Advertisement
MIRROR FOCUS

ಭತ್ತದ ಗದ್ದೆಯಿಂದ ಅಡಿಕೆ ತೋಟ | ಮಣ್ಣಿನ ಆರೋಗ್ಯದ ಮೇಲೆ ಪರಿಣಾಮ ಬಿಚ್ಚಿಟ್ಟ ಸಂಶೋಧನೆ

Share

ಭತ್ತದ ಗದ್ದೆಗಳನ್ನು ಅಡಿಕೆ ತೋಟಗಳಾಗಿ ಪರಿವರ್ತಿಸಿದಾಗ ಮಣ್ಣಿನ ಸೂಕ್ಷ್ಮಜೀವಿಗಳ ನೈಟ್ರೋಜನ್‌ ಲಭ್ಯತೆ ಕಡಿಮೆಯಾಗುತ್ತಿದ್ದು, ಮಣ್ಣಿನ ಪೋಷಕಾಂಶ ಚಕ್ರದಲ್ಲಿ ಮಹತ್ವದ ಬದಲಾವಣೆಗಳು ಸಂಭವಿಸುತ್ತವೆ ಎಂದು ಹೊಸ ಅಂತರಾಷ್ಟ್ರೀಯ ಸಂಶೋಧನೆ ತಿಳಿಸಿದೆ.

ಇತ್ತೀಚೆಗೆ ಪ್ರಕಟವಾದ ಅಂತರಾಷ್ಟ್ರೀಯ ವೈಜ್ಞಾನಿಕ ಜರ್ನಲ್‌ “ಪ್ಲಾಂಟ್‌ & ಸಾಯಿಲ್”‌ ನಲ್ಲಿ ಪ್ರಕಟವಾದ ಸಂಶೋಧನೆಯ ಪ್ರಕಾರ,  ಗದ್ದೆಗಳನ್ನು ಅಡಿಕೆ ತೋಟಗಳಾಗಿ ಪರಿವರ್ತಿಸುವುದರಿಂದ ಮಣ್ಣಿನ ಸೂಕ್ಷ್ಮಜೀವಿಗಳ ನೈಟ್ರೋಜನ್‌ ಲಭ್ಯತೆ ಕಡಿಮೆಯಾಗುತ್ತದೆ.

ಸಂಶೋಧಕರು ವಿವಿಧ ವಯಸ್ಸಿನ (2, 5, 10, 14, 17 ವರ್ಷ) ಅಡಿಕೆ ತೋಟಗಳ ಮಣ್ಣನ್ನು ಪರಿಶೀಲಿಸಿ, ಭತ್ತದ ಗದ್ದೆಗಳೊಂದಿಗೆ ಹೋಲಿಕೆ ನಡೆಸಿದರು. ಇದರ ಮೂಲಕ ಮಣ್ಣಿನ ನೈಟ್ರೋಜನ್‌ ಉತ್ಪಾದನೆ, ಸೂಕ್ಷ್ಮಜೀವಿಗಳ ಚಟುವಟಿಕೆ ಮತ್ತು ನೈಟ್ರಸ್‌ ಆಕ್ಸೈಡ್‌ ಉತ್ಸರ್ಜನೆ ಬಗ್ಗೆ ವಿಶ್ಲೇಷಣೆ ಮಾಡಲಾಗಿದೆ.

ಸಂಶೋಧನೆಯಲ್ಲಿ ಕಂಡುಬಂದ ಪ್ರಮುಖ ಅಂಶಗಳು ಹೀಗಿದೆ..

  • ಅಡಿಕೆ ತೋಟಗಳಲ್ಲಿ ಮಣ್ಣಿನ ಸೂಕ್ಷ್ಮಜೀವಿಗಳಿಗೆ ಲಭ್ಯವಾಗುವ ನೈಟ್ರೋಜನ್‌ ಪ್ರಮಾಣ ಕಡಿಮೆಯಾಗುತ್ತದೆ.

  • ಗದ್ದೆಯಿಂದ ಅಡಿಕೆ ತೋಟಕ್ಕೆ ಪರಿವರ್ತನೆಯ ನಂತರ ನೈಟ್ರೋಜನ್‌ ಕೊರತೆ 101% ರಿಂದ 258% ವರೆಗೆ ಹೆಚ್ಚಾಗಿದೆ.

  • ತೋಟದ ವಯಸ್ಸು ಹೆಚ್ಚಾದಂತೆ ಈ ಪರಿಣಾಮ ಇನ್ನಷ್ಟು ಹೆಚ್ಚಾಗುತ್ತದೆ.

  • ಮಣ್ಣಿನ ಲಭ್ಯ ಕಾರ್ಬನ್‌ ಹಾಗೂ ನೈಟ್ರೋಜನ್‌ ಭಾಗಗಳು ಕಡಿಮೆಯಾಗುವುದರಿಂದ ಸೂಕ್ಷ್ಮಜೀವಿಗಳ ಚಟುವಟಿಕೆ ಕಡಿಮೆಯಾಗುತ್ತದೆ.

ಮತ್ತೊಂದು ಆಸಕ್ತಿದಾಯಕ ಫಲಿತಾಂಶ ಕಂಡುಬಂದಿದ್ದು, ಅಡಿಕೆ ತೋಟಗಳಲ್ಲಿ ನೈಟ್ರಸ್‌ ಆಕ್ಸೈಡ್‌ (N₂O) ಉತ್ಸರ್ಜನೆ 47.6% ರಿಂದ 54.1% ವರೆಗೆ ಕಡಿಮೆಯಾಗುತ್ತದೆ ಎಂದು ಸಂಶೋಧಕರು ಹೇಳಿದ್ದಾರೆ.

ಅದರರ್ಥ, ಮಣ್ಣಿನಲ್ಲಿ ಹಸಿರುಮನೆಯ ಅನಿಲ ಬಿಡುಗಡೆ ಕಡಿಮೆಯಾಗುವ ಸಾಧ್ಯತೆ ಇದೆ. ಆದರೆ, ಅದೇ ಸಮಯದಲ್ಲಿ ಮಣ್ಣಿನ ಪೋಷಕಾಂಶ ಚಕ್ರದಲ್ಲಿ ಕೆಲವು ಮಿತಿಗಳು ಉಂಟಾಗಬಹುದು ಎಂದು ವಿಜ್ಞಾನಿಗಳು ಸೂಚಿಸಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಹೀಗಾಗಿ ತಜ್ಞರ ಪ್ರಕಾರ, ಗದ್ದೆಗಳನ್ನು ಅಡಿಕೆ ತೋಟಗಳಾಗಿ ಪರಿವರ್ತಿಸುವುದು ಕೃಷಿ ಆರ್ಥಿಕತೆಯಲ್ಲಿ ಲಾಭದಾಯಕವಾಗಬಹುದು. ಆದರೆ ಮಣ್ಣಿನ ಪೋಷಕಾಂಶ ಚಕ್ರ ಮತ್ತು ಸೂಕ್ಷ್ಮಜೀವಿಗಳ ಚಟುವಟಿಕೆಯಲ್ಲಿ ಬದಲಾವಣೆ ಸಂಭವಿಸಬಹುದು. ಆದ್ದರಿಂದ ಮಣ್ಣಿನ ಆರೋಗ್ಯ ಕಾಪಾಡಲು ಸಾವಯವ ಪದಾರ್ಥಗಳು, ಗೊಬ್ಬರ ನಿರ್ವಹಣೆ ಮತ್ತು ಮಣ್ಣು ಪರೀಕ್ಷೆ ಬಹಳ ಮುಖ್ಯವಾಗುತ್ತದೆ ಎಂದು ಹೇಳಿದ್ದಾರೆ.

A new international study published in the journal Plant and Soil reveals that converting paddy fields into areca nut plantations can significantly increase nitrogen limitation for soil microbes. The research found that nitrogen limitation increased by 101–258% after such land-use changes, mainly due to reduced inorganic nitrogen production and microbial immobilization. Interestingly, the conversion also reduced nitrous oxide (N₂O) emissions by nearly 48–54%, indicating potential environmental benefits but also highlighting possible impacts on soil nutrient cycles.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹೆಬ್ರಿಯ ಗೋಡಂಬಿ ತ್ಯಾಜ್ಯದಿಂದ ಹಡಗುಗಳಿಗೆ ಇಂಧನ..!

ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…

4 hours ago

ಮಡಿಕೇರಿಯಲ್ಲಿ ಅಡಿಕೆ ಹಾಳೆ ತಟ್ಟೆಗೂ ನಿಷೇಧ..!

ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…

5 hours ago

ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…

22 hours ago

ಭಾರತದ ಹಸಿರು ಯೋಜನೆಗಳಿಗೆ ಜಪಾನ್‌ನ ಕಾರ್ಬನ್ ಕ್ರೆಡಿಟ್ ಅವಕಾಶ – ರೈತರೂ ಪಡೆಯಬಹುದೇ ಇದರ ಲಾಭ?

ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…

24 hours ago

ಹಿಮಾಲಯದಲ್ಲಿ ಮತ್ತೊಂದು ಅಪಾಯದ ಎಚ್ಚರಿಕೆ..!

ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…

1 day ago

ಎಲ್ ನಿನೊ ಮತ್ತಷ್ಟು ಬಲಗೊಳ್ಳುವ ಮುನ್ಸೂಚನೆ..!

2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…

1 day ago