Advertisement
ಸುದ್ದಿಗಳು

ಎಳೆ ಅಡಿಕೆ ಬೀಳುವ ಸಮಸ್ಯೆ | ಪೆಂತಿ ಕೀಟದ ಹಾವಳಿ | ರಾಸಾಯನಿಕ ರಹಿತ ಪರಿಹಾರದ ಅಧ್ಯಯನ ಪ್ರಾರಂಭಗೊಳಿಸಿದ ವಿಜ್ಞಾನಿಗಳು |

Share

ಅಡಿಕೆ ಬೆಳೆಗಾರರಿಗೆ ಬೀಸಿಗೆ ಕಾಲ ಕಳೆದು ಮಳೆಗಾಲದ ಆರಂಭದ ವೇಳೆ ವಿಪರೀತವಾಗಿ ಕಾಡುವ ಸಮಸ್ಯೆ ಎಳೆ ಅಡಿಕೆ ಬೀಳುವುದು. ಇದಕ್ಕೆ ಬಹುಪಾಲು ಕಾರಣ ಪೆಂತಿ ಕೀಟ. ಇದೀಗ ಈ ಕೀಟಿ ನಿಯಂತ್ರಣಕ್ಕೆ ರಾಸಾಯನಿಕ ರಹಿತವಾಗಿ ನಿಯಂತ್ರಣ ಮಾಡುವ ಅಧ್ಯಯನವನ್ನು ಸಿಪಿಸಿಆರ್‌ಐ ವಿಜ್ಞಾನಿಗಳು ಆರಂಭಿಸಿದ್ದಾರೆ.

ಪುತ್ತೂರಿನ ಬಲ್ನಾಡಿನ ಕೃಷಿಕ ಸುರೇಶ್‌ ಭಟ್‌ ಅವರ ಕೃಷಿ ಭೂಮಿಯಲ್ಲಿ ಸಿಪಿಸಿಆರ್‌ ಐ ವತಿಯಿಂದ ನಡೆದ ಸಂವಾದ ಕಾರ್ಯಕ್ರಮದಲ್ಲಿ ವಿಜ್ಞಾನಿ ಡಾ.ಮಧು ಅವರು ಮಾಹಿತಿ ನೀಡಿದರು. ಅಡಿಕೆ ಬೀಳುವುದಕ್ಕೆ ಮುಖ್ಯವಾದ ಕಾರಣ ಪೆಂತಿ ಕೀಟ. ಹೆಚ್ಚಾಗಿ ಈ ಕೀಟವು ಅಲಸಂಡೆಯಲ್ಲಿರುತ್ತದೆ, ತಾತ್ಕಾಲಿಕವಾಗಿ ಅಡಿಕೆ ಹಿಂಗಾರಕ್ಕೆ ಬರುತ್ತದೆ. ಈ ಸಂದರ್ಭದಲ್ಲಿ ಕೀಟವು ಅಡಿಕೆ ರಸ ಹೀರುವ ಕಾರಣದಿಂದ ಅಡಿಕೆ ಬೀಳುತ್ತದೆ. ಸದ್ಯ ರಾಸಾಯನಿಕ ಮಾತ್ರವೇ ಪರಿಹಾರವಾಗಿದೆ. ಹೆಚ್ಚುರಾಸಾಯನಿಕ ಸಿಂಪಡಣೆ ಮಾಡುವುದು  ಕೃಷಿ ಬೆಳವಣಿಗೆ ದೃಷ್ಟಿಯಿಂದ ಹಾನಿಕಾರಕವಾದ ಕಾರಣ ಇದೀಗ ರಾಸಾಯನಿಕ ರಹಿತವಾದ ಪ್ರಯೋಗ ನಡೆಯುತ್ತಿದೆ. ರಾಸಾಯನಿಕ ರಹಿತವಾದ ಅಧ್ಯಯನ ಪ್ರಾರಂಭವಾಗಿದೆ. ಈ ಫಲಿತಾಂಶ ಬರಲು ಸಮಯ ಇದೆ, ಪ್ರಾರಂಭದ ಹಂತದಲ್ಲಿ ಈ ಪ್ರಯೋಗ ಇದೆ. ಮುಂದಿನ ದಿನಗಳಲ್ಲಿ ಕೃಷಿಕರಿಗೆ  ಸಿಗಬಹುದು ಎಂದು ಡಾ.ಮಧು ಹೇಳಿದರು.

ಅನಗತ್ಯವಾಗಿ ರಾಸಾಯನಿಕ ಸಿಂಪಡಣೆ ಮಾಡುವುದು ಕಡಿಮೆ ಮಾಡಬೇಕಿದೆ. ವಿಷ  ಸಿಂಪಡಣೆಯಿಂದ ಇತರ ಕೀಟಗಳೂ ನಾಶವಾಗುತ್ತದೆ. ಅನೇಕ ಕೀಟಗಳು ನಮಗೆ ಮಿತ್ರವಾಗಿರುತ್ತದೆ. ವಾತಾವರಣ ಶುದ್ಧತೆ ಹೆಚ್ಚಾಗಬೇಕು, ಆಗ ಆಹಾರ ಸರಪಳಿಯೂ ಬೆಳೆಯುತ್ತದೆ. ವಿಷ ಸಿಂಪಡಣೆಯ ಕಾರಣದಿಂದ ಗೊತ್ತಿಲ್ಲದೇ ಯಾವುದೋ ಒಂದು ಜಾತಿಯ ಕೀಟ ನಾಶವಾಗುತ್ತದೆ. ಟಾರ್ಗೆಟ್‌ ಕೀಟದ ಜೊತೆ ಇನ್ನೊಂದು ಕೀಟವೂ ನಾಶವಾಗುತ್ತದೆ.

ನಿಮ್ಮ ಅಭಿಪ್ರಾಯಗಳಿಗೆ :
ನಿಮ್ಮ ಅಭಿಪ್ರಾಯಗಳಿಗೆ :

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಳಗಿನಿಂದಲೇ ಮಳೆ- ಸಂಜೆ ಗುಡುಗು ಸಹಿತ ಭರ್ಜರಿ ಮಳೆ

ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಭಾಗಗಳಲ್ಲಿ ಮಧ್ಯಾಹ್ನ ನಂತರ ಗುಡುಗು-ಮಿಂಚು ಸಹಿತ ಸಾಧಾರಣ…

5 hours ago

ಹವಾಮಾನ ವರದಿ | 16-05-2026 | ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು – ಮೇ 20 ರಿಂದ ಕರಾವಳಿಯಲ್ಲಿ ಮುಂಗಾರು ಮಾದರಿಯ ಮಳೆ ಸಾಧ್ಯತೆ

ಕರ್ನಾಟಕದ ಹಲವೆಡೆ ಪೂರ್ವ ಮುಂಗಾರು ಮಳೆ ಮುಂದುವರಿದಿದ್ದು, ಕರಾವಳಿಯಲ್ಲಿ ಮೇ 20ರಿಂದ ಮುಂಗಾರು…

6 hours ago

ಮುಂಗಾರು ಮೇ 26ಕ್ಕೆ ಕೇರಳ ಪ್ರವೇಶ ಸಾಧ್ಯ : ಕರ್ನಾಟಕದ ಹಲವೆಡೆ ಭಾರೀ ಮಳೆ ಎಚ್ಚರಿಕೆ – ರೈತರಿಗೆ ಸಲಹೆ ಏನು..?

ಮೇ 26ರಂದು ಕೇರಳಕ್ಕೆ ಮುಂಗಾರು ಪ್ರವೇಶಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ…

7 hours ago

ಅಡಿಕೆ ಮಾರುಕಟ್ಟೆಯಲ್ಲಿ ಆತಂಕದ ತಿರುವು..! ಧಾರಣೆ ಇಳಿಕೆ ಯಾಕೆ..? ಮತ್ತೆ ಏರಿಕೆಯಾಗುತ್ತದಾ..? ಬೆಳೆಗಾರರಲ್ಲಿ ಹೆಚ್ಚಿದ ಕುತೂಹಲ

ಚಾಲಿ ಅಡಿಕೆ ಧಾರಣೆ ಮೇ ತಿಂಗಳಲ್ಲಿ ಇಳಿಕೆಯಾಗುತ್ತಿರುವುದು ರೈತರ ಆತಂಕಕ್ಕೆ ಕಾರಣವಾಗಿದೆ. ಬರ್ಮಾ-ಇಂಡೋನೇಷ್ಯಾ…

8 hours ago

ರಬ್ಬರ್‌ ದರ 13 ವರ್ಷಗಳಲ್ಲಿ ದಾಖಲೆ ಮಟ್ಟಕ್ಕೆ..! ಆದರೆ ಯಾಕೆ ಬೆಳೆಗಾರರು ಇನ್ನೂ ಚಿಂತೆಯಲ್ಲಿ..?

ರಬ್ಬರ್‌ ದರವು ದೇಶದಲ್ಲಿ ದಾಖಲೆ ಮಟ್ಟ ತಲುಪಿದ್ದು, ರೈತರಿಗೆ ಲಾಭದ ನಿರೀಕ್ಷೆ ಮೂಡಿಸಿದೆ.…

14 hours ago