ಅಡಿಕೆ ಬೆಳೆಗಾರರಿಗೆ ಎಚ್ಚರಿಕೆಯ ಸಂದೇಶ | ಅಡಿಕೆ ಬೆಳೆಯುವ ಪ್ರದೇಶಗಳ ಮಣ್ಣಿನ ಫಲವತ್ತತೆ ಕುಸಿತ | ಸೂಕ್ಷ್ಮ ಪೋಷಕಾಂಶಗಳ ಕೊರತೆ | 42 ಗ್ರಾಮಗಳ ಅಡಿಕೆ ತೋಟಗಳ ಅಧ್ಯಯನ ವರದಿ |

March 7, 2023
8:00 AM

ಅಡಿಕೆ ಧಾರಣೆ ಈಗ ಉತ್ತಮವಾಗಿದೆ. ಹೀಗಾಗಿ ಅಡಿಕೆ ಬೆಳೆ ವಿಸ್ತರಣೆ ವೇಗದಲ್ಲಿ ಸಾಗುತ್ತಿದೆ. ಇದೇ ವೇಳೆ ಹಲವು ಸಮಸ್ಯೆಗಳೂ ಕಾಡಲು ಆರಂಭಿಸಿದೆ. ಇದೀಗ ಹೊಸದಾಗಿ ನಡೆಸಿದ ಅಧ್ಯಯನದಲ್ಲಿ ಸಾಂಪ್ರದಾಯಿಕವಾಗಿ ಅಡಿಕೆ ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಫಲವತ್ತತೆ ಕಡಿಮೆಯಾಗಿರುವುದು ಬೆಳಕಿಗೆ ಬಂದಿದೆ. ಈ ಬಗ್ಗೆ ನಡೆಸಿದ ಅಧ್ಯಯನವು ಅಂತರಾಷ್ಟ್ರೀಯ ಜರ್ನಲ್‌ನಲ್ಲಿ ಪ್ರಕಟವಾಗಿದೆ.

ಕರ್ನಾಟಕದ ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ, ಶಿವಮೊಗ್ಗ ಸೇರಿದಂತೆ ವಿವಿದೆಡೆ ಹಲವು ವರ್ಷಗಳಿಂದ ಅಡಿಕೆ ಬೆಳೆಯಲಾಗುತ್ತಿದೆ. ಇದು ಸಾಂಪ್ರದಾಯಿಕ ಅಡಿಕೆ ಬೆಳೆಯುವ ಪ್ರದೇಶ. ಈ ಪ್ರದೇಶಗಳಲ್ಲಿ ಮಣ್ಣಿನ ಫಲವತ್ತತೆಯ ಬಗ್ಗೆ ತಂಡವು ಅಧ್ಯಯನ ನಡೆಸಿದೆ. ಇಲ್ಲಿ ಉತ್ತರ ಕನ್ನಡ ಜಿಲ್ಲೆಯ ಶಿರಸಿ ಹೋಬಳಿಯಲ್ಲಿ ಅಡಿಕೆ ಬೆಳೆಯುವ ಪ್ರದೇಶಗಳ ಮಣ್ಣಿನ ಫಲವತ್ತತೆಯನ್ನು ಪರಿಶೀಲನೆ ಮಾಡಲಾಗಿತ್ತು. ಶಿರಸಿ ತಾಲೂಕು ಸಾಂಪ್ರದಾಯಿಕ ಅಡಕೆ ಬೆಳೆಯುವ ಪ್ರದೇಶವಾಗಿದೆ. ಈಚೆಗೆ ಕಡಿಮೆ ಉತ್ಪಾದಕತೆಯ ಸಮಸ್ಯೆ ಕಂಡುಬಂದಿತ್ತು. ಈ ಎಲ್ಲಾ ಕಾರಣಗಳಿಂದ ಉತ್ತರ ಕನ್ನಡ ಜಿಲ್ಲೆಯ ಶಿರಸಿ ಹೋಬಳಿಯ 42 ಗ್ರಾಮಗಳ ಅಡಿಕೆ ತೋಟಗಳಿಂದ 150 ಮೇಲ್ಮೈ ಮಣ್ಣಿನ ಮಾದರಿಗಳನ್ನು ಸಂಗ್ರಹಿಸಲಾಗಿತ್ತು ಮತ್ತು ಮಣ್ಣಿನ ರಾಸಾಯನಿಕ ಗುಣಗಳ ಬಗ್ಗೆ ವಿಶ್ಲೇಷಿಸಲಾಗಿತ್ತು. ಇದರಲ್ಲಿ ಅಚ್ಚರಿಯ ಫಲಿತಾಂಶ ಲಭಿಸಿದೆ. ಫಲವತ್ತತೆಯ ಸ್ಥಿತಿಯು ಕಡಿಮೆಯಾಗಿದ್ದು, ಮಣ್ಣು ಸ್ವಲ್ಪ ಆಮ್ಲೀಯದಿಂದ ತಟಸ್ಥವಾಗಿರುವುದು ಬೆಳಕಿಗೆ ಬಂದಿದೆ. ಎನ್‌ ಪಿ ಕೆ ಮಟ್ಟದಲ್ಲೂ ವ್ಯತ್ಯಾಸ ಕಂಡು ಬಂದಿದೆ. ಸೂಕ್ಷ್ಮ ಪೋಷಕಾಂಶಗಳಿಗೆ ಸಂಬಂಧಿಸಿದಂತೆ, ಮಣ್ಣಿನಲ್ಲಿ Zn (28%) ಕೊರತೆಯಿದೆ ಮತ್ತು ಲಭ್ಯವಿರುವ ‌Cu, mn ಕೊರತೆ ಇದ್ದರೆ ಇತರ ಸೂಕ್ಷ್ಮ ಪೋಷಕಾಂಶಗಳಲ್ಲಿ ಸದ್ಯ ಸಾಕಾಗುವ ಮಟ್ಟದಲ್ಲಿತ್ತು.

Advertisement

ಒಟ್ಟಾರೆ ಅಧ್ಯಯನದ ಪ್ರದೇಶವು ಲಭ್ಯವಿರುವ ಗೊಬ್ಬರದಲ್ಲಿ ನೈಟ್ರೋಜನ್‌ ಕಳಪೆಯಾಗಿದೆ ಮತ್ತು ಲಭ್ಯವಿರುವ ಝಿಂಕ್‌ ಕೊರತೆಯಿದೆ ಎಂದು ಸೂಚಿಸುತ್ತದೆ ಎಂದು ವರದಿ ಹೇಳಿದೆ.

Advertisement

ಅಡಿಕೆ ಬೆಳೆಗಾರರು ಅನೇಕ ವರ್ಷಗಳ ಬಳಿಕ ಮಣ್ಣಿನಲ್ಲಿ ಸೂಕ್ಷ್ಮ ಪೋಷಕಾಂಶಗಳ ಕೊರತೆಯ ಬಗ್ಗೆ ಚರ್ಚಿಸುವಂತೆ ಹಾಗೂ ಚಿಂತಿಸುವಂತೆ ಮಾಡಿದೆ. ಈಚೆಗೆ ರಾಸಾಯನಿಕ ಬಳಕೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಈಗ ಮಣ್ಣಿನಲ್ಲಿ ಪೋಷಕಾಂಶಗಳ ಕೊರತೆ ಕಾಣುತ್ತಿದೆ.

ಈಚೆಗೆ ಅಡಿಕೆ ಬೆಳೆಗೆ ಕಾಡುವ ವಿವಿಧ ರೋಗಗಳಿಗೂ ಸೂಕ್ಷ್ಮ ಪೋಷಕಾಂಶಗಳ ಕೊರತೆ ಹಾಗೂ ಮಣ್ಣಿನ ರಸಸಾರ ಕಡಿಮೆಯಾಗಿರುವುದೇ ಕಾರಣವೇ ಎಂಬ ಜಿಜ್ಞಾಸೆ ಈಗ ಆರಂಭವಾಗಿದೆ. ಹಲವಾರು ವರ್ಷಗಳಿಂದಲೂ ಅಡಿಕೆ ಬೆಳೆಯುವ ಪ್ರದೇಶಗಳಲ್ಲಿ ಈಚೆಗೆ ಸೂಕ್ಷ್ಮ ಪೋಷಕಾಂಶಗಳ ಕೊರತೆ ಹಾಗೂ ಹೆಚ್ಚಾಗಿರುವ ಫಾಸ್ಪರಸ್‌ ಕೂಡಾ ಗಿಡ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿರುವುದು ಕಂಡುಬಂದಿದೆ. ಈ ಎಲ್ಲಾ ಕಾರಣಗಳಿಂದ ಈ ಅಧ್ಯಯನವು ಅಡಿಕೆ ಬೆಳೆಗಾರರು ಚಿಂತಿಸುವಂತೆ ಮಾಡಿದೆ. ಈಚೆಗೆ ಕಂಡುಬಂದಿರುವ ರೋಗಗಳೂ, ವೈರಸ್‌ ದಾಳಿಗಳೂ ಅನೇಕ ವರ್ಷಗಳಿಂದಲೂ ಅಡಿಕೆ ಬೆಳೆಯುವ ಪ್ರದೇಶಗಳಲ್ಲಿ ಹಾಗೂ ಬಹುಪಾಲು ಮಲೆನಾಡು ತಪ್ಪಲು ಭಾಗ ಹಾಗೂ ಮಲೆನಾಡು ಭಾಗಗಳಲ್ಲಿಯೇ ಕಂಡುಬಂದಿರುವುದು ಕೂಡಾ ಗಮನಾರ್ಹವಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಕನಿಷ್ಠ ಆಮದು ಬೆಲೆ (MIP) ಪರಿಷ್ಕರಣೆ – ರೈತರ ಹಿತಾಸಕ್ತಿಗೆ ಕೇಂದ್ರ ಸರ್ಕಾರದ ತ್ವರಿತ ನೀತಿ ನಿರ್ಧಾರ ಅನಿವಾರ್ಯ
June 25, 2026
8:41 PM
by: ಅರುಣ್‌ ಕುಮಾರ್ ಕಾಂಚೋಡು
ಮುಂಗಾರು ಬೆಳೆ ವಿಮೆ ನೋಂದಣಿಗೆ ಆಗಸ್ಟ್‌ 14 ಕೊನೆಯ ದಿನ – ಭತ್ತ ಬೆಳೆಗಾರರು ತಪ್ಪದೇ ಹೆಸರು ನೋಂದಾಯಿಸಿ
June 25, 2026
8:17 PM
by: ದ ರೂರಲ್ ಮಿರರ್.ಕಾಂ
ಎಲ್ ನಿನೋ ಎಚ್ಚರಿಕೆ – ದೇಶದಲ್ಲಿ 43% ಮಳೆ ಕೊರತೆ, ಕರ್ನಾಟಕ ಸೇರಿ 12 ರಾಜ್ಯಗಳ 315 ಜಿಲ್ಲೆಗಳಿಗೆ ಕೇಂದ್ರದ ವಿಶೇಷ ಕೃಷಿ ಯೋಜನೆ
June 25, 2026
7:34 AM
by: ದ ರೂರಲ್ ಮಿರರ್.ಕಾಂ
ತೆಂಗು ಬೆಳೆಗೂ ಏರಿದ ಉತ್ಪಾದನಾ ವೆಚ್ಚ, ರೈತರು ಸಂಕಷ್ಟದಲ್ಲಿ – ತಮಿಳುನಾಡಿನಲ್ಲಿ ತೆಂಗು ಬೆಳೆಗಾರರಿಗೆ ಕಾರ್ಮಿಕರ ಕೊರತೆ
June 24, 2026
10:16 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror