Advertisement
MIRROR FOCUS

ಕಳಪೆ ಅಡಿಕೆ ದಾಸ್ತಾನು ಶಂಕೆ – ನಾಗಪುರದಲ್ಲಿ 10 ವ್ಯಾಪಾರಿಗಳ ಗೋದಾಮು ಮೇಲೆ ದಾಳಿ | ₹4 ಕೋಟಿ ಮೌಲ್ಯದ ಅಡಿಕೆ ಜಪ್ತಿ

Share

ಇಂಡೋನೇಷಿಯಾದಿಂದ ಭಾರತಕ್ಕೆ ಆಮದು ಮಾಡಲಾದ ಕಳಪೆ ಗುಣಮಟ್ಟದ ಅಡಿಕೆಯನ್ನು ನಿಯಮ ಉಲ್ಲಂಘನೆ ಮಾಡಿ ಹಾಗೂ ಕಳಪೆ ಗುಣಮಟ್ಟದ  ಶಂಕೆಯ ಹಿನ್ನೆಲೆಯಲ್ಲಿ ನಾಗಪುರದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ ಎಂದು ದೈನಿಕ್‌ ಭಾಸ್ಕರ್‌ ವರದಿ ಮಾಡಿದೆ.

ಭಾರತದ ಕಂದಾಯ ಗುಪ್ತಚರ ನಿರ್ದೇಶಾಲಯ (DRI) ಮತ್ತು ಆದಾಯ ತೆರಿಗೆ ಇಲಾಖೆಯ ತನಿಖೆಯ ಮುಂದುವರಿದ ಭಾಗವಾಗಿ ಮಹಾರಾಷ್ಟ್ರದ  ಆಹಾರ ಮತ್ತು ಔಷಧಿ ಆಡಳಿತ (FDA) ತಂಡವು ನಾಗಪುರದ ವಿವಿಧ ಪ್ರದೇಶಗಳಲ್ಲಿ 10 ಅಡಿಕೆ ವ್ಯಾಪಾರಿಗಳ ಗೋದಾಮು ಮೇಲೆ ದಾಳಿ ನಡೆಸಿದ್ದು, ಸುಮಾರು ₹4 ಕೋಟಿ ಮೌಲ್ಯದ ಅಡಿಕೆಯನ್ನು ವಶಕ್ಕೆ ಪಡೆದಿದೆ.

ಕೆಲವು ದಿನಗಳ ಹಿಂದೆ ಇಂಡೋನೇಷಿಯಾದಿಂದ ನಿಯಮ ಉಲ್ಲಂಘಿಸಿ ಅಡಿಕೆ ಆಮದು ಮಾಡಲಾಗಿದೆ ಎಂಬ ಮಾಹಿತಿ ಆಧರಿಸಿ DRI ತನಿಖೆ ಆರಂಭಿಸಿತ್ತು. ತನಿಖೆ ವೇಳೆ ತೆರಿಗೆ ತಪ್ಪಿಸುವಿಕೆ, ನಕಲಿ ದಾಖಲೆಗಳ ಬಳಕೆ ಹಾಗೂ ಮೌಲ್ಯ ಕಡಿಮೆ ತೋರಿಸಿ ಅಡಿಕೆ ಸಾಗಾಟ ಸೇರಿದಂತೆ ಹಲವು ಅಕ್ರಮಗಳ ಕುರಿತು ಪರಿಶೀಲನೆ ನಡೆಸಲಾಗಿದೆ. ನಂತರ ಆದಾಯ ತೆರಿಗೆ ಇಲಾಖೆ ಕೂಡ ಸಂಬಂಧಿತ ವ್ಯಾಪಾರಿಗಳ ಲೆಕ್ಕಪತ್ರಗಳ ಪರಿಶೀಲನೆ ಕೈಗೊಂಡಿತ್ತು. ಇದರ ಮುಂದುವರಿದ ಭಾಗವಾಗಿ FDA ಆಹಾರ ಸುರಕ್ಷತೆ ದೃಷ್ಟಿಯಿಂದ ದಾಳಿ ಆರಂಭಿಸಿದೆ. ಅಡಿಕೆ ಕೂಡಾ ಕಳಪೆ ಎಂದು ವರದಿಯಾಗಿತ್ತು.

ಜನವರಿ 19ರಂದು ನಾಗಪುರದ ಕಲ್ಮನಾ ಪ್ರದೇಶದಲ್ಲಿರುವ ಎರಡು ಗೋದಾಮುಗಳಿಂದ ಸುಮಾರು 2 ಕೋಟಿ ಮೌಲ್ಯದ ಅಡಿಕೆ ವಶಕ್ಕೆ ಪಡೆದರೆ,  ಜನವರಿ 20 ಹಾಗೂ 21ರಂದು ಕೂಡಾ ದಾಳಿ ನಡೆಸಲಾಗಿತ್ತು. ಈ ಸಂದರ್ಭ ಸುಮಾರು 2 ಕೋಟಿ ಮೌಲ್ಯದ ಅಡಿಕೆ ವಶಕ್ಕೆ ಪಡೆಯಲಾಗಿತ್ತು ಎಂದು ವರದಿಯಾಗಿದೆ. ಈ ಕಾರ್ಯಾಚರಣೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

FDA ನಾಗಪುರ ವಿಭಾಗದ ಸಹ ಆಯುಕ್ತ ಕೆ.ಆರ್. ಜಯ್‌ಪುರ್ಕರ್ ಅವರು ಮಾಧ್ಯಮಗಳ ಜೊತೆ ಮಾತನಾಡಿ, “ಮುಂಬೈ ಹಾಗೂ ನಾಗಪುರ ಪ್ರದೇಶಗಳಿಗೆ ಕಳಪೆ ಗುಣಮಟ್ಟದ ಅಡಿಕೆ ಬಂದಿರುವ ಕುರಿತು ಖಚಿತ ಮಾಹಿತಿ ಲಭ್ಯವಾಗಿತ್ತು. ಅದರ ಆಧಾರದಲ್ಲಿ ದಾಳಿ ನಡೆಸಲಾಗಿದೆ. ವಶಪಡಿಸಿಕೊಂಡ ಅಡಿಕೆಯ  ಮಾದರಿಗಳನ್ನು ಪ್ರಯೋಗಾಲಯಕ್ಕೆ ಕಳುಹಿಸಿ ಪರೀಕ್ಷೆ ನಡೆಸಲಾಗುವುದು. ಆಹಾರ ಗುಣಮಟ್ಟಕ್ಕೆ ಸೂಕ್ತವಲ್ಲ ಅಥವಾ ಮಾನವ ಸೇವನೆಗೆ ಯೋಗ್ಯವಲ್ಲ ಎಂದು ದೃಢಪಟ್ಟರೆ ಸಂಬಂಧಿಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು” ಎಂದು ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಹವಾಮಾನ ವರದಿ | 23-08-2026 | ಆಗಸ್ಟ್ 25 ರವರೆಗೆ ಮಳೆ – ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…

3 hours ago

ಅಳಿವಿನಂಚಿನಲ್ಲಿದ್ದ ಪೆರಿಯಾರ್ ಹಸುವಿಗೆ ರಾಷ್ಟ್ರೀಯ ತಳಿ ಮಾನ್ಯತೆ – ಕೇರಳದ ಎರಡನೇ ದೇಶಿ ಗೋತಳಿ

ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…

4 hours ago

ಪಿಒಪಿ ಗಣಪತಿಗೆ ಬ್ರೇಕ್..? ಕರಾವಳಿಯ 90–95% ಪರಿಸರ ಸ್ನೇಹಿ ಮಾದರಿ ರಾಜ್ಯಕ್ಕೆ ಪಾಠ

ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…

6 hours ago

ಪಶ್ಚಿಮ ಘಟ್ಟ ಸಂರಕ್ಷಣೆ ಹೆಸರಿನಲ್ಲಿ ಕೃಷಿಕರಿಗೆ ನಿರ್ಬಂಧ ಬೇಡ – ಕಸ್ತೂರಿ ರಂಗನ್ ವರದಿ ಸಂಪೂರ್ಣ ತಿರಸ್ಕರಿಸಲು ಆಗ್ರಹ

ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…

7 hours ago

ಮುಂಗಾರು ಬೇಗನೆ ವಿದಾಯ ಹೇಳುತ್ತಿದೆಯೇ..? ಸೆಪ್ಟೆಂಬರ್‌ನಲ್ಲಿ ಮಳೆ ಕಡಿಮೆಯಾಗುವ ಮುನ್ಸೂಚನೆ..?

ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…

20 hours ago

ಹವಾಮಾನ ವರದಿ | 22-08-2026 | ಕರಾವಳಿಯಲ್ಲಿ ಮಳೆ ಇಳಿಕೆ, 26ರಿಂದ ಮತ್ತಷ್ಟು ದುರ್ಬಲವಾಗುವ ಸಾಧ್ಯತೆ

ಕರ್ನಾಟಕದಲ್ಲಿ ಆಗಸ್ಟ್ 23ರಿಂದ 25ರವರೆಗೆ ಹಲವೆಡೆ ಅಲ್ಲಲ್ಲಿ ಸಾಮಾನ್ಯ ಮಳೆಯಷ್ಟೇ ನಿರೀಕ್ಷಿಸಲಾಗಿದ್ದು, ಕರಾವಳಿ…

1 day ago