ಅಡಿಕೆ ಬೆಳೆಗಾರರಿಗೆ ಬೀಸಿಗೆ ಕಾಲ ಕಳೆದು ಮಳೆಗಾಲದ ಆರಂಭದ ವೇಳೆ ವಿಪರೀತವಾಗಿ ಕಾಡುವ ಸಮಸ್ಯೆ ಎಳೆ ಅಡಿಕೆ ಬೀಳುವುದು. ಇದಕ್ಕೆ ಬಹುಪಾಲು ಕಾರಣ ಪೆಂತಿ ಕೀಟ. ಇದೀಗ ಈ ಕೀಟಿ ನಿಯಂತ್ರಣಕ್ಕೆ ರಾಸಾಯನಿಕ ರಹಿತವಾಗಿ ನಿಯಂತ್ರಣ ಮಾಡುವ ಅಧ್ಯಯನವನ್ನು ಸಿಪಿಸಿಆರ್ಐ ವಿಜ್ಞಾನಿಗಳು ಆರಂಭಿಸಿದ್ದಾರೆ.
ಪುತ್ತೂರಿನ ಬಲ್ನಾಡಿನ ಕೃಷಿಕ ಸುರೇಶ್ ಭಟ್ ಅವರ ಕೃಷಿ ಭೂಮಿಯಲ್ಲಿ ಸಿಪಿಸಿಆರ್ ಐ ವತಿಯಿಂದ ನಡೆದ ಸಂವಾದ ಕಾರ್ಯಕ್ರಮದಲ್ಲಿ ವಿಜ್ಞಾನಿ ಡಾ.ಮಧು ಅವರು ಮಾಹಿತಿ ನೀಡಿದರು. ಅಡಿಕೆ ಬೀಳುವುದಕ್ಕೆ ಮುಖ್ಯವಾದ ಕಾರಣ ಪೆಂತಿ ಕೀಟ. ಹೆಚ್ಚಾಗಿ ಈ ಕೀಟವು ಅಲಸಂಡೆಯಲ್ಲಿರುತ್ತದೆ, ತಾತ್ಕಾಲಿಕವಾಗಿ ಅಡಿಕೆ ಹಿಂಗಾರಕ್ಕೆ ಬರುತ್ತದೆ. ಈ ಸಂದರ್ಭದಲ್ಲಿ ಕೀಟವು ಅಡಿಕೆ ರಸ ಹೀರುವ ಕಾರಣದಿಂದ ಅಡಿಕೆ ಬೀಳುತ್ತದೆ. ಸದ್ಯ ರಾಸಾಯನಿಕ ಮಾತ್ರವೇ ಪರಿಹಾರವಾಗಿದೆ. ಹೆಚ್ಚುರಾಸಾಯನಿಕ ಸಿಂಪಡಣೆ ಮಾಡುವುದು ಕೃಷಿ ಬೆಳವಣಿಗೆ ದೃಷ್ಟಿಯಿಂದ ಹಾನಿಕಾರಕವಾದ ಕಾರಣ ಇದೀಗ ರಾಸಾಯನಿಕ ರಹಿತವಾದ ಪ್ರಯೋಗ ನಡೆಯುತ್ತಿದೆ. ರಾಸಾಯನಿಕ ರಹಿತವಾದ ಅಧ್ಯಯನ ಪ್ರಾರಂಭವಾಗಿದೆ. ಈ ಫಲಿತಾಂಶ ಬರಲು ಸಮಯ ಇದೆ, ಪ್ರಾರಂಭದ ಹಂತದಲ್ಲಿ ಈ ಪ್ರಯೋಗ ಇದೆ. ಮುಂದಿನ ದಿನಗಳಲ್ಲಿ ಕೃಷಿಕರಿಗೆ ಸಿಗಬಹುದು ಎಂದು ಡಾ.ಮಧು ಹೇಳಿದರು.
ಅನಗತ್ಯವಾಗಿ ರಾಸಾಯನಿಕ ಸಿಂಪಡಣೆ ಮಾಡುವುದು ಕಡಿಮೆ ಮಾಡಬೇಕಿದೆ. ವಿಷ ಸಿಂಪಡಣೆಯಿಂದ ಇತರ ಕೀಟಗಳೂ ನಾಶವಾಗುತ್ತದೆ. ಅನೇಕ ಕೀಟಗಳು ನಮಗೆ ಮಿತ್ರವಾಗಿರುತ್ತದೆ. ವಾತಾವರಣ ಶುದ್ಧತೆ ಹೆಚ್ಚಾಗಬೇಕು, ಆಗ ಆಹಾರ ಸರಪಳಿಯೂ ಬೆಳೆಯುತ್ತದೆ. ವಿಷ ಸಿಂಪಡಣೆಯ ಕಾರಣದಿಂದ ಗೊತ್ತಿಲ್ಲದೇ ಯಾವುದೋ ಒಂದು ಜಾತಿಯ ಕೀಟ ನಾಶವಾಗುತ್ತದೆ. ಟಾರ್ಗೆಟ್ ಕೀಟದ ಜೊತೆ ಇನ್ನೊಂದು ಕೀಟವೂ ನಾಶವಾಗುತ್ತದೆ.
ಈಗಿನಂತೆ ಮೇ 22ರ ಅಂದಾಜು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗುವ ಲಕ್ಷಣಗಳಿವೆ.
''ವಿಶ್ವದ ಅಭಿವೃದ್ಧಿ ಹೊಂದಿದ ದೇಶಗಳು ಇದೀಗ ಭಾರತದೊಂದಿಗೆ(India) ಚಲನಶೀಲತೆ ಒಪ್ಪಂದಗಳನ್ನು(Mobility Agreement) ಮಾಡಿಕೊಳ್ಳಲು…
ಬರದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ವರುಣ(Rain) ತಂಪೆರೆದಿದ್ದಾನೆ. ರೈತರ(Farmer) ಮೊಗದಲ್ಲಿ ಮಂದಹಾಸ ಮೂಡಿದೆ.…
ಏನೇ ಆಗಲಿ ಸತ್ಯದ ಹುಡುಕಾಟ ಮಾತ್ರ ನಿರಂತರವಾಗಿರಲಿ...... ಸತ್ಯದಲ್ಲಿಯೂ ಹಲವಾರು ಆಯಾಮಗಳಿವೆ.
ಮುಕೇಶ್ ಅಂಬಾನಿ(Mukesh Ambani), ರಿಲಯನ್ಸ್ ಇಂಡಸ್ಟ್ರೀಸ್(Reliance Industries) ಮುಖ್ಯಸ್ಥ, ನಮ್ಮ ದೇಶ ಮತ್ತು…
ರಾಜ್ಯದಲ್ಲಿ ಬರಗಾಲ(Drought) ತಾಂಡವವಾಡುತ್ತಿದೆ. ಕೆಲವೆಡೆ ಕಳೆದ ದಿನಗಳಿಂದ ಮಳೆಯಾಗುತ್ತಿದೆ(Rain). ಉತ್ತರ ಕರ್ನಾಟಕ ಹಾಗೂ…