ಅಡಿಕೆಯಲ್ಲಿ ಸಸ್ಯ ಆರೋಗ್ಯ ನಿರ್ವಹಣೆ | ಮಾ.7 ರಂದು ಪುತ್ತೂರಿನಲ್ಲಿ ಮಾಹಿತಿ ಕಾರ್ಯಾಗಾರ |

March 5, 2023
11:42 AM

ಅಡಿಕೆ ಧಾರಣೆ ಏರಿಕೆ,ಅಡಿಕೆ ಬೆಳೆ ವಿಸ್ತಾರವಾಗುತ್ತಿರುವ ನಡುವೆಯೇ ಅಡಿಕೆ ಬೆಳೆಯ ಮೇಲಿನ ಕಾಳಜಿಯೂ ಹೆಚ್ಚಾಗುತ್ತಿದೆ. ಇದೀಗ ಅಡಿಕೆಯಲ್ಲಿ ಸಸ್ಯ ಆರೋಗ್ಯ ನಿರ್ವಹಣೆಯ ಬಗ್ಗೆ ಮಾಹಿತಿ ಕಾರ್ಯಾಗಾರ, ಸಂವಾದ ಕಾರ್ಯಕ್ರಮ ಮಾ.7 ರಂದು ಪುತ್ತೂರಿನ ಬಲ್ನಾಡಿನಲ್ಲಿ ಹಮ್ಮಿಕೊಳ್ಳಲಾಗಿದೆ. ಅಡಿಕೆಯ ಬಗ್ಗೆ ಸಮಗ್ರ ಮಾಹಿತಿ ಕಾರ್ಯಕ್ರಮವೂ ನಡೆಯಲಿದೆ.

Advertisement
Advertisement

Advertisement

ಮಾ.7 ರಂದು ಪುತ್ತೂರಿನ ಬಲ್ನಾಡಿನ ಪ್ರಗತಿಪರ ಕೃಷಿಕ ಸುರೇಶ್‌ ಬಲ್ನಾಡು ಅವರ ಕೃಷಿ ತೋಟದಲ್ಲಿ ನಡೆಯುವ ಕಾರ್ಯಕ್ರಮವು ಬೆಳಗ್ಗೆ 10 ಗಂಟೆಗೆ ಉದ್ಘಾಟನೆಗೊಳ್ಳಲಿದೆ. ಪಿಂಗಾರ ಸಂಸ್ಥೆ ಅಧ್ಯಕ್ಷ ರಾಮ ಕಿಶೋರ್‌ ಮಂಚಿ ಕಾರ್ಯಕ್ರಮ ಉದ್ಘಾಟಿಸುವರು. ಸಭಾಧ್ಯಕ್ಷತೆಯನ್ನು  ಸಿಪಿಸಿಆರ್‌ಐ ಕಾಸರಗೋಡು ಇಲ್ಲಿನ ಬೆಳೆ ಸಂರಕ್ಷಣಾ ವಿಭಾಗದ ಮುಖ್ಯಸ್ಥ ಡಾ.ವಿನಾಯಕ ಹೆಗಡೆ ಸಭಾಧ್ಯಕ್ಷತೆ ವಹಿಸುವರು. ಅತಿಥಿಗಳಾಗಿ ಬಲ್ನಾಡು ಗ್ರಾಪಂ ಅಧ್ಯಕ್ಷೆ ಇಂದಿರಾ ಎಸ್‌ ರೈ, ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಅಧ್ಯಕ್ಷ ಅಶೋಕ ಕಿನಿಲ ಭಾಗವಹಿಸುವರು. ಕೃಷಿಕ ಸುರೇಶ್‌ ಬಲ್ನಾಡು ಉಪಸ್ಥಿತರಿರುವರು.

ಕಾರ್ಯಕ್ರಮ ಉದ್ಘಾಟನೆ ಬಳಿಕ ಅಡಿಕೆ ಕೃಷಿಯಲ್ಲಿ ಪೋಷಕಾಂಶ ನಿರ್ವಹಣೆ, ಎಲೆಚುಕ್ಕಿ ರೋಗ, ಹಿಂಗಾರ ಒಣಗುವ ರೋಗ ಮತ್ತಿತರ ರೋಗ ಪತ್ತೆ ಹಾಗೂ ನಿರ್ವಹಣೆ, ಕೀಟಗಳ ನಿರ್ವಹಣೆ,  ರೈತ ಉತ್ಪಾದಕ ಸಂಸ್ಥೆಯ ಸಾಧ್ಯತೆ, ಕೃಷಿಕಾನುಭವ ಸೇರಿದಂತೆ ವಿವಿಧ ಮಾಹಿತಿ ಇರಲಿದೆ. ಆ ಬಳಿಕ ಸಂವಾದ ಕಾರ್ಯಕ್ರಮ ನಡೆಯಲಿದೆ.

Advertisement

ವಿಟ್ಲ ಸಿಪಿಸಿಆರ್‌ಐ ಹಾಗೂ ಅಡಿಕೆ ಮತ್ತು ಸಾಂಬಾರ ಬೆಳೆಗಳ ಅಭಿವೃದ್ಧಿ ನಿರ್ದೇಶನಾಲಯ ಇವುಗಳ ಸಂಯುಕ್ತ ಆಶ್ರಯದಲ್ಲಿ  ಈ ಕಾರ್ಯಕ್ರಮ ಆಯೋಜನೆಗೊಂಡಿದೆ.

Advertisement
Advertisement
Advertisement

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಶಿಶಿಲದಲ್ಲಿರುವ ಈ ದೈವದ ವಿಶೇಷತೆ..! | ಜೋಡಿ ದೈವಗಳಿಗೆ ಜೀವಂತ ಕೋಳಿ ಅರ್ಪಣೆ |
May 14, 2024
9:32 PM
by: ದ ರೂರಲ್ ಮಿರರ್.ಕಾಂ
ಕೋವಿ ಡಿಪಾಸಿಟ್‌ ಪ್ರಕರಣ | ಮಹತ್ವದ ತೀರ್ಪು | ಚುನಾವಣಾ ಕಾಲದಲ್ಲಿ ಕೋವಿ ಡಿಪಾಸಿಟ್‌ಗೆ ಪರಿಹಾರ |
May 14, 2024
8:28 PM
by: ದ ರೂರಲ್ ಮಿರರ್.ಕಾಂ
ಬಹುಬೆಳೆ ಬೆಳೆದು ಉತ್ತಮ ಫಸಲು ಪಡೆದ ರೈತ | ಕೃಷಿಗೆ ರೈತ ಅನುಸರಿಸಿದ ಕ್ರಮಗಳಾವುವು..?
May 14, 2024
12:42 PM
by: The Rural Mirror ಸುದ್ದಿಜಾಲ
ಸ್ಟ್ರೀಟ್ ಫುಡ್ ವರ್ಸಸ್ ಆರೋಗ್ಯ | ನಿಮ್ಮ ಆರೋಗ್ಯವನ್ನು ನೀವೇ ಕಾಪಾಡಿಕೊಳ್ಳಿ
May 14, 2024
12:08 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror