ಅಡಿಕೆ ಬಳಕೆಯಿಂದ ಉಂಟಾಗುತ್ತಿರುವ ಆರೋಗ್ಯ ಮತ್ತು ಸಾಮಾಜಿಕ ಸವಾಲುಗಳ ಕುರಿತು ದಕ್ಷಿಣ-ಪೂರ್ವ ಏಷ್ಯಾ ರಾಷ್ಟ್ರಗಳಲ್ಲಿ ಹೆಚ್ಚುತ್ತಿರುವ ಚರ್ಚೆಯ ನಡುವೆ, ವಿಶ್ವ ಆರೋಗ್ಯ ಸಂಸ್ಥೆ ಅಂತರಾಷ್ಟ್ರೀಯ ವೆಬಿನಾರ್ ಆಯೋಜಿಸಿರುವುದು ಕೃಷಿಕರ ಗಮನಕ್ಕೆ ಬಂದಿದೆ. ಅನೇಕ ವರ್ಷಗಳಿಂದ ಏಷ್ಯಾದಾದ್ಯಂತ ಪರಂಪರಾಗತವಾಗಿ ಅಡಿಕೆ ಸೇವಿಸಲಾಗುತ್ತಿದೆ, ಬಳಕೆ ಮಾಡಲಾಗುತ್ತಿದೆ. ಇದುವರೆಗೂ ಕೇವಲ ಅಡಿಕೆ ಸೇವನೆಯಿಂದ ಆರೋಗ್ಯದ ಮೇಲೆ ಹಾನಿಯಾದ ಬಗ್ಗೆ ಗಮನಕ್ಕೆ ಬಂದಿಲ್ಲ. ಇಂದು ಲಕ್ಷಾಂತರ ಸಣ್ಣ ರೈತರಿಗೆ ಆರ್ಥಿಕವಾಗಿ ಅತ್ಯಂತ ಮಹತ್ವಪೂರ್ಣ ಬೆಳೆ ಆಗಿದೆ. ಅಡಿಕೆ ಬೆಳೆಯನ್ನು ಅವಲಂಬಿಸಿ ಪ್ರತ್ಯಕ್ಷವಾಗಿ ಸುಮಾರು 2 ಕೋಟಿ ಕೃಷಿಕರು ಜೀವನ ಸಾಗಿಸುತ್ತಿದ್ದು, ಇದರೊಂದಿಗೆ ಈ ಬೆಳೆಯ ಬೆಳವಣಿಗೆಗೆ 1948 ರಿಂದ ಹಿಡಿದು ಈ ತನಕ ಪ್ರೋತ್ಸಾಹ ನೀಡುತ್ತಾ ಬಂದಿದೆ.ಆದ್ದರಿಂದ ಸರಕಾರಗಳು ಅಡಿಕೆ ನಿಜಕ್ಕೂ ಹಾನಿಕಾರಕವೇ ಎಂಬುದನ್ನು ಅಧ್ಯಯನ ಮಾಡಿ ಒಂದು ತೀರ್ಮಾನ ತೆಗೆದುಕೊಳ್ಳಬೇಕು.ಇಲ್ಲಿ WHO ಹೇಳಿರುವುದನ್ನು ಅಂತಿಮವೆನ್ನಬಾರದು. ಒಂದೊಮ್ಮೆ ಸರಕಾರ ಕಠಿಣ ಕ್ರಮಗಳನ್ನು ತೆಗೆದುಕೊಂಡರೆ ಈ ಕ್ಷೇತ್ರದಲ್ಲಿ ಅನಾಹುತಗಳಾಗಬಹುದು. ಹೀಗಾಗಿ ಈಗ ಅಡಿಕೆಯ ಬಗ್ಗೆ ತಪ್ಪು ಕಲ್ಪನೆ ಬರುವ ಮಾದರಿಯ ಪ್ರಯತ್ನಗಳು ಸರಿಯಲ್ಲ ಎಂದು ಅಖಿಲ ಭಾರತ ಅಡಿಕೆ ಬೆಳೆಗಾರರು ಸಂಘ ಅಧ್ಯಕ್ಷ,ಕಾರ್ಯದರ್ಶಿ ಮತ್ತು ಸದಸ್ಯರು ಒತ್ತಾಯಿಸಿದ್ದಾರೆ.
ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…
ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…
ಭಾರತದಲ್ಲಿ ಕೇವಲ ಒಂದು ದಿನದ ತೀವ್ರ ಬಿಸಿಲು ಸುಮಾರು 3,400 ಹೆಚ್ಚುವರಿ ಸಾವುಗಳಿಗೆ…
ದಕ್ಷಿಣ ಪೂರ್ವ ಏಷ್ಯಾ ರಾಷ್ಟ್ರಗಳು ಹವಾಮಾನ ಬದಲಾವಣೆ ಮತ್ತು ಆಹಾರ ಭದ್ರತೆ ಸವಾಲುಗಳನ್ನು…
ಈ ಬಾರಿ ಮುಂಗಾರು ತನ್ನ ಸಾಮಾನ್ಯ ಪ್ರವೇಶ ದಿನಾಂಕವನ್ನು ತಪ್ಪಿಸಿದೆ ಎಂದು ಸ್ಕೈಮೆಟ್…
ತಮಿಳುನಾಡು ಬಿಜೆಪಿ ಮಾಜಿ ಅಧ್ಯಕ್ಷ ಅಣ್ಣಾಮಲೈ ಹೊಸ ಪಕ್ಷ ಸ್ಥಾಪಿಸಲಿದ್ದಾರೆ ಎಂಬ ಊಹಾಪೋಹಗಳ…