Advertisement
ಸುದ್ದಿಗಳು

ಎಳೆ ಅಡಿಕೆ ಬೀಳುವ ಸಮಸ್ಯೆ | ಪೆಂತಿ ಕೀಟದ ಹಾವಳಿ | ರಾಸಾಯನಿಕ ರಹಿತ ಪರಿಹಾರದ ಅಧ್ಯಯನ ಪ್ರಾರಂಭಗೊಳಿಸಿದ ವಿಜ್ಞಾನಿಗಳು |

Share

ಅಡಿಕೆ ಬೆಳೆಗಾರರಿಗೆ ಬೀಸಿಗೆ ಕಾಲ ಕಳೆದು ಮಳೆಗಾಲದ ಆರಂಭದ ವೇಳೆ ವಿಪರೀತವಾಗಿ ಕಾಡುವ ಸಮಸ್ಯೆ ಎಳೆ ಅಡಿಕೆ ಬೀಳುವುದು. ಇದಕ್ಕೆ ಬಹುಪಾಲು ಕಾರಣ ಪೆಂತಿ ಕೀಟ. ಇದೀಗ ಈ ಕೀಟಿ ನಿಯಂತ್ರಣಕ್ಕೆ ರಾಸಾಯನಿಕ ರಹಿತವಾಗಿ ನಿಯಂತ್ರಣ ಮಾಡುವ ಅಧ್ಯಯನವನ್ನು ಸಿಪಿಸಿಆರ್‌ಐ ವಿಜ್ಞಾನಿಗಳು ಆರಂಭಿಸಿದ್ದಾರೆ.

Advertisement

ಪುತ್ತೂರಿನ ಬಲ್ನಾಡಿನ ಕೃಷಿಕ ಸುರೇಶ್‌ ಭಟ್‌ ಅವರ ಕೃಷಿ ಭೂಮಿಯಲ್ಲಿ ಸಿಪಿಸಿಆರ್‌ ಐ ವತಿಯಿಂದ ನಡೆದ ಸಂವಾದ ಕಾರ್ಯಕ್ರಮದಲ್ಲಿ ವಿಜ್ಞಾನಿ ಡಾ.ಮಧು ಅವರು ಮಾಹಿತಿ ನೀಡಿದರು. ಅಡಿಕೆ ಬೀಳುವುದಕ್ಕೆ ಮುಖ್ಯವಾದ ಕಾರಣ ಪೆಂತಿ ಕೀಟ. ಹೆಚ್ಚಾಗಿ ಈ ಕೀಟವು ಅಲಸಂಡೆಯಲ್ಲಿರುತ್ತದೆ, ತಾತ್ಕಾಲಿಕವಾಗಿ ಅಡಿಕೆ ಹಿಂಗಾರಕ್ಕೆ ಬರುತ್ತದೆ. ಈ ಸಂದರ್ಭದಲ್ಲಿ ಕೀಟವು ಅಡಿಕೆ ರಸ ಹೀರುವ ಕಾರಣದಿಂದ ಅಡಿಕೆ ಬೀಳುತ್ತದೆ. ಸದ್ಯ ರಾಸಾಯನಿಕ ಮಾತ್ರವೇ ಪರಿಹಾರವಾಗಿದೆ. ಹೆಚ್ಚುರಾಸಾಯನಿಕ ಸಿಂಪಡಣೆ ಮಾಡುವುದು  ಕೃಷಿ ಬೆಳವಣಿಗೆ ದೃಷ್ಟಿಯಿಂದ ಹಾನಿಕಾರಕವಾದ ಕಾರಣ ಇದೀಗ ರಾಸಾಯನಿಕ ರಹಿತವಾದ ಪ್ರಯೋಗ ನಡೆಯುತ್ತಿದೆ. ರಾಸಾಯನಿಕ ರಹಿತವಾದ ಅಧ್ಯಯನ ಪ್ರಾರಂಭವಾಗಿದೆ. ಈ ಫಲಿತಾಂಶ ಬರಲು ಸಮಯ ಇದೆ, ಪ್ರಾರಂಭದ ಹಂತದಲ್ಲಿ ಈ ಪ್ರಯೋಗ ಇದೆ. ಮುಂದಿನ ದಿನಗಳಲ್ಲಿ ಕೃಷಿಕರಿಗೆ  ಸಿಗಬಹುದು ಎಂದು ಡಾ.ಮಧು ಹೇಳಿದರು.

ಅನಗತ್ಯವಾಗಿ ರಾಸಾಯನಿಕ ಸಿಂಪಡಣೆ ಮಾಡುವುದು ಕಡಿಮೆ ಮಾಡಬೇಕಿದೆ. ವಿಷ  ಸಿಂಪಡಣೆಯಿಂದ ಇತರ ಕೀಟಗಳೂ ನಾಶವಾಗುತ್ತದೆ. ಅನೇಕ ಕೀಟಗಳು ನಮಗೆ ಮಿತ್ರವಾಗಿರುತ್ತದೆ. ವಾತಾವರಣ ಶುದ್ಧತೆ ಹೆಚ್ಚಾಗಬೇಕು, ಆಗ ಆಹಾರ ಸರಪಳಿಯೂ ಬೆಳೆಯುತ್ತದೆ. ವಿಷ ಸಿಂಪಡಣೆಯ ಕಾರಣದಿಂದ ಗೊತ್ತಿಲ್ಲದೇ ಯಾವುದೋ ಒಂದು ಜಾತಿಯ ಕೀಟ ನಾಶವಾಗುತ್ತದೆ. ಟಾರ್ಗೆಟ್‌ ಕೀಟದ ಜೊತೆ ಇನ್ನೊಂದು ಕೀಟವೂ ನಾಶವಾಗುತ್ತದೆ.

ನಿಮ್ಮ ಅಭಿಪ್ರಾಯಗಳಿಗೆ :
ನಿಮ್ಮ ಅಭಿಪ್ರಾಯಗಳಿಗೆ :

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 22-04-2026 | ಎ.25ರಿಂದ ಮತ್ತೆ ಮಳೆ – ಯಾವ ಭಾಗಕ್ಕೆ ಏನು ಮುನ್ಸೂಚನೆ?

ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…

5 hours ago

ಹವಾಮಾನ ವರದಿ | 21-04-2026 | ಕರಾವಳಿ-ಮಲೆನಾಡಿನಲ್ಲಿ ಮಳೆ ಜೋರಾಗಲಿದೆ, ಉತ್ತರ ಒಳನಾಡಿಗೂ ಗುಡುಗು ಮಳೆ..!

ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…

1 day ago

ವಿದ್ಯುತ್ ದರ ಶಾಕ್..! ಸಣ್ಣ ಕೈಗಾರಿಕೆಗಳಿಗೆ ಭಾರೀ ಹೊರೆ – ಉಮಾ ರೆಡ್ಡಿ ಎಚ್ಚರಿಕೆ

ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…

1 day ago

ಮುಳಬಾಗಿಲಿನಲ್ಲಿ ಹೋಟೆಲ್ ಮೇಲೆ ದಾಳಿ : 30 ಲೀಟರ್ ಹಳೆಯ ತುಪ್ಪ ಜಪ್ತಿ, ದಂಡ

ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…

1 day ago

ರೈತರಿಗೆ ಗುಡ್ ನ್ಯೂಸ್..! ತೊಗರಿ ಖರೀದಿ ಅವಧಿ ಮೇ 15ರವರೆಗೆ ವಿಸ್ತರಣೆ

ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…

1 day ago

ವಿಜಯಪುರದಲ್ಲಿ ತಾಪಮಾನ ಹೆಚ್ಚಳ : ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ AC ವಾರ್ಡ್ ಸಿದ್ಧ

ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…

1 day ago