Advertisement
MIRROR FOCUS

ಅಡಿಕೆ ಬಗ್ಗೆ ತಪ್ಪು ಕಲ್ಪನೆ ಬೇಡ : ವೈಜ್ಞಾನಿಕ ಅಧ್ಯಯನ ಅಗತ್ಯ – ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘ

Share

ಅಡಿಕೆ ಬಳಕೆಯಿಂದ ಉಂಟಾಗುತ್ತಿರುವ ಆರೋಗ್ಯ ಮತ್ತು ಸಾಮಾಜಿಕ ಸವಾಲುಗಳ ಕುರಿತು ದಕ್ಷಿಣ-ಪೂರ್ವ ಏಷ್ಯಾ ರಾಷ್ಟ್ರಗಳಲ್ಲಿ ಹೆಚ್ಚುತ್ತಿರುವ ಚರ್ಚೆಯ ನಡುವೆ, ವಿಶ್ವ ಆರೋಗ್ಯ ಸಂಸ್ಥೆ ಅಂತರಾಷ್ಟ್ರೀಯ ವೆಬಿನಾರ್ ಆಯೋಜಿಸಿರುವುದು ಕೃಷಿಕರ ಗಮನಕ್ಕೆ ಬಂದಿದೆ. ಅನೇಕ ವರ್ಷಗಳಿಂದ  ಏಷ್ಯಾದಾದ್ಯಂತ ಪರಂಪರಾಗತವಾಗಿ ಅಡಿಕೆ ಸೇವಿಸಲಾಗುತ್ತಿದೆ, ಬಳಕೆ ಮಾಡಲಾಗುತ್ತಿದೆ. ಇದುವರೆಗೂ ಕೇವಲ ಅಡಿಕೆ ಸೇವನೆಯಿಂದ ಆರೋಗ್ಯದ ಮೇಲೆ ಹಾನಿಯಾದ ಬಗ್ಗೆ ಗಮನಕ್ಕೆ ಬಂದಿಲ್ಲ. ಇಂದು ಲಕ್ಷಾಂತರ ಸಣ್ಣ ರೈತರಿಗೆ ಆರ್ಥಿಕವಾಗಿ ಅತ್ಯಂತ ಮಹತ್ವಪೂರ್ಣ ಬೆಳೆ ಆಗಿದೆ. ಅಡಿಕೆ ಬೆಳೆಯನ್ನು ಅವಲಂಬಿಸಿ ಪ್ರತ್ಯಕ್ಷವಾಗಿ ಸುಮಾರು 2 ಕೋಟಿ ಕೃಷಿಕರು ಜೀವನ ಸಾಗಿಸುತ್ತಿದ್ದು, ಇದರೊಂದಿಗೆ ಈ ಬೆಳೆಯ ಬೆಳವಣಿಗೆಗೆ 1948 ರಿಂದ ಹಿಡಿದು ಈ ತನಕ ಪ್ರೋತ್ಸಾಹ ನೀಡುತ್ತಾ ಬಂದಿದೆ.ಆದ್ದರಿಂದ ಸರಕಾರಗಳು ಅಡಿಕೆ ನಿಜಕ್ಕೂ ಹಾನಿಕಾರಕವೇ ಎಂಬುದನ್ನು ಅಧ್ಯಯನ ಮಾಡಿ ಒಂದು ತೀರ್ಮಾನ ತೆಗೆದುಕೊಳ್ಳಬೇಕು.ಇಲ್ಲಿ WHO ಹೇಳಿರುವುದನ್ನು ಅಂತಿಮವೆನ್ನಬಾರದು. ಒಂದೊಮ್ಮೆ ಸರಕಾರ ಕಠಿಣ ಕ್ರಮಗಳನ್ನು ತೆಗೆದುಕೊಂಡರೆ ಈ ಕ್ಷೇತ್ರದಲ್ಲಿ ಅನಾಹುತಗಳಾಗಬಹುದು. ಹೀಗಾಗಿ ಈಗ ಅಡಿಕೆಯ ಬಗ್ಗೆ ತಪ್ಪು ಕಲ್ಪನೆ ಬರುವ ಮಾದರಿಯ ಪ್ರಯತ್ನಗಳು ಸರಿಯಲ್ಲ ಎಂದು ಅಖಿಲ ಭಾರತ ಅಡಿಕೆ ಬೆಳೆಗಾರರು ಸಂಘ ಅಧ್ಯಕ್ಷ,ಕಾರ್ಯದರ್ಶಿ ಮತ್ತು ಸದಸ್ಯರು ಒತ್ತಾಯಿಸಿದ್ದಾರೆ.

Advertisement
Advertisement
ಅಡಿಕೆಯ ಬಳಕೆಯ ಬಗ್ಗೆ ಅನೇಕ ಸಮಯಗಳಿಂದ ಅಂತರಾಷ್ಟ್ರೀಯ ಮಟ್ಟದಲ್ಲಿ ತಪ್ಪು ಅಭಿಪ್ರಾಯವನ್ನು ಹರಡಲಾಗುತ್ತಿದೆ. ಅಡಿಕೆಯೇ ಹಾನಿಕಾರಕ ಎಂದು ಹೇಳಲಾಗುತ್ತಿದೆ. ವಾಸ್ತವದಲ್ಲಿ ಭಾರತದ ಸೇರಿದಂತೆ ಏಷ್ಯಾದ ಹಲವು ದೇಶಗಳಲ್ಲಿ ಅಡಿಕೆಯನ್ನು ಸಾವಿರಾರು ವರ್ಷಗಳಿಂದ ಬಳಕೆ ಮಾಡುತ್ತಿದ್ದಾರೆ. ಹೀಗಿರುವಾಗ ಅಡಿಕೆಯ ಕೊನೆಯ ಹಂತದ ಬಳಕೆಯಲ್ಲಿ ಅಡಿಕೆಯ ಜೊತೆ ವಿವಿಧ ವಸ್ತುಗಳ ಸೇರ್ಪಡೆಯ ಬಳಿಕ ಅಧ್ಯಯನ ನಡೆಸಿ ಅಡಿಕೆಯೇ ಹಾನಿಕಾರಕ ಎಂದು ಬಿಂಬಿಸಿ ಇಂದು ಅಡಿಕೆ ನಿಯಂತ್ರಣದ ಬಗ್ಗೆ ಪ್ರಯತ್ನ, ಹೇಳಿಕೆ , ಸಭೆಗಳು ನಡೆಯುತ್ತಿವೆ.  ಅಷ್ಟೇ ಅಲ್ಲ, ಅಡಿಕೆಯನ್ನು ಹಾನಿಕಾರಕ ಎಂದು ವರ್ಗೀಕರಿಸಿದೆ  ಹಾಗೂ ನಿಯಂತ್ರಣ ಮಾಡಲು ಪ್ರಯತ್ನ ಮಾಡುವುದು ಸರಿಯಲ್ಲ.  ಈಗ ಅಡಿಕೆಯ ಬಗ್ಗೆ ಲಭ್ಯ ಇರುವ ಅಧ್ಯಯನಗಳು , ವಿಶ್ಲೇಷಣೆಗಳು ಹಾಗೂ ಇತರ ವೈಜ್ಞಾನಿಕ ಅಂಶಗಳು ಸೀಮಿತವಾಗಿವೆ. ಹೀಗಾಗಿ ಅಡಿಕೆಯನ್ನು ನಿಷೇಧ ಅಥವಾ ತಪ್ಪು ಅಭಿಪ್ರಾಯ ಹರಡುವ ಬದಲಾಗಿ ಅಡಿಕೆಯನ್ನು ಮಾತ್ರವೇ ಸಂಶೋಧನಾ ಆಧಾರಿತ ವರದಿಯನ್ನು ಪಡೆಯಬೇಕು ಹಾಗೂ ಆ ಬಳಿಕವೇ ಯಾವುದೇ ನೀತಿಗಳನ್ನು ರೂಪಿಸಬೇಕು ಎಂದು ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘ ಒತ್ತಾಯಿಸಿದೆ. ಸರ್ಕಾರವು ಈ ಬಗ್ಗೆ ಗಂಭೀರವಾಗಿ ಪರಿಗಣಿಸಿ ಅಡಿಕೆಯ  ಪ್ರತ್ಯೇಕವಾದ ಅಧ್ಯಯನವನ್ನು ನಡೆಸಬೇಕು ಎಂದು ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಅಧ್ಯಕ್ಷ ಮಹೇಶ್‌ ಪುಚ್ಚಪ್ಪಾಡಿ ಹಾಗೂ ಕಾರ್ಯದರ್ಶಿ ವೆಂಕಟಗಿರಿ ಸಿ ವಿ ಹಾಗೂ ಅಡಿಕೆ ಬೆಳೆಗಾರರ ಸಂಘದ ಸದಸ್ಯರು ಒತ್ತಾಯಿಸಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್‌ ಮಾಡಿ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಸರ್ಕಾರಿ ಶಾಲೆ ಮಕ್ಕಳಿಗೆ ಚೆಸ್ ಪಾಠ | ದ.ಕ ದಲ್ಲಿ “ಚೆಸ್ ಇನ್ ಸ್ಕೂಲ್” ಆರಂಭ | ಗ್ರಾಮೀಣ ಮಕ್ಕಳಿಗೆ ಬೌದ್ಧಿಕ ಅವಕಾಶ

ದಕ್ಷಿಣ ಕನ್ನಡ ಜಿಲ್ಲೆಯ ಸರ್ಕಾರಿ ಶಾಲಾ ಮಕ್ಕಳಿಗೆ ಚೆಸ್ ಆಟವನ್ನು ಪರಿಚಯಿಸುವ “ಚೆಸ್…

4 hours ago

ಕೊಳೆ ರೋಗ ನಿಯಂತ್ರಣಕ್ಕೂ ತೆರಿಗೆ…? ಮೈಲುತುತ್ತಿಗೆ ಸುಂಕ – ಅಡಿಕೆ ರೈತನಿಗೆ ಮತ್ತೊಂದು ಹೊರೆ..!

ಅಡಿಕೆ ಬೆಳೆಗಾರ ಇಂದು ಕೇವಲ ಬೆಳೆಗಾರನಲ್ಲ. ಅವನು ಹವಾಮಾನ ಬದಲಾವಣೆ, ರೋಗದ ಸಮಸ್ಯೆ,…

10 hours ago

ದೇಶದಲ್ಲಿ ರಬಿ ಋತು ಬಿತ್ತನೆ ದಾಖಲೆ ಹೆಚ್ಚಳ | 660.48 ಲಕ್ಷ ಹೆಕ್ಟೇರ್‌ಗೆ ಏರಿದ ಒಟ್ಟು ವಿಸ್ತೀರ್ಣ

ಕೇಂದ್ರ ಕೃಷಿ ಸಚಿವಾಲಯವು ಜನವರಿ 23, 2026ರವರೆಗಿನ ರಬಿ ಬೆಳೆ(ಚಳಿಗಾಲದ ಬಿತ್ತನೆ) ಬಿತ್ತನೆಯ…

11 hours ago

ಯೂರಿಯಾ ಮಾರಾಟ 3.8% ಏರಿಕೆ | ದೇಶೀಯ ಉತ್ಪಾದನೆ ಕುಸಿತ, ಆಮದು 85% ಹೆಚ್ಚಳ

ದೇಶದಲ್ಲಿನ ಕೃಷಿ ಬೆಳೆಗಳಿಗೆ ಅಗತ್ಯವಾದ ಪೋಷಕಾಂಶ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ರಸಗೊಬ್ಬರ ವಲಯವು ದೇಶೀಯ…

11 hours ago

ಶುದ್ಧ ಹಿಮಾಲಯವೂ ಸುರಕ್ಷಿತವಲ್ಲ..! ಮರುಭೂಮಿ ಧೂಳಿನೊಂದಿಗೆ ಹರಡುವ ರೋಗಕಾರಕಗಳು

ಹಿಮಾಲಯವನ್ನು ಶುದ್ಧ ಮತ್ತು ಸುರಕ್ಷಿತ ವಾತಾವರಣದ ಪ್ರತೀಕವೆಂದುಕೊಂಡಿದ್ದರೂ, ಜಾಗತಿಕ ಹವಾಮಾನ ಬದಲಾವಣೆ ಹಾಗೂ…

11 hours ago

ಕೃಷಿ ಆಧಾರಿತ ಕೈಗಾರಿಕೆ ಉತ್ತೇಜನದಿಂದ ರೈತರ ಭವಿಷ್ಯ ರೂಪಾಂತರ

ರಾಜಸ್ಥಾನದಲ್ಲಿ ಕೃಷಿ ಆಧಾರಿತ ಕೈಗಾರಿಕೆಗಳನ್ನು ಉತ್ತೇಜಿಸುವ ಮೂಲಕ ರೈತರ ಭವಿಷ್ಯವನ್ನು ಸಂಪೂರ್ಣವಾಗಿ ಬದಲಾಯಿಸಬಹುದು…

11 hours ago