Advertisement
MIRROR FOCUS

ಅಡಿಕೆ ಮಾರುಕಟ್ಟೆ ಜಿಗಿತ | ಮಂಗಳೂರು ಹೊಸ ಚಾಲಿ ₹500 ದಾಟಿತು – ಏಪ್ರಿಲ್‌ನಲ್ಲಿ ಮತ್ತಷ್ಟು ಏರಿಕೆ ಸೂಚನೆ!

Share

ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಇತ್ತೀಚೆಗೆ ಸ್ಪಷ್ಟವಾದ ಏರಿಕೆ ಕಂಡುಬಂದಿದ್ದು, ಚಾಲಿ ಅಡಿಕೆ ದರವು ಏರಿಕೆ ಕಂಡಿದೆ. ಇಂದಿನ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ಧಾರಣೆ ಅಧಿಕೃತವಾಗಿ ₹500 ತಲುಪಿದೆ.

ಕ್ಯಾಂಪ್ಕೋ ಅಡಿಕೆ ಮಾರುಕಟ್ಟೆಯ ಧಾರಣೆಗಳನ್ನು ಪರಿಶೀಲಿಸಿದರೆ, ಮಾರುಕಟ್ಟೆ ಈಗ ಸ್ಥಿರತೆಯಿಂದ ಏರಿಕೆಯತ್ತ ಸಾಗುತ್ತಿರುವುದು ಸ್ಪಷ್ಟವಾಗಿದೆ. ಇಂದಿನ ದರಗಳಲ್ಲಿ ಸಣ್ಣ ಪ್ರಮಾಣದ ಏರಿಕೆ ಕಂಡುಬಂದಿದ್ದು, ವಿಶೇಷವಾಗಿ ಉತ್ತಮ ಗುಣಮಟ್ಟದ ಅಡಿಕೆಗಳಿಗೆ ಬೇಡಿಕೆ ಹೆಚ್ಚುತ್ತಿರುವುದು ಗಮನಾರ್ಹವಾಗಿದೆ.  ಇದೇ ವೇಳೆ, ಹಳೆ ಅಡಿಕೆ ಧಾರಣೆಯಲ್ಲೂ ಏರಿಕೆ ಕಂಡುಬಂದಿದ್ದು ₹555 ಮಟ್ಟ ತಲುಪಿದೆ. ಇದು ಮಾರುಕಟ್ಟೆಯಲ್ಲಿ ಗುಣಮಟ್ಟದ ಅಡಿಕೆಗಳ ಬೇಡಿಕೆ ನಿರಂತರವಾಗಿರುವುದನ್ನು ಸೂಚಿಸುತ್ತದೆ.

ಕಳೆದ ವರ್ಷದ ಏಪ್ರಿಲ್ ಮೊದಲ ವಾರದ ಧಾರಣೆಯೊಂದಿಗೆ ಹೋಲಿಸಿದರೆ , ಹೊಸ ಅಡಿಕೆ: ₹430–₹440, ಹಳೆ ಅಡಿಕೆ: ₹485–₹495. ಆದರೆ ಈ ಬಾರಿ, ಅಡಿಕೆ ಬೆಳೆ ಪ್ರಮಾಣ ಕಡಿಮೆಯಾಗಿರುವುದು ಸೇರಿದಂತೆ ಇತರ ಕಾರಣಗಳಿಂದಾಗಿ, ಏಪ್ರಿಲ್ ಆರಂಭದಲ್ಲೇ ಹೊಸ ಅಡಿಕೆ ₹500 ದಾಟಿರುವುದು ಪ್ರಮುಖ ಬೆಳವಣಿಗೆ ಎಂದು ಪರಿಗಣಿಸಲಾಗಿದೆ.

ಮಾರುಕಟ್ಟೆ ವಿಶ್ಲೇಷಣೆ ಪ್ರಕಾರ  ಪ್ರಸ್ತುತ ಟ್ರೆಂಡ್ ಇದೆ. ಇದಕ್ಕೆ ಮುಖ್ಯ ಕಾರಣಗಳು ಅಡಿಕೆ ಉತ್ಪಾದನೆ ಕಡಿಮೆ, ಉತ್ತಮ ಗುಣಮಟ್ಟದ ಅಡಿಕೆಗೆ ಹೆಚ್ಚಿನ ಬೇಡಿಕೆ,  ಮಾರುಕಟ್ಟೆಯಲ್ಲಿ ಅಡಿಕೆ ಲಭ್ಯತೆ ಕಡಿಮೆಯಾಗಿದೆ. ಈಗಿನ ಟ್ರೆಂಡ್‌ ಪ್ರಕಾರ ಏಪ್ರಿಲ್ ಅಂತ್ಯ ಮೇ ಮಧ್ಯದ ವೇಳೆಗೆ ಹೊಸ ಅಡಿಕೆ: ₹520–₹550 ತಲುಪುವ ಸಾಧ್ಯತೆ ಇದ್ದು ಹಳೆ ಅಡಿಕೆ ₹570+ ಮಟ್ಟ ತಲುಪುವ ನಿರೀಕ್ಷೆಇದೆ.  ಮಾರುಕಟ್ಟೆ ಹೀಗೆ ಮುಂದುವರಿದರೆ, ಮುಂದಿನ ವಾರಗಳಲ್ಲಿ ಅಡಿಕೆ ದರಗಳಲ್ಲಿ ಇನ್ನಷ್ಟು ಏರಿಕೆ ಕಾಣಬಹುದು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Arecanut prices in Mangalore market have shown a clear upward trend, with new arecanut officially reaching ₹500 and old arecanut touching ₹555. Compared to early April last year, prices have risen significantly due to lower crop yield and increased demand. The market is currently moving from stability to a bullish phase, and further price rise is expected through April.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮುಂಗಾರು ಇದ್ದಕ್ಕಿದ್ದಂತೆ ದುರ್ಬಲವಾಗಿದ್ದೇಕೆ..? ಇಲ್ಲಿದೆ ವೈಜ್ಞಾನಿಕ ಕಾರಣ

ದೇಶದ ಬಹುತೇಕ ಭಾಗಗಳಿಂದ ಮಳೆ ಮೋಡಗಳು ಕಡಿಮೆಯಾಗಲು ಪಶ್ಚಿಮ ಪೆಸಿಫಿಕ್‌ನ ಪ್ರಬಲ ಚಂಡಮಾರುತ…

3 hours ago

ಮತ್ತೆ ಹೆಚ್ಚಿದ ದೇಶದ ಮಳೆ ಕೊರತೆ – ಜುಲೈ ಆರಂಭದ ಚೇತರಿಕೆ ಕುಂಠಿತ, ಮುಂಗಾರು ಮತ್ತೆ ದುರ್ಬಲ

ಜುಲೈ ಮೊದಲ ವಾರದ ಚೇತರಿಕೆಯ ಬಳಿಕ ದೇಶದ ಮುಂಗಾರು ಮತ್ತೆ ದುರ್ಬಲಗೊಂಡಿದ್ದು, ಮಳೆ…

3 hours ago

ಆರೋಪದ ಆಚೆ ನಿಂತು ಒಮ್ಮೆ ಯೋಚಿಸಿದ್ದೀರಾ..?

ಯಾರನ್ನಾದರೂ ಆರೋಪಿಸುವ ಮೊದಲು ಅವರ ಪರಿಸ್ಥಿತಿ ಅರ್ಥಮಾಡಿಕೊಳ್ಳುವ ಪ್ರಯತ್ನ ಮಾಡಿದರೆ ಅನೇಕ ಸಂಬಂಧಗಳು…

7 hours ago

ಮಳೆಗಾಲವೂ ಬೇಸಿಗೆಯಷ್ಟೇ ಅಪಾಯಕಾರಿ..? ಹವಾಮಾನ ಬದಲಾವಣೆಯಿಂದ ಹೆಚ್ಚುತ್ತಿದೆ ‘ಹೀಟ್‌ ಸ್ಟ್ರೆಸ್‌’ ಆತಂಕ

ಹವಾಮಾನ ಬದಲಾವಣೆಯಿಂದ ಮಳೆಗಾಲದಲ್ಲೂ ಅಪಾಯಕಾರಿ ಹೀಟ್‌ ಸ್ಟ್ರೆಸ್‌ ಹೆಚ್ಚುವ ಸಾಧ್ಯತೆ ಇದೆ ಎಂದು…

11 hours ago

FSSAI ‘Unsafe’ ಟ್ಯಾಗ್ ಇದ್ದರೂ ಅಡಿಕೆ ಬಿಡುಗಡೆಗೆ ಅವಕಾಶ – ಕಲ್ಕತ್ತಾ ಹೈಕೋರ್ಟ್ ಮಹತ್ವದ ಆದೇಶ

FSSAI "Unsafe" ವರದಿ ಇದ್ದರೂ, ಕೈಗಾರಿಕಾ ಬಳಕೆಗೆ ಮಾತ್ರ ಅಡಿಕೆ ಬಿಡುಗಡೆಗೆ ಕಲ್ಕತ್ತಾ…

11 hours ago

ಚೀನಾದತ್ತ ಸಾಗುವ ಬಾವಿ ಚಂಡಮಾರುತ ದುರ್ಬಲ – 18 ಲಕ್ಷಕ್ಕೂ ಹೆಚ್ಚು ಜನರ ಸ್ಥಳಾಂತರ, ಭಾರೀ ಮಳೆ-ಪ್ರವಾಹದ ಎಚ್ಚರಿಕೆ

ಸೂಪರ್ ಟೈಫೂನ್ ಬಾವಿ ದುರ್ಬಲವಾಗಿದ್ದರೂ ಪೂರ್ವ ಚೀನಾದಲ್ಲಿ ಭಾರೀ ಮಳೆ, ಪ್ರವಾಹ ಹಾಗೂ…

21 hours ago