Advertisement
MIRROR FOCUS

ಅಡಿಕೆ ಭವಿಷ್ಯ | ಅಡಿಕೆ ಮಾತ್ರ ಅಲ್ಲ-ಮಿಶ್ರ ಬೆಳೆಯ ಕಡೆಗೆ ಆದ್ಯತೆ | ಮೇಘಾಲಯದಲ್ಲಿ ಆರಂಭವಾಗಿದೆ ಸರ್ಕಾರದಿಂದಲೇ ಅಭಿಯಾನ |

Share

ಕೃಷಿಕರ  ಭವಿಷ್ಯದ ದೃಷ್ಟಿಯಿಂದ ಅಡಿಕೆ ಬೆಳೆ ಮಾತ್ರಾ ಅಲ್ಲ, ಅದರ ಜೊತೆಗೆ ಸಮಗ್ರ ಕೃಷಿಯ ಅಗತ್ಯವಿದೆ ಎಂಬುದನ್ನು ಮೇಘಾಲಯ ಸರ್ಕಾರ ರೈತರಿಗೆ ತಿಳಿಸುತ್ತಿದೆ. ಇದಕ್ಕಾಗಿ ಸರ್ಕಾರದ ಮಿಷನ್ ಫಾರ್ ಇಂಟಿಗ್ರೇಟೆಡ್ ಡೆವಲಪ್‌ಮೆಂಟ್ ಆಫ್ ಹಾರ್ಟಿಕಲ್ಚರ್ (ಎಂಐಡಿಹೆಚ್) ಅಡಿಯಲ್ಲಿ ಸಮಗ್ರ ಕೃಷಿಯ ಕಡೆಗೆ ಆದ್ಯತೆ ನೀಡುವ ಯೋಜನೆಗಳನ್ನು ಹಾಕಿಕೊಂಡಿದೆ. 

ಏಕ ಬೆಳೆ ಯಾವತ್ತೂ ರೈತರ ಭವಿಷ್ಯದ ದೃಷ್ಟಿಯಿಂದ ಅಪಾಯಕಾರಿಯಾಗಿದೆ. ಇದೀಗ ಮೇಘಾಲಯ ಸರ್ಕಾರವು ಅಡಿಕೆಯನ್ನು ಕೇಂದ್ರೀಕರಿಸಿಕೊಂಡು ಅಡಿಕೆಯ ಭವಿಷ್ಯನ್ನೂ ಗಮನದಲ್ಲಿರಿಸಿಕೊಂಡು ರೈತರನ್ನು ಜಾಗೃತಗೊಳಿಸುತ್ತಿದೆ. ಈಗ ಅಡಿಕೆಗಾಗಿಯೇ ಮಿಷನ್ ಫಾರ್ ಇಂಟಿಗ್ರೇಟೆಡ್ ಡೆವಲಪ್‌ಮೆಂಟ್ ಆಫ್ ಹಾರ್ಟಿಕಲ್ಚರ್ (ಎಂಐಡಿಹೆಚ್) ಅಡಿಯಲ್ಲಿ ಇನ್ನು ಮುಂದೆ ಅಡಿಕೆಯ ಪರ್ಯಾಯದತ್ತ ಹೆಜ್ಜೆ ಇರಿಸಿದೆ.  ರೈತರಲ್ಲಿ ಸಮಗ್ರ ಕೃಷಿ ಅಥವಾ ಮಿಶ್ರ ಬೆಳೆಯನ್ನು ಉತ್ತೇಜಿಸಲು ಗಮನ ನೀಡಿದೆ. ಇದು ಹೆಚ್ಚಿದ ಕೃಷಿ ಉತ್ಪನ್ನಗಳೊಂದಿಗೆ ಇತರರಿಗೆ ಉದ್ಯೋಗಾವಕಾಶಗಳನ್ನು ಸೃಷ್ಟಿಸುತ್ತದೆ ಮತ್ತು ಉದ್ಯಮಶೀಲತೆಯ ವಿವಿಧ ಸಾಧ್ಯತೆಗಳನ್ನು ಸೃಷ್ಟಿಸಿ  ಹಳ್ಳಿಗಳನ್ನು ಸ್ವಾವಲಂಬಿಯನ್ನಾಗಿ ಮಾಡುವುದು ಯೋಜನೆಯ ಉದ್ದೇಶ.

ಅಡಿಕೆಯ ಬಗ್ಗೆ ಮಾತನಾಡಿದ ಮೇಘಾಲಯದ ವೆಸ್ಟ್ ಗಾರೋ ಹಿಲ್ಸ್  ಜಿಲ್ಲಾಧಿಕಾರಿ ರಾಮ್ ಸಿಂಗ್, ಅಡಿಕೆ ತೋಟವು ಆರಂಭದಲ್ಲಿ ಉತ್ತಮ ಆದಾಯವನ್ನು ನೀಡಿದರೂ ಸಹ ಸುಸ್ಥಿರವಾಗಿಲ್ಲ ಎಂದು ಹೇಳಿದ್ದಾರೆ. ಅಡಿಕೆ ತೋಟದ ಹೆಚ್ಚಳವು ಅರಣ್ಯ ಪ್ರದೇಶವನ್ನು ಕಡಿಮೆ ಮಾಡುತ್ತದೆ, ಅದರಲ್ಲೂ ವಿಶೇಷವಾಗಿ ನೀರಿನ ಮೂಲಗಳ ಸುತ್ತಮುತ್ತಲಿನ ಪ್ರದೇಶಗಳನ್ನು ಕಡಿಮೆ ಮಾಡುತ್ತದೆ . ಇದರ  ಪರಿಣಾಮವಾಗಿ ನೀರಿನ ಕೊರತೆ ಭವಿಷ್ಯದಲ್ಲಿ ಕಾಡಬಹುದು  ಎಂದು ಅವರು ಹೇಳಿದ್ದಾರೆ. ಹೀಗಾಗಿ ಈ ಬಗ್ಗೆ ಜಾಗೃತಿ ಅಗತ್ಯ ಎಂದು ರೈತರನ್ನು ಎಚ್ಚರಿಸಿದ್ದಾರೆ. ತೋಟಗಾರಿಕೆಯು ಪರಿಸರದ ಸಂರಕ್ಷಣೆಯನ್ನು ಗಮನದಲ್ಲಿಟ್ಟುಕೊಂಡು  ಸುಸ್ಥಿರತೆಗಾಗಿ ಕೃಷಿ ಮತ್ತು ಪಶುಸಂಗೋಪನೆ ಸೇರಿದಂತೆ ಸಂಬಂಧಿತ ವಲಯಗಳೊಂದಿಗೆ ಸಮಗ್ರ ಕೃಷಿಯ ಅಗತ್ಯವಿದೆ ಎಂದು ಹೇಳಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

Published by
ವಿಶೇಷ ಪ್ರತಿನಿಧಿ

Recent Posts

ಅಡಿಕೆ ಒಡೆದು ಉದುರುತ್ತಿದೆಯೇ..? ಕಾರಣ ಕೇವಲ ಬೋರಾನ್ ಕೊರತೆ ಅಷ್ಟೇ ಅಲ್ಲ- ಕೀಟವೂ ಇರಬಹುದು ಎನ್ನುತ್ತಾರೆ ವಿಜ್ಞಾನಿಗಳು

ಅಡಿಕೆ ಒಡೆದು ಬೀಳುವ ಸಮಸ್ಯೆಗೆ ಬೋರಾನ್ ಕೊರತೆ ಮಾತ್ರವಲ್ಲ, ಪೆರಿಯಾಂತ್ ಮೈಟ್ ಕೀಟದ…

7 hours ago

ಎಲ್ ನಿನೋ ಅಧಿಕೃತವಾಗಿ ಆರಂಭ – ಕರಾವಳಿ ಕರ್ನಾಟಕದ ಮಳೆ ಮೇಲೆ ಪರಿಣಾಮ ಬೀಳುತ್ತಾ? ಹವಾಮಾನ ಇಲಾಖೆ ನಿಗಾ

ಭಾರತೀಯ ಹವಾಮಾನ ಇಲಾಖೆ ಎಲ್ ನಿನೋ ಆರಂಭಗೊಂಡಿರುವುದನ್ನು ಅಧಿಕೃತವಾಗಿ ದೃಢಪಡಿಸಿದೆ. ಕರಾವಳಿ ಕರ್ನಾಟಕದಲ್ಲಿ…

7 hours ago

ಬರಗಾಲದಿಂದ ಹೆಚ್ಚಾಗಬಹುದು ಆ್ಯಂಟಿಬಯೋಟಿಕ್ ಪ್ರತಿರೋಧ..! ಹೊಸ ಸಂಶೋಧನೆಯ ಎಚ್ಚರಿಕೆ

ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…

21 hours ago

ಜೇನುನೊಣಗಳ ಅಳಿವು ಕೃಷಿಗೂ, ಆಹಾರ ಭದ್ರತೆಗೂ ದೊಡ್ಡ ಅಪಾಯ – ತಜ್ಞರ ಎಚ್ಚರಿಕೆ

ಜೇನುನೊಣಗಳ ಸಂಖ್ಯೆ ಕುಸಿಯುತ್ತಿರುವುದು ಕೃಷಿ ಉತ್ಪಾದನೆ, ಆಹಾರ ಭದ್ರತೆ ಮತ್ತು ಪರಿಸರ ಸಮತೋಲನಕ್ಕೆ…

21 hours ago

ಒಂದು ಹಕ್ಕಿಯ ಫೋಟೋಗಾಗಿ 7 ತಿಂಗಳು ಕಾಯ್ದ ವ್ಯಕ್ತಿ..!, 60ನೇ ಹುಟ್ಟುಹಬ್ಬವನ್ನೂ ವಿಭಿನ್ನವಾಗಿ ಆಚರಿಸಿದರು..!

ವಿಟ್ಲದ ಆರ್‌. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…

1 day ago

₹1.11 ಕೋಟಿ ಮೌಲ್ಯದ ಕಳಪೆ ಗುಣಮಟ್ಟದ ಅಡಿಕೆ ವಶಕ್ಕೆ – ಮಹಾರಾಷ್ಟ್ರದ ಕೋಲ್ಡ್ ಸ್ಟೋರೇಜ್‌ನಲ್ಲೂ ಕಳಪೆ ಅಡಿಕೆ ದಾಸ್ತಾನು..!

ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…

1 day ago