Advertisement
MIRROR FOCUS

ಕೊಡಿಪ್ಪಾಡಿ ಗ್ರಾಮದಲ್ಲಿ ಅಡಿಕೆಗೆ ಎಲೆ ಚುಕ್ಕಿ ರೋಗ | ಗ್ರಾಮದಲ್ಲಿ‌ಪಸರಿಸಿದ ಎಲೆಚುಕ್ಕಿ ರೋಗ | ಪರಿಹಾರಕ್ಕೆ ಒತ್ತಾಯಿಸಿ ಶಾಸಕರಿಗೆ‌ ಮನವಿ | ಅಧಿವೇಶನದಲ್ಲಿ ಪ್ರಸ್ತಾಪಿಸುವೆ – ಶಾಸಕ ಅಶೋಕ್ ರೈ

Share

ಕೊಡಿಪ್ಪಾಡಿ ಗ್ರಾಮದ ಬಹುತೇಕ ಅಡಿಕೆ ತೋಟಗಳಿಗೆ ಎಲೆ ಚುಕ್ಕಿ ರೋಗ ಬಾಧಿಸಿದ್ದು ಸಾವಿರಾರು ಅಡಿಕೆ ಮರಗಳು ನಾಶವಾಗಿದೆ ಇದರಿಂದ ಕೃಷಿಕರಿಗೆ ತೀವ್ರ ಸಂಕಷ್ಟ ಎದುರಾಗಿದ್ದು ಸರಕಾರದಿಂದ ಸೂಕ್ತ ಔಷಧಿ ಮತ್ತು ಪರಿಹಾರಕ್ಕೆ ಆಗ್ರಹಿಸಿ ಕೊಡಿಪ್ಪಾಡಿ ಅಡಿಕೆ ಕೃಷಿಕರ ನಿಯೋಗ ಬನ್ನೂರು ರೈತರ ಸೇವಾ ಸಹಕಾರಿ‌ ಸಂಘದ‌ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್ ನೇತೃತ್ವದಲ್ಲಿ‌ಶಾಸಕರ ಮೂಲಕ ಸರಕಾರಕ್ಕೆ‌ಮನವಿ ಸಲ್ಲಿಸಿದರು.

Advertisement
Advertisement

ನಾವು ಅಡಿಕೆ ಕೃಷಿಕರಾಗಿದ್ದು, ಅಡಿಕೆಯನ್ನೇ ನಂಬಿ ಜೀವನ ಸಾಗಿಸುತ್ತಿದ್ದು , ಬೇರೆ ಯಾವುದೇ ಆದಾಯದ ಮೂಲಗಳಿರುವುದಿಲ್ಲ. ನಾವು ಹೊಂದಿದ ಜಾಗದಲ್ಲಿ ಅಡಿಕೆ ಕೃಷಿ ಮಾಡಿದ್ದು. ಈ ಸಾಲಿನಲ್ಲಿ ಕುಡಿಪ್ಪಾಡಿ ಗ್ರಾಮದ ಭಾಗಶ: ಅಡಿಕೆ ತೋಟಗಳಿಗೆ ಎಲೆಚುಕ್ಕಿ ರೋಗ ಬಂದಿದ್ದು, ಸಣ್ಣ ಅಡಿಕೆ ಉದುರಿ ಹೋಗಿದೆ. ಸದರಿ ರೋಗವನ್ನು ತಡೆಗಟ್ಟಲು ಬೇರೆ ಬೇರೆ ಕಂಪೆನಿಯವರು ತಿಳಿಸಿದ ಮೇರೆಗೆ 3-4 20 ರೋಗದ ಬಾಧೆ ಕಡಿಮೆ ಆಗಿರುವುದಿಲ್ಲ. ಔಷದಿ ಸಿಂಪರಣೆ ಮಾಡಿದರೂ ನಮ್ಮ ತೋಟಕ್ಕೆ ಕೃಷಿಕ ಪಂಜಿಗುಡ್ಡೆ ಈಶ್ವರ ಭಟ್ ಅವರ ಮನವಿಯ ಮೇರೆಗೆ ಇಂದೋರ್ ಶ್ರೀ ಸಿದ್ದಿ ಅಗ್ರಿ ಕಂಪೆನಿ ಪೈ. ಅ. ಕಾರ್ಯಪಾಲಕ ನಿರ್ದೆಶಕರಾದ ಪೆರ್ವೋಡಿ ನಾರಾಯಣ ಭಟ್ ಅವರು ಬಂದು ಪರಿಶೀಲಿಸಿ ಅದು ಎಲೆ ಚುಕ್ಕಿ ರೋಗ ಎಂದು ದೃಢೀಕರಿಸಿದ್ದಾರೆ ಈ ರೀತಿಯಿಂದ ನಮಗೆ ತುಂಬಾ ಆರ್ಥಿಕ ನಷ್ಟವಾಗಿದೆ. ಆದುದರಿಂದ ಎಲೆ ಚುಕ್ಕಿ ರೋಗವನ್ನು ತಡೆಗಟ್ಟಲು ಔಷಧಿಯನ್ನು ಸಿಂಪಡಿಸಲು ಸರಕಾರದಿಂದ ಸಹಾಯಧನವನ್ನು ಒದಗಿಸುವ‌ ಮೂಲಕ ನಮ್ಮ ಅಡಿಕೆ ತೋಟವನ್ನು ಎಲೆ ಚಿಕ್ಕಿ ರೋಗದಿಂದ ರಕ್ಷಣೆ ನೀಡುವಂತೆ ಮನವಿಯಲ್ಲಿ ತಿಳಿಸಿದ್ದಾರೆ.

ಅಧಿವೇಶನದಲ್ಲಿ ಪ್ರಸ್ತಾಪಿಸುವೆ: ಮನವಿ ಸ್ವೀಕರಿಸಿದ ಶಾಸಕ ಅಶೋಕ್‌ ಕುಮಾರ್‌ ರೈ ಅವರು, ಅಡಿಕೆ ಎಲೆ ಚುಕ್ಕಿ ರೋಗ ದ‌ಕ ಜಿಲ್ಲೆಯಲ್ಲಿ‌ವ್ಯಾಪಕವಾಗಿ ಹರಡುತ್ತಿದೆ. ಕಳೆದ ಕೆಲವು ತಿಂಗಳಿಂದ ಸುಳ್ಯ‌ ಭಾಗದಲ್ಲಿ ಕಾಣಿಸಿಕೊಂಡಿದ್ದ ಈ ರೋಗ ಇದೀಗ ಪುತ್ತೂರು ತಾಲೂಕಿನ ಕೆಲವು ಗ್ರಾಮಗಳಲ್ಲಿ ಕಾಣಿಸಿಕೊಂಡಿದ್ದು ಕೃಷಿಕರು‌ ಕಂಗಾಲಾಗಿದ್ದಾರೆ. ಇದಕ್ಕೆ ಸೂಕ್ತ ಔಷಧಿಯನ್ನು ಪತ್ತೆ ಮಾಡಬೇಕಿದೆ.‌ ನಷ್ಟಕ್ಕೊಳಗಾದ ಕೃಷಿಕರಿಗೆ ಸೂಕ್ತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಈ ವಿಚಾರವನ್ನು ವಿಧಾನಸಭಾ ಅಧಿವೇಶನದಲ್ಲಿ‌ ಸರಕಾರದ‌ ಗಮನ ಸೆಳೆಯುವುದಾಗಿ ಶಾಸಕ ಅಶೋಕ್ ರೈ ನಿಯೋಗಕ್ಕೆ ಭರವಸೆ ನೀಡಿದರು.

The Arecanut plantations have been significantly impacted by leaf spot disease, resulting in the destruction of thousands of Arecanut trees. As a result, farmers are experiencing severe hardship. Puttur has appealed to the government through MLAs, requesting appropriate medication and relief measures to address this issue.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

AI, ಡ್ರೋನ್ ಮತ್ತು ಸ್ವಯಂಚಾಲಿತ ಯಂತ್ರಗಳು | ಕಾರ್ಮಿಕ ಕೊರತೆಯ ನಡುವೆ ಕೃಷಿಗೆ ರೋಬೋಟ್ ಪರಿಹಾರ

ಸಣ್ಣ ರೈತರ ಕೃಷಿಯಲ್ಲಿ ಕಾರ್ಮಿಕ ಕೊರತೆ, ವೆಚ್ಚ ಏರಿಕೆ ಸಮಸ್ಯೆ ನಿವಾರಣೆಗೆ ರೋಬೋಟಿಕ್ಸ್,…

37 minutes ago

“ಕ್ಯಾನ್ಸರ್ ಮ್ಯಾಪಿಂಗ್” – ರೋಗ ತಡೆಯುವ ಮೊದಲ ಹೆಜ್ಜೆ

ಕ್ಯಾನ್ಸರ್ ವಿರುದ್ಧ ಹೋರಾಟ ಎಂದರೆ ಕೇವಲ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವುದು ಮಾತ್ರವಲ್ಲ. ರೋಗ…

43 minutes ago

ರಾಜ್ಯದಲ್ಲಿ 3 ವರ್ಷದಲ್ಲಿ 432 ಮಂದಿ ಅಕ್ರಮ ವಿದೇಶಿ ವಲಸಿಗರು ಪತ್ತೆ | ಬೆಂಗಳೂರು ನಗರದಲ್ಲೇ 328 ಪ್ರಕರಣ

ರಾಜ್ಯದಲ್ಲಿ ಅಕ್ರಮ ವಲಸಿಗರು ಹಾಗೂ ಬಾಂಗ್ಲಾ ಅಕ್ರಮ ವಲಸಿಗರ ಬಗ್ಗೆ ಮಾಹಿತಿಯನ್ನು ವಿಧಾನಪರಿಷತ್‌…

51 minutes ago

ಮಾಯಾಮೃಗ ಮಾಯಾಮೃಗ….

ಪ್ರಯತ್ನ, ಪರಿಶ್ರಮ, ಛಲ ಇದ್ದರೂ ಸೋಲು ಬೆನ್ನತ್ತಿದರೆ ಕಾರಣವೇನು? ಹಿರಿಯರ ಪಾಪದ ಫಲ,…

1 hour ago

ಬೇಸಿಗೆ ಕುಡಿಯುವ ನೀರು ಸಮಸ್ಯೆ ಎದುರಾಗದಂತೆ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

ಮುಂಬರುವ ಬೇಸಿಗೆಯಲ್ಲಿ ಕುಡಿಯುವ ನೀರು ಪೂರೈಕೆಗೆ ಯಾವುದೇ ರೀತಿ ತೊಂದರೆಯಾಗದಂತೆ  ಅಗತ್ಯ ಕ್ರಮ…

1 hour ago

ಅಂಕಗಳಾಚೆಗೂ ಒಂದು ಲೋಕವಿದೆ : ಇದು ಮಕ್ಕಳಿಗೆ ಬದುಕನ್ನು ಕಲಿಸುವ ಶಿಕ್ಷಣ

ಶಾಲೆಯ ಹಂತದಲ್ಲಿ ಮಕ್ಕಳಿಗೆ ಕಲಿಸಬೇಕಾದ ಶಿಕ್ಷಣ ಏನು..?.  ಈ ಪ್ರಶ್ನೆಗೆ ಹಲವರದು ಹಲವು…

11 hours ago