Advertisement
MIRROR FOCUS

ಅಡಿಕೆ ಭವಿಷ್ಯ | ಅಡಿಕೆ ಮಾತ್ರ ಅಲ್ಲ-ಮಿಶ್ರ ಬೆಳೆಯ ಕಡೆಗೆ ಆದ್ಯತೆ | ಮೇಘಾಲಯದಲ್ಲಿ ಆರಂಭವಾಗಿದೆ ಸರ್ಕಾರದಿಂದಲೇ ಅಭಿಯಾನ |

Share

ಕೃಷಿಕರ  ಭವಿಷ್ಯದ ದೃಷ್ಟಿಯಿಂದ ಅಡಿಕೆ ಬೆಳೆ ಮಾತ್ರಾ ಅಲ್ಲ, ಅದರ ಜೊತೆಗೆ ಸಮಗ್ರ ಕೃಷಿಯ ಅಗತ್ಯವಿದೆ ಎಂಬುದನ್ನು ಮೇಘಾಲಯ ಸರ್ಕಾರ ರೈತರಿಗೆ ತಿಳಿಸುತ್ತಿದೆ. ಇದಕ್ಕಾಗಿ ಸರ್ಕಾರದ ಮಿಷನ್ ಫಾರ್ ಇಂಟಿಗ್ರೇಟೆಡ್ ಡೆವಲಪ್‌ಮೆಂಟ್ ಆಫ್ ಹಾರ್ಟಿಕಲ್ಚರ್ (ಎಂಐಡಿಹೆಚ್) ಅಡಿಯಲ್ಲಿ ಸಮಗ್ರ ಕೃಷಿಯ ಕಡೆಗೆ ಆದ್ಯತೆ ನೀಡುವ ಯೋಜನೆಗಳನ್ನು ಹಾಕಿಕೊಂಡಿದೆ. 

ಏಕ ಬೆಳೆ ಯಾವತ್ತೂ ರೈತರ ಭವಿಷ್ಯದ ದೃಷ್ಟಿಯಿಂದ ಅಪಾಯಕಾರಿಯಾಗಿದೆ. ಇದೀಗ ಮೇಘಾಲಯ ಸರ್ಕಾರವು ಅಡಿಕೆಯನ್ನು ಕೇಂದ್ರೀಕರಿಸಿಕೊಂಡು ಅಡಿಕೆಯ ಭವಿಷ್ಯನ್ನೂ ಗಮನದಲ್ಲಿರಿಸಿಕೊಂಡು ರೈತರನ್ನು ಜಾಗೃತಗೊಳಿಸುತ್ತಿದೆ. ಈಗ ಅಡಿಕೆಗಾಗಿಯೇ ಮಿಷನ್ ಫಾರ್ ಇಂಟಿಗ್ರೇಟೆಡ್ ಡೆವಲಪ್‌ಮೆಂಟ್ ಆಫ್ ಹಾರ್ಟಿಕಲ್ಚರ್ (ಎಂಐಡಿಹೆಚ್) ಅಡಿಯಲ್ಲಿ ಇನ್ನು ಮುಂದೆ ಅಡಿಕೆಯ ಪರ್ಯಾಯದತ್ತ ಹೆಜ್ಜೆ ಇರಿಸಿದೆ.  ರೈತರಲ್ಲಿ ಸಮಗ್ರ ಕೃಷಿ ಅಥವಾ ಮಿಶ್ರ ಬೆಳೆಯನ್ನು ಉತ್ತೇಜಿಸಲು ಗಮನ ನೀಡಿದೆ. ಇದು ಹೆಚ್ಚಿದ ಕೃಷಿ ಉತ್ಪನ್ನಗಳೊಂದಿಗೆ ಇತರರಿಗೆ ಉದ್ಯೋಗಾವಕಾಶಗಳನ್ನು ಸೃಷ್ಟಿಸುತ್ತದೆ ಮತ್ತು ಉದ್ಯಮಶೀಲತೆಯ ವಿವಿಧ ಸಾಧ್ಯತೆಗಳನ್ನು ಸೃಷ್ಟಿಸಿ  ಹಳ್ಳಿಗಳನ್ನು ಸ್ವಾವಲಂಬಿಯನ್ನಾಗಿ ಮಾಡುವುದು ಯೋಜನೆಯ ಉದ್ದೇಶ.

ಅಡಿಕೆಯ ಬಗ್ಗೆ ಮಾತನಾಡಿದ ಮೇಘಾಲಯದ ವೆಸ್ಟ್ ಗಾರೋ ಹಿಲ್ಸ್  ಜಿಲ್ಲಾಧಿಕಾರಿ ರಾಮ್ ಸಿಂಗ್, ಅಡಿಕೆ ತೋಟವು ಆರಂಭದಲ್ಲಿ ಉತ್ತಮ ಆದಾಯವನ್ನು ನೀಡಿದರೂ ಸಹ ಸುಸ್ಥಿರವಾಗಿಲ್ಲ ಎಂದು ಹೇಳಿದ್ದಾರೆ. ಅಡಿಕೆ ತೋಟದ ಹೆಚ್ಚಳವು ಅರಣ್ಯ ಪ್ರದೇಶವನ್ನು ಕಡಿಮೆ ಮಾಡುತ್ತದೆ, ಅದರಲ್ಲೂ ವಿಶೇಷವಾಗಿ ನೀರಿನ ಮೂಲಗಳ ಸುತ್ತಮುತ್ತಲಿನ ಪ್ರದೇಶಗಳನ್ನು ಕಡಿಮೆ ಮಾಡುತ್ತದೆ . ಇದರ  ಪರಿಣಾಮವಾಗಿ ನೀರಿನ ಕೊರತೆ ಭವಿಷ್ಯದಲ್ಲಿ ಕಾಡಬಹುದು  ಎಂದು ಅವರು ಹೇಳಿದ್ದಾರೆ. ಹೀಗಾಗಿ ಈ ಬಗ್ಗೆ ಜಾಗೃತಿ ಅಗತ್ಯ ಎಂದು ರೈತರನ್ನು ಎಚ್ಚರಿಸಿದ್ದಾರೆ. ತೋಟಗಾರಿಕೆಯು ಪರಿಸರದ ಸಂರಕ್ಷಣೆಯನ್ನು ಗಮನದಲ್ಲಿಟ್ಟುಕೊಂಡು  ಸುಸ್ಥಿರತೆಗಾಗಿ ಕೃಷಿ ಮತ್ತು ಪಶುಸಂಗೋಪನೆ ಸೇರಿದಂತೆ ಸಂಬಂಧಿತ ವಲಯಗಳೊಂದಿಗೆ ಸಮಗ್ರ ಕೃಷಿಯ ಅಗತ್ಯವಿದೆ ಎಂದು ಹೇಳಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

Published by
ವಿಶೇಷ ಪ್ರತಿನಿಧಿ

Recent Posts

ಹವಾಮಾನ ವರದಿ | 18-08-2026 | ಕರಾವಳಿಯಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ – ಮಲೆನಾಡಿನಲ್ಲಿ ಆಗಸ್ಟ್ 21 ರಿಂದ ಇಳಿಕೆ

ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…

14 hours ago

ಬೆಳಗಾವಿಯಲ್ಲಿ ಮಳೆ ಕೊರತೆಯ ಆತಂಕ ದೂರ ; ಜುಲೈ ಮಳೆಯಿಂದ ಕೃಷಿ ಚಟುವಟಿಕೆಗೆ ಚುರುಕು

ಜೂನ್‌ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…

23 hours ago

‘ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ’ ನಕಲಿ ಸುದ್ದಿ : ಸಾರ್ವಜನಿಕರಿಗೆ ಕೇಂದ್ರ ಸಚಿವರಿಂದ ಮಾಹಿತಿ

ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…

23 hours ago

ಆಗಸ್ಟ್ 28 ರೊಳಗೆ ಸರ್ಕಾರಿ ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ವಿತರಣೆ: ಸಚಿವ ಮಧು ಬಂಗಾರಪ್ಪ

ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…

23 hours ago

ರಾಜ್ಯಾದ್ಯಂತ ಆಹಾರ ಸುರಕ್ಷತೆ ಪರಿಶೀಲನೆಗೆ ದಾಳಿ ಮುಂದುವರಿಕೆ : ಉಲ್ಲಂಘನೆಗೆ ಕ್ಷಮೆಯಿಲ್ಲ ಎಂದ ಆರೋಗ್ಯ ಸಚಿವ

ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್‌, ಕ್ಯಾಟರಿಂಗ್ ಹಾಗೂ ಹೋಟೆಲ್‌ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…

23 hours ago

ಗೋ ಸಂರಕ್ಷಣೆಗೆ Gen Z – 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ – ಗ್ರಾಮೀಣ ಆರ್ಥಿಕತೆಗೆ ಹೊಸ ಮಾದರಿಯೇ?

ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…

1 day ago