Advertisement
MIRROR FOCUS

ಅಡಿಕೆ ಮಾರುಕಟ್ಟೆ ಜಿಗಿತ | ಮಂಗಳೂರು ಹೊಸ ಚಾಲಿ ₹500 ದಾಟಿತು – ಏಪ್ರಿಲ್‌ನಲ್ಲಿ ಮತ್ತಷ್ಟು ಏರಿಕೆ ಸೂಚನೆ!

Share

ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಇತ್ತೀಚೆಗೆ ಸ್ಪಷ್ಟವಾದ ಏರಿಕೆ ಕಂಡುಬಂದಿದ್ದು, ಚಾಲಿ ಅಡಿಕೆ ದರವು ಏರಿಕೆ ಕಂಡಿದೆ. ಇಂದಿನ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ಧಾರಣೆ ಅಧಿಕೃತವಾಗಿ ₹500 ತಲುಪಿದೆ.

ಕ್ಯಾಂಪ್ಕೋ ಅಡಿಕೆ ಮಾರುಕಟ್ಟೆಯ ಧಾರಣೆಗಳನ್ನು ಪರಿಶೀಲಿಸಿದರೆ, ಮಾರುಕಟ್ಟೆ ಈಗ ಸ್ಥಿರತೆಯಿಂದ ಏರಿಕೆಯತ್ತ ಸಾಗುತ್ತಿರುವುದು ಸ್ಪಷ್ಟವಾಗಿದೆ. ಇಂದಿನ ದರಗಳಲ್ಲಿ ಸಣ್ಣ ಪ್ರಮಾಣದ ಏರಿಕೆ ಕಂಡುಬಂದಿದ್ದು, ವಿಶೇಷವಾಗಿ ಉತ್ತಮ ಗುಣಮಟ್ಟದ ಅಡಿಕೆಗಳಿಗೆ ಬೇಡಿಕೆ ಹೆಚ್ಚುತ್ತಿರುವುದು ಗಮನಾರ್ಹವಾಗಿದೆ.  ಇದೇ ವೇಳೆ, ಹಳೆ ಅಡಿಕೆ ಧಾರಣೆಯಲ್ಲೂ ಏರಿಕೆ ಕಂಡುಬಂದಿದ್ದು ₹555 ಮಟ್ಟ ತಲುಪಿದೆ. ಇದು ಮಾರುಕಟ್ಟೆಯಲ್ಲಿ ಗುಣಮಟ್ಟದ ಅಡಿಕೆಗಳ ಬೇಡಿಕೆ ನಿರಂತರವಾಗಿರುವುದನ್ನು ಸೂಚಿಸುತ್ತದೆ.

ಕಳೆದ ವರ್ಷದ ಏಪ್ರಿಲ್ ಮೊದಲ ವಾರದ ಧಾರಣೆಯೊಂದಿಗೆ ಹೋಲಿಸಿದರೆ , ಹೊಸ ಅಡಿಕೆ: ₹430–₹440, ಹಳೆ ಅಡಿಕೆ: ₹485–₹495. ಆದರೆ ಈ ಬಾರಿ, ಅಡಿಕೆ ಬೆಳೆ ಪ್ರಮಾಣ ಕಡಿಮೆಯಾಗಿರುವುದು ಸೇರಿದಂತೆ ಇತರ ಕಾರಣಗಳಿಂದಾಗಿ, ಏಪ್ರಿಲ್ ಆರಂಭದಲ್ಲೇ ಹೊಸ ಅಡಿಕೆ ₹500 ದಾಟಿರುವುದು ಪ್ರಮುಖ ಬೆಳವಣಿಗೆ ಎಂದು ಪರಿಗಣಿಸಲಾಗಿದೆ.

ಮಾರುಕಟ್ಟೆ ವಿಶ್ಲೇಷಣೆ ಪ್ರಕಾರ  ಪ್ರಸ್ತುತ ಟ್ರೆಂಡ್ ಇದೆ. ಇದಕ್ಕೆ ಮುಖ್ಯ ಕಾರಣಗಳು ಅಡಿಕೆ ಉತ್ಪಾದನೆ ಕಡಿಮೆ, ಉತ್ತಮ ಗುಣಮಟ್ಟದ ಅಡಿಕೆಗೆ ಹೆಚ್ಚಿನ ಬೇಡಿಕೆ,  ಮಾರುಕಟ್ಟೆಯಲ್ಲಿ ಅಡಿಕೆ ಲಭ್ಯತೆ ಕಡಿಮೆಯಾಗಿದೆ. ಈಗಿನ ಟ್ರೆಂಡ್‌ ಪ್ರಕಾರ ಏಪ್ರಿಲ್ ಅಂತ್ಯ ಮೇ ಮಧ್ಯದ ವೇಳೆಗೆ ಹೊಸ ಅಡಿಕೆ: ₹520–₹550 ತಲುಪುವ ಸಾಧ್ಯತೆ ಇದ್ದು ಹಳೆ ಅಡಿಕೆ ₹570+ ಮಟ್ಟ ತಲುಪುವ ನಿರೀಕ್ಷೆಇದೆ.  ಮಾರುಕಟ್ಟೆ ಹೀಗೆ ಮುಂದುವರಿದರೆ, ಮುಂದಿನ ವಾರಗಳಲ್ಲಿ ಅಡಿಕೆ ದರಗಳಲ್ಲಿ ಇನ್ನಷ್ಟು ಏರಿಕೆ ಕಾಣಬಹುದು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Arecanut prices in Mangalore market have shown a clear upward trend, with new arecanut officially reaching ₹500 and old arecanut touching ₹555. Compared to early April last year, prices have risen significantly due to lower crop yield and increased demand. The market is currently moving from stability to a bullish phase, and further price rise is expected through April.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಭಾರೀ ಮಳೆಯ ಎಚ್ಚರಿಕೆ : 24 ಗಂಟೆ ಸನ್ನದ್ಧವಾಗಿರಲು ಡಿಸಿ ಸೂಚನೆ, ಭೂಕುಸಿತ ಪ್ರದೇಶಗಳ ಮೇಲೆ ಕಟ್ಟೆಚ್ಚರ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆಗಳನ್ನು 24…

11 hours ago

ಹುಬ್ಬಳ್ಳಿಯಲ್ಲಿ ಹಲಸು ಮೇಳಕ್ಕೆ ಚಾಲನೆ – 50ಕ್ಕೂ ಹೆಚ್ಚು ಮಳಿಗೆಗಳು, ಹಲಸಿನ ಬಿರಿಯಾನಿಯಿಂದ ಕಬಾಬ್‌ವರೆಗೆ ಸವಿಯುವ ಅವಕಾಶ

ಹುಬ್ಬಳ್ಳಿಯಲ್ಲಿ ಆರಂಭವಾದ ಮೂರು ದಿನಗಳ ಹಲಸು ಮೇಳಕ್ಕೆ ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.…

11 hours ago

ರಾಜ್ಯಾದ್ಯಂತ ಆರ್ಭಟಿಸುತ್ತಿರುವ ವರುಣ – ಭದ್ರಾ-ನೇತ್ರಾವತಿ ಅಪಾಯದ ಮಟ್ಟ ಮೀರಿ ಪ್ರವಾಹ

ಕರಾವಳಿ ಹಾಗೂ ಮಲೆನಾಡಿನಲ್ಲಿ ಭಾರಿ ಮಳೆ ಮುಂದುವರಿದಿದ್ದು, ಭದ್ರಾ ಹಾಗೂ ನೇತ್ರಾವತಿ, ಕುಮಾರಧಾರಾ…

11 hours ago

ಶಿರಾಡಿ ಘಾಟ್‌ನಲ್ಲಿ ಭೂಕುಸಿತ – ರೈಲು ಸಂಚಾರಕ್ಕೆ ತಾತ್ಕಾಲಿಕ ಅಡ್ಡಿ

ಶಿರಾಡಿ ಘಾಟ್‌ನ ಎಡಕುಮರಿ–ಶಿರಿಬಾಗಿಲು ನಡುವೆ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಪರಿಹಾರ…

12 hours ago

ಮೊಬೈಲ್ ನೋಡುತ್ತಾ ಊಟ ಮಾಡಬೇಡಿ, ಶಿಸ್ತಿನ ಜೀವನವೇ ಆರೋಗ್ಯದ ರಹಸ್ಯ – ರಾಘವೇಶ್ವರ ಶ್ರೀ

ಆಹಾರ, ನಿದ್ರೆ ಮತ್ತು ಬ್ರಹ್ಮಚರ್ಯ ಸಮತೋಲನದಲ್ಲಿದ್ದಾಗ ಮಾತ್ರ ಆರೋಗ್ಯ ಹಾಗೂ ಆಧ್ಯಾತ್ಮಿಕ ಪ್ರಗತಿ…

23 hours ago

ಭಾರೀ ಮಳೆಯ ಎಚ್ಚರಿಕೆ | ಕರಾವಳಿ ಕರ್ನಾಟಕದಲ್ಲಿ ಅತಿ ಭಾರೀ ಮಳೆ – ಪ್ರವಾಹ- ಭೂಕುಸಿತದ ಎಚ್ಚರಿಕೆ

ಕರಾವಳಿ ಕರ್ನಾಟಕ, ದಕ್ಷಿಣ ಒಳನಾಡು ಕರ್ನಾಟಕ ಹಾಗೂ ಕೇರಳದಲ್ಲಿ ಇಂದು ಭಾರೀ ಮಳೆಯ…

1 day ago