Advertisement
MIRROR FOCUS

ಅಡಿಕೆ ಬಗ್ಗೆ ತಪ್ಪು ಕಲ್ಪನೆ ಬೇಡ : ವೈಜ್ಞಾನಿಕ ಅಧ್ಯಯನ ಅಗತ್ಯ – ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘ

Share

ಅಡಿಕೆ ಬಳಕೆಯಿಂದ ಉಂಟಾಗುತ್ತಿರುವ ಆರೋಗ್ಯ ಮತ್ತು ಸಾಮಾಜಿಕ ಸವಾಲುಗಳ ಕುರಿತು ದಕ್ಷಿಣ-ಪೂರ್ವ ಏಷ್ಯಾ ರಾಷ್ಟ್ರಗಳಲ್ಲಿ ಹೆಚ್ಚುತ್ತಿರುವ ಚರ್ಚೆಯ ನಡುವೆ, ವಿಶ್ವ ಆರೋಗ್ಯ ಸಂಸ್ಥೆ ಅಂತರಾಷ್ಟ್ರೀಯ ವೆಬಿನಾರ್ ಆಯೋಜಿಸಿರುವುದು ಕೃಷಿಕರ ಗಮನಕ್ಕೆ ಬಂದಿದೆ. ಅನೇಕ ವರ್ಷಗಳಿಂದ  ಏಷ್ಯಾದಾದ್ಯಂತ ಪರಂಪರಾಗತವಾಗಿ ಅಡಿಕೆ ಸೇವಿಸಲಾಗುತ್ತಿದೆ, ಬಳಕೆ ಮಾಡಲಾಗುತ್ತಿದೆ. ಇದುವರೆಗೂ ಕೇವಲ ಅಡಿಕೆ ಸೇವನೆಯಿಂದ ಆರೋಗ್ಯದ ಮೇಲೆ ಹಾನಿಯಾದ ಬಗ್ಗೆ ಗಮನಕ್ಕೆ ಬಂದಿಲ್ಲ. ಇಂದು ಲಕ್ಷಾಂತರ ಸಣ್ಣ ರೈತರಿಗೆ ಆರ್ಥಿಕವಾಗಿ ಅತ್ಯಂತ ಮಹತ್ವಪೂರ್ಣ ಬೆಳೆ ಆಗಿದೆ. ಅಡಿಕೆ ಬೆಳೆಯನ್ನು ಅವಲಂಬಿಸಿ ಪ್ರತ್ಯಕ್ಷವಾಗಿ ಸುಮಾರು 2 ಕೋಟಿ ಕೃಷಿಕರು ಜೀವನ ಸಾಗಿಸುತ್ತಿದ್ದು, ಇದರೊಂದಿಗೆ ಈ ಬೆಳೆಯ ಬೆಳವಣಿಗೆಗೆ 1948 ರಿಂದ ಹಿಡಿದು ಈ ತನಕ ಪ್ರೋತ್ಸಾಹ ನೀಡುತ್ತಾ ಬಂದಿದೆ.ಆದ್ದರಿಂದ ಸರಕಾರಗಳು ಅಡಿಕೆ ನಿಜಕ್ಕೂ ಹಾನಿಕಾರಕವೇ ಎಂಬುದನ್ನು ಅಧ್ಯಯನ ಮಾಡಿ ಒಂದು ತೀರ್ಮಾನ ತೆಗೆದುಕೊಳ್ಳಬೇಕು.ಇಲ್ಲಿ WHO ಹೇಳಿರುವುದನ್ನು ಅಂತಿಮವೆನ್ನಬಾರದು. ಒಂದೊಮ್ಮೆ ಸರಕಾರ ಕಠಿಣ ಕ್ರಮಗಳನ್ನು ತೆಗೆದುಕೊಂಡರೆ ಈ ಕ್ಷೇತ್ರದಲ್ಲಿ ಅನಾಹುತಗಳಾಗಬಹುದು. ಹೀಗಾಗಿ ಈಗ ಅಡಿಕೆಯ ಬಗ್ಗೆ ತಪ್ಪು ಕಲ್ಪನೆ ಬರುವ ಮಾದರಿಯ ಪ್ರಯತ್ನಗಳು ಸರಿಯಲ್ಲ ಎಂದು ಅಖಿಲ ಭಾರತ ಅಡಿಕೆ ಬೆಳೆಗಾರರು ಸಂಘ ಅಧ್ಯಕ್ಷ,ಕಾರ್ಯದರ್ಶಿ ಮತ್ತು ಸದಸ್ಯರು ಒತ್ತಾಯಿಸಿದ್ದಾರೆ.

ಅಡಿಕೆಯ ಬಳಕೆಯ ಬಗ್ಗೆ ಅನೇಕ ಸಮಯಗಳಿಂದ ಅಂತರಾಷ್ಟ್ರೀಯ ಮಟ್ಟದಲ್ಲಿ ತಪ್ಪು ಅಭಿಪ್ರಾಯವನ್ನು ಹರಡಲಾಗುತ್ತಿದೆ. ಅಡಿಕೆಯೇ ಹಾನಿಕಾರಕ ಎಂದು ಹೇಳಲಾಗುತ್ತಿದೆ. ವಾಸ್ತವದಲ್ಲಿ ಭಾರತದ ಸೇರಿದಂತೆ ಏಷ್ಯಾದ ಹಲವು ದೇಶಗಳಲ್ಲಿ ಅಡಿಕೆಯನ್ನು ಸಾವಿರಾರು ವರ್ಷಗಳಿಂದ ಬಳಕೆ ಮಾಡುತ್ತಿದ್ದಾರೆ. ಹೀಗಿರುವಾಗ ಅಡಿಕೆಯ ಕೊನೆಯ ಹಂತದ ಬಳಕೆಯಲ್ಲಿ ಅಡಿಕೆಯ ಜೊತೆ ವಿವಿಧ ವಸ್ತುಗಳ ಸೇರ್ಪಡೆಯ ಬಳಿಕ ಅಧ್ಯಯನ ನಡೆಸಿ ಅಡಿಕೆಯೇ ಹಾನಿಕಾರಕ ಎಂದು ಬಿಂಬಿಸಿ ಇಂದು ಅಡಿಕೆ ನಿಯಂತ್ರಣದ ಬಗ್ಗೆ ಪ್ರಯತ್ನ, ಹೇಳಿಕೆ , ಸಭೆಗಳು ನಡೆಯುತ್ತಿವೆ.  ಅಷ್ಟೇ ಅಲ್ಲ, ಅಡಿಕೆಯನ್ನು ಹಾನಿಕಾರಕ ಎಂದು ವರ್ಗೀಕರಿಸಿದೆ  ಹಾಗೂ ನಿಯಂತ್ರಣ ಮಾಡಲು ಪ್ರಯತ್ನ ಮಾಡುವುದು ಸರಿಯಲ್ಲ.  ಈಗ ಅಡಿಕೆಯ ಬಗ್ಗೆ ಲಭ್ಯ ಇರುವ ಅಧ್ಯಯನಗಳು , ವಿಶ್ಲೇಷಣೆಗಳು ಹಾಗೂ ಇತರ ವೈಜ್ಞಾನಿಕ ಅಂಶಗಳು ಸೀಮಿತವಾಗಿವೆ. ಹೀಗಾಗಿ ಅಡಿಕೆಯನ್ನು ನಿಷೇಧ ಅಥವಾ ತಪ್ಪು ಅಭಿಪ್ರಾಯ ಹರಡುವ ಬದಲಾಗಿ ಅಡಿಕೆಯನ್ನು ಮಾತ್ರವೇ ಸಂಶೋಧನಾ ಆಧಾರಿತ ವರದಿಯನ್ನು ಪಡೆಯಬೇಕು ಹಾಗೂ ಆ ಬಳಿಕವೇ ಯಾವುದೇ ನೀತಿಗಳನ್ನು ರೂಪಿಸಬೇಕು ಎಂದು ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘ ಒತ್ತಾಯಿಸಿದೆ. ಸರ್ಕಾರವು ಈ ಬಗ್ಗೆ ಗಂಭೀರವಾಗಿ ಪರಿಗಣಿಸಿ ಅಡಿಕೆಯ  ಪ್ರತ್ಯೇಕವಾದ ಅಧ್ಯಯನವನ್ನು ನಡೆಸಬೇಕು ಎಂದು ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಅಧ್ಯಕ್ಷ ಮಹೇಶ್‌ ಪುಚ್ಚಪ್ಪಾಡಿ ಹಾಗೂ ಕಾರ್ಯದರ್ಶಿ ವೆಂಕಟಗಿರಿ ಸಿ ವಿ ಹಾಗೂ ಅಡಿಕೆ ಬೆಳೆಗಾರರ ಸಂಘದ ಸದಸ್ಯರು ಒತ್ತಾಯಿಸಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್‌ ಮಾಡಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಹಿಂದೂ ಮಹಾಸಾಗರದ ಹವಾಮಾನದಲ್ಲಿ ಹಠಾತ್ ಬದಲಾವಣೆ – ಮತ್ತೆ ಮಹಾಮಳೆಗೆ ಕಾರಣವಾಗುತ್ತಿದೆಯೇ?

ಹಿಂದೂ ಮಹಾಸಾಗರದ ಹವಾಮಾನ ಬದಲಾವಣೆ ಹಾಗೂ ಸಕಾರಾತ್ಮಕ IOD ಪರಿಣಾಮದಿಂದ ಕರ್ನಾಟಕದಲ್ಲಿ ಮುಂಗಾರು…

56 minutes ago

ರಾಜ್ಯದಲ್ಲಿ ಭಾರೀ ಮಳೆ ಆರ್ಭಟ – ಕೆಲವು ಜಿಲ್ಲೆಗಳಲ್ಲಿ ಇಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ರಾಜ್ಯದ ಹಲವೆಡೆ ಭಾರೀ ಮಳೆಯ ಹಿನ್ನೆಲೆಯಲ್ಲಿ ಕೆಲವು ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.…

6 hours ago

ಆಹಾರ-ನಿದ್ರೆ ಪರಸ್ಪರ ಪೂರಕ; ಉತ್ತಮ ನಿದ್ರೆಗೆ ಹಸಿವು ಅಗತ್ಯ: ರಾಘವೇಶ್ವರ ಶ್ರೀ

ಉತ್ತಮ ಆರೋಗ್ಯಕ್ಕೆ ಸರಿಯಾದ ಆಹಾರ ಮತ್ತು ನಿದ್ರೆ ಎರಡೂ ಅವಿಭಾಜ್ಯ ಎಂದು ಶ್ರೀ…

15 hours ago

ಕೃಷಿಕರ ಮಿತ್ರ ಸಾಯಿಶೇಖರ್‌ ಕರಿಕಳ ಅವರಿಗೆ ರೈತ ರತ್ನ ಪ್ರಶಸ್ತಿ

ಮಳೆ ಮಾಹಿತಿ ಮೂಲಕ ಕೃಷಿಕರಿಗೆ ನೆರವಾಗುತ್ತಿರುವ ಸಾಯಿಶೇಖರ್‌ ಕರಿಕಳ ಅವರಿಗೆ ರೈತ ರತ್ನ…

15 hours ago

ಮಂಗಳೂರಿನಲ್ಲಿ ರಾಷ್ಟ್ರೀಯ ಚೆಸ್ ಚಾಂಪಿಯನ್ ಶಿಪ್‌ಗೆ ಚಾಲನೆ – 28 ರಾಜ್ಯ–ಕೇಂದ್ರಾಡಳಿತ ಪ್ರದೇಶಗಳಿಂದ 644 ಬಾಲಕಿ-ಬಾಲಕಿಯರು

ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್‌-11 ಚೆಸ್ ಚಾಂಪಿಯನ್ಶಿಪ್‌ಗೆ ಭವ್ಯ ಚಾಲನೆ ದೊರೆತಿದ್ದು, ದೇಶದ 28…

16 hours ago

ಹವಾಮಾನ ವರದಿ | 02-08-2026 | ಕರಾವಳಿಯಲ್ಲಿ ಮಳೆ ಇಳಿಮುಖ ..? ರಾಜ್ಯದಲ್ಲಿ ಮುಂಗಾರು ಸ್ಥಿತಿ ಏನು..?

ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆಯ ತೀವ್ರತೆ ಇಳಿಮುಖವಾಗಲಿದ್ದು, ಆಗಸ್ಟ್‌ 3ರಿಂದ ತೋಟದ…

18 hours ago