ಎಳೆ ಅಡಿಕೆ ಬೀಳುವ ಸಮಸ್ಯೆ | ಪೆಂತಿ ಕೀಟದ ಹಾವಳಿ | ರಾಸಾಯನಿಕ ರಹಿತ ಪರಿಹಾರದ ಅಧ್ಯಯನ ಪ್ರಾರಂಭಗೊಳಿಸಿದ ವಿಜ್ಞಾನಿಗಳು |

March 9, 2023
11:32 AM

ಅಡಿಕೆ ಬೆಳೆಗಾರರಿಗೆ ಬೀಸಿಗೆ ಕಾಲ ಕಳೆದು ಮಳೆಗಾಲದ ಆರಂಭದ ವೇಳೆ ವಿಪರೀತವಾಗಿ ಕಾಡುವ ಸಮಸ್ಯೆ ಎಳೆ ಅಡಿಕೆ ಬೀಳುವುದು. ಇದಕ್ಕೆ ಬಹುಪಾಲು ಕಾರಣ ಪೆಂತಿ ಕೀಟ. ಇದೀಗ ಈ ಕೀಟಿ ನಿಯಂತ್ರಣಕ್ಕೆ ರಾಸಾಯನಿಕ ರಹಿತವಾಗಿ ನಿಯಂತ್ರಣ ಮಾಡುವ ಅಧ್ಯಯನವನ್ನು ಸಿಪಿಸಿಆರ್‌ಐ ವಿಜ್ಞಾನಿಗಳು ಆರಂಭಿಸಿದ್ದಾರೆ.

ಪುತ್ತೂರಿನ ಬಲ್ನಾಡಿನ ಕೃಷಿಕ ಸುರೇಶ್‌ ಭಟ್‌ ಅವರ ಕೃಷಿ ಭೂಮಿಯಲ್ಲಿ ಸಿಪಿಸಿಆರ್‌ ಐ ವತಿಯಿಂದ ನಡೆದ ಸಂವಾದ ಕಾರ್ಯಕ್ರಮದಲ್ಲಿ ವಿಜ್ಞಾನಿ ಡಾ.ಮಧು ಅವರು ಮಾಹಿತಿ ನೀಡಿದರು. ಅಡಿಕೆ ಬೀಳುವುದಕ್ಕೆ ಮುಖ್ಯವಾದ ಕಾರಣ ಪೆಂತಿ ಕೀಟ. ಹೆಚ್ಚಾಗಿ ಈ ಕೀಟವು ಅಲಸಂಡೆಯಲ್ಲಿರುತ್ತದೆ, ತಾತ್ಕಾಲಿಕವಾಗಿ ಅಡಿಕೆ ಹಿಂಗಾರಕ್ಕೆ ಬರುತ್ತದೆ. ಈ ಸಂದರ್ಭದಲ್ಲಿ ಕೀಟವು ಅಡಿಕೆ ರಸ ಹೀರುವ ಕಾರಣದಿಂದ ಅಡಿಕೆ ಬೀಳುತ್ತದೆ. ಸದ್ಯ ರಾಸಾಯನಿಕ ಮಾತ್ರವೇ ಪರಿಹಾರವಾಗಿದೆ. ಹೆಚ್ಚುರಾಸಾಯನಿಕ ಸಿಂಪಡಣೆ ಮಾಡುವುದು  ಕೃಷಿ ಬೆಳವಣಿಗೆ ದೃಷ್ಟಿಯಿಂದ ಹಾನಿಕಾರಕವಾದ ಕಾರಣ ಇದೀಗ ರಾಸಾಯನಿಕ ರಹಿತವಾದ ಪ್ರಯೋಗ ನಡೆಯುತ್ತಿದೆ. ರಾಸಾಯನಿಕ ರಹಿತವಾದ ಅಧ್ಯಯನ ಪ್ರಾರಂಭವಾಗಿದೆ. ಈ ಫಲಿತಾಂಶ ಬರಲು ಸಮಯ ಇದೆ, ಪ್ರಾರಂಭದ ಹಂತದಲ್ಲಿ ಈ ಪ್ರಯೋಗ ಇದೆ. ಮುಂದಿನ ದಿನಗಳಲ್ಲಿ ಕೃಷಿಕರಿಗೆ  ಸಿಗಬಹುದು ಎಂದು ಡಾ.ಮಧು ಹೇಳಿದರು.

ಅನಗತ್ಯವಾಗಿ ರಾಸಾಯನಿಕ ಸಿಂಪಡಣೆ ಮಾಡುವುದು ಕಡಿಮೆ ಮಾಡಬೇಕಿದೆ. ವಿಷ  ಸಿಂಪಡಣೆಯಿಂದ ಇತರ ಕೀಟಗಳೂ ನಾಶವಾಗುತ್ತದೆ. ಅನೇಕ ಕೀಟಗಳು ನಮಗೆ ಮಿತ್ರವಾಗಿರುತ್ತದೆ. ವಾತಾವರಣ ಶುದ್ಧತೆ ಹೆಚ್ಚಾಗಬೇಕು, ಆಗ ಆಹಾರ ಸರಪಳಿಯೂ ಬೆಳೆಯುತ್ತದೆ. ವಿಷ ಸಿಂಪಡಣೆಯ ಕಾರಣದಿಂದ ಗೊತ್ತಿಲ್ಲದೇ ಯಾವುದೋ ಒಂದು ಜಾತಿಯ ಕೀಟ ನಾಶವಾಗುತ್ತದೆ. ಟಾರ್ಗೆಟ್‌ ಕೀಟದ ಜೊತೆ ಇನ್ನೊಂದು ಕೀಟವೂ ನಾಶವಾಗುತ್ತದೆ.

ನಿಮ್ಮ ಅಭಿಪ್ರಾಯಗಳಿಗೆ :
ನಿಮ್ಮ ಅಭಿಪ್ರಾಯಗಳಿಗೆ :

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ
July 21, 2026
11:55 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ
July 21, 2026
4:32 PM
by: ಸಾಯಿಶೇಖರ್ ಕರಿಕಳ
ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ
July 20, 2026
10:59 PM
by: ದ ರೂರಲ್ ಮಿರರ್.ಕಾಂ
ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್
July 20, 2026
10:18 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror