ಅಡಿಕೆ ಬಳಕೆಯಿಂದ ಉಂಟಾಗುತ್ತಿರುವ ಆರೋಗ್ಯ ಮತ್ತು ಸಾಮಾಜಿಕ ಸವಾಲುಗಳ ಕುರಿತು ದಕ್ಷಿಣ-ಪೂರ್ವ ಏಷ್ಯಾ ರಾಷ್ಟ್ರಗಳಲ್ಲಿ ಹೆಚ್ಚುತ್ತಿರುವ ಚರ್ಚೆಯ ನಡುವೆ, ವಿಶ್ವ ಆರೋಗ್ಯ ಸಂಸ್ಥೆ ಅಂತರಾಷ್ಟ್ರೀಯ ವೆಬಿನಾರ್ ಆಯೋಜಿಸಿರುವುದು ಕೃಷಿಕರ ಗಮನಕ್ಕೆ ಬಂದಿದೆ. ಅನೇಕ ವರ್ಷಗಳಿಂದ ಏಷ್ಯಾದಾದ್ಯಂತ ಪರಂಪರಾಗತವಾಗಿ ಅಡಿಕೆ ಸೇವಿಸಲಾಗುತ್ತಿದೆ, ಬಳಕೆ ಮಾಡಲಾಗುತ್ತಿದೆ. ಇದುವರೆಗೂ ಕೇವಲ ಅಡಿಕೆ ಸೇವನೆಯಿಂದ ಆರೋಗ್ಯದ ಮೇಲೆ ಹಾನಿಯಾದ ಬಗ್ಗೆ ಗಮನಕ್ಕೆ ಬಂದಿಲ್ಲ. ಇಂದು ಲಕ್ಷಾಂತರ ಸಣ್ಣ ರೈತರಿಗೆ ಆರ್ಥಿಕವಾಗಿ ಅತ್ಯಂತ ಮಹತ್ವಪೂರ್ಣ ಬೆಳೆ ಆಗಿದೆ. ಅಡಿಕೆ ಬೆಳೆಯನ್ನು ಅವಲಂಬಿಸಿ ಪ್ರತ್ಯಕ್ಷವಾಗಿ ಸುಮಾರು 2 ಕೋಟಿ ಕೃಷಿಕರು ಜೀವನ ಸಾಗಿಸುತ್ತಿದ್ದು, ಇದರೊಂದಿಗೆ ಈ ಬೆಳೆಯ ಬೆಳವಣಿಗೆಗೆ 1948 ರಿಂದ ಹಿಡಿದು ಈ ತನಕ ಪ್ರೋತ್ಸಾಹ ನೀಡುತ್ತಾ ಬಂದಿದೆ.ಆದ್ದರಿಂದ ಸರಕಾರಗಳು ಅಡಿಕೆ ನಿಜಕ್ಕೂ ಹಾನಿಕಾರಕವೇ ಎಂಬುದನ್ನು ಅಧ್ಯಯನ ಮಾಡಿ ಒಂದು ತೀರ್ಮಾನ ತೆಗೆದುಕೊಳ್ಳಬೇಕು.ಇಲ್ಲಿ WHO ಹೇಳಿರುವುದನ್ನು ಅಂತಿಮವೆನ್ನಬಾರದು. ಒಂದೊಮ್ಮೆ ಸರಕಾರ ಕಠಿಣ ಕ್ರಮಗಳನ್ನು ತೆಗೆದುಕೊಂಡರೆ ಈ ಕ್ಷೇತ್ರದಲ್ಲಿ ಅನಾಹುತಗಳಾಗಬಹುದು. ಹೀಗಾಗಿ ಈಗ ಅಡಿಕೆಯ ಬಗ್ಗೆ ತಪ್ಪು ಕಲ್ಪನೆ ಬರುವ ಮಾದರಿಯ ಪ್ರಯತ್ನಗಳು ಸರಿಯಲ್ಲ ಎಂದು ಅಖಿಲ ಭಾರತ ಅಡಿಕೆ ಬೆಳೆಗಾರರು ಸಂಘ ಅಧ್ಯಕ್ಷ,ಕಾರ್ಯದರ್ಶಿ ಮತ್ತು ಸದಸ್ಯರು ಒತ್ತಾಯಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಸರ್ಕಾರಿ ಶಾಲಾ ಮಕ್ಕಳಿಗೆ ಚೆಸ್ ಆಟವನ್ನು ಪರಿಚಯಿಸುವ “ಚೆಸ್…
ಅಡಿಕೆ ಬೆಳೆಗಾರ ಇಂದು ಕೇವಲ ಬೆಳೆಗಾರನಲ್ಲ. ಅವನು ಹವಾಮಾನ ಬದಲಾವಣೆ, ರೋಗದ ಸಮಸ್ಯೆ,…
ಕೇಂದ್ರ ಕೃಷಿ ಸಚಿವಾಲಯವು ಜನವರಿ 23, 2026ರವರೆಗಿನ ರಬಿ ಬೆಳೆ(ಚಳಿಗಾಲದ ಬಿತ್ತನೆ) ಬಿತ್ತನೆಯ…
ದೇಶದಲ್ಲಿನ ಕೃಷಿ ಬೆಳೆಗಳಿಗೆ ಅಗತ್ಯವಾದ ಪೋಷಕಾಂಶ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ರಸಗೊಬ್ಬರ ವಲಯವು ದೇಶೀಯ…
ಹಿಮಾಲಯವನ್ನು ಶುದ್ಧ ಮತ್ತು ಸುರಕ್ಷಿತ ವಾತಾವರಣದ ಪ್ರತೀಕವೆಂದುಕೊಂಡಿದ್ದರೂ, ಜಾಗತಿಕ ಹವಾಮಾನ ಬದಲಾವಣೆ ಹಾಗೂ…
ರಾಜಸ್ಥಾನದಲ್ಲಿ ಕೃಷಿ ಆಧಾರಿತ ಕೈಗಾರಿಕೆಗಳನ್ನು ಉತ್ತೇಜಿಸುವ ಮೂಲಕ ರೈತರ ಭವಿಷ್ಯವನ್ನು ಸಂಪೂರ್ಣವಾಗಿ ಬದಲಾಯಿಸಬಹುದು…