ಅಡಿಕೆ ಬೆಳೆಗಾರರಿಗೆ ಬೀಸಿಗೆ ಕಾಲ ಕಳೆದು ಮಳೆಗಾಲದ ಆರಂಭದ ವೇಳೆ ವಿಪರೀತವಾಗಿ ಕಾಡುವ ಸಮಸ್ಯೆ ಎಳೆ ಅಡಿಕೆ ಬೀಳುವುದು. ಇದಕ್ಕೆ ಬಹುಪಾಲು ಕಾರಣ ಪೆಂತಿ ಕೀಟ. ಇದೀಗ ಈ ಕೀಟಿ ನಿಯಂತ್ರಣಕ್ಕೆ ರಾಸಾಯನಿಕ ರಹಿತವಾಗಿ ನಿಯಂತ್ರಣ ಮಾಡುವ ಅಧ್ಯಯನವನ್ನು ಸಿಪಿಸಿಆರ್ಐ ವಿಜ್ಞಾನಿಗಳು ಆರಂಭಿಸಿದ್ದಾರೆ.
ಪುತ್ತೂರಿನ ಬಲ್ನಾಡಿನ ಕೃಷಿಕ ಸುರೇಶ್ ಭಟ್ ಅವರ ಕೃಷಿ ಭೂಮಿಯಲ್ಲಿ ಸಿಪಿಸಿಆರ್ ಐ ವತಿಯಿಂದ ನಡೆದ ಸಂವಾದ ಕಾರ್ಯಕ್ರಮದಲ್ಲಿ ವಿಜ್ಞಾನಿ ಡಾ.ಮಧು ಅವರು ಮಾಹಿತಿ ನೀಡಿದರು. ಅಡಿಕೆ ಬೀಳುವುದಕ್ಕೆ ಮುಖ್ಯವಾದ ಕಾರಣ ಪೆಂತಿ ಕೀಟ. ಹೆಚ್ಚಾಗಿ ಈ ಕೀಟವು ಅಲಸಂಡೆಯಲ್ಲಿರುತ್ತದೆ, ತಾತ್ಕಾಲಿಕವಾಗಿ ಅಡಿಕೆ ಹಿಂಗಾರಕ್ಕೆ ಬರುತ್ತದೆ. ಈ ಸಂದರ್ಭದಲ್ಲಿ ಕೀಟವು ಅಡಿಕೆ ರಸ ಹೀರುವ ಕಾರಣದಿಂದ ಅಡಿಕೆ ಬೀಳುತ್ತದೆ. ಸದ್ಯ ರಾಸಾಯನಿಕ ಮಾತ್ರವೇ ಪರಿಹಾರವಾಗಿದೆ. ಹೆಚ್ಚುರಾಸಾಯನಿಕ ಸಿಂಪಡಣೆ ಮಾಡುವುದು ಕೃಷಿ ಬೆಳವಣಿಗೆ ದೃಷ್ಟಿಯಿಂದ ಹಾನಿಕಾರಕವಾದ ಕಾರಣ ಇದೀಗ ರಾಸಾಯನಿಕ ರಹಿತವಾದ ಪ್ರಯೋಗ ನಡೆಯುತ್ತಿದೆ. ರಾಸಾಯನಿಕ ರಹಿತವಾದ ಅಧ್ಯಯನ ಪ್ರಾರಂಭವಾಗಿದೆ. ಈ ಫಲಿತಾಂಶ ಬರಲು ಸಮಯ ಇದೆ, ಪ್ರಾರಂಭದ ಹಂತದಲ್ಲಿ ಈ ಪ್ರಯೋಗ ಇದೆ. ಮುಂದಿನ ದಿನಗಳಲ್ಲಿ ಕೃಷಿಕರಿಗೆ ಸಿಗಬಹುದು ಎಂದು ಡಾ.ಮಧು ಹೇಳಿದರು.
ಅನಗತ್ಯವಾಗಿ ರಾಸಾಯನಿಕ ಸಿಂಪಡಣೆ ಮಾಡುವುದು ಕಡಿಮೆ ಮಾಡಬೇಕಿದೆ. ವಿಷ ಸಿಂಪಡಣೆಯಿಂದ ಇತರ ಕೀಟಗಳೂ ನಾಶವಾಗುತ್ತದೆ. ಅನೇಕ ಕೀಟಗಳು ನಮಗೆ ಮಿತ್ರವಾಗಿರುತ್ತದೆ. ವಾತಾವರಣ ಶುದ್ಧತೆ ಹೆಚ್ಚಾಗಬೇಕು, ಆಗ ಆಹಾರ ಸರಪಳಿಯೂ ಬೆಳೆಯುತ್ತದೆ. ವಿಷ ಸಿಂಪಡಣೆಯ ಕಾರಣದಿಂದ ಗೊತ್ತಿಲ್ಲದೇ ಯಾವುದೋ ಒಂದು ಜಾತಿಯ ಕೀಟ ನಾಶವಾಗುತ್ತದೆ. ಟಾರ್ಗೆಟ್ ಕೀಟದ ಜೊತೆ ಇನ್ನೊಂದು ಕೀಟವೂ ನಾಶವಾಗುತ್ತದೆ.
ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…
ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…
ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…
ಮಲೆನಾಡಿನ ಕೃಷಿ ಸಮಸ್ಯೆಗಳನ್ನು ಪ್ರವಾಸೋದ್ಯಮದ ಅವಕಾಶಗಳಾಗಿ ಪರಿವರ್ತಿಸುವ ಹೊಸ ಪರಿಕಲ್ಪನೆಯನ್ನು ಪ್ರಬಂಧ ಅಂಬುತೀರ್ಥ…
ಮಹಾರಾಷ್ಟ್ರ FDA ದಾಳಿಯಲ್ಲಿ 14 ಮಂದಿ ಬಂಧನವಾಗಿದ್ದು, ₹32 ಲಕ್ಷ ಮೌಲ್ಯದ ನಿಷೇಧಿತ…