ಎಳೆ ಅಡಿಕೆ ಬೀಳುವ ಸಮಸ್ಯೆ | ಪೆಂತಿ ಕೀಟದ ಹಾವಳಿ | ರಾಸಾಯನಿಕ ರಹಿತ ಪರಿಹಾರದ ಅಧ್ಯಯನ ಪ್ರಾರಂಭಗೊಳಿಸಿದ ವಿಜ್ಞಾನಿಗಳು |

March 9, 2023
11:32 AM

ಅಡಿಕೆ ಬೆಳೆಗಾರರಿಗೆ ಬೀಸಿಗೆ ಕಾಲ ಕಳೆದು ಮಳೆಗಾಲದ ಆರಂಭದ ವೇಳೆ ವಿಪರೀತವಾಗಿ ಕಾಡುವ ಸಮಸ್ಯೆ ಎಳೆ ಅಡಿಕೆ ಬೀಳುವುದು. ಇದಕ್ಕೆ ಬಹುಪಾಲು ಕಾರಣ ಪೆಂತಿ ಕೀಟ. ಇದೀಗ ಈ ಕೀಟಿ ನಿಯಂತ್ರಣಕ್ಕೆ ರಾಸಾಯನಿಕ ರಹಿತವಾಗಿ ನಿಯಂತ್ರಣ ಮಾಡುವ ಅಧ್ಯಯನವನ್ನು ಸಿಪಿಸಿಆರ್‌ಐ ವಿಜ್ಞಾನಿಗಳು ಆರಂಭಿಸಿದ್ದಾರೆ.

Advertisement
Advertisement

ಪುತ್ತೂರಿನ ಬಲ್ನಾಡಿನ ಕೃಷಿಕ ಸುರೇಶ್‌ ಭಟ್‌ ಅವರ ಕೃಷಿ ಭೂಮಿಯಲ್ಲಿ ಸಿಪಿಸಿಆರ್‌ ಐ ವತಿಯಿಂದ ನಡೆದ ಸಂವಾದ ಕಾರ್ಯಕ್ರಮದಲ್ಲಿ ವಿಜ್ಞಾನಿ ಡಾ.ಮಧು ಅವರು ಮಾಹಿತಿ ನೀಡಿದರು. ಅಡಿಕೆ ಬೀಳುವುದಕ್ಕೆ ಮುಖ್ಯವಾದ ಕಾರಣ ಪೆಂತಿ ಕೀಟ. ಹೆಚ್ಚಾಗಿ ಈ ಕೀಟವು ಅಲಸಂಡೆಯಲ್ಲಿರುತ್ತದೆ, ತಾತ್ಕಾಲಿಕವಾಗಿ ಅಡಿಕೆ ಹಿಂಗಾರಕ್ಕೆ ಬರುತ್ತದೆ. ಈ ಸಂದರ್ಭದಲ್ಲಿ ಕೀಟವು ಅಡಿಕೆ ರಸ ಹೀರುವ ಕಾರಣದಿಂದ ಅಡಿಕೆ ಬೀಳುತ್ತದೆ. ಸದ್ಯ ರಾಸಾಯನಿಕ ಮಾತ್ರವೇ ಪರಿಹಾರವಾಗಿದೆ. ಹೆಚ್ಚುರಾಸಾಯನಿಕ ಸಿಂಪಡಣೆ ಮಾಡುವುದು  ಕೃಷಿ ಬೆಳವಣಿಗೆ ದೃಷ್ಟಿಯಿಂದ ಹಾನಿಕಾರಕವಾದ ಕಾರಣ ಇದೀಗ ರಾಸಾಯನಿಕ ರಹಿತವಾದ ಪ್ರಯೋಗ ನಡೆಯುತ್ತಿದೆ. ರಾಸಾಯನಿಕ ರಹಿತವಾದ ಅಧ್ಯಯನ ಪ್ರಾರಂಭವಾಗಿದೆ. ಈ ಫಲಿತಾಂಶ ಬರಲು ಸಮಯ ಇದೆ, ಪ್ರಾರಂಭದ ಹಂತದಲ್ಲಿ ಈ ಪ್ರಯೋಗ ಇದೆ. ಮುಂದಿನ ದಿನಗಳಲ್ಲಿ ಕೃಷಿಕರಿಗೆ  ಸಿಗಬಹುದು ಎಂದು ಡಾ.ಮಧು ಹೇಳಿದರು.

Advertisement

ಅನಗತ್ಯವಾಗಿ ರಾಸಾಯನಿಕ ಸಿಂಪಡಣೆ ಮಾಡುವುದು ಕಡಿಮೆ ಮಾಡಬೇಕಿದೆ. ವಿಷ  ಸಿಂಪಡಣೆಯಿಂದ ಇತರ ಕೀಟಗಳೂ ನಾಶವಾಗುತ್ತದೆ. ಅನೇಕ ಕೀಟಗಳು ನಮಗೆ ಮಿತ್ರವಾಗಿರುತ್ತದೆ. ವಾತಾವರಣ ಶುದ್ಧತೆ ಹೆಚ್ಚಾಗಬೇಕು, ಆಗ ಆಹಾರ ಸರಪಳಿಯೂ ಬೆಳೆಯುತ್ತದೆ. ವಿಷ ಸಿಂಪಡಣೆಯ ಕಾರಣದಿಂದ ಗೊತ್ತಿಲ್ಲದೇ ಯಾವುದೋ ಒಂದು ಜಾತಿಯ ಕೀಟ ನಾಶವಾಗುತ್ತದೆ. ಟಾರ್ಗೆಟ್‌ ಕೀಟದ ಜೊತೆ ಇನ್ನೊಂದು ಕೀಟವೂ ನಾಶವಾಗುತ್ತದೆ.

ನಿಮ್ಮ ಅಭಿಪ್ರಾಯಗಳಿಗೆ :
ನಿಮ್ಮ ಅಭಿಪ್ರಾಯಗಳಿಗೆ :

Advertisement

 

Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸುಸ್ಥಿರ ಕೃಷಿ ತರಬೇತಿ ಕಾರ್ಯಗಾರ | ಯುವ ಕೃಷಿಕರಿಗೆ ಕೃಷಿ ಬಗ್ಗೆ ಮಾಹಿತಿ
May 16, 2024
5:58 PM
by: The Rural Mirror ಸುದ್ದಿಜಾಲ
ಕೆರೆಯಲ್ಲಿ ಸಾಕಿದ್ದ ಮೀನುಗಳ ಮಾರಣಹೋಮ | ಬೃಹತ್‌ ಗಾತ್ರ ಮೀನು ಸಾವು | ಅಪಾರ ನಷ್ಟ |
May 16, 2024
5:43 PM
by: The Rural Mirror ಸುದ್ದಿಜಾಲ
ಮೇ 31ಕ್ಕೆ ದೇಶದಲ್ಲಿ ಮುಂಗಾರು ಪ್ರವೇಶ ಸಾಧ್ಯತೆ | ಜೂನ್ ಮೊದಲ ವಾರದಲ್ಲಿ ರಾಜ್ಯಕ್ಕೆ ಮುಂಗಾರು ಮಳೆ |
May 16, 2024
5:23 PM
by: The Rural Mirror ಸುದ್ದಿಜಾಲ
ಭಾರತ ಚಂದ್ರನಂಗಳದಲ್ಲಿದೆ | ನಮ್ಮ ಮಕ್ಕಳು ಚರಂಡಿಯಲ್ಲಿ ಬಿದ್ದು ಸಾಯುತ್ತಿದ್ದಾರೆ | ಪಾಕ್ ಸಂಸದ ಪಾಕ್‌ ಆಡಳಿತ ವಿರುದ್ಧ ಕಿಡಿ
May 16, 2024
5:06 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror