MIRROR FOCUS

ಕೊಡಿಪ್ಪಾಡಿ ಗ್ರಾಮದಲ್ಲಿ ಅಡಿಕೆಗೆ ಎಲೆ ಚುಕ್ಕಿ ರೋಗ | ಗ್ರಾಮದಲ್ಲಿ‌ಪಸರಿಸಿದ ಎಲೆಚುಕ್ಕಿ ರೋಗ | ಪರಿಹಾರಕ್ಕೆ ಒತ್ತಾಯಿಸಿ ಶಾಸಕರಿಗೆ‌ ಮನವಿ | ಅಧಿವೇಶನದಲ್ಲಿ ಪ್ರಸ್ತಾಪಿಸುವೆ – ಶಾಸಕ ಅಶೋಕ್ ರೈ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕೊಡಿಪ್ಪಾಡಿ ಗ್ರಾಮದ ಬಹುತೇಕ ಅಡಿಕೆ ತೋಟಗಳಿಗೆ ಎಲೆ ಚುಕ್ಕಿ ರೋಗ ಬಾಧಿಸಿದ್ದು ಸಾವಿರಾರು ಅಡಿಕೆ ಮರಗಳು ನಾಶವಾಗಿದೆ ಇದರಿಂದ ಕೃಷಿಕರಿಗೆ ತೀವ್ರ ಸಂಕಷ್ಟ ಎದುರಾಗಿದ್ದು ಸರಕಾರದಿಂದ ಸೂಕ್ತ ಔಷಧಿ ಮತ್ತು ಪರಿಹಾರಕ್ಕೆ ಆಗ್ರಹಿಸಿ ಕೊಡಿಪ್ಪಾಡಿ ಅಡಿಕೆ ಕೃಷಿಕರ ನಿಯೋಗ ಬನ್ನೂರು ರೈತರ ಸೇವಾ ಸಹಕಾರಿ‌ ಸಂಘದ‌ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್ ನೇತೃತ್ವದಲ್ಲಿ‌ಶಾಸಕರ ಮೂಲಕ ಸರಕಾರಕ್ಕೆ‌ಮನವಿ ಸಲ್ಲಿಸಿದರು.

Advertisement

ನಾವು ಅಡಿಕೆ ಕೃಷಿಕರಾಗಿದ್ದು, ಅಡಿಕೆಯನ್ನೇ ನಂಬಿ ಜೀವನ ಸಾಗಿಸುತ್ತಿದ್ದು , ಬೇರೆ ಯಾವುದೇ ಆದಾಯದ ಮೂಲಗಳಿರುವುದಿಲ್ಲ. ನಾವು ಹೊಂದಿದ ಜಾಗದಲ್ಲಿ ಅಡಿಕೆ ಕೃಷಿ ಮಾಡಿದ್ದು. ಈ ಸಾಲಿನಲ್ಲಿ ಕುಡಿಪ್ಪಾಡಿ ಗ್ರಾಮದ ಭಾಗಶ: ಅಡಿಕೆ ತೋಟಗಳಿಗೆ ಎಲೆಚುಕ್ಕಿ ರೋಗ ಬಂದಿದ್ದು, ಸಣ್ಣ ಅಡಿಕೆ ಉದುರಿ ಹೋಗಿದೆ. ಸದರಿ ರೋಗವನ್ನು ತಡೆಗಟ್ಟಲು ಬೇರೆ ಬೇರೆ ಕಂಪೆನಿಯವರು ತಿಳಿಸಿದ ಮೇರೆಗೆ 3-4 20 ರೋಗದ ಬಾಧೆ ಕಡಿಮೆ ಆಗಿರುವುದಿಲ್ಲ. ಔಷದಿ ಸಿಂಪರಣೆ ಮಾಡಿದರೂ ನಮ್ಮ ತೋಟಕ್ಕೆ ಕೃಷಿಕ ಪಂಜಿಗುಡ್ಡೆ ಈಶ್ವರ ಭಟ್ ಅವರ ಮನವಿಯ ಮೇರೆಗೆ ಇಂದೋರ್ ಶ್ರೀ ಸಿದ್ದಿ ಅಗ್ರಿ ಕಂಪೆನಿ ಪೈ. ಅ. ಕಾರ್ಯಪಾಲಕ ನಿರ್ದೆಶಕರಾದ ಪೆರ್ವೋಡಿ ನಾರಾಯಣ ಭಟ್ ಅವರು ಬಂದು ಪರಿಶೀಲಿಸಿ ಅದು ಎಲೆ ಚುಕ್ಕಿ ರೋಗ ಎಂದು ದೃಢೀಕರಿಸಿದ್ದಾರೆ ಈ ರೀತಿಯಿಂದ ನಮಗೆ ತುಂಬಾ ಆರ್ಥಿಕ ನಷ್ಟವಾಗಿದೆ. ಆದುದರಿಂದ ಎಲೆ ಚುಕ್ಕಿ ರೋಗವನ್ನು ತಡೆಗಟ್ಟಲು ಔಷಧಿಯನ್ನು ಸಿಂಪಡಿಸಲು ಸರಕಾರದಿಂದ ಸಹಾಯಧನವನ್ನು ಒದಗಿಸುವ‌ ಮೂಲಕ ನಮ್ಮ ಅಡಿಕೆ ತೋಟವನ್ನು ಎಲೆ ಚಿಕ್ಕಿ ರೋಗದಿಂದ ರಕ್ಷಣೆ ನೀಡುವಂತೆ ಮನವಿಯಲ್ಲಿ ತಿಳಿಸಿದ್ದಾರೆ.

ಅಧಿವೇಶನದಲ್ಲಿ ಪ್ರಸ್ತಾಪಿಸುವೆ: ಮನವಿ ಸ್ವೀಕರಿಸಿದ ಶಾಸಕ ಅಶೋಕ್‌ ಕುಮಾರ್‌ ರೈ ಅವರು, ಅಡಿಕೆ ಎಲೆ ಚುಕ್ಕಿ ರೋಗ ದ‌ಕ ಜಿಲ್ಲೆಯಲ್ಲಿ‌ವ್ಯಾಪಕವಾಗಿ ಹರಡುತ್ತಿದೆ. ಕಳೆದ ಕೆಲವು ತಿಂಗಳಿಂದ ಸುಳ್ಯ‌ ಭಾಗದಲ್ಲಿ ಕಾಣಿಸಿಕೊಂಡಿದ್ದ ಈ ರೋಗ ಇದೀಗ ಪುತ್ತೂರು ತಾಲೂಕಿನ ಕೆಲವು ಗ್ರಾಮಗಳಲ್ಲಿ ಕಾಣಿಸಿಕೊಂಡಿದ್ದು ಕೃಷಿಕರು‌ ಕಂಗಾಲಾಗಿದ್ದಾರೆ. ಇದಕ್ಕೆ ಸೂಕ್ತ ಔಷಧಿಯನ್ನು ಪತ್ತೆ ಮಾಡಬೇಕಿದೆ.‌ ನಷ್ಟಕ್ಕೊಳಗಾದ ಕೃಷಿಕರಿಗೆ ಸೂಕ್ತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಈ ವಿಚಾರವನ್ನು ವಿಧಾನಸಭಾ ಅಧಿವೇಶನದಲ್ಲಿ‌ ಸರಕಾರದ‌ ಗಮನ ಸೆಳೆಯುವುದಾಗಿ ಶಾಸಕ ಅಶೋಕ್ ರೈ ನಿಯೋಗಕ್ಕೆ ಭರವಸೆ ನೀಡಿದರು.

The Arecanut plantations have been significantly impacted by leaf spot disease, resulting in the destruction of thousands of Arecanut trees. As a result, farmers are experiencing severe hardship. Puttur has appealed to the government through MLAs, requesting appropriate medication and relief measures to address this issue.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅನ್ನದ ಪರಿಮಳ ಮನವರಳಿಸ ಬಹುದಲ್ಲವೇ..!

ಅನ್ನದ ಪರಿಮಳ ಎಷ್ಟು ಸೊಗಸು. ಅಡುಗೆ ಮನೆಯ ಭಾಷೆಯೇ ಅಂತಹದ್ದು.

5 hours ago

ಹೆಚ್ಚಿನ ಮೌಲ್ಯದ ಹಣ್ಣಿನ ಬೆಳೆಗಳ ಕುರಿತು ಚರ್ಚೆ | ಹಲಸು , ಡ್ರಾಗನ್‌ಫ್ರುಟ್‌ ಕೃಷಿಯ ಕಡೆಗೆ ಆದ್ಯತೆ |

ಭಾರತದ ವಿವಿಧ ಕಡೆಗಳಲ್ಲಿ ಉತ್ಪಾದಕತೆಯನ್ನು ಹೆಚ್ಚಿಸುವ ಸಾಮರ್ಥ್ಯ ಇರುವ ಡ್ರಾಗನ್‌ ಫ್ರುಟ್(ಕಮಲಂ) ಹಾಗೂ…

6 hours ago

ದೆಹಲಿಯಲ್ಲಿ ಹೀಟ್‌ವೇವ್‌ , ಬಿಹಾರದಲ್ಲಿ ಮಳೆ, ಕರ್ನಾಟಕದಲ್ಲಿ ಬಿಸಿ ಗಾಳಿ ಎಚ್ಚರಿಕೆ |

ಏಪ್ರಿಲ್ ಮಧ್ಯದ ವೇಳೆಗೆ ದೆಹಲಿಯಲ್ಲಿ ತಾಪಮಾನವು 40 ಡಿಗ್ರಿಗಿಂತ ಹೆಚ್ಚಾಗಬಹುದು, ಈ ಬಾರಿ…

8 hours ago

ಹೊಸರುಚಿ| ಗುಜ್ಜೆ ರೋಲ್

ಗುಜ್ಜೆ ರೋಲ್ ಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ : ಮೊದಲಿಗೆ ಗುಜ್ಜೆ ಕಟ್…

8 hours ago

ಅಮರನಾಥ ಯಾತ್ರೆಗೆ ನೋಂದಣಿ ಪ್ರಕ್ರಿಯೆ ಆರಂಭ | ಜೂನ್‌ 29 ರಿಂದ ಯಾತ್ರೆ ಆರಂಭ |

ಹಿಂದೂಗಳ ಪವಿತ್ರ ಯಾತ್ರಾಸ್ಥಳ, ವಾರ್ಷಿಕ ಪವಿತ್ರ ಅಮರನಾಥ ಯಾತ್ರೆ  ಜೂನ್‌ 29 ರಿಂದ, …

9 hours ago

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯಾದ್ಯಂತ ಅನಿರ್ಧಿಷ್ಟಾವದಿ ಲಾರಿ ಮುಷ್ಕರ | ಸಂಧಾನ ಮಾತುಕತೆಯೂ ವಿಫಲ |

ಡೀಸೆಲ್ ದರ ಹೆಚ್ಚಳವನ್ನು ರಾಜ್ಯ ಸರ್ಕಾರ ಹಿಂಪಡೆಯಬೇಕು, ಟೋಲ್ ಶುಲ್ಕ ಕಡಿಮೆ ಮಾಡಬೇಕು,…

9 hours ago