ಎಳೆ ಅಡಿಕೆ ಬೀಳುವ ಸಮಸ್ಯೆ | ಪೆಂತಿ ಕೀಟದ ಹಾವಳಿ | ರಾಸಾಯನಿಕ ರಹಿತ ಪರಿಹಾರದ ಅಧ್ಯಯನ ಪ್ರಾರಂಭಗೊಳಿಸಿದ ವಿಜ್ಞಾನಿಗಳು |

March 9, 2023
11:32 AM

ಅಡಿಕೆ ಬೆಳೆಗಾರರಿಗೆ ಬೀಸಿಗೆ ಕಾಲ ಕಳೆದು ಮಳೆಗಾಲದ ಆರಂಭದ ವೇಳೆ ವಿಪರೀತವಾಗಿ ಕಾಡುವ ಸಮಸ್ಯೆ ಎಳೆ ಅಡಿಕೆ ಬೀಳುವುದು. ಇದಕ್ಕೆ ಬಹುಪಾಲು ಕಾರಣ ಪೆಂತಿ ಕೀಟ. ಇದೀಗ ಈ ಕೀಟಿ ನಿಯಂತ್ರಣಕ್ಕೆ ರಾಸಾಯನಿಕ ರಹಿತವಾಗಿ ನಿಯಂತ್ರಣ ಮಾಡುವ ಅಧ್ಯಯನವನ್ನು ಸಿಪಿಸಿಆರ್‌ಐ ವಿಜ್ಞಾನಿಗಳು ಆರಂಭಿಸಿದ್ದಾರೆ.

ಪುತ್ತೂರಿನ ಬಲ್ನಾಡಿನ ಕೃಷಿಕ ಸುರೇಶ್‌ ಭಟ್‌ ಅವರ ಕೃಷಿ ಭೂಮಿಯಲ್ಲಿ ಸಿಪಿಸಿಆರ್‌ ಐ ವತಿಯಿಂದ ನಡೆದ ಸಂವಾದ ಕಾರ್ಯಕ್ರಮದಲ್ಲಿ ವಿಜ್ಞಾನಿ ಡಾ.ಮಧು ಅವರು ಮಾಹಿತಿ ನೀಡಿದರು. ಅಡಿಕೆ ಬೀಳುವುದಕ್ಕೆ ಮುಖ್ಯವಾದ ಕಾರಣ ಪೆಂತಿ ಕೀಟ. ಹೆಚ್ಚಾಗಿ ಈ ಕೀಟವು ಅಲಸಂಡೆಯಲ್ಲಿರುತ್ತದೆ, ತಾತ್ಕಾಲಿಕವಾಗಿ ಅಡಿಕೆ ಹಿಂಗಾರಕ್ಕೆ ಬರುತ್ತದೆ. ಈ ಸಂದರ್ಭದಲ್ಲಿ ಕೀಟವು ಅಡಿಕೆ ರಸ ಹೀರುವ ಕಾರಣದಿಂದ ಅಡಿಕೆ ಬೀಳುತ್ತದೆ. ಸದ್ಯ ರಾಸಾಯನಿಕ ಮಾತ್ರವೇ ಪರಿಹಾರವಾಗಿದೆ. ಹೆಚ್ಚುರಾಸಾಯನಿಕ ಸಿಂಪಡಣೆ ಮಾಡುವುದು  ಕೃಷಿ ಬೆಳವಣಿಗೆ ದೃಷ್ಟಿಯಿಂದ ಹಾನಿಕಾರಕವಾದ ಕಾರಣ ಇದೀಗ ರಾಸಾಯನಿಕ ರಹಿತವಾದ ಪ್ರಯೋಗ ನಡೆಯುತ್ತಿದೆ. ರಾಸಾಯನಿಕ ರಹಿತವಾದ ಅಧ್ಯಯನ ಪ್ರಾರಂಭವಾಗಿದೆ. ಈ ಫಲಿತಾಂಶ ಬರಲು ಸಮಯ ಇದೆ, ಪ್ರಾರಂಭದ ಹಂತದಲ್ಲಿ ಈ ಪ್ರಯೋಗ ಇದೆ. ಮುಂದಿನ ದಿನಗಳಲ್ಲಿ ಕೃಷಿಕರಿಗೆ  ಸಿಗಬಹುದು ಎಂದು ಡಾ.ಮಧು ಹೇಳಿದರು.

ಅನಗತ್ಯವಾಗಿ ರಾಸಾಯನಿಕ ಸಿಂಪಡಣೆ ಮಾಡುವುದು ಕಡಿಮೆ ಮಾಡಬೇಕಿದೆ. ವಿಷ  ಸಿಂಪಡಣೆಯಿಂದ ಇತರ ಕೀಟಗಳೂ ನಾಶವಾಗುತ್ತದೆ. ಅನೇಕ ಕೀಟಗಳು ನಮಗೆ ಮಿತ್ರವಾಗಿರುತ್ತದೆ. ವಾತಾವರಣ ಶುದ್ಧತೆ ಹೆಚ್ಚಾಗಬೇಕು, ಆಗ ಆಹಾರ ಸರಪಳಿಯೂ ಬೆಳೆಯುತ್ತದೆ. ವಿಷ ಸಿಂಪಡಣೆಯ ಕಾರಣದಿಂದ ಗೊತ್ತಿಲ್ಲದೇ ಯಾವುದೋ ಒಂದು ಜಾತಿಯ ಕೀಟ ನಾಶವಾಗುತ್ತದೆ. ಟಾರ್ಗೆಟ್‌ ಕೀಟದ ಜೊತೆ ಇನ್ನೊಂದು ಕೀಟವೂ ನಾಶವಾಗುತ್ತದೆ.

ನಿಮ್ಮ ಅಭಿಪ್ರಾಯಗಳಿಗೆ :
ನಿಮ್ಮ ಅಭಿಪ್ರಾಯಗಳಿಗೆ :

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ದೇಶೀಯ ಗ್ರಾಹಕರಿಗೆ ಇಂಧನ ಕೊರತೆ ಇಲ್ಲ: CNG – PNG ಪೂರೈಕೆ ನಿರಂತರ – ಸಚಿವ ಹರ್ದೀಪ್ ಸಿಂಗ್ ಪುರಿ
March 12, 2026
7:20 AM
by: ಮಿರರ್‌ ಡೆಸ್ಕ್
ಪೆಟ್ರೋಲಿಯಂಗೆ ಪರ್ಯಾಯದತ್ತ : ಕೃಷಿ ಸಂಪನ್ಮೂಲಗಳಿಂದ ಬಯೋ ಉತ್ಪನ್ನಗಳತ್ತ ಆದ್ಯತೆ
March 12, 2026
7:16 AM
by: ಮಿರರ್‌ ಡೆಸ್ಕ್
ಗೋವಾದಲ್ಲಿ ಹಲಸು ಉತ್ಪಾದನೆ ಕುಸಿತ ಇಲ್ಲ | ಉತ್ತಮ ದರಕ್ಕಾಗಿ ಓಪನ್‌ ಮಾರ್ಕೆಟ್‌ಗೆ ರೈತರ ಒಲವು
March 12, 2026
7:11 AM
by: ಮಿರರ್‌ ಡೆಸ್ಕ್
ರಾಜ್ಯದಲ್ಲಿ ಅಡುಗೆ ಅನಿಲ ಕೊರತೆ ಇಲ್ಲ | ಪ್ರತಿ 25 ದಿನಕ್ಕೊಂದು ಸಿಲಿಂಡರ್‌ ಪೂರೈಕೆ – ಸಚಿವ ಮುನಿಯಪ್ಪ ಭರವಸೆ
March 12, 2026
7:08 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror