ಅಡಿಕೆ ಬೆಳೆಗಾರರಿಗೆ ಬೀಸಿಗೆ ಕಾಲ ಕಳೆದು ಮಳೆಗಾಲದ ಆರಂಭದ ವೇಳೆ ವಿಪರೀತವಾಗಿ ಕಾಡುವ ಸಮಸ್ಯೆ ಎಳೆ ಅಡಿಕೆ ಬೀಳುವುದು. ಇದಕ್ಕೆ ಬಹುಪಾಲು ಕಾರಣ ಪೆಂತಿ ಕೀಟ. ಇದೀಗ ಈ ಕೀಟಿ ನಿಯಂತ್ರಣಕ್ಕೆ ರಾಸಾಯನಿಕ ರಹಿತವಾಗಿ ನಿಯಂತ್ರಣ ಮಾಡುವ ಅಧ್ಯಯನವನ್ನು ಸಿಪಿಸಿಆರ್ಐ ವಿಜ್ಞಾನಿಗಳು ಆರಂಭಿಸಿದ್ದಾರೆ.
ಪುತ್ತೂರಿನ ಬಲ್ನಾಡಿನ ಕೃಷಿಕ ಸುರೇಶ್ ಭಟ್ ಅವರ ಕೃಷಿ ಭೂಮಿಯಲ್ಲಿ ಸಿಪಿಸಿಆರ್ ಐ ವತಿಯಿಂದ ನಡೆದ ಸಂವಾದ ಕಾರ್ಯಕ್ರಮದಲ್ಲಿ ವಿಜ್ಞಾನಿ ಡಾ.ಮಧು ಅವರು ಮಾಹಿತಿ ನೀಡಿದರು. ಅಡಿಕೆ ಬೀಳುವುದಕ್ಕೆ ಮುಖ್ಯವಾದ ಕಾರಣ ಪೆಂತಿ ಕೀಟ. ಹೆಚ್ಚಾಗಿ ಈ ಕೀಟವು ಅಲಸಂಡೆಯಲ್ಲಿರುತ್ತದೆ, ತಾತ್ಕಾಲಿಕವಾಗಿ ಅಡಿಕೆ ಹಿಂಗಾರಕ್ಕೆ ಬರುತ್ತದೆ. ಈ ಸಂದರ್ಭದಲ್ಲಿ ಕೀಟವು ಅಡಿಕೆ ರಸ ಹೀರುವ ಕಾರಣದಿಂದ ಅಡಿಕೆ ಬೀಳುತ್ತದೆ. ಸದ್ಯ ರಾಸಾಯನಿಕ ಮಾತ್ರವೇ ಪರಿಹಾರವಾಗಿದೆ. ಹೆಚ್ಚುರಾಸಾಯನಿಕ ಸಿಂಪಡಣೆ ಮಾಡುವುದು ಕೃಷಿ ಬೆಳವಣಿಗೆ ದೃಷ್ಟಿಯಿಂದ ಹಾನಿಕಾರಕವಾದ ಕಾರಣ ಇದೀಗ ರಾಸಾಯನಿಕ ರಹಿತವಾದ ಪ್ರಯೋಗ ನಡೆಯುತ್ತಿದೆ. ರಾಸಾಯನಿಕ ರಹಿತವಾದ ಅಧ್ಯಯನ ಪ್ರಾರಂಭವಾಗಿದೆ. ಈ ಫಲಿತಾಂಶ ಬರಲು ಸಮಯ ಇದೆ, ಪ್ರಾರಂಭದ ಹಂತದಲ್ಲಿ ಈ ಪ್ರಯೋಗ ಇದೆ. ಮುಂದಿನ ದಿನಗಳಲ್ಲಿ ಕೃಷಿಕರಿಗೆ ಸಿಗಬಹುದು ಎಂದು ಡಾ.ಮಧು ಹೇಳಿದರು.
ಅನಗತ್ಯವಾಗಿ ರಾಸಾಯನಿಕ ಸಿಂಪಡಣೆ ಮಾಡುವುದು ಕಡಿಮೆ ಮಾಡಬೇಕಿದೆ. ವಿಷ ಸಿಂಪಡಣೆಯಿಂದ ಇತರ ಕೀಟಗಳೂ ನಾಶವಾಗುತ್ತದೆ. ಅನೇಕ ಕೀಟಗಳು ನಮಗೆ ಮಿತ್ರವಾಗಿರುತ್ತದೆ. ವಾತಾವರಣ ಶುದ್ಧತೆ ಹೆಚ್ಚಾಗಬೇಕು, ಆಗ ಆಹಾರ ಸರಪಳಿಯೂ ಬೆಳೆಯುತ್ತದೆ. ವಿಷ ಸಿಂಪಡಣೆಯ ಕಾರಣದಿಂದ ಗೊತ್ತಿಲ್ಲದೇ ಯಾವುದೋ ಒಂದು ಜಾತಿಯ ಕೀಟ ನಾಶವಾಗುತ್ತದೆ. ಟಾರ್ಗೆಟ್ ಕೀಟದ ಜೊತೆ ಇನ್ನೊಂದು ಕೀಟವೂ ನಾಶವಾಗುತ್ತದೆ.
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…