ಅಡಿಕೆ ಬೆಳೆಗಾರರಿಗೆ ಬೀಸಿಗೆ ಕಾಲ ಕಳೆದು ಮಳೆಗಾಲದ ಆರಂಭದ ವೇಳೆ ವಿಪರೀತವಾಗಿ ಕಾಡುವ ಸಮಸ್ಯೆ ಎಳೆ ಅಡಿಕೆ ಬೀಳುವುದು. ಇದಕ್ಕೆ ಬಹುಪಾಲು ಕಾರಣ ಪೆಂತಿ ಕೀಟ. ಇದೀಗ ಈ ಕೀಟಿ ನಿಯಂತ್ರಣಕ್ಕೆ ರಾಸಾಯನಿಕ ರಹಿತವಾಗಿ ನಿಯಂತ್ರಣ ಮಾಡುವ ಅಧ್ಯಯನವನ್ನು ಸಿಪಿಸಿಆರ್ಐ ವಿಜ್ಞಾನಿಗಳು ಆರಂಭಿಸಿದ್ದಾರೆ.
ಪುತ್ತೂರಿನ ಬಲ್ನಾಡಿನ ಕೃಷಿಕ ಸುರೇಶ್ ಭಟ್ ಅವರ ಕೃಷಿ ಭೂಮಿಯಲ್ಲಿ ಸಿಪಿಸಿಆರ್ ಐ ವತಿಯಿಂದ ನಡೆದ ಸಂವಾದ ಕಾರ್ಯಕ್ರಮದಲ್ಲಿ ವಿಜ್ಞಾನಿ ಡಾ.ಮಧು ಅವರು ಮಾಹಿತಿ ನೀಡಿದರು. ಅಡಿಕೆ ಬೀಳುವುದಕ್ಕೆ ಮುಖ್ಯವಾದ ಕಾರಣ ಪೆಂತಿ ಕೀಟ. ಹೆಚ್ಚಾಗಿ ಈ ಕೀಟವು ಅಲಸಂಡೆಯಲ್ಲಿರುತ್ತದೆ, ತಾತ್ಕಾಲಿಕವಾಗಿ ಅಡಿಕೆ ಹಿಂಗಾರಕ್ಕೆ ಬರುತ್ತದೆ. ಈ ಸಂದರ್ಭದಲ್ಲಿ ಕೀಟವು ಅಡಿಕೆ ರಸ ಹೀರುವ ಕಾರಣದಿಂದ ಅಡಿಕೆ ಬೀಳುತ್ತದೆ. ಸದ್ಯ ರಾಸಾಯನಿಕ ಮಾತ್ರವೇ ಪರಿಹಾರವಾಗಿದೆ. ಹೆಚ್ಚುರಾಸಾಯನಿಕ ಸಿಂಪಡಣೆ ಮಾಡುವುದು ಕೃಷಿ ಬೆಳವಣಿಗೆ ದೃಷ್ಟಿಯಿಂದ ಹಾನಿಕಾರಕವಾದ ಕಾರಣ ಇದೀಗ ರಾಸಾಯನಿಕ ರಹಿತವಾದ ಪ್ರಯೋಗ ನಡೆಯುತ್ತಿದೆ. ರಾಸಾಯನಿಕ ರಹಿತವಾದ ಅಧ್ಯಯನ ಪ್ರಾರಂಭವಾಗಿದೆ. ಈ ಫಲಿತಾಂಶ ಬರಲು ಸಮಯ ಇದೆ, ಪ್ರಾರಂಭದ ಹಂತದಲ್ಲಿ ಈ ಪ್ರಯೋಗ ಇದೆ. ಮುಂದಿನ ದಿನಗಳಲ್ಲಿ ಕೃಷಿಕರಿಗೆ ಸಿಗಬಹುದು ಎಂದು ಡಾ.ಮಧು ಹೇಳಿದರು.
ಅನಗತ್ಯವಾಗಿ ರಾಸಾಯನಿಕ ಸಿಂಪಡಣೆ ಮಾಡುವುದು ಕಡಿಮೆ ಮಾಡಬೇಕಿದೆ. ವಿಷ ಸಿಂಪಡಣೆಯಿಂದ ಇತರ ಕೀಟಗಳೂ ನಾಶವಾಗುತ್ತದೆ. ಅನೇಕ ಕೀಟಗಳು ನಮಗೆ ಮಿತ್ರವಾಗಿರುತ್ತದೆ. ವಾತಾವರಣ ಶುದ್ಧತೆ ಹೆಚ್ಚಾಗಬೇಕು, ಆಗ ಆಹಾರ ಸರಪಳಿಯೂ ಬೆಳೆಯುತ್ತದೆ. ವಿಷ ಸಿಂಪಡಣೆಯ ಕಾರಣದಿಂದ ಗೊತ್ತಿಲ್ಲದೇ ಯಾವುದೋ ಒಂದು ಜಾತಿಯ ಕೀಟ ನಾಶವಾಗುತ್ತದೆ. ಟಾರ್ಗೆಟ್ ಕೀಟದ ಜೊತೆ ಇನ್ನೊಂದು ಕೀಟವೂ ನಾಶವಾಗುತ್ತದೆ.
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…
ಗುಟ್ಕಾ ಮತ್ತು ಪಾನ್ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…