ಅಡಿಕೆಯಲ್ಲಿ ಸಸ್ಯ ಆರೋಗ್ಯ ನಿರ್ವಹಣೆ ಕುರಿತು ಮಾಹಿತಿ ಕಾರ್ಯಾಗಾರ ಹಾಗೂ ಸಂವಾದ ಕಾರ್ಯಕ್ರಮ ಪುತ್ತೂರಿನ ಬಲ್ನಾಡಿನಲ್ಲಿ ಉದ್ಘಾಟನೆ ಗೊಂಡಿತು.
ಪುತ್ತೂರಿನ ಬಲ್ನಾಡು ಪ್ರಗತಿಪರ ಕೃಷಿಕ ಸುರೇಶ್ ಬಲ್ನಾಡು ಅವರ ತೋಟದಲ್ಲಿ ಕಾರ್ಯಕ್ರಮ ಉದ್ಘಾಟನೆಗೊಂಡಿತು. ಪಿಂಗಾರ ಸಂಸ್ಥೆಯ ಅಧ್ಯಕ್ಷ ರಾಮ್ ಕಿಶೋರ್ ಮಂಚಿ ಕಾರ್ಯಕ್ರಮ ಉದ್ಘಾಟಿಸಿದರು. ಕಾಸರಗೋಡು ಸಿಪಿಸಿಆರ್ಐನ ಬೆಳೆ ಸಂರಕ್ಷಣಾ ವಿಭಾಗದ ಮುಖ್ಯಸ್ಥ ಡಾ.ವಿನಾಯಕ್ ಹೆಗಡೆ ಸಭೆಯ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಬಲ್ನಾಡು ಗ್ರಾಪಂ ಅಧ್ಯಕ್ಷೆ ಇಂದಿರಾ ಎಸ್ ರೈ, ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಅಧ್ಯಕ್ಷ ಅಶೋಕ ಕಿನಿಲ , ಕೃಷಿಕ ಸುರೇಶ್ ಬಲ್ನಾಡು ಉಪಸ್ಥಿತರಿದ್ದರು.
ಗೋಪಾಲ ಗೌಡ ಬಲ್ನಾಡು ಕಾರ್ಯಕ್ರಮ ನಿರ್ವಹಿಸಿದರು.
ಸಭಾ ಕಾರ್ಯಕ್ರಮದ ಬಳಿಕ ಅಡಿಕೆ ಕೃಷಿಯಲ್ಲಿ ಪೋಷಕಾಂಶ ನಿರ್ವಹಣೆ, ಎಲೆ ಚುಕ್ಕೆ ರೋಗ, ಹಿಂಗಾರು ಒಣಗಿಸುವ ರೋಗ ಪತ್ತೆ ಮತ್ತು ನಿರ್ವಹಣೆ, ಕೀಟ ನಿರ್ವಹಣೆ, ರೈತ ಉತ್ಪಾದಕ ಸಂಸ್ಥೆಯ ಸಾಧ್ಯತೆ, ಅಡಿಕೆ ಕೃಷಿಯಲ್ಲಿ ಕೃಷಿ ಅನುಭವ ಸೇರಿದಂತೆ ನಾನಾ ಮಾಹಿತಿ ನಡೆಯಿತು.
ವಿಟ್ಲ ಸಿಪಿಸಿಆರ್ ಐ ಮತ್ತು ಅಡಿಕೆ ಮತ್ತು ಸಾಂಬಾರ ಬೆಳೆಗಳ ಅಭಿವೃದ್ಧಿ ನಿರ್ದೆಶನಾಲಯದ ಜಂಟಿ ಆಶ್ರಯದಲ್ಲಿ ಕಾರ್ಯಕ್ರಮ ನಡೆಯಿತು.
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…
ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…
ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…