವಿ ಭಟ್
  • ಅಡಿಕೆಯ ಹಿಂಗಾರ ಒಣಗುಚ ರೋಗ, ಎಲೆಚುಕ್ಕೆ, ಬುಡಕೊಳೆ ಮತ್ತಿತರ ಶಿಲೀಂದ್ರ ರೋಗಗಳ ಸಮಗ್ರ ನಿರ್ವಹಣೆ – ಡಾ.ವಿನಾಯಕ ಹೆಗಡೆ
  • ಬೇರುಹುಳ, ಪೆಂಟಿ ಕೀಟ, ಭತ್ತದ ಜೀರುಂಡೆ ಮತ್ತು ಇತರೇ ಕೀಟಗಳ ನಿರ್ವಹಣೆ – ಡಾ ರಾಜ್  ಕುಮಾರ್ ಮತ್ತು ಡಾ. ಮಧು ಟಿ ಎಸ್
  • ರೋಗ ನಿಯಂತ್ರಣಕ್ಕೆ ಚಿಕಿತ್ಸೆ ನೀಡಲು ರಾಮ್ ಕಿಶೋರ್ ಮಂಚಿ ಕೌಶಲ್ಯ ತಂಡ
  • ಅಂತರ ಬೆಳೆಯಾಗಿ ಮೆಣಸು: ಪೋಷಕಾಂಶ ಮತ್ತು ರೋಗ ನಿರ್ವಹಣೆ, ಕೃಷಿ ಅನುಭವ – ಬಿ. ಸುರೇಶ್ ಬಲ್ನಾಡು

ಕಾರ್ಯಕ್ರಮದ ವಿಶೇಷತೆಗಳು: ಆರೋಗ್ಯ ರೋಗ, ಕೀಟ ಮತ್ತು ಪೋಷಕಾಂಶಗಳಿಗೆ ಸಂಬಂಧಿಸಿದ ಲೈವ್ ಮಾದರಿಗಳ ಮಾಹಿತಿ, ವಿವರಣೆ ಮತ್ತು ನಿರ್ವಹಣೆ ಕ್ರಮಗಳು ಪೋಷಕಾಂಶ ನಿರ್ವಹಣೆಯ ಕಸ್ಟಮೈಸ್ ಮಾಡಿದ ಮಾಹಿತಿ,  ರಸವಾರಿ/ನೀರಿನಲ್ಲಿ ಕರಗಿದ ರಸಗೊಬ್ಬರದ ಮಾಹಿತಿ ಮಹತ್ವ ಮತ್ತು ಲಘು ಪೋಷಕಾಂಶಗಳ ನಿರ್ವಹಣೆ ಪೋಷಕಾಂಶದ ಸಸ್ಯಗಳ ಮೇಲೆ ಪರಿಣಾಮ ಬೀರುವ ಬೇರು ಕೊಳೆತ ಮತ್ತು ಬೇರು ಕೊಳೆತವನ್ನು ನಿಯಂತ್ರಿಸಿ ಮೊಳಕೆ ಹೆಚ್ಚಾಗುತ್ತದೆ. ಬೆಳವಣಿಗೆ , ಟ್ರೈಕೋಡರ್ಮಾ ಮತ್ತು ಬೇರು ಹುಳು ನಿರ್ವಹಣೆಗೆ ಜಂತುಹುಳುಗಳ ಬಳಕೆಯ ಮಾಹಿತಿ ಮತ್ತು ನಿಮ್ಮ ಪ್ರಶ್ನೆಗಳಿಗೆ ಉತ್ತರಗಳು ಲಭ್ಯವಿರುತ್ತವೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮುಂಗಾರು ಬೇಗನೆ ವಿದಾಯ ಹೇಳುತ್ತಿದೆಯೇ..? ಸೆಪ್ಟೆಂಬರ್‌ನಲ್ಲಿ ಮಳೆ ಕಡಿಮೆಯಾಗುವ ಮುನ್ಸೂಚನೆ..?

ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…

4 hours ago

ಹವಾಮಾನ ವರದಿ | 22-08-2026 | ಕರಾವಳಿಯಲ್ಲಿ ಮಳೆ ಇಳಿಕೆ, 26ರಿಂದ ಮತ್ತಷ್ಟು ದುರ್ಬಲವಾಗುವ ಸಾಧ್ಯತೆ

ಕರ್ನಾಟಕದಲ್ಲಿ ಆಗಸ್ಟ್ 23ರಿಂದ 25ರವರೆಗೆ ಹಲವೆಡೆ ಅಲ್ಲಲ್ಲಿ ಸಾಮಾನ್ಯ ಮಳೆಯಷ್ಟೇ ನಿರೀಕ್ಷಿಸಲಾಗಿದ್ದು, ಕರಾವಳಿ…

12 hours ago

ಸೆಪ್ಟೆಂಬರ್‌ನಲ್ಲಿ ಪಿಎಂ ಕಿಸಾನ್ ಹಣ ಬರಬೇಕೇ? ರೈತರು ಈಗಲೇ e-KYC ಪೂರ್ಣಗೊಳಿಸಿ

PM-Kisan ಯೋಜನೆಯ 24ನೇ ಕಂತಿನ ಹಣ ಪಡೆಯಲು ಅರ್ಹ ರೈತರು ಬಯೋಮೆಟ್ರಿಕ್ ಅಥವಾ…

19 hours ago

ಬೆಳೆ ವಿಮೆಗೆ ರೈತರಿಗೆ ಮತ್ತೊಂದು ಅವಕಾಶ : ಆಗಸ್ಟ್ 31ರವರೆಗೆ ನೋಂದಣಿ ಅವಧಿ ವಿಸ್ತರಣೆ

ಮುಂಗಾರು ಹಂಗಾಮಿನ ಭತ್ತ ಸೇರಿದಂತೆ ಬೆಳೆಗಳಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ…

1 day ago

ಹವಾಮಾನ ವರದಿ | 21-08-2026 | ಕರಾವಳಿಯಲ್ಲಿ ಆ.23–25 ರಂದು ಮಳೆ ಹೆಚ್ಚಳ ಸಾಧ್ಯತೆ – ಆ.26ರವರೆಗೆ ಮೋಡ–ಮಳೆ

ಕರಾವಳಿ ಕರ್ನಾಟಕದಲ್ಲಿ ಆ.23ರಿಂದ 25ರವರೆಗೆ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಯಿದ್ದು, ಆ.26ರವರೆಗೂ…

1 day ago

ನಿಮ್ಮ ಹೆಸರಲ್ಲಿ 9 ಸಿಮ್‌ಗಳಿವೆಯೇ? ಆಗಸ್ಟ್ 24ರಿಂದ ಹೊಸ ನಿಯಮ – ಹೆಚ್ಚುವರಿ ನಂಬರ್‌ಗೆ ಬ್ರೇಕ್

ಆಗಸ್ಟ್ 24ರಿಂದ ಒಬ್ಬ ವ್ಯಕ್ತಿಯ ಹೆಸರಿನಲ್ಲಿ 9 ಮೊಬೈಲ್ ಸಂಪರ್ಕಗಳ ಮಿತಿಯನ್ನು ಮೀರಿ…

2 days ago