ಅಡಿಕೆ ಬಳಕೆಯಿಂದ ಉಂಟಾಗುತ್ತಿರುವ ಆರೋಗ್ಯ ಮತ್ತು ಸಾಮಾಜಿಕ ಸವಾಲುಗಳ ಕುರಿತು ದಕ್ಷಿಣ-ಪೂರ್ವ ಏಷ್ಯಾ ರಾಷ್ಟ್ರಗಳಲ್ಲಿ ಹೆಚ್ಚುತ್ತಿರುವ ಚರ್ಚೆಯ ನಡುವೆ, ವಿಶ್ವ ಆರೋಗ್ಯ ಸಂಸ್ಥೆ ಅಂತರಾಷ್ಟ್ರೀಯ ವೆಬಿನಾರ್ ಆಯೋಜಿಸಿರುವುದು ಕೃಷಿಕರ ಗಮನಕ್ಕೆ ಬಂದಿದೆ. ಅನೇಕ ವರ್ಷಗಳಿಂದ ಏಷ್ಯಾದಾದ್ಯಂತ ಪರಂಪರಾಗತವಾಗಿ ಅಡಿಕೆ ಸೇವಿಸಲಾಗುತ್ತಿದೆ, ಬಳಕೆ ಮಾಡಲಾಗುತ್ತಿದೆ. ಇದುವರೆಗೂ ಕೇವಲ ಅಡಿಕೆ ಸೇವನೆಯಿಂದ ಆರೋಗ್ಯದ ಮೇಲೆ ಹಾನಿಯಾದ ಬಗ್ಗೆ ಗಮನಕ್ಕೆ ಬಂದಿಲ್ಲ. ಇಂದು ಲಕ್ಷಾಂತರ ಸಣ್ಣ ರೈತರಿಗೆ ಆರ್ಥಿಕವಾಗಿ ಅತ್ಯಂತ ಮಹತ್ವಪೂರ್ಣ ಬೆಳೆ ಆಗಿದೆ. ಅಡಿಕೆ ಬೆಳೆಯನ್ನು ಅವಲಂಬಿಸಿ ಪ್ರತ್ಯಕ್ಷವಾಗಿ ಸುಮಾರು 2 ಕೋಟಿ ಕೃಷಿಕರು ಜೀವನ ಸಾಗಿಸುತ್ತಿದ್ದು, ಇದರೊಂದಿಗೆ ಈ ಬೆಳೆಯ ಬೆಳವಣಿಗೆಗೆ 1948 ರಿಂದ ಹಿಡಿದು ಈ ತನಕ ಪ್ರೋತ್ಸಾಹ ನೀಡುತ್ತಾ ಬಂದಿದೆ.ಆದ್ದರಿಂದ ಸರಕಾರಗಳು ಅಡಿಕೆ ನಿಜಕ್ಕೂ ಹಾನಿಕಾರಕವೇ ಎಂಬುದನ್ನು ಅಧ್ಯಯನ ಮಾಡಿ ಒಂದು ತೀರ್ಮಾನ ತೆಗೆದುಕೊಳ್ಳಬೇಕು.ಇಲ್ಲಿ WHO ಹೇಳಿರುವುದನ್ನು ಅಂತಿಮವೆನ್ನಬಾರದು. ಒಂದೊಮ್ಮೆ ಸರಕಾರ ಕಠಿಣ ಕ್ರಮಗಳನ್ನು ತೆಗೆದುಕೊಂಡರೆ ಈ ಕ್ಷೇತ್ರದಲ್ಲಿ ಅನಾಹುತಗಳಾಗಬಹುದು. ಹೀಗಾಗಿ ಈಗ ಅಡಿಕೆಯ ಬಗ್ಗೆ ತಪ್ಪು ಕಲ್ಪನೆ ಬರುವ ಮಾದರಿಯ ಪ್ರಯತ್ನಗಳು ಸರಿಯಲ್ಲ ಎಂದು ಅಖಿಲ ಭಾರತ ಅಡಿಕೆ ಬೆಳೆಗಾರರು ಸಂಘ ಅಧ್ಯಕ್ಷ,ಕಾರ್ಯದರ್ಶಿ ಮತ್ತು ಸದಸ್ಯರು ಒತ್ತಾಯಿಸಿದ್ದಾರೆ.
ದೇಶೀಯ ಗ್ರಾಹಕರಿಗೆ ಸಿಎನ್ಜಿ, ಪಿಎನ್ಜಿ ಹಾಗೂ ಎಲ್ಪಿಜಿ ಇಂಧನ ಪೂರೈಕೆಯಲ್ಲಿ ಯಾವುದೇ ಕೊರತೆ…
Bio Innovations APAC 2026 ಸಮಾವೇಶದಲ್ಲಿ ಗೋಡಾವರಿ ಬಯೋರೆಫೈನರೀಸ್ ತನ್ನ ಜೈವಿಕ ಉತ್ಪಾದನಾ…
ಗೋವಾದಲ್ಲಿ ಹಲಸು ಉತ್ಪಾದನೆ ಕುಸಿತವಾಗಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಉತ್ತಮ ದರದ ಕಾರಣ…
ರಾಜ್ಯದಲ್ಲಿ ಗೃಹಬಳಕೆಯ ಅಡುಗೆ ಅನಿಲ ಪೂರೈಕೆಯಲ್ಲಿ ಯಾವುದೇ ಕೊರತೆ ಇಲ್ಲ ಎಂದು ಸಚಿವ…
ಅಡಿಕೆ ಇಳುವರಿ ಕುಸಿತಕ್ಕೆ ಎಲೆಚುಕ್ಕೆ, ಕೊಳೆ ರೋಗ ಹಾಗೂ ಹವಾಮಾನ ವೈಪರೀತ್ಯ ಪ್ರಮುಖ…
ಹೋಟೆಲ್ಗಳಲ್ಲಿ ಪ್ಲಾಸ್ಟಿಕ್ ಹಾಗೂ ಪತ್ರಿಕೆಗಳಲ್ಲಿ ಬಿಸಿ ಆಹಾರ ಪಾರ್ಸೆಲ್ ಮಾಡುವುದನ್ನು ನಿಷೇಧಿಸಲು ಅಧಿಕಾರಿಗಳಿಗೆ…