ಅಡಿಕೆ ಬೆಳೆಗಾರರಿಗೆ ಬೀಸಿಗೆ ಕಾಲ ಕಳೆದು ಮಳೆಗಾಲದ ಆರಂಭದ ವೇಳೆ ವಿಪರೀತವಾಗಿ ಕಾಡುವ ಸಮಸ್ಯೆ ಎಳೆ ಅಡಿಕೆ ಬೀಳುವುದು. ಇದಕ್ಕೆ ಬಹುಪಾಲು ಕಾರಣ ಪೆಂತಿ ಕೀಟ. ಇದೀಗ ಈ ಕೀಟಿ ನಿಯಂತ್ರಣಕ್ಕೆ ರಾಸಾಯನಿಕ ರಹಿತವಾಗಿ ನಿಯಂತ್ರಣ ಮಾಡುವ ಅಧ್ಯಯನವನ್ನು ಸಿಪಿಸಿಆರ್ಐ ವಿಜ್ಞಾನಿಗಳು ಆರಂಭಿಸಿದ್ದಾರೆ.
ಪುತ್ತೂರಿನ ಬಲ್ನಾಡಿನ ಕೃಷಿಕ ಸುರೇಶ್ ಭಟ್ ಅವರ ಕೃಷಿ ಭೂಮಿಯಲ್ಲಿ ಸಿಪಿಸಿಆರ್ ಐ ವತಿಯಿಂದ ನಡೆದ ಸಂವಾದ ಕಾರ್ಯಕ್ರಮದಲ್ಲಿ ವಿಜ್ಞಾನಿ ಡಾ.ಮಧು ಅವರು ಮಾಹಿತಿ ನೀಡಿದರು. ಅಡಿಕೆ ಬೀಳುವುದಕ್ಕೆ ಮುಖ್ಯವಾದ ಕಾರಣ ಪೆಂತಿ ಕೀಟ. ಹೆಚ್ಚಾಗಿ ಈ ಕೀಟವು ಅಲಸಂಡೆಯಲ್ಲಿರುತ್ತದೆ, ತಾತ್ಕಾಲಿಕವಾಗಿ ಅಡಿಕೆ ಹಿಂಗಾರಕ್ಕೆ ಬರುತ್ತದೆ. ಈ ಸಂದರ್ಭದಲ್ಲಿ ಕೀಟವು ಅಡಿಕೆ ರಸ ಹೀರುವ ಕಾರಣದಿಂದ ಅಡಿಕೆ ಬೀಳುತ್ತದೆ. ಸದ್ಯ ರಾಸಾಯನಿಕ ಮಾತ್ರವೇ ಪರಿಹಾರವಾಗಿದೆ. ಹೆಚ್ಚುರಾಸಾಯನಿಕ ಸಿಂಪಡಣೆ ಮಾಡುವುದು ಕೃಷಿ ಬೆಳವಣಿಗೆ ದೃಷ್ಟಿಯಿಂದ ಹಾನಿಕಾರಕವಾದ ಕಾರಣ ಇದೀಗ ರಾಸಾಯನಿಕ ರಹಿತವಾದ ಪ್ರಯೋಗ ನಡೆಯುತ್ತಿದೆ. ರಾಸಾಯನಿಕ ರಹಿತವಾದ ಅಧ್ಯಯನ ಪ್ರಾರಂಭವಾಗಿದೆ. ಈ ಫಲಿತಾಂಶ ಬರಲು ಸಮಯ ಇದೆ, ಪ್ರಾರಂಭದ ಹಂತದಲ್ಲಿ ಈ ಪ್ರಯೋಗ ಇದೆ. ಮುಂದಿನ ದಿನಗಳಲ್ಲಿ ಕೃಷಿಕರಿಗೆ ಸಿಗಬಹುದು ಎಂದು ಡಾ.ಮಧು ಹೇಳಿದರು.
ಅನಗತ್ಯವಾಗಿ ರಾಸಾಯನಿಕ ಸಿಂಪಡಣೆ ಮಾಡುವುದು ಕಡಿಮೆ ಮಾಡಬೇಕಿದೆ. ವಿಷ ಸಿಂಪಡಣೆಯಿಂದ ಇತರ ಕೀಟಗಳೂ ನಾಶವಾಗುತ್ತದೆ. ಅನೇಕ ಕೀಟಗಳು ನಮಗೆ ಮಿತ್ರವಾಗಿರುತ್ತದೆ. ವಾತಾವರಣ ಶುದ್ಧತೆ ಹೆಚ್ಚಾಗಬೇಕು, ಆಗ ಆಹಾರ ಸರಪಳಿಯೂ ಬೆಳೆಯುತ್ತದೆ. ವಿಷ ಸಿಂಪಡಣೆಯ ಕಾರಣದಿಂದ ಗೊತ್ತಿಲ್ಲದೇ ಯಾವುದೋ ಒಂದು ಜಾತಿಯ ಕೀಟ ನಾಶವಾಗುತ್ತದೆ. ಟಾರ್ಗೆಟ್ ಕೀಟದ ಜೊತೆ ಇನ್ನೊಂದು ಕೀಟವೂ ನಾಶವಾಗುತ್ತದೆ.
ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಭಾಗಗಳಲ್ಲಿ ಮಧ್ಯಾಹ್ನ ನಂತರ ಗುಡುಗು-ಮಿಂಚು ಸಹಿತ ಸಾಧಾರಣ…
ಕರ್ನಾಟಕದ ಹಲವೆಡೆ ಪೂರ್ವ ಮುಂಗಾರು ಮಳೆ ಮುಂದುವರಿದಿದ್ದು, ಕರಾವಳಿಯಲ್ಲಿ ಮೇ 20ರಿಂದ ಮುಂಗಾರು…
ಮೇ 26ರಂದು ಕೇರಳಕ್ಕೆ ಮುಂಗಾರು ಪ್ರವೇಶಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ…
ಚಾಲಿ ಅಡಿಕೆ ಧಾರಣೆ ಮೇ ತಿಂಗಳಲ್ಲಿ ಇಳಿಕೆಯಾಗುತ್ತಿರುವುದು ರೈತರ ಆತಂಕಕ್ಕೆ ಕಾರಣವಾಗಿದೆ. ಬರ್ಮಾ-ಇಂಡೋನೇಷ್ಯಾ…
ರಬ್ಬರ್ ದರವು ದೇಶದಲ್ಲಿ ದಾಖಲೆ ಮಟ್ಟ ತಲುಪಿದ್ದು, ರೈತರಿಗೆ ಲಾಭದ ನಿರೀಕ್ಷೆ ಮೂಡಿಸಿದೆ.…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೇ 19ರವರೆಗೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.…