Advertisement
MIRROR FOCUS

ಕಳಪೆ ಅಡಿಕೆ ದಾಸ್ತಾನು ಶಂಕೆ – ನಾಗಪುರದಲ್ಲಿ 10 ವ್ಯಾಪಾರಿಗಳ ಗೋದಾಮು ಮೇಲೆ ದಾಳಿ | ₹4 ಕೋಟಿ ಮೌಲ್ಯದ ಅಡಿಕೆ ಜಪ್ತಿ

Share

ಇಂಡೋನೇಷಿಯಾದಿಂದ ಭಾರತಕ್ಕೆ ಆಮದು ಮಾಡಲಾದ ಕಳಪೆ ಗುಣಮಟ್ಟದ ಅಡಿಕೆಯನ್ನು ನಿಯಮ ಉಲ್ಲಂಘನೆ ಮಾಡಿ ಹಾಗೂ ಕಳಪೆ ಗುಣಮಟ್ಟದ  ಶಂಕೆಯ ಹಿನ್ನೆಲೆಯಲ್ಲಿ ನಾಗಪುರದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ ಎಂದು ದೈನಿಕ್‌ ಭಾಸ್ಕರ್‌ ವರದಿ ಮಾಡಿದೆ.

ಭಾರತದ ಕಂದಾಯ ಗುಪ್ತಚರ ನಿರ್ದೇಶಾಲಯ (DRI) ಮತ್ತು ಆದಾಯ ತೆರಿಗೆ ಇಲಾಖೆಯ ತನಿಖೆಯ ಮುಂದುವರಿದ ಭಾಗವಾಗಿ ಮಹಾರಾಷ್ಟ್ರದ  ಆಹಾರ ಮತ್ತು ಔಷಧಿ ಆಡಳಿತ (FDA) ತಂಡವು ನಾಗಪುರದ ವಿವಿಧ ಪ್ರದೇಶಗಳಲ್ಲಿ 10 ಅಡಿಕೆ ವ್ಯಾಪಾರಿಗಳ ಗೋದಾಮು ಮೇಲೆ ದಾಳಿ ನಡೆಸಿದ್ದು, ಸುಮಾರು ₹4 ಕೋಟಿ ಮೌಲ್ಯದ ಅಡಿಕೆಯನ್ನು ವಶಕ್ಕೆ ಪಡೆದಿದೆ.

ಕೆಲವು ದಿನಗಳ ಹಿಂದೆ ಇಂಡೋನೇಷಿಯಾದಿಂದ ನಿಯಮ ಉಲ್ಲಂಘಿಸಿ ಅಡಿಕೆ ಆಮದು ಮಾಡಲಾಗಿದೆ ಎಂಬ ಮಾಹಿತಿ ಆಧರಿಸಿ DRI ತನಿಖೆ ಆರಂಭಿಸಿತ್ತು. ತನಿಖೆ ವೇಳೆ ತೆರಿಗೆ ತಪ್ಪಿಸುವಿಕೆ, ನಕಲಿ ದಾಖಲೆಗಳ ಬಳಕೆ ಹಾಗೂ ಮೌಲ್ಯ ಕಡಿಮೆ ತೋರಿಸಿ ಅಡಿಕೆ ಸಾಗಾಟ ಸೇರಿದಂತೆ ಹಲವು ಅಕ್ರಮಗಳ ಕುರಿತು ಪರಿಶೀಲನೆ ನಡೆಸಲಾಗಿದೆ. ನಂತರ ಆದಾಯ ತೆರಿಗೆ ಇಲಾಖೆ ಕೂಡ ಸಂಬಂಧಿತ ವ್ಯಾಪಾರಿಗಳ ಲೆಕ್ಕಪತ್ರಗಳ ಪರಿಶೀಲನೆ ಕೈಗೊಂಡಿತ್ತು. ಇದರ ಮುಂದುವರಿದ ಭಾಗವಾಗಿ FDA ಆಹಾರ ಸುರಕ್ಷತೆ ದೃಷ್ಟಿಯಿಂದ ದಾಳಿ ಆರಂಭಿಸಿದೆ. ಅಡಿಕೆ ಕೂಡಾ ಕಳಪೆ ಎಂದು ವರದಿಯಾಗಿತ್ತು.

ಜನವರಿ 19ರಂದು ನಾಗಪುರದ ಕಲ್ಮನಾ ಪ್ರದೇಶದಲ್ಲಿರುವ ಎರಡು ಗೋದಾಮುಗಳಿಂದ ಸುಮಾರು 2 ಕೋಟಿ ಮೌಲ್ಯದ ಅಡಿಕೆ ವಶಕ್ಕೆ ಪಡೆದರೆ,  ಜನವರಿ 20 ಹಾಗೂ 21ರಂದು ಕೂಡಾ ದಾಳಿ ನಡೆಸಲಾಗಿತ್ತು. ಈ ಸಂದರ್ಭ ಸುಮಾರು 2 ಕೋಟಿ ಮೌಲ್ಯದ ಅಡಿಕೆ ವಶಕ್ಕೆ ಪಡೆಯಲಾಗಿತ್ತು ಎಂದು ವರದಿಯಾಗಿದೆ. ಈ ಕಾರ್ಯಾಚರಣೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

FDA ನಾಗಪುರ ವಿಭಾಗದ ಸಹ ಆಯುಕ್ತ ಕೆ.ಆರ್. ಜಯ್‌ಪುರ್ಕರ್ ಅವರು ಮಾಧ್ಯಮಗಳ ಜೊತೆ ಮಾತನಾಡಿ, “ಮುಂಬೈ ಹಾಗೂ ನಾಗಪುರ ಪ್ರದೇಶಗಳಿಗೆ ಕಳಪೆ ಗುಣಮಟ್ಟದ ಅಡಿಕೆ ಬಂದಿರುವ ಕುರಿತು ಖಚಿತ ಮಾಹಿತಿ ಲಭ್ಯವಾಗಿತ್ತು. ಅದರ ಆಧಾರದಲ್ಲಿ ದಾಳಿ ನಡೆಸಲಾಗಿದೆ. ವಶಪಡಿಸಿಕೊಂಡ ಅಡಿಕೆಯ  ಮಾದರಿಗಳನ್ನು ಪ್ರಯೋಗಾಲಯಕ್ಕೆ ಕಳುಹಿಸಿ ಪರೀಕ್ಷೆ ನಡೆಸಲಾಗುವುದು. ಆಹಾರ ಗುಣಮಟ್ಟಕ್ಕೆ ಸೂಕ್ತವಲ್ಲ ಅಥವಾ ಮಾನವ ಸೇವನೆಗೆ ಯೋಗ್ಯವಲ್ಲ ಎಂದು ದೃಢಪಟ್ಟರೆ ಸಂಬಂಧಿಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು” ಎಂದು ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಮಳೆ ಆರಂಭವಾಗುತ್ತಿದ್ದಂತೆಯೇ ಗಿಡಗಳ ನಾಟಿಗೆ ಸಿದ್ಧತೆ – ಅಡಿಕೆ ಗಿಡಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ…!

ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…

4 hours ago

ಕೇಂದ್ರ ಸರ್ಕಾರದ ಸೌಲಭ್ಯಗಳಿಗೆ ‘ಕೇಂದ್ರ ರೈತ ಐಡಿ’ ಕಡ್ಡಾಯ – ಮಂಗಳೂರು ತಾಲೂಕಿನ 14,520 ರೈತರು ಇನ್ನೂ ನೋಂದಣಿ ಬಾಕಿ

ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…

6 hours ago

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಧಾರಣೆ ಏರಿಕೆ | ಮತ್ತೆ ಚೇತರಿಕೆಯ ಸಂಕೇತ ನೀಡಿದ ಅಡಿಕೆ ಧಾರಣೆ

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…

15 hours ago

ಒಂದು ದಿನದ ತೀವ್ರ ಬಿಸಿಲು 3,400 ಹೆಚ್ಚುವರಿ ಸಾವುಗಳಿಗೆ ಕಾರಣ…? ಭಾರತದ ಬಗ್ಗೆ ಬೆಚ್ಚಿಬೀಳಿಸುವ ಅಧ್ಯಯನ

ಭಾರತದಲ್ಲಿ ಕೇವಲ ಒಂದು ದಿನದ ತೀವ್ರ ಬಿಸಿಲು ಸುಮಾರು 3,400 ಹೆಚ್ಚುವರಿ ಸಾವುಗಳಿಗೆ…

19 hours ago

ಹವಾಮಾನ ಬಿಕ್ಕಟ್ಟಿನ ನಡುವೆಯೂ ಕೃಷಿ ಉಳಿಸುವ ದಾರಿ ಕಂಡುಕೊಂಡ ದಕ್ಷಿಣ ಏಷ್ಯಾ ದೇಶಗಳು – ಸ್ಥಳೀಯ ಆವಿಷ್ಕಾರಗಳಿಗೆ ಹೆಚ್ಚಿದ ಮಹತ್ವ

ದಕ್ಷಿಣ ಪೂರ್ವ ಏಷ್ಯಾ ರಾಷ್ಟ್ರಗಳು ಹವಾಮಾನ ಬದಲಾವಣೆ ಮತ್ತು ಆಹಾರ ಭದ್ರತೆ ಸವಾಲುಗಳನ್ನು…

19 hours ago

ಮುಂಗಾರು ಅಧಿಕೃತ ದಿನಾಂಕ ತಪ್ಪಿತು..! ಜೂನ್ ಮೊದಲ ವಾರದ ಬಳಿಕವೇ ಭಾರೀ ಮಳೆ ಸಾಧ್ಯತೆ ಎಂದ ಸ್ಕೈಮೆಟ್

ಈ ಬಾರಿ ಮುಂಗಾರು ತನ್ನ ಸಾಮಾನ್ಯ ಪ್ರವೇಶ ದಿನಾಂಕವನ್ನು ತಪ್ಪಿಸಿದೆ ಎಂದು ಸ್ಕೈಮೆಟ್…

1 day ago