Advertisement
Exclusive - Mirror Hunt

ಅಡಿಕೆ ಬೆಳೆ ವಿಸ್ತರಣೆಯ ಆತಂಕದ ಬದಲು ಮುಂಜಾಗ್ರತೆ ವಹಿಸಬೇಕು | ಕ್ಯಾಂಪ್ಕೋ ಮಾಜಿ ಆಡಳಿತ ನಿರ್ದೇಶಕರ ಸಲಹೆ ಏನು ?

Share
ಅಡಿಕೆ ಬೆಳೆ ವಿಸ್ತರಣೆ ಹಾಗೂ ಅಡಿಕೆ ಮಾರುಕಟ್ಟೆಯ ಬಗ್ಗೆ  ಅಡಿಕೆ ಬೆಳೆಯುವ ಪ್ರದೇಶದ ಕೃಷಿಕರಲ್ಲಿ ಆತಂಕ ಇದೆ. ಈ ನಡುವೆಯೇ ಪರ-ವಿರೋಧ ಚರ್ಚೆಗಳು ನಡೆಯುತ್ತಿದೆ. ವಾಸ್ತವದಲ್ಲಿ ಅಡಿಕೆ ಮಾರುಕಟ್ಟೆ ಹೇಗಿದೆ ? ಮುಂದೆ ಏನಾಗಬಹುದು ? ಈ ಬಗ್ಗೆ ಕ್ಯಾಂಪ್ಕೋ ಆರಂಭ ಕಾಲದಿಂದಲೂ ಕೆಲಸ ಮಾಡುತ್ತಿದ್ದು,ಅಡಿಕೆ ಬೆಳೆಯುವ ಪ್ರದೇಶ ಹಾಗೂ ಅಡಿಕೆ ಬಳಕೆಯ ಪ್ರದೇಶ, ಬೇಡಿಕೆಯ ಪ್ರದೇಶಗಳಿಗೆ ಭೇಟಿ ನೀಡಿ ಅನುಭವ ಹೊಂದಿರುವ ಕ್ಯಾಂಪ್ಕೋ ಆಡಳಿತ ನಿರ್ದೇಶಕರಾಗಿ ನಿವೃತ್ತರಾಗಿರುವ  ಎ ಎಸ್‌ ಭಟ್‌ ಅವರ ಜೊತೆ ಬೆಳೆಗಾರರ ಹಿತದೃಷ್ಟಿಯಿಂದ ನಡೆಸಿದ ಮಾತುಕತೆ ಇಲ್ಲಿದೆ.

ಅಡಿಕೆ ಮಾರುಕಟ್ಟೆ ಸ್ಥಿರೀಕರಣ ಹಾಗೂ ಬೆಳೆಗಾರರ ಹಿತದೃಷ್ಟಿಯಿಂದ ಕ್ಯಾಂಪ್ಕೋ ಸ್ಥಾಪನೆಯಾಗುವ ಸಂದರ್ಭ ಮಾಡಿದ ಸರ್ವೆ ಪ್ರಕಾರ 1.4 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ 1.5 ಲಕ್ಷ ಟನ್‌ ಅಡಿಕೆ 1972 ರಲ್ಲಿ ಉತ್ಪಾದನೆಯಾಗುತ್ತಿತ್ತು. ಆ ಕಾಲದಲ್ಲಿ ಅಡಿಕೆ ಧಾರಣೆಯು 1974 ರಲ್ಲಿ ಬಿಳಿ ಅಡಿಕೆಗೆ 3-‌4 ರೂಪಾಯಿ, ಕೆಂಪಡಿಕೆಗೆ  3 -4 ರೂಪಾಯಿ ಹಾಗೂ ಶಿವಮೊಗ್ಗದ ಹಸಕ್ಕೆ ಮಾತ್ರಾ 5-6  ರೂಪಾಯಿ ಇತ್ತು. 1964 ರಿಂದ ಅಡಿಕೆ ಆಮದು ಕೂಡಾ ಇರಲಿಲ್ಲ. 

Advertisement
Advertisement
ಎ ಎಸ್‌ ಭಟ್

ಕ್ಯಾಂಪ್ಕೋ ಸ್ಥಾಪನೆ ಬಳಿಕ ಧಾರಣೆ ಏರಿಕೆಯಾಯಿತು, ಬಳಿಕ ಅಡಿಕೆ ಬೆಳೆ ವಿಸ್ತರಣೆಯೂ ಆಯಿತು. 1990 ರಲ್ಲಿ ಹೊತ್ತಿಗೆ ಅಡಿಕೆ ಧಾರಣೆ 45 ರೂಪಾಯಿ ಆಸುಪಾಸಿಗೆ ಬಂದಿತು. ಆ ಬಳಿಕವೂ ಅಡಿಕೆ ವಿಸ್ತರಣೆ ಮುಂದುವರಿಯಿತು. ಇದೇ ವೇಳೆ ಅಡಿಕೆ ಬಳಕೆಯೂ ದೇಶದಲ್ಲಿ ಹೆಚ್ಚಾಯಿತು. ಇಲ್ಲಿಯ ಉತ್ಪಾದನೆ ಸಾಕಾಗದೆ ಆಮದು ಕೂಡಾ ನಡೆಯುತ್ತಿತ್ತು. ಈಚೆಗೂ ಅಡಿಕೆ ಆಮದು ನಡೆಯುತ್ತಿತ್ತು. ಅಂದರೆ ಅಡಿಕೆ ಮಾರುಕಟ್ಟೆ ಇದೆ, ಬೇಡಿಕೆಯೂ ಇದೆ. ಅಂದರೆ  ಕಳೆದ ಎರಡು ವರ್ಷದವರೆಗೆ ಇಲ್ಲಿನ ಅಡಿಕೆಯ ಉತ್ಪಾದನೆ ಬಳಕೆ ಆಗುತ್ತಿದೆ. ಆದರೆ ಈಗ ಅಡಿಕೆ ಧಾರಣೆ ವಿಪರೀತ ಏರಿಕೆಯ ಬಳಿಕ ಆತಂಕ ಇದೆ. ಈ ಎಲ್ಲಾ ಬೇಡಿಕೆ ಪೂರೈಕೆಯಾದರೆ ಏನು ಎಂಬ ಚಿಂತನೆ ನಡೆಸಬೇಕಿದೆ. ಹೀಗಾಗಿ ಅಡಿಕೆ ಬೆಳೆ ವಿಸ್ತರಣೆಯಲ್ಲಿ ಎಚ್ಚರಿಕೆ ಇರಲೇಬೇಕು. ಈ ಬಗ್ಗೆ  ಬೆಳೆಗಾರರಿಗೆ ಜಾಗೃತೆ ಬೇಕು, ಬೆಳೆಗಾರನೇ ಈ ಬಗ್ಗೆ ಯೋಚಿಸಬೇಕು. ಯಾವತ್ತೂ ಬೆಳೆ ವಿಸ್ತರಣೆ, ಬೆಳೆ ಬೆಳೆದರೆ ಸಾಲದು ಮಾರುಕಟ್ಟೆಯನ್ನೂ ಗಮನಿಸಬೇಕು. ಬೇಕಾಬಿಟ್ಟಿಯಾಗಿ ಈ ಧಾರಣೆ ಇದೆ ಎಂದು ಬೆಳೆದರೆ ಸಂಕಷ್ಟ ನಿಶ್ಚಿತವೇ ಆಗಿದೆ. ಇದಕ್ಕಾಗಿ ಅಡಿಕೆ ಬೆಳೆಯ ಸರ್ವೆ ಹಾಗೂ ಬಳಕೆಯ ಬಗ್ಗೆ ಸರ್ವೆ ಆಗಬೇಕು. ಈ ಮೂಲಕ ಬೆಳೆಯ ಬಗ್ಗೆ ನಿಯಂತ್ರಣವೂ ಇರಬೇಕು.

Advertisement

ಅಡಿಕೆ ಸದ್ಯ ಬ್ಯಾನ್‌ ಆಗಲು ಸಾಧ್ಯವಿಲ್ಲ. ಈ ಆತಂಕ ಇರಬೇಕಾಗಿಲ್ಲ. ಹೀಗಾಗಿ ಅಡಿಕೆ ಭವಿಷ್ಯವೇ ಇಲ್ಲ ಎಂದು ಯಾವ ಬೆಳೆಗಾರರೂ ಚಿಂತಿಸಬೇಕಿಲ್ಲ. ಅಡಿಕೆ ಬ್ಯಾನ್‌ ಆಗದೇ ಇರಲು ಹಲವು ಕಾರಣಗಳು ಇವೆ. ದೇಶಗಳ ನಡುವೆ ಒಪ್ಪಂದ ಸೇರಿದಂತೆ ವಿವಿಧ ಕಾರಣಗಳು ಇರುತ್ತವೆ. ಹೀಗಾಗಿ ಏಕಾಏಕಿ ನಿಷೇಧ ಸಾಧ್ಯವಿಲ್ಲ. ಆದರೆ ಬೆಳೆ ವಿಸ್ತರಣೆ, ಧಾರಣೆ ಸ್ಥಿರತೆ, ಭವಿಷ್ಯದ ಕೃಷಿ ಇತ್ಯಾದಿಗಳ ಬಗ್ಗೆ ಬೆಳೆಗಾರ ಮುಂಜಾಗ್ರತೆ ವಹಿಸಬೇಕಾಗುತ್ತದೆ. ಈ ನಡುವೆಯೇ ಪರ್ಯಾಯ ಬೆಳೆ, ಮಿಶ್ರ ಬೆಳೆಗಳ ಕಡೆಗೂ ಕೃಷಿಕ ಯೋಚಿಸಬೇಕು. ಸರ್ಕಾರ ಪರ್ಯಾಯ ಬೆಳೆಯ ಬಗ್ಗೆ ಸರಿಯಾದ ಮಾಹಿತಿಯನ್ನೂ ನೀಡಬೇಕು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಹೇಶ್ ಪುಚ್ಚಪ್ಪಾಡಿ

ಕೃಷಿಕ ಹಾಗೂ ಕೃಷಿ ಪತ್ರಕರ್ತ | 2007 ರಿಂದ ವಿವಿಧ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ಮಾಡಿದ್ದಾರೆ. ಉಷಾಕಿರಣ, ಹೊಸದಿಗಂತ, ವಿಜಯವಾಣಿ ಹಾಗೂ ಸುವರ್ಣ ನ್ಯೂಸ್‌ ಚಾನೆಲ್‌ನಲ್ಲಿ ವರದಿಗಾರರಾಗಿ, ವಿಭಾಗ ಮುಖ್ಯಸ್ಥರಾಗಿ ಕೆಲಸ ಮಾಡಿದ್ದಾರೆ. ಗ್ರಾಮೀಣಾಭಿವೃದ್ಧಿ ಹಾಗೂ ಕೃಷಿ ಇವರ ಆಸಕ್ತಿಯ ವಿಷಯವಾಗಿದೆ.  

Published by
ಮಹೇಶ್ ಪುಚ್ಚಪ್ಪಾಡಿ

Recent Posts

ದಿಢೀರಾಗಿ ಬೆಳೆಯುವುದು , ಫಸಲು ನೀಡುವುದು ಅವಸರವೇ ಅಪಘಾತಕ್ಕೆ ಕಾರಣ | ಬೇಗ ಫಸಲು ಬಂದ ಸಸ್ಯ ಬೇಗನೇ ಸಾಯುತ್ತದೆ |

ದಶಕಗಳ ಹಿಂದೆ ವಿಮಾ ಸಂಸ್ಥೆಯೊಂದು ಸಾಗವಾನಿ ಬೆಳೆಯಲು ರೈತರ ಷೇರು ಪಡೆದುಕೊಂಡು ಹತ್ತೊ…

9 hours ago

ಮಾವು ಮಾಂತ್ರಿಕ ಹಾಗೂ ಸುಬ್ರಾಯ ಭಟ್ಟರ 200ಕ್ಕೂ ಹೆಚ್ಚು ನಾಡು ಮಾವು ಹಾಗೂ ಹಲಸು ತಳಿ ಸಂರಕ್ಷಣೆ

ನಾಡು ಮಾವು ಸಂರಕ್ಷಣೆ ಕೆಲಸದ ಮೊದಲ ದಿನವದು. ನವೆಂಬರ್ 2022. ಕಸಿ ಕಡ್ಡಿಗಳನ್ನು…

9 hours ago

ಭಾರತದಲ್ಲಿ ಏರಿದ ತಾಪಮಾನ | ಅತ್ತ ತಾಂಜೇನಿಯಾದಲ್ಲಿ ಭಾರೀ ಮಳೆ, ಪ್ರವಾಹ | 155 ಮಂದಿ ಸಾವು |

ಭಾರತದಲ್ಲಿ(India) ಉರಿ ಬಿಸಿಲಿನ ತಾಪ(Heat) ಏರುತ್ತಿದ್ದರೆ ತಾಂಜೇನಿಯಾದಲ್ಲಿ (Tanzania) ಕಳೆದ ವಾರದಿಂದ ಭಾರೀ…

13 hours ago

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ಮುಂದಿನ ವಾರ ಕಾಡಲಿದೆ ರಣ ಬಿಸಿಲು | ದೂರ ಸಾಗಿದ ಮಳೆ | ಬಿಸಿ ಗಾಳಿಯ ಮುನ್ಸೂಚನೆ |

ಮಳೆ ಬರುವ ಕುರುಹೇ ಇಲ್ಲ. ಎಲ್ಲೆಲ್ಲೂ ಬಿಸಿಗಾಳಿಯ ಅಬ್ಬರ, ನೆತ್ತಿ ಸುಡುವ ಸೂರ್ಯ. ರಾಜ್ಯಾದ್ಯಂತ…

14 hours ago

ಹವಾಮಾನ ವೈಪರೀತ್ಯ | ಕೃಷಿ ಕಾರ್ಮಿಕರಿಗೆ ಈಗ ಬಿಸಿಗಾಳಿ ಸಂಕಷ್ಟ | ಕೃಷಿಗೂ ಸಮಸ್ಯೆ-ಕೃಷಿ ಬೆಳವಣಿಗೆ ಕುಂಠಿತ |

ತಾಪಮಾನ ಏರಿಕೆಯಿಂದ ಹಲವು ಕಡೆ ಸಮಸ್ಯೆಯಾಗುತ್ತಿದೆ. ಕೃಷಿ ನಷ್ಟದ ಜೊತೆಗೆ ಗ್ರಾಮೀಣ ಭಾಗದಲ್ಲಿ…

14 hours ago

ಮಳೆಗಾಗಿ ಪುತ್ತೂರು ಶ್ರೀ‌ಮಹಾಲಿಂಗೇಶ್ವರ ದೇವಸ್ಥಾನದಲ್ಲಿ‌ಪರ್ಜನ್ಯ ಜಪ |

ಮಳೆಗಾಗಿ ಪುತ್ತೂರಿನ ಶ್ರೀ‌ಮಹಾಲಿಂಗೇಶ್ವರ ದೇವಳದಲ್ಲಿ‌ ಪರ್ಜನ್ಯ ಜ‌ಪ ನೆರವೇರಿತು.

16 hours ago