Advertisement
MIRROR FOCUS

ಅಪಾರ ಪ್ರಮಾಣದಲ್ಲಿ ಅಡಿಕೆ ಬೆಳೆ ವಿಸ್ತರಣೆ | ಅಡಿಕೆಗೆ ಬಹಳ ದಿನ ಭವಿಷ್ಯ ಇಲ್ಲ, ಪ್ರೋತ್ಸಾಹ ಕೊಡಬಾರದು | ಸದನದಲ್ಲಿ ಅರಗ ಜ್ಞಾನೇಂದ್ರ ಹೇಳಿಕೆ|

Share

ಅಡಿಕೆ ಬೆಳೆಯುವ ಅಪಾರ ಪ್ರಮಾಣದಲ್ಲಿ ವಿಸ್ತರಣೆಯಾಗುತ್ತಿರುವುದು  ಭವಿಷ್ಯದಲ್ಲಿ ಮಾರಕವಾಗಲಿದೆ.ಅಡಿಕೆ ಹೆಚ್ಚು ಬೆಳೆಯುವುದರಲ್ಲಿ ಅರ್ಥವಿಲ್ಲ. ಭವಿಷ್ಯಕ್ಕೆ ಈ ವಿಸ್ತರಣೆ ಮಾರಕವಾಗಲಿದ್ದು, ಹೀಗಾದರೆ ಅಡಿಕೆ ಭವಿಷ್ಯ ಬಹಳ ದಿನ ಇಲ್ಲ, ಪ್ರೋತ್ಸಾಹ ಕೊಡಬಾರದು ಎಂದು ಗೃಹಸಚಿವ, ಅಡಿಕೆ ಟಾಸ್ಕ್‌ಫೋರ್ಸ್‌ ಸಮಿತಿ ಅಧ್ಯಕ್ಷ ಅರಗ ಜ್ಞಾನೇಂದ್ರ ಹೇಳಿದರು.

ವಿಧಾನ ಸಭೆಯಲ್ಲಿ  ರೈತರು, ಅತಿವೃಷ್ಠಿ ಹಾಗೂ ಅನಾವೃಷ್ಟಿ ಕಾರಣದಿಂದಾಗಿ, ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ, ನಡೆದ ಚರ್ಚೆಯ ಮಧ್ಯದಲ್ಲಿ, ಭಾಗವಹಿಸಿ ಮಾತನಾಡಿದ ಸಚಿವರು ಅನಿರ್ಬಂಧಿತವಾಗಿ ಅಡಿಕೆ ಬೆಳೆಯುವ ಪ್ರದೇಶ ವಿಸ್ತಾರವಾಗುತ್ತಿರುವುದರಿಂದ, ಮುಂದಿನ ದಿನಗಳಲ್ಲಿ ಸಾಂಪ್ರದಾಯಿಕವಾಗಿ ಅಡಿಕೆ ಕೃಷಿ ಮಾಡುತ್ತಿರುವ ರೈತರು ಸಂಕಷ್ಟದ ದಿನಗಳನ್ನು ಎದುರಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗುವ ಸಾಧ್ಯತೆ ಇದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಅಡಿಕೆ ಬೆಳೆಯದ ಕಡೆಗೂ ಅಡಿಕೆ ವಿಸ್ತಾರವಾಗುತ್ತಿದೆ, ಆಂಧ್ರಪ್ರದೇಶದಲ್ಲಿ 2 ಸಾವಿರ ಹೆಕ್ಟೇರ್‌ ಪ್ರದೇಶದಲ್ಲಿ ಅಡಿಕೆ ಬೆಳೆಯಲಾಗುತ್ತಿದೆ, ವರ್ಷದಲ್ಲಿ ಹಲವು ನರ್ಸರಿಗಳಲ್ಲಿ ಒಂದು ಕೋಟಿಗೂ ಅಧಿಕ ಅಡಿಕೆ ಗಿಡ ಮಾರಾಟವಾಗುತ್ತಿದೆ. ಈ ರೀತಿ ಹೋದರೆ ಮುಂದಿನ 5-10 ವರ್ಷದಲ್ಲಿ ಅಡಿಕೆ ಬೆಳೆ ಮಾರಕವಾಗುವುದು ನಿಶ್ಚಿತ. ಆಹಾರ ಬೆಳೆಗೆ ಸಾಲ ತಂದು ಅಡಿಕೆ ಬೆಳೆಯುವಂತಾಗಿದೆ, ಹೀಗಾಗಿ ಪ್ರೋತ್ಸಾಹ ಕೊಡುವುದು ಅನಗತ್ಯ ಎಂದು ಅರಗ ಜ್ಞಾನೇಂದ್ರ ಹೇಳಿದರು. ಈಗಾಗಲೇ ಕೇಂದ್ರ ಸರ್ಕಾರ ಡ್ರಿಪ್‌ಗೆ ನೀಡುವ ಸಹಾಯವನ್ನು ತೆಗೆದುಹಾಕಿದೆ.

ಸಾವಿರಾರು ಕೋಟಿ ರೂಪಾಯಿಗಳನ್ನು, ವಿದೇಶದಿಂದ ಹಾಗೂ ವಿಶ್ವ ಬ್ಯಾಂಕ್ ಗಳಿಂದ ಸಾಲ ಪಡೆದು, ಜಲಾಶಯಗಳನ್ನು ಕಟ್ಟಿ, ಷರತ್ತುಗಳನ್ನು ಉಲ್ಲಂಘಿಸಿ, ಆಹಾರ ಬೆಳೆಗಳ ಬದಲು ಅಡಿಕೆ ತೋಟಗಳು ಬರುತ್ತಿವೆ, ಇದರಿಂದ ಮುಂದಿನ ದಿನಗಳಲ್ಲಿ, ಸಾಂಪ್ರದಾಯಿಕವಾಗಿ ಅಡಿಕೆ ಬೆಳೆದು, ಬದುಕನ್ನು ಕಟ್ಟಿಕೊಂಡಿರುವ, ಮಲೆನಾಡು ಹಾಗೂ ಕರಾವಳಿ ಪ್ರದೇಶದ ರೈತರು, ಸಂಕಷ್ಟಕ್ಕೆ ತುತ್ತಾಗುವ ಭಯ ಆವರಿಸಿದೆ,  ಎಂದು ಹೇಳಿದರು. ಇದು ಅನಾರೋಗ್ಯಕರ ಬೆಳವಣಿಗೆ ಇಂತಹ ಬೆಳವಣಿಗೆಗೆ  ಪ್ರೋತ್ಸಾಹ ನೀಡಬಾರದು ಹಾಗೂ ಕಡಿವಾಣ ಹಾಕಬೇಕಿದೆ ಎಂದರು. ಮಲೆನಾಡಿನಲ್ಲಿ5-10 ಎಕ್ರೆಯಲ್ಲಿ ಬಹುಪಾಲು ಮಂದಿ ಅಡಿಕೆ ಬೆಳೆ ಮಾಡಿದರೆ, ಈಗ ಮಲೆನಾಡು ಹೊರತುಪಡಿಸಿ ಇತರ ಕಡೆಗಳಲ್ಲಿ 100-200 ಎಕ್ರೆಯಲ್ಲಿ ಅಡಿಕೆ ಬೆಳೆಯುವುದು ಕಾಣುತ್ತೇವೆ. ಹೀಗಾಗಿ ಅಡಿಕೆ ಬೆಳೆ ವಿಸ್ತರಣೆಗೆ ನಿರ್ಬಂದ ಹಾಕುವುದು  ಅಗತ್ಯ , ಸಿಕ್ಕಾಪಟ್ಟೆ ವಿಸ್ತರಣೆ ಅಪಾಯ ಎಂದು ಅಭಿಪ್ರಾಯಪಟ್ಟರು.

ಇದೇ ವೇಳೆ ಅಭಿಪ್ರಾಯ ವ್ಯಕ್ತಪಡಿಸಿದ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ಮಲೆನಾಡು, ಕರಾವಳಿಯಲ್ಲಿ 5-10 ಎಕ್ರೆ ಅಡಿಕೆ ತೋಟದ ಇದ್ದರೆ ದೊಡ್ಡ ರೈತರು, ಈಗ 100-200 ಎಕ್ರೆಯಲ್ಲಿ ಒಬ್ಬೊಬ್ಬ ಕೃಷಿಕ ಅಡಿಕೆ ಬೆಳೆದರೆ ಸಂಕಷ್ಟ ಖಚಿತ. ರೈತರು ಒಂದೇ ಬೆಳೆ ಬೆಳೆದರೆ ಅಸಮತೋಲನ ಸತ್ಯವಾಗಿದೆ.  ಅಡಿಕೆ ಆರೋಗ್ಯಕ್ಕೆ ಹಾನಿ ಇಲ್ಲ‌ ಆದರೆ ಅನಗತ್ಯ ವಿಸ್ತರಣೆಯಾದರೆ ಅಪಾಯ ಖಚಿತ ಎಂದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

9 hours ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

18 hours ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

19 hours ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

23 hours ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

23 hours ago