ಕೃಷಿಕರ ಭವಿಷ್ಯದ ದೃಷ್ಟಿಯಿಂದ ಅಡಿಕೆ ಬೆಳೆ ಮಾತ್ರಾ ಅಲ್ಲ, ಅದರ ಜೊತೆಗೆ ಸಮಗ್ರ ಕೃಷಿಯ ಅಗತ್ಯವಿದೆ ಎಂಬುದನ್ನು ಮೇಘಾಲಯ ಸರ್ಕಾರ ರೈತರಿಗೆ ತಿಳಿಸುತ್ತಿದೆ. ಇದಕ್ಕಾಗಿ ಸರ್ಕಾರದ ಮಿಷನ್ ಫಾರ್ ಇಂಟಿಗ್ರೇಟೆಡ್ ಡೆವಲಪ್ಮೆಂಟ್ ಆಫ್ ಹಾರ್ಟಿಕಲ್ಚರ್ (ಎಂಐಡಿಹೆಚ್) ಅಡಿಯಲ್ಲಿ ಸಮಗ್ರ ಕೃಷಿಯ ಕಡೆಗೆ ಆದ್ಯತೆ ನೀಡುವ ಯೋಜನೆಗಳನ್ನು ಹಾಕಿಕೊಂಡಿದೆ.
ಏಕ ಬೆಳೆ ಯಾವತ್ತೂ ರೈತರ ಭವಿಷ್ಯದ ದೃಷ್ಟಿಯಿಂದ ಅಪಾಯಕಾರಿಯಾಗಿದೆ. ಇದೀಗ ಮೇಘಾಲಯ ಸರ್ಕಾರವು ಅಡಿಕೆಯನ್ನು ಕೇಂದ್ರೀಕರಿಸಿಕೊಂಡು ಅಡಿಕೆಯ ಭವಿಷ್ಯನ್ನೂ ಗಮನದಲ್ಲಿರಿಸಿಕೊಂಡು ರೈತರನ್ನು ಜಾಗೃತಗೊಳಿಸುತ್ತಿದೆ. ಈಗ ಅಡಿಕೆಗಾಗಿಯೇ ಮಿಷನ್ ಫಾರ್ ಇಂಟಿಗ್ರೇಟೆಡ್ ಡೆವಲಪ್ಮೆಂಟ್ ಆಫ್ ಹಾರ್ಟಿಕಲ್ಚರ್ (ಎಂಐಡಿಹೆಚ್) ಅಡಿಯಲ್ಲಿ ಇನ್ನು ಮುಂದೆ ಅಡಿಕೆಯ ಪರ್ಯಾಯದತ್ತ ಹೆಜ್ಜೆ ಇರಿಸಿದೆ. ರೈತರಲ್ಲಿ ಸಮಗ್ರ ಕೃಷಿ ಅಥವಾ ಮಿಶ್ರ ಬೆಳೆಯನ್ನು ಉತ್ತೇಜಿಸಲು ಗಮನ ನೀಡಿದೆ. ಇದು ಹೆಚ್ಚಿದ ಕೃಷಿ ಉತ್ಪನ್ನಗಳೊಂದಿಗೆ ಇತರರಿಗೆ ಉದ್ಯೋಗಾವಕಾಶಗಳನ್ನು ಸೃಷ್ಟಿಸುತ್ತದೆ ಮತ್ತು ಉದ್ಯಮಶೀಲತೆಯ ವಿವಿಧ ಸಾಧ್ಯತೆಗಳನ್ನು ಸೃಷ್ಟಿಸಿ ಹಳ್ಳಿಗಳನ್ನು ಸ್ವಾವಲಂಬಿಯನ್ನಾಗಿ ಮಾಡುವುದು ಯೋಜನೆಯ ಉದ್ದೇಶ.
ಅಡಿಕೆಯ ಬಗ್ಗೆ ಮಾತನಾಡಿದ ಮೇಘಾಲಯದ ವೆಸ್ಟ್ ಗಾರೋ ಹಿಲ್ಸ್ ಜಿಲ್ಲಾಧಿಕಾರಿ ರಾಮ್ ಸಿಂಗ್, ಅಡಿಕೆ ತೋಟವು ಆರಂಭದಲ್ಲಿ ಉತ್ತಮ ಆದಾಯವನ್ನು ನೀಡಿದರೂ ಸಹ ಸುಸ್ಥಿರವಾಗಿಲ್ಲ ಎಂದು ಹೇಳಿದ್ದಾರೆ. ಅಡಿಕೆ ತೋಟದ ಹೆಚ್ಚಳವು ಅರಣ್ಯ ಪ್ರದೇಶವನ್ನು ಕಡಿಮೆ ಮಾಡುತ್ತದೆ, ಅದರಲ್ಲೂ ವಿಶೇಷವಾಗಿ ನೀರಿನ ಮೂಲಗಳ ಸುತ್ತಮುತ್ತಲಿನ ಪ್ರದೇಶಗಳನ್ನು ಕಡಿಮೆ ಮಾಡುತ್ತದೆ . ಇದರ ಪರಿಣಾಮವಾಗಿ ನೀರಿನ ಕೊರತೆ ಭವಿಷ್ಯದಲ್ಲಿ ಕಾಡಬಹುದು ಎಂದು ಅವರು ಹೇಳಿದ್ದಾರೆ. ಹೀಗಾಗಿ ಈ ಬಗ್ಗೆ ಜಾಗೃತಿ ಅಗತ್ಯ ಎಂದು ರೈತರನ್ನು ಎಚ್ಚರಿಸಿದ್ದಾರೆ. ತೋಟಗಾರಿಕೆಯು ಪರಿಸರದ ಸಂರಕ್ಷಣೆಯನ್ನು ಗಮನದಲ್ಲಿಟ್ಟುಕೊಂಡು ಸುಸ್ಥಿರತೆಗಾಗಿ ಕೃಷಿ ಮತ್ತು ಪಶುಸಂಗೋಪನೆ ಸೇರಿದಂತೆ ಸಂಬಂಧಿತ ವಲಯಗಳೊಂದಿಗೆ ಸಮಗ್ರ ಕೃಷಿಯ ಅಗತ್ಯವಿದೆ ಎಂದು ಹೇಳಿದ್ದಾರೆ.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…