Advertisement
MIRROR FOCUS

ಅಡಿಕೆ ಭವಿಷ್ಯ | ಅಡಿಕೆ ಮಾತ್ರ ಅಲ್ಲ-ಮಿಶ್ರ ಬೆಳೆಯ ಕಡೆಗೆ ಆದ್ಯತೆ | ಮೇಘಾಲಯದಲ್ಲಿ ಆರಂಭವಾಗಿದೆ ಸರ್ಕಾರದಿಂದಲೇ ಅಭಿಯಾನ |

Share

ಕೃಷಿಕರ  ಭವಿಷ್ಯದ ದೃಷ್ಟಿಯಿಂದ ಅಡಿಕೆ ಬೆಳೆ ಮಾತ್ರಾ ಅಲ್ಲ, ಅದರ ಜೊತೆಗೆ ಸಮಗ್ರ ಕೃಷಿಯ ಅಗತ್ಯವಿದೆ ಎಂಬುದನ್ನು ಮೇಘಾಲಯ ಸರ್ಕಾರ ರೈತರಿಗೆ ತಿಳಿಸುತ್ತಿದೆ. ಇದಕ್ಕಾಗಿ ಸರ್ಕಾರದ ಮಿಷನ್ ಫಾರ್ ಇಂಟಿಗ್ರೇಟೆಡ್ ಡೆವಲಪ್‌ಮೆಂಟ್ ಆಫ್ ಹಾರ್ಟಿಕಲ್ಚರ್ (ಎಂಐಡಿಹೆಚ್) ಅಡಿಯಲ್ಲಿ ಸಮಗ್ರ ಕೃಷಿಯ ಕಡೆಗೆ ಆದ್ಯತೆ ನೀಡುವ ಯೋಜನೆಗಳನ್ನು ಹಾಕಿಕೊಂಡಿದೆ. 

ಏಕ ಬೆಳೆ ಯಾವತ್ತೂ ರೈತರ ಭವಿಷ್ಯದ ದೃಷ್ಟಿಯಿಂದ ಅಪಾಯಕಾರಿಯಾಗಿದೆ. ಇದೀಗ ಮೇಘಾಲಯ ಸರ್ಕಾರವು ಅಡಿಕೆಯನ್ನು ಕೇಂದ್ರೀಕರಿಸಿಕೊಂಡು ಅಡಿಕೆಯ ಭವಿಷ್ಯನ್ನೂ ಗಮನದಲ್ಲಿರಿಸಿಕೊಂಡು ರೈತರನ್ನು ಜಾಗೃತಗೊಳಿಸುತ್ತಿದೆ. ಈಗ ಅಡಿಕೆಗಾಗಿಯೇ ಮಿಷನ್ ಫಾರ್ ಇಂಟಿಗ್ರೇಟೆಡ್ ಡೆವಲಪ್‌ಮೆಂಟ್ ಆಫ್ ಹಾರ್ಟಿಕಲ್ಚರ್ (ಎಂಐಡಿಹೆಚ್) ಅಡಿಯಲ್ಲಿ ಇನ್ನು ಮುಂದೆ ಅಡಿಕೆಯ ಪರ್ಯಾಯದತ್ತ ಹೆಜ್ಜೆ ಇರಿಸಿದೆ.  ರೈತರಲ್ಲಿ ಸಮಗ್ರ ಕೃಷಿ ಅಥವಾ ಮಿಶ್ರ ಬೆಳೆಯನ್ನು ಉತ್ತೇಜಿಸಲು ಗಮನ ನೀಡಿದೆ. ಇದು ಹೆಚ್ಚಿದ ಕೃಷಿ ಉತ್ಪನ್ನಗಳೊಂದಿಗೆ ಇತರರಿಗೆ ಉದ್ಯೋಗಾವಕಾಶಗಳನ್ನು ಸೃಷ್ಟಿಸುತ್ತದೆ ಮತ್ತು ಉದ್ಯಮಶೀಲತೆಯ ವಿವಿಧ ಸಾಧ್ಯತೆಗಳನ್ನು ಸೃಷ್ಟಿಸಿ  ಹಳ್ಳಿಗಳನ್ನು ಸ್ವಾವಲಂಬಿಯನ್ನಾಗಿ ಮಾಡುವುದು ಯೋಜನೆಯ ಉದ್ದೇಶ.

ಅಡಿಕೆಯ ಬಗ್ಗೆ ಮಾತನಾಡಿದ ಮೇಘಾಲಯದ ವೆಸ್ಟ್ ಗಾರೋ ಹಿಲ್ಸ್  ಜಿಲ್ಲಾಧಿಕಾರಿ ರಾಮ್ ಸಿಂಗ್, ಅಡಿಕೆ ತೋಟವು ಆರಂಭದಲ್ಲಿ ಉತ್ತಮ ಆದಾಯವನ್ನು ನೀಡಿದರೂ ಸಹ ಸುಸ್ಥಿರವಾಗಿಲ್ಲ ಎಂದು ಹೇಳಿದ್ದಾರೆ. ಅಡಿಕೆ ತೋಟದ ಹೆಚ್ಚಳವು ಅರಣ್ಯ ಪ್ರದೇಶವನ್ನು ಕಡಿಮೆ ಮಾಡುತ್ತದೆ, ಅದರಲ್ಲೂ ವಿಶೇಷವಾಗಿ ನೀರಿನ ಮೂಲಗಳ ಸುತ್ತಮುತ್ತಲಿನ ಪ್ರದೇಶಗಳನ್ನು ಕಡಿಮೆ ಮಾಡುತ್ತದೆ . ಇದರ  ಪರಿಣಾಮವಾಗಿ ನೀರಿನ ಕೊರತೆ ಭವಿಷ್ಯದಲ್ಲಿ ಕಾಡಬಹುದು  ಎಂದು ಅವರು ಹೇಳಿದ್ದಾರೆ. ಹೀಗಾಗಿ ಈ ಬಗ್ಗೆ ಜಾಗೃತಿ ಅಗತ್ಯ ಎಂದು ರೈತರನ್ನು ಎಚ್ಚರಿಸಿದ್ದಾರೆ. ತೋಟಗಾರಿಕೆಯು ಪರಿಸರದ ಸಂರಕ್ಷಣೆಯನ್ನು ಗಮನದಲ್ಲಿಟ್ಟುಕೊಂಡು  ಸುಸ್ಥಿರತೆಗಾಗಿ ಕೃಷಿ ಮತ್ತು ಪಶುಸಂಗೋಪನೆ ಸೇರಿದಂತೆ ಸಂಬಂಧಿತ ವಲಯಗಳೊಂದಿಗೆ ಸಮಗ್ರ ಕೃಷಿಯ ಅಗತ್ಯವಿದೆ ಎಂದು ಹೇಳಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

Published by
ವಿಶೇಷ ಪ್ರತಿನಿಧಿ

Recent Posts

ಬೇವಿನ ಬೀಜದಿಂದ ಆದಾಯದ ಅವಕಾಶ ! ಚಿಕ್ಕಮಗಳೂರಿನ ಯುವ ರೈತನ ಸಕ್ಸಸ್ ಸ್ಟೋರಿ

ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…

2 days ago

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು : ಭಾರತದ ಕೃಷಿಗೆ ಎದುರಾಗುತ್ತಿರುವ ಸವಾಲು

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…

2 days ago

ಯಾದಗಿರಿಯಲ್ಲಿ ಬಿಸಿಗಾಳಿ ಎಚ್ಚರಿಕೆ – ‘ಯೆಲ್ಲೋ ಅಲರ್ಟ್’ ಘೋಷಣೆ, ಮುನ್ನೆಚ್ಚರಿಕೆ ಪಾಲಿಸಿ..!

ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…

2 days ago

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ದಾಖಲೆ: ಕಲಬುರಗಿ ಯುವ ರೈತನಿಗೆ ರಾಜ್ಯದ ಮೆಚ್ಚುಗೆ!

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…

3 days ago

2026 ಮುಂಗಾರು ಮುನ್ಸೂಚನೆ – ಕೇರಳಕ್ಕೆ ನಿರೀಕ್ಷೆಗಿಂತ ಮುನ್ನವೇ ಆಗಮನ? – ಮಳೆ ಕಡಿಮೆಯಾಗುವ ಸಾಧ್ಯತೆ- ಕೃಷಿಗೆ ದೊಡ್ಡ ಸವಾಲು

2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…

3 days ago

ಈರುಳ್ಳಿಯಲ್ಲಿ ಇಳುವರಿ ಹೆಚ್ಚಿಸುವ ರಹಸ್ಯ..! ಜೇನುನೊಣಗಳ ಪರಾಗಸ್ಪರ್ಶದಿಂದ ಡಬಲ್ ಲಾಭ

ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…

3 days ago