ಅಡಿಕೆ ಬಳಕೆಯಿಂದ ಉಂಟಾಗುತ್ತಿರುವ ಆರೋಗ್ಯ ಮತ್ತು ಸಾಮಾಜಿಕ ಸವಾಲುಗಳ ಕುರಿತು ದಕ್ಷಿಣ-ಪೂರ್ವ ಏಷ್ಯಾ ರಾಷ್ಟ್ರಗಳಲ್ಲಿ ಹೆಚ್ಚುತ್ತಿರುವ ಚರ್ಚೆಯ ನಡುವೆ, ವಿಶ್ವ ಆರೋಗ್ಯ ಸಂಸ್ಥೆ ಅಂತರಾಷ್ಟ್ರೀಯ ವೆಬಿನಾರ್ ಆಯೋಜಿಸಿರುವುದು ಕೃಷಿಕರ ಗಮನಕ್ಕೆ ಬಂದಿದೆ. ಅನೇಕ ವರ್ಷಗಳಿಂದ ಏಷ್ಯಾದಾದ್ಯಂತ ಪರಂಪರಾಗತವಾಗಿ ಅಡಿಕೆ ಸೇವಿಸಲಾಗುತ್ತಿದೆ, ಬಳಕೆ ಮಾಡಲಾಗುತ್ತಿದೆ. ಇದುವರೆಗೂ ಕೇವಲ ಅಡಿಕೆ ಸೇವನೆಯಿಂದ ಆರೋಗ್ಯದ ಮೇಲೆ ಹಾನಿಯಾದ ಬಗ್ಗೆ ಗಮನಕ್ಕೆ ಬಂದಿಲ್ಲ. ಇಂದು ಲಕ್ಷಾಂತರ ಸಣ್ಣ ರೈತರಿಗೆ ಆರ್ಥಿಕವಾಗಿ ಅತ್ಯಂತ ಮಹತ್ವಪೂರ್ಣ ಬೆಳೆ ಆಗಿದೆ. ಅಡಿಕೆ ಬೆಳೆಯನ್ನು ಅವಲಂಬಿಸಿ ಪ್ರತ್ಯಕ್ಷವಾಗಿ ಸುಮಾರು 2 ಕೋಟಿ ಕೃಷಿಕರು ಜೀವನ ಸಾಗಿಸುತ್ತಿದ್ದು, ಇದರೊಂದಿಗೆ ಈ ಬೆಳೆಯ ಬೆಳವಣಿಗೆಗೆ 1948 ರಿಂದ ಹಿಡಿದು ಈ ತನಕ ಪ್ರೋತ್ಸಾಹ ನೀಡುತ್ತಾ ಬಂದಿದೆ.ಆದ್ದರಿಂದ ಸರಕಾರಗಳು ಅಡಿಕೆ ನಿಜಕ್ಕೂ ಹಾನಿಕಾರಕವೇ ಎಂಬುದನ್ನು ಅಧ್ಯಯನ ಮಾಡಿ ಒಂದು ತೀರ್ಮಾನ ತೆಗೆದುಕೊಳ್ಳಬೇಕು.ಇಲ್ಲಿ WHO ಹೇಳಿರುವುದನ್ನು ಅಂತಿಮವೆನ್ನಬಾರದು. ಒಂದೊಮ್ಮೆ ಸರಕಾರ ಕಠಿಣ ಕ್ರಮಗಳನ್ನು ತೆಗೆದುಕೊಂಡರೆ ಈ ಕ್ಷೇತ್ರದಲ್ಲಿ ಅನಾಹುತಗಳಾಗಬಹುದು. ಹೀಗಾಗಿ ಈಗ ಅಡಿಕೆಯ ಬಗ್ಗೆ ತಪ್ಪು ಕಲ್ಪನೆ ಬರುವ ಮಾದರಿಯ ಪ್ರಯತ್ನಗಳು ಸರಿಯಲ್ಲ ಎಂದು ಅಖಿಲ ಭಾರತ ಅಡಿಕೆ ಬೆಳೆಗಾರರು ಸಂಘ ಅಧ್ಯಕ್ಷ,ಕಾರ್ಯದರ್ಶಿ ಮತ್ತು ಸದಸ್ಯರು ಒತ್ತಾಯಿಸಿದ್ದಾರೆ.
ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…
ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…
ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…
ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…
ಕರ್ನಾಟಕದಲ್ಲಿ ಆಗಸ್ಟ್ 23ರಿಂದ 25ರವರೆಗೆ ಹಲವೆಡೆ ಅಲ್ಲಲ್ಲಿ ಸಾಮಾನ್ಯ ಮಳೆಯಷ್ಟೇ ನಿರೀಕ್ಷಿಸಲಾಗಿದ್ದು, ಕರಾವಳಿ…
PM-Kisan ಯೋಜನೆಯ 24ನೇ ಕಂತಿನ ಹಣ ಪಡೆಯಲು ಅರ್ಹ ರೈತರು ಬಯೋಮೆಟ್ರಿಕ್ ಅಥವಾ…