Advertisement
MIRROR FOCUS

ಭತ್ತದ ಗದ್ದೆಯಿಂದ ಅಡಿಕೆ ತೋಟ | ಮಣ್ಣಿನ ಆರೋಗ್ಯದ ಮೇಲೆ ಪರಿಣಾಮ ಬಿಚ್ಚಿಟ್ಟ ಸಂಶೋಧನೆ

Share

ಭತ್ತದ ಗದ್ದೆಗಳನ್ನು ಅಡಿಕೆ ತೋಟಗಳಾಗಿ ಪರಿವರ್ತಿಸಿದಾಗ ಮಣ್ಣಿನ ಸೂಕ್ಷ್ಮಜೀವಿಗಳ ನೈಟ್ರೋಜನ್‌ ಲಭ್ಯತೆ ಕಡಿಮೆಯಾಗುತ್ತಿದ್ದು, ಮಣ್ಣಿನ ಪೋಷಕಾಂಶ ಚಕ್ರದಲ್ಲಿ ಮಹತ್ವದ ಬದಲಾವಣೆಗಳು ಸಂಭವಿಸುತ್ತವೆ ಎಂದು ಹೊಸ ಅಂತರಾಷ್ಟ್ರೀಯ ಸಂಶೋಧನೆ ತಿಳಿಸಿದೆ.

ಇತ್ತೀಚೆಗೆ ಪ್ರಕಟವಾದ ಅಂತರಾಷ್ಟ್ರೀಯ ವೈಜ್ಞಾನಿಕ ಜರ್ನಲ್‌ “ಪ್ಲಾಂಟ್‌ & ಸಾಯಿಲ್”‌ ನಲ್ಲಿ ಪ್ರಕಟವಾದ ಸಂಶೋಧನೆಯ ಪ್ರಕಾರ,  ಗದ್ದೆಗಳನ್ನು ಅಡಿಕೆ ತೋಟಗಳಾಗಿ ಪರಿವರ್ತಿಸುವುದರಿಂದ ಮಣ್ಣಿನ ಸೂಕ್ಷ್ಮಜೀವಿಗಳ ನೈಟ್ರೋಜನ್‌ ಲಭ್ಯತೆ ಕಡಿಮೆಯಾಗುತ್ತದೆ.

ಸಂಶೋಧಕರು ವಿವಿಧ ವಯಸ್ಸಿನ (2, 5, 10, 14, 17 ವರ್ಷ) ಅಡಿಕೆ ತೋಟಗಳ ಮಣ್ಣನ್ನು ಪರಿಶೀಲಿಸಿ, ಭತ್ತದ ಗದ್ದೆಗಳೊಂದಿಗೆ ಹೋಲಿಕೆ ನಡೆಸಿದರು. ಇದರ ಮೂಲಕ ಮಣ್ಣಿನ ನೈಟ್ರೋಜನ್‌ ಉತ್ಪಾದನೆ, ಸೂಕ್ಷ್ಮಜೀವಿಗಳ ಚಟುವಟಿಕೆ ಮತ್ತು ನೈಟ್ರಸ್‌ ಆಕ್ಸೈಡ್‌ ಉತ್ಸರ್ಜನೆ ಬಗ್ಗೆ ವಿಶ್ಲೇಷಣೆ ಮಾಡಲಾಗಿದೆ.

ಸಂಶೋಧನೆಯಲ್ಲಿ ಕಂಡುಬಂದ ಪ್ರಮುಖ ಅಂಶಗಳು ಹೀಗಿದೆ..

  • ಅಡಿಕೆ ತೋಟಗಳಲ್ಲಿ ಮಣ್ಣಿನ ಸೂಕ್ಷ್ಮಜೀವಿಗಳಿಗೆ ಲಭ್ಯವಾಗುವ ನೈಟ್ರೋಜನ್‌ ಪ್ರಮಾಣ ಕಡಿಮೆಯಾಗುತ್ತದೆ.

  • ಗದ್ದೆಯಿಂದ ಅಡಿಕೆ ತೋಟಕ್ಕೆ ಪರಿವರ್ತನೆಯ ನಂತರ ನೈಟ್ರೋಜನ್‌ ಕೊರತೆ 101% ರಿಂದ 258% ವರೆಗೆ ಹೆಚ್ಚಾಗಿದೆ.

  • ತೋಟದ ವಯಸ್ಸು ಹೆಚ್ಚಾದಂತೆ ಈ ಪರಿಣಾಮ ಇನ್ನಷ್ಟು ಹೆಚ್ಚಾಗುತ್ತದೆ.

  • ಮಣ್ಣಿನ ಲಭ್ಯ ಕಾರ್ಬನ್‌ ಹಾಗೂ ನೈಟ್ರೋಜನ್‌ ಭಾಗಗಳು ಕಡಿಮೆಯಾಗುವುದರಿಂದ ಸೂಕ್ಷ್ಮಜೀವಿಗಳ ಚಟುವಟಿಕೆ ಕಡಿಮೆಯಾಗುತ್ತದೆ.

ಮತ್ತೊಂದು ಆಸಕ್ತಿದಾಯಕ ಫಲಿತಾಂಶ ಕಂಡುಬಂದಿದ್ದು, ಅಡಿಕೆ ತೋಟಗಳಲ್ಲಿ ನೈಟ್ರಸ್‌ ಆಕ್ಸೈಡ್‌ (N₂O) ಉತ್ಸರ್ಜನೆ 47.6% ರಿಂದ 54.1% ವರೆಗೆ ಕಡಿಮೆಯಾಗುತ್ತದೆ ಎಂದು ಸಂಶೋಧಕರು ಹೇಳಿದ್ದಾರೆ.

ಅದರರ್ಥ, ಮಣ್ಣಿನಲ್ಲಿ ಹಸಿರುಮನೆಯ ಅನಿಲ ಬಿಡುಗಡೆ ಕಡಿಮೆಯಾಗುವ ಸಾಧ್ಯತೆ ಇದೆ. ಆದರೆ, ಅದೇ ಸಮಯದಲ್ಲಿ ಮಣ್ಣಿನ ಪೋಷಕಾಂಶ ಚಕ್ರದಲ್ಲಿ ಕೆಲವು ಮಿತಿಗಳು ಉಂಟಾಗಬಹುದು ಎಂದು ವಿಜ್ಞಾನಿಗಳು ಸೂಚಿಸಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಹೀಗಾಗಿ ತಜ್ಞರ ಪ್ರಕಾರ, ಗದ್ದೆಗಳನ್ನು ಅಡಿಕೆ ತೋಟಗಳಾಗಿ ಪರಿವರ್ತಿಸುವುದು ಕೃಷಿ ಆರ್ಥಿಕತೆಯಲ್ಲಿ ಲಾಭದಾಯಕವಾಗಬಹುದು. ಆದರೆ ಮಣ್ಣಿನ ಪೋಷಕಾಂಶ ಚಕ್ರ ಮತ್ತು ಸೂಕ್ಷ್ಮಜೀವಿಗಳ ಚಟುವಟಿಕೆಯಲ್ಲಿ ಬದಲಾವಣೆ ಸಂಭವಿಸಬಹುದು. ಆದ್ದರಿಂದ ಮಣ್ಣಿನ ಆರೋಗ್ಯ ಕಾಪಾಡಲು ಸಾವಯವ ಪದಾರ್ಥಗಳು, ಗೊಬ್ಬರ ನಿರ್ವಹಣೆ ಮತ್ತು ಮಣ್ಣು ಪರೀಕ್ಷೆ ಬಹಳ ಮುಖ್ಯವಾಗುತ್ತದೆ ಎಂದು ಹೇಳಿದ್ದಾರೆ.

A new international study published in the journal Plant and Soil reveals that converting paddy fields into areca nut plantations can significantly increase nitrogen limitation for soil microbes. The research found that nitrogen limitation increased by 101–258% after such land-use changes, mainly due to reduced inorganic nitrogen production and microbial immobilization. Interestingly, the conversion also reduced nitrous oxide (N₂O) emissions by nearly 48–54%, indicating potential environmental benefits but also highlighting possible impacts on soil nutrient cycles.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 07.06.2026 | ಜೂನ್ 8ರಿಂದ ರಾಜ್ಯದಲ್ಲಿ ಮುಂಗಾರು ಚುರುಕು| ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ, ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ

ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆಗಳು ಜೂ. 8ರಿಂದ ಮತ್ತಷ್ಟು ಚುರುಕುಗೊಳ್ಳುವ ಲಕ್ಷಣಗಳು ಕಂಡುಬಂದಿದ್ದು, ಕರಾವಳಿ…

2 hours ago

“ಜಾಕ್‌ಫ್ರೂಟ್‌ ಹಬ್ಬ”ಕ್ಕೆ ಜನಸಾಗರ – 50 ಕ್ಕೂ ಹೆಚ್ಚು ಹಲಸಿನ ಮೌಲ್ಯವರ್ಧಿತ ಉತ್ಪನ್ನಗಳ ಪ್ರದರ್ಶನ

ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…

17 hours ago

ಕ್ಯಾಂಪ್ಕೋ ಬ್ರಹ್ಮ ವಾರಣಾಶಿ ಸುಬ್ರಾಯ ಭಟ್‌ ಜನ್ಮಶತಮಾನೋತ್ಸವ ವರ್ಷ – ಅಡಿಕೆ ಬೆಳೆಗಾರರ ಬದುಕು ಬದಲಿಸಿದ ಮಹಾನ್ ದಾರ್ಶನಿಕ

ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್‌ ಅವರ ಜನ್ಮಕ್ಕೆ 99 ವರ್ಷಗಳು ಪೂರ್ಣಗೊಂಡಿದ್ದು,…

18 hours ago

ಹವಾಮಾನ ವರದಿ | 06-06-2026 | ಮುಂಗಾರು ಬಂದರೂ ಮಳೆ ಇಲ್ಲ! – ಕರ್ನಾಟಕದಲ್ಲಿ ಮುಂದಿನ ವಾರದ ಹವಾಮಾನ ಹೇಗಿರಲಿದೆ?

ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…

1 day ago

ಭಾರತದ ಚೆಸ್ ಇತಿಹಾಸದಲ್ಲಿ ಹೊಸ ಅಧ್ಯಾಯ – ನಾರ್ವೆ ಚೆಸ್ ಕಿರೀಟ ಗೆದ್ದ ಮೊದಲ ಭಾರತೀಯ ಪ್ರಜ್ಞಾನಂದ

ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…

1 day ago

ಜೇನುಗೂಡುಗಳ ಕೊರತೆಯಿಂದ ಪರಾಗಸ್ಪರ್ಶ ವ್ಯವಸ್ಥೆ ಮೇಲೆ ಪರಿಣಾಮ ; ಕೃಷಿ ಕ್ಷೇತ್ರದಲ್ಲಿ ಆತಂಕ – ಆಹಾರ ಬೆಳೆ ಉತ್ಪಾದನೆಗೆ ಸಂಕಷ್ಟದ ಎಚ್ಚರಿಕೆ

ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…

2 days ago