Advertisement
MIRROR FOCUS

ಕೊಡಿಪ್ಪಾಡಿ ಗ್ರಾಮದಲ್ಲಿ ಅಡಿಕೆಗೆ ಎಲೆ ಚುಕ್ಕಿ ರೋಗ | ಗ್ರಾಮದಲ್ಲಿ‌ಪಸರಿಸಿದ ಎಲೆಚುಕ್ಕಿ ರೋಗ | ಪರಿಹಾರಕ್ಕೆ ಒತ್ತಾಯಿಸಿ ಶಾಸಕರಿಗೆ‌ ಮನವಿ | ಅಧಿವೇಶನದಲ್ಲಿ ಪ್ರಸ್ತಾಪಿಸುವೆ – ಶಾಸಕ ಅಶೋಕ್ ರೈ

Share

ಕೊಡಿಪ್ಪಾಡಿ ಗ್ರಾಮದ ಬಹುತೇಕ ಅಡಿಕೆ ತೋಟಗಳಿಗೆ ಎಲೆ ಚುಕ್ಕಿ ರೋಗ ಬಾಧಿಸಿದ್ದು ಸಾವಿರಾರು ಅಡಿಕೆ ಮರಗಳು ನಾಶವಾಗಿದೆ ಇದರಿಂದ ಕೃಷಿಕರಿಗೆ ತೀವ್ರ ಸಂಕಷ್ಟ ಎದುರಾಗಿದ್ದು ಸರಕಾರದಿಂದ ಸೂಕ್ತ ಔಷಧಿ ಮತ್ತು ಪರಿಹಾರಕ್ಕೆ ಆಗ್ರಹಿಸಿ ಕೊಡಿಪ್ಪಾಡಿ ಅಡಿಕೆ ಕೃಷಿಕರ ನಿಯೋಗ ಬನ್ನೂರು ರೈತರ ಸೇವಾ ಸಹಕಾರಿ‌ ಸಂಘದ‌ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್ ನೇತೃತ್ವದಲ್ಲಿ‌ಶಾಸಕರ ಮೂಲಕ ಸರಕಾರಕ್ಕೆ‌ಮನವಿ ಸಲ್ಲಿಸಿದರು.

ನಾವು ಅಡಿಕೆ ಕೃಷಿಕರಾಗಿದ್ದು, ಅಡಿಕೆಯನ್ನೇ ನಂಬಿ ಜೀವನ ಸಾಗಿಸುತ್ತಿದ್ದು , ಬೇರೆ ಯಾವುದೇ ಆದಾಯದ ಮೂಲಗಳಿರುವುದಿಲ್ಲ. ನಾವು ಹೊಂದಿದ ಜಾಗದಲ್ಲಿ ಅಡಿಕೆ ಕೃಷಿ ಮಾಡಿದ್ದು. ಈ ಸಾಲಿನಲ್ಲಿ ಕುಡಿಪ್ಪಾಡಿ ಗ್ರಾಮದ ಭಾಗಶ: ಅಡಿಕೆ ತೋಟಗಳಿಗೆ ಎಲೆಚುಕ್ಕಿ ರೋಗ ಬಂದಿದ್ದು, ಸಣ್ಣ ಅಡಿಕೆ ಉದುರಿ ಹೋಗಿದೆ. ಸದರಿ ರೋಗವನ್ನು ತಡೆಗಟ್ಟಲು ಬೇರೆ ಬೇರೆ ಕಂಪೆನಿಯವರು ತಿಳಿಸಿದ ಮೇರೆಗೆ 3-4 20 ರೋಗದ ಬಾಧೆ ಕಡಿಮೆ ಆಗಿರುವುದಿಲ್ಲ. ಔಷದಿ ಸಿಂಪರಣೆ ಮಾಡಿದರೂ ನಮ್ಮ ತೋಟಕ್ಕೆ ಕೃಷಿಕ ಪಂಜಿಗುಡ್ಡೆ ಈಶ್ವರ ಭಟ್ ಅವರ ಮನವಿಯ ಮೇರೆಗೆ ಇಂದೋರ್ ಶ್ರೀ ಸಿದ್ದಿ ಅಗ್ರಿ ಕಂಪೆನಿ ಪೈ. ಅ. ಕಾರ್ಯಪಾಲಕ ನಿರ್ದೆಶಕರಾದ ಪೆರ್ವೋಡಿ ನಾರಾಯಣ ಭಟ್ ಅವರು ಬಂದು ಪರಿಶೀಲಿಸಿ ಅದು ಎಲೆ ಚುಕ್ಕಿ ರೋಗ ಎಂದು ದೃಢೀಕರಿಸಿದ್ದಾರೆ ಈ ರೀತಿಯಿಂದ ನಮಗೆ ತುಂಬಾ ಆರ್ಥಿಕ ನಷ್ಟವಾಗಿದೆ. ಆದುದರಿಂದ ಎಲೆ ಚುಕ್ಕಿ ರೋಗವನ್ನು ತಡೆಗಟ್ಟಲು ಔಷಧಿಯನ್ನು ಸಿಂಪಡಿಸಲು ಸರಕಾರದಿಂದ ಸಹಾಯಧನವನ್ನು ಒದಗಿಸುವ‌ ಮೂಲಕ ನಮ್ಮ ಅಡಿಕೆ ತೋಟವನ್ನು ಎಲೆ ಚಿಕ್ಕಿ ರೋಗದಿಂದ ರಕ್ಷಣೆ ನೀಡುವಂತೆ ಮನವಿಯಲ್ಲಿ ತಿಳಿಸಿದ್ದಾರೆ.

Advertisement

ಅಧಿವೇಶನದಲ್ಲಿ ಪ್ರಸ್ತಾಪಿಸುವೆ: ಮನವಿ ಸ್ವೀಕರಿಸಿದ ಶಾಸಕ ಅಶೋಕ್‌ ಕುಮಾರ್‌ ರೈ ಅವರು, ಅಡಿಕೆ ಎಲೆ ಚುಕ್ಕಿ ರೋಗ ದ‌ಕ ಜಿಲ್ಲೆಯಲ್ಲಿ‌ವ್ಯಾಪಕವಾಗಿ ಹರಡುತ್ತಿದೆ. ಕಳೆದ ಕೆಲವು ತಿಂಗಳಿಂದ ಸುಳ್ಯ‌ ಭಾಗದಲ್ಲಿ ಕಾಣಿಸಿಕೊಂಡಿದ್ದ ಈ ರೋಗ ಇದೀಗ ಪುತ್ತೂರು ತಾಲೂಕಿನ ಕೆಲವು ಗ್ರಾಮಗಳಲ್ಲಿ ಕಾಣಿಸಿಕೊಂಡಿದ್ದು ಕೃಷಿಕರು‌ ಕಂಗಾಲಾಗಿದ್ದಾರೆ. ಇದಕ್ಕೆ ಸೂಕ್ತ ಔಷಧಿಯನ್ನು ಪತ್ತೆ ಮಾಡಬೇಕಿದೆ.‌ ನಷ್ಟಕ್ಕೊಳಗಾದ ಕೃಷಿಕರಿಗೆ ಸೂಕ್ತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಈ ವಿಚಾರವನ್ನು ವಿಧಾನಸಭಾ ಅಧಿವೇಶನದಲ್ಲಿ‌ ಸರಕಾರದ‌ ಗಮನ ಸೆಳೆಯುವುದಾಗಿ ಶಾಸಕ ಅಶೋಕ್ ರೈ ನಿಯೋಗಕ್ಕೆ ಭರವಸೆ ನೀಡಿದರು.

The Arecanut plantations have been significantly impacted by leaf spot disease, resulting in the destruction of thousands of Arecanut trees. As a result, farmers are experiencing severe hardship. Puttur has appealed to the government through MLAs, requesting appropriate medication and relief measures to address this issue.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹಲಸಿನ ಹಾಲಿನಿಂದ ವಸಡು ರೋಗಕ್ಕೆ ಚಿಕಿತ್ಸೆ…? ಬ್ರೆಜಿಲ್‌ ವಿಜ್ಞಾನಿಗಳ ಹೊಸ ಸಂಶೋಧನೆ ಆಶಾಭರವಸೆ ಮೂಡಿಸಿದೆ

ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್‌ ಬಳಸಿ ವಿಜ್ಞಾನಿಗಳು ವಸಡು…

1 hour ago

ಅಡಿಕೆಗೆ ಬ್ಯಾನ್ ಅಲ್ಲ… ಕಲಬೆರಕೆ ಅಡಿಕೆಗೆ ಬ್ಯಾನ್ ಆಗಬೇಕು..! – ಮಲೆನಾಡಿನ ಅಡಿಕೆಗೆ ಪ್ರತ್ಯೇಕ ಮಾರುಕಟ್ಟೆ ಅಗತ್ಯ

ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…

4 hours ago

ಬೆಲೆ ಕುಸಿದಾಗ ನಷ್ಟ ಬೇಡ – ರಂಬುಟಾನ್‌ ಫ್ರೀಜ್‌ ಮಾಡಿ, ನಂತರ ಮಾರಾಟ ಮಾಡಿ..! ಕೃಷಿಕನ ಹೊಸ ಪ್ರಯೋಗ

ರಂಬುಟಾನ್‌ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್‌ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…

5 hours ago

ಚೆಸ್‌ ಬೋರ್ಡ್‌ನ ಆಚೆಗೂ ಗೆಲುವು – ಕಾಪುವಿನಲ್ಲಿ ಚೆಸ್ ಹಬ್ಬ, ವಿದ್ಯಾರ್ಥಿಗಳ ಕನಸುಗಳಿಗೆ ವೇದಿಕೆ | ಗ್ರಾಮೀಣ ಕರ್ನಾಟಕದಲ್ಲಿಯೂ ಬೆಳೆಯುತ್ತಿರುವ ಹೊಸ ಕ್ರೀಡಾ ಸಂಸ್ಕೃತಿ

ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

12 hours ago

ಕಾಪುವಿನಲ್ಲಿ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ಗೆ ಚಾಲನೆ – 400ಕ್ಕೂ ಅಧಿಕ ಪ್ರತಿಭೆಗಳು ಭಾಗಿ, 24 ಮಂದಿಗೆ ರಾಷ್ಟ್ರಮಟ್ಟದ ಅವಕಾಶ

ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

14 hours ago

34 ಟನ್ ಅಡಿಕೆ ವಂಚನೆ – ಅಸ್ಸಾಂ ವ್ಯಾಪಾರಿಗಳಿಗೆ ಹರಿಯಾಣದಲ್ಲಿ ವಂಚನೆ..!

ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…

15 hours ago